ಉಭಯ ತಿಟ್ಟುಗಳ ಕೂಡಾಟದ ಸವಿ ನೀಡಿದ ಯಕ್ಷೋತ್ಸವ


Team Udayavani, Sep 27, 2019, 5:00 AM IST

k-1

ಯಕ್ಷಗಾನ ಸಂಘಟಕ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಯಕ್ಷಗಾನಾಭಿಮಾನಿ ಬಳಗದೊಂದಿಗೆ ಸಂಯೋಜಿಸಿದ ಆಟಕ್ಕೂ ಬನ್ನಿ-ಊಟಕ್ಕೂ ಬನ್ನಿ  ಕಾರ್ಯಕ್ರಮ ಶಿರ್ವ ದಲ್ಲಿ ಸುಮಾರು ಎರಡೂವರೆ ಸಾವಿರದಷ್ಟು ಯಕ್ಷರಸಿಕರ ಹೃನ್ಮನ ತಣಿಸುವಲ್ಲಿ ಯಶಸ್ವಿಯಾಯಿತು.

ಈ ಬಾರಿ ಕುಶ-ಲವ, ಭಕ್ತ ಸುಧನ್ವ ಅವಳಿ ಪ್ರಸಂಗಗಳಲ್ಲಿ ತೆಂಕು ಬಡಗು ಶೈಲಿಗಳನ್ನು ಏಕಕಾಲಕ್ಕೆ ಆಸ್ವಾದಿಸುವ ಅವಕಾಶವನ್ನು ಯಕ್ಷರಸಿಕರು ಸಂಭ್ರಮಿಸಿದರು.ಪೂರ್ವಾರ್ಧದಲ್ಲಿ ಪ್ರದರ್ಶನಗೊಂಡ ಕುಶ-ಲವ ಆಖ್ಯಾನದಲ್ಲಿ ಕೊಳಗಿ ಕೇಶವ ಹೆಗಡೆ ಹಾಗೂ ಕಾವ್ಯಶ್ರೀ ಅಜೇರು ಅವರ ಶ್ರೇಷ್ಠ ಸ್ವರ ಮಾಧುರ್ಯವನ್ನು ಹೊರಹೊಮ್ಮಿತು.ಮೇರು ಕಲಾವಿದ ಜಯಪ್ರಕಾಶ ಶೆಟ್ಟಿ ಪೆರ್ಮುದೆ ಶತ್ರುಘ್ನನಾಗಿ ವೇಷ ನೃತ್ಯ,ಅಭಿನಯ, ಮಾತುಗಾರಿಕೆಗಳ ಮೂಲಕ ಸಾಮರ್ಥಯ ಮತ್ತು ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಂಕರ ಉಳ್ಳೂರರು (ಸೀತೆ) ಸ್ತ್ರೀ ಸಂವೇದನೆಯ ಅಭಿವ್ಯಕ್ತಿಯನ್ನು ಉತ್ತಮವಾಗಿ ನಿರ್ವಹಿಸಿದರು.ವಿಶ್ವನಾಥ ಹೆನ್ನಾಬೈಲು(ಲವ), ದಿವಾಕರ ರೈ ಸಂಪಾಜೆ (ಕುಶ) ನೃತ್ಯ ವೈವಿಧ್ಯತೆ, ಚುರುಕಿನ ಹೆಜ್ಜೆಗಾರಿಕೆಯಿಂದ ಮನೋಜ್ಞವಾಗಿ ಅಭಿನಯಿಸಿದರು. ಮಾಣಿಯಾಗಿ ಹಳ್ಳಾಡಿ ಜಯರಾಮ ಶೆಟ್ಟಿ ಅತಿರೇಕವಲ್ಲದ ನವಿರು ಹಾಸ್ಯದೊಂದಿಗೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರು. ದೂತನಾಗಿ ರಂಗ ಪ್ರವೇಶ ಮಾಡಿದ ದಿನೇಶ್‌ ಕೋಡ ಪದವು ಉತ್ತಮ ನಿರ್ವಹಣೆ ನೀಡಿದರು. ರಾಮಚಂದ್ರ ಹೆಗಡೆ ಕೊಂಡದಕುಳಿ ಶ್ರೀ ರಾಮನ ಪಾತ್ರದಲ್ಲಿ ಪ್ರಬುದ್ಧ ಅಭಿನಯ ನೀಡಿದರು. ವಟುಗಳಾಗಿ ನಿಖೀತ್‌,ಉದಯ, ವಿವೇಕ್‌ ಪ್ರಭು ಚಿಕ್ಕ ಪಾತ್ರಗಳನ್ನು ಚೊಕ್ಕದಾಗಿ ಅಭಿನಯಿಸಿದರು.

ಉತ್ತರಾರ್ಧದಲ್ಲಿ ನಡೆದ ” ಭಕ್ತ ಸುಧನ್ವ” ಸಂಪೂರ್ಣವಾಗಿ ಯಕ್ಷಲೋಕದಲ್ಲಿ ವಿಹರಿಸುವಂತೆ ಮಾಡಿತು.ರವಿಚಂದ್ರ ಕನ್ನಡಿಕಟ್ಟೆ ಹಾಗೂ ಸುರೇಶ್‌ ಶೆಟ್ಟಿಯವರ ತೆಂಕು ಬಡಗು ಶೈಲಿಯ ದ್ವಂದ್ವ ಗಾಯನ ಪ್ರದರ್ಶನಕ್ಕೆ ಹೆಚ್ಚಿನ ಮೆರುಗನ್ನು ತಂದುಕೊಟ್ಟಿತು. ಅರ್ಜುನನಾಗಿ ಮಿಂಚಿನ ರಂಗ ಪ್ರವೇಶ ಮಾಡಿದ ಗಣೇಶ್‌ ಶೆಟ್ಟಿ ಕನ್ನಡಿಕಟ್ಟೆ ತಮ್ಮ ಸುಂದರ ವೇಷಗಾರಿಗೆ ಹಾಗೂ ಪ್ರೌಢ ಮಾತುಗಾರಿಕೆಯಿಂದ ಗಮನ ಸೆಳೆದರು. ಶಶಿಕಾಂತ ಶೆಟ್ಟಿಯವರು ಸುಧನ್ವ ಪಾತ್ರದ ಒಳಹೊಕ್ಕು ಪುರುಷ ವೇಷದ ನಡೆಗೆ ಕೊಂಚವೂ ಕೊರತೆ ಬಾರದಂತೆ ಸಮರ್ಥವಾಗಿ ಅಭಿನಯಿಸಿದರು. ಸುಧನ್ವ -ಅರ್ಜುನರ ಸಂಭಾಷಣೆ ತುಸು ಅತಿ ಎನಿಸಿದರೂ ಅವರಿಬ್ಬರ ಪುರಾಣಾನುಭವ ,ವಾದ ಮಂಡನೆ-ಖಂಡನೆ ಖುಷಿ ನೀಡಿತು. ತಮ್ಮ ಮೋಹಕ ರೂಪ ಲಾವಣ್ಯ, ಹಾವ ಭಾವ ಮನಮೋಹಕ ಮಾತುಗಳಿಂದ ಪ್ರೇಕ್ಷಕರ ಮೈನವಿರೇಳುವಂತೆ ಮಾಡಿದ ರಕ್ಷಿತ್‌ ಶೆಟ್ಟಿ ಪಡ್ರೆ ಪ್ರಭಾವತಿಯಾಗಿ ಪ್ರೌಢ ಅಭಿನಯ ನೀಡಿದರು. ಹಿರಿಯ ಕಲಾವಿದ ವಾಸುದೇವ ಸಾಮಗರು ದೊರಕಿದ ಕಿರು ಅವಧಿಯಲ್ಲಿ ಕೃಷ್ಣನ ಪಾತ್ರಕ್ಕೆ ನ್ಯಾಯ ನೀಡಿದರು. ಕೋಟ ಶಿವಾನಂದ- ಚೈತನ್ಯ ಪದ್ಯಾಣ ಅವರ ಚೆಂಡೆಯ ನಿನಾದ, ರಾಘವೇಂದ್ರ ಯಲ್ಲಾಪುರ, ಗುರುಪ್ರಸಾದ್‌ ಬೊಳಿಂಜಡ್ಕ ಅವರ ಮದ್ದಳೆಯ ಝೆಂಕಾರ ಪ್ರದರ್ಶನದ ಒಟ್ಟು ಅಂದಕ್ಕೆ ಕಾರಣವಾಯಿತು.

ಅನಂತ ಮೂಡಿತ್ತಾಯ, ಶಿರ್ವ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.