ಪರಂಪರೆಯ ಚೌಕಟ್ಟಿನಲ್ಲಿ ನಡೆದ ಯಕ್ಷನವಮಿ

ಭಗವತಿ ಯಕ್ಷಕಲಾ ಬಳಗದ ಸಂಯೋಜನೆಯಲ್ಲಿ ತೆಂಕುತಿಟ್ಟಿನ ಒಂಬತ್ತು ಪೌರಾಣಿಕ ಪ್ರಸಂಗಗಳ ಪ್ರದರ್ಶನ

Team Udayavani, Nov 15, 2019, 4:09 AM IST

ff-5

ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ಶ್ರೀ ಭಗವತೀ ಯಕ್ಷಕಲಾ ಬಳಗದವರು ನವರಾತ್ರಿಯಂಗವಾಗಿ ಸಂಯೋಜಿಸಿದ್ದ 9 ದಿನಗಳ ತೆಂಕುತಿಟ್ಟು ಯಕ್ಷಗಾನ ಕಾರ್ಯಕ್ರಮ ಯಕ್ಷನವಮಿ ಅತ್ಯುತ್ತಮ ಸಾಂಪ್ರದಾಯಿಕ ಪ್ರದರ್ಶನ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.ಒಂಬತ್ತು ದಿನ ಕಾಲ ಒಂಬತ್ತು ಆಹ್ವಾನಿತ ತೆಂಕುತಿಟ್ಟಿನ ಹವ್ಯಾಸಿ ಮೇಳಗಳು ವಿವಿಧ ಆಖ್ಯಾನಗಳನ್ನು ಪ್ರದರ್ಶಿಸಿದವು.

ಮೊದಲನೇ ದಿನ ಯಕ್ಷಾರಾಧನಾ ಕಲಾ ಕೇಂದ್ರ ಉರ್ವ ಇವರು ಶಿವಭಕ್ತ ವೀರಮಣಿ ಎಂಬ ಪ್ರಸಂಗ ಪ್ರದರ್ಶಿಸಿದರು.ಎರಡನೇ ದಿನ ಉತ್ಸಾಹಿ ತರುಣ ವೃಂದ, ಕಾವೂರು ಇವರಿಂದ ದಕ್ಷಯಜ್ಞ – ಗಿರಿಜಾ ಕಲ್ಯಾಣ ಪ್ರಸಂಗಗಳು ಪ್ರಸ್ತುತವಾದರೆ ಮೂರನೇ ದಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ ವಾಮಂಜೂರು ಇವರಿಂದ ಶ್ರೀನಿವಾಸ ಕಲ್ಯಾಣ ಪ್ರಸಂಗ ಪ್ರದರ್ಶಿತವಾಯಿತು. ಲಂಕಿಣಿ ಮೋಕ್ಷ – ಗರುಡಗರ್ವ ಭಂಗ ಪ್ರಸಂಗದ್ವಯಗಳು ಆತಿಥೇಯ ತಂಡದಿಂದ ನಾಲ್ಕನೇ ದಿನ ಪ್ರದರ್ಶಿತವಾದರೆ ಪಣಂಬೂರು ಶ್ರೀ ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರಿಂದ ಚಕ್ರವ್ಯೂಹ ಎಂಬ ಪ್ರಸಂಗ ಐದನೇ ದಿನ ಪ್ರದರ್ಶನವನ್ನು ಕಂಡಿತು. ಕದಳಿ ಕಲಾ ಕೇಂದ್ರ, ಮಂಗಳೂರು ಇವರಿಂದ ಶ್ರೀ ಕದಂಬ ಕೌಶಿಕ ಎಂಬ ಪ್ರಸಂಗ ಆರನೇ ದಿನ ಪ್ರಸ್ತುತವಾದರೆ ಏಳನೇ ದಿನ ಯಕ್ಷಕೂಟ ಕದ್ರಿ ಇವರಿಂದ ಸುದರ್ಶನ ಗರ್ವಭಂಗ ಮತ್ತು ಶುಭವರ್ಣ ಯಕ್ಷ ಸಂಪದ ಮರಕಡ, ಮಂಗಳೂರು ಇವರು ಎಂಟನೇ ದಿನ ಶ್ರೀ ಕೃಷ್ಣಲೀಲಾಮೃತ ಎಂಬ ಪ್ರಸಂಗ ಪ್ರದರ್ಶಿಸಿದರು.

ಕೊನೆಯ ದಿನ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದ ಕಾಸರಗೋಡು ಸುಬ್ರಾಯ ಹೊಳ್ಳ ಇವರಿಗೆ ಯಕ್ಷ ಪ್ರದೀಪ್ತರತ್ನ ಮತ್ತು ಯಕ್ಷ ಪ್ರಸಾದನ ತಜ್ಞ ದೇವರಾನ ಕೃಷ್ಣ ಭಟ್‌ ಇವರಿಗೆ ಯಕ್ಷಭೂಷಣ ಪ್ರಶಸ್ತಿ ಪ್ರದಾನಿಸಲಾಯಿತು.

ಪ್ರತಿದಿನವೂ ಕ್ಲಪ್ತ ಸಮಯದಲ್ಲಿ ಆರಂಭವಾಗಿ ಮುಗಿಯುತ್ತಿದ್ದ ಈ ಕಾರ್ಯಕ್ರಮಗಳು ಪರಂಪರೆಯ ಚೌಕಟ್ಟನ್ನು ಮೀರದೆ ಉಡುಪಿ ಪರಿಸರದಲ್ಲಿ ತೆಂಕುತಿಟ್ಟಿನ ಸೊಗಡನ್ನು ಪಸರಿಸುವಲ್ಲಿ ಯಶಸ್ವಿ ಎಂದೆನಿಸಿಕೊಂಡವು. ಕೊನೆಯ ದಿನ ತೆಂಕುತಿಟ್ಟಿನ ಸುಪ್ರಸಿದ್ಧ ಕಲಾವಿದರಿಂದ ಪಾದುಕಾ ಪ್ರಧಾನ – ಪಂಚವಟಿ – ಮಾಯಾ ತಿಲೋತ್ತಮೆ ಎಂಬ ಪ್ರಸಂಗ ಪ್ರದರ್ಶಿತವಾಯಿತು.

ಡಾ| ಸುನಿಲ್‌ ಸಿ. ಮುಂಡ್ಕೂರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.