ಆಜ್ರಿ ಅರುಣ ಶೆಟ್ಟರಿಗೆ ಸಮ್ಮಾನ


Team Udayavani, May 3, 2019, 6:00 AM IST

MELA

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ಹಿರಿಯ ಕಲಾವಿದರಲ್ಲಿ ಒಬ್ಬರಾದ ಆಜ್ರಿ ಅರುಣ ಕುಮಾರ ಶೆಟ್ಟರಿಗೆ ಯಕ್ಷಗಾನ ಮೇಳದ ತಿರುಗಾಟಕ್ಕೆ ಈ ವರ್ಷ ಮೂವತ್ತರ ಸಂಭ್ರಮ.ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲು ಕೋಟೇಶ್ವರದ ಅಭಿಮಾನಿ ಬಳಗದವರು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಮ್ಮಾನ ಮೇ 4ರಂದು ಕುಂದಾಪುರದಲ್ಲಿ ಪೆರ್ಡೂರು ಮೇಳದ ವೇದಿಕೆಯಲ್ಲಿ ನೆರವೇರಲಿದೆ.ಬಳಿಕ ಪೆರ್ಡೂರು ಮೇಳದವರಿಂದ ಪೂರ್ವಿ ಕಲ್ಯಾಣಿ ಎಂಬ ಆಖ್ಯಾನ ಪ್ರದರ್ಶನಗೊಳ್ಳಲಿದೆ.

ಕೆಲ ವರ್ಷಗಳಿಂದ ಮಂದಾರ್ತಿ ಮೇಳದ ಒತ್ತು ಎರಡನೇ ವೇಷಧಾರಿಯಾಗಿ ಖಳ ಪಾತ್ರಗಳಿಗೆ ನ್ಯಾಯ ಒದಗಿಸಿದ ಆಜ್ರಿ ಅರುಣ ಕುಮಾರ ಶೆಟ್ಟರು 16ನೇ ವಯಸ್ಸಿನಲ್ಲಿ ಬಾಲ ಕಲಾವಿದರಾಗಿ ಕಲಾಜಗತ್ತನ್ನು ಪ್ರವೇಶಿಸಿದರು. ಆಜ್ರಿ ವಿಠಲ ಶೆಟ್ಟಿ ಮತ್ತು ಹೊಳಂದೂರು ಸಂಜೀವ ಶೆಟ್ಟರ ಪ್ರೇರಣೆಯಂತೆ ರಂಗಬದುಕನ್ನು ಕಂಡುಕೊಂಡ ಇವರು ಹಿರಿಯ ಯಕ್ಷಗಾನ ಗುರು ಆರ್ಗೋಡು ಗೋವಿಂದರಾಯ ಶೆಣೈಯವರಲ್ಲಿ ಯಕ್ಷಗಾನ ಶಿಕ್ಷಣ ಪಡೆದು ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿದರು.ಬಳಿಕ ಪೆರ್ಡೂರು,ಮಡಾಮಕ್ಕಿ,ಹಾಲಾಡಿ ಸೌಕೂರು ಮೇಳದಲ್ಲಿ ಹಂತ ಹಂತವಾಗಿ ಮೇಲೇರಿ ಸದ್ಯ ಮಂದಾರ್ತಿ ಮೇಳದ ಪ್ರದಾನ ಕಲಾವಿದರಾಗಿ ಸೇವೆ ಸಲ್ಲಿಸುತಿದ್ದಾರೆ.

ಸುಂದರವಾದ ನೀಳ ಆಳಂಗ,ಬ್ರಹ್ಮಾವರ ಶೈಲಿಯ ಕಟ್ಟುಮೀಸೆ, ನೃತ್ಯ,ಅಭಿನಯದಿಂದ ಎರಡನೇ ವೇಷ ಮತ್ತು ಪುರುಷ ವೇಷಗಳಿಗೆ ಜೀವತುಂಬುವ ಅವರು ಎರಡನೇ ವೇಷಕ್ಕೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ.ಹಾಗಾಗಿ ದ್ರೌಪದಿ ಪ್ರತಾಪದ ಅರ್ಜುನ,ವೀರಮಣಿ ಕಾಳಗದ ಪುಷ್ಕಳ, ಕರ್ಣಾರ್ಜುನದ ಅರ್ಜುನ, ಮುಂತಾದ ಪುರುಷ ವೇಷಗಳು, ಕೀಚಕ, ಕೌಂಡ್ಲಿàಕ ಮುಂತಾದ ಮುಂಡಾಸಿನ ವೇಷಗಳು, ದುಷ್ಟಬುದ್ಧಿ, ಭೀಷ್ಮ, ರಾವಣ ಮುಂತಾದ ಎರಡನೇ ವೇಷಗಳು ಅವರಿಗೆ ಅಪಾರ ಜನಮನ್ನಣೆ ತಂದಿತ್ತಿವೆ.ಪಾರ್ಟಿನ ವೇಷಗಳನ್ನು ಅಷ್ಟೇ ಸಮರ್ಥವಾಗಿ ನಿಬಾಯಿಸುವರ ಇವರ ಕಾಲನೇಮಿ,ಕಂಸ ರಕ್ತಜಂಘ,ಮಧು ಕೈಟಭ, ಶುಂಬಾಸುರ ಮುಂತಾದ ಖಳ ಪಾತ್ರಗಳೂ ಸಹ ಪ್ರಸಿದ್ಧವಾಗಿವೆ. ಸೌಕೂರು ಮೇಳದಲ್ಲಿ ಅನೇಕ ಆಧುನಿಕ ಪ್ರಸಂಗಗಳ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ ಇವರು ಅಮೃತೇಶ್ವರಿ ಮೇಳದೊಂದಿಗಿನ ಅನೇಕ ಜೋಡಾಟಗಳಲ್ಲಿ ಸೌಕೂರು ಮೇಳದಲ್ಲಿ ಕೀಚಕ ಕೌಂಡ್ಲಿàಕ ಪಾತ್ರಗಳಿಂದ ಎದುರು ಮೇಳಕ್ಕೆ ಸಮರ್ಥ ಪೈಪೋಟಿ ನೀಡಿದ್ದರು.

-ಪ್ರೊ.ಎಸ್‌.ವಿ.ಉದಯಕುಮಾರ ಶೆಟ್ಟಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.