ನಾಡಿನಿಂದ ಕಾಡಿನವರೆಗೆ…


Team Udayavani, Dec 30, 2019, 6:13 AM IST

nadininda

ಸಹಸ್ರಮಾನದ ಆರಂಭದ (2000) ಕಾಲ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳ ನಾಲ್ಕನೆಯ ಪರ್ಯಾಯದ ಸಂಭ್ರಮ. ಅತ್ತ ಪ್ರಶಾಂತ ತಾಣವಾಗಿದ್ದ ಮಲೆನಾಡು ಪಶ್ಚಿಮ ಘಟ್ಟ ಪ್ರದೇಶದ ಕಾಡು ಜನರಲ್ಲಿ ಅಭದ್ರತೆ, ಸರಕಾರದ ದ್ವಂದ್ವ ನಿಲುವು, ಚಳವಳಿ, ಅನಪೇಕ್ಷಿತ ಘಟನೆ, ಹಿಂಸೆ- ಪ್ರತಿಹಿಂಸೆ ಮೂಡಿದವು. ಅವರಷ್ಟಕ್ಕೆ ಅವರು ಬದುಕಿಕೊಂಡಿದ್ದ ಕಾಡಿನ ಗಿರಿಜನರು ಸರಕಾರದ ವಿರುದ್ಧ ಬಹಿರಂಗವಾಗಿ ಚಳವಳಿ ನಡೆಸಿದರು.

ಇದೇ ವೇಳೆ ನಕ್ಸಲ್‌ ಚಳವಳಿಗಳೂ ಕಂಡುಬಂದವು. ಕಾಡಿನ ಜನರನ್ನು ಬೇರೆ ಬೇರೆ “ಇಸಂ’ಗಳ ಮೂಲಕ ಸರಕಾರ, ಪ್ರಜಾಪ್ರಭುತ್ವ, ಸ್ಥಳೀಯ ಸಂಸ್ಕೃತಿ, ಧಾರ್ಮಿಕ ಪರಂಪರೆ, ಒಂದು ಜನಾಂಗದ ವಿರುದ್ಧ ಇನ್ನೊಂದು ಜನಾಂಗವನ್ನು ಎತ್ತಿಕಟ್ಟುವ ಕೆಲಸ ವ್ಯವಸ್ಥಿತವಾಗಿ ನಡೆದವು. ಪೇಜಾವರ ಶ್ರೀಗಳವರು ವಿಶ್ವಾಸಾರ್ಹ ವ್ಯಕ್ತಿಗಳನ್ನು ನಿಯೋಜಿಸಿ ಜನರ ನಿಜವಾದ ಸಮಸ್ಯೆಗಳನ್ನು ಅಧ್ಯಯನ ನಡೆಸಲು ಸೂಚಿಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನ ವನ ಘೋಷಣೆಯಾದ ಬಳಿಕ ಸರಕಾರದ ತಪ್ಪು ನಿರ್ಧಾರದಿಂದ ಗಿರಿಜನರಲ್ಲಿ ಅಭದ್ರತೆ, ಅತಂತ್ರ ಭಾವನೆ ಮೂಡಿರುವ ಬಗ್ಗೆ ವರದಿಗಳು ಬೆಳಕು ಚೆಲ್ಲಿದವು. ಕಾಡಿನ ಜನರಿಗೆ ಮುಖ್ಯವಾಗಿ ಬೇಕಾದದ್ದು ಜೀವನದಲ್ಲಿ ಭದ್ರತೆ. ಅವರ ಜತೆ ಭಾವನಾತ್ಮಕವಾಗಿ ನಿಲ್ಲಬೇಕು. ಶಿಕ್ಷಣ, ರಸ್ತೆ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಒಟ್ಟಿನಲ್ಲಿ ಅವರು ಅತಂತ್ರರಲ್ಲ, ಅವರ ಜತೆ ನಾವಿದ್ದೇವೆ ಎಂಬ ಮನಃಸ್ಥೈರ್ಯ ಮೂಡಬೇಕು.

ಇದನ್ನೇ ಕಳೆದ ಹಲವು ವರ್ಷಗಳಿಂದ ಪೇಜಾವರ ಶ್ರೀಗಳು ನಡೆಸಿದರು. ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದ.ಕ. ಜಿಲ್ಲೆಗಳ 80 ಗ್ರಾ.ಪಂ.ಗಳು ಬರುತ್ತವೆ. ಶ್ರೀಗಳು ತಮ್ಮ ಕಾರ್ಯತಂಡದ ಮೂಲಕ ಅನೇಕ ಮನೆಗಳಿಗೆ ವಿದ್ಯುತ್‌ ಸಂಪರ್ಕ, ಕುಡಿಯುವ ನೀರು ಪೂರೈಕೆ, 20ಕ್ಕೂ ಹೆಚ್ಚು ದೈವಸ್ಥಾನಗಳ ಅಭಿವೃದ್ಧಿ, ಅನೇಕ ವಿದ್ಯಾರ್ಥಿಗಳಿಗೆ ಶಿಕ್ಷಣ ವ್ಯವಸ್ಥೆ ಮನೆ ನಿರ್ಮಾಣ, ಮನೆ ನಿರ್ಮಾಣಕ್ಕೆ ಪರಿಕರ ಪೂರೈಕೆ, ಕೃಷಿ ಮಾಡುವ ಆಸಕ್ತ ಗಿರಿಜನರಿಗೆ ಕೃಷಿಭೂಮಿ ಒದಗಣೆ, ಪರಂಪರಾಗತ ಕಲಾವಿದರಿಗೆ ಜನಪದ ಪರಿಕರಗಳ ಸರಬರಾಜು ಇತ್ಯಾದಿ ಕೆಲಸಗಳನ್ನು ಮಾಡಿದ್ದಾರೆ.

ಇವರ ನೆರವಿನಿಂದ ಕಲಿತವರಲ್ಲಿ ವೈದ್ಯರೂ, ಎಂಜಿನಿಯರ್‌, ಸ್ನಾತಕೋತ್ತರ ಪದವಿ ಆದವರೂ ಇದ್ದಾರೆ. 2015ರಲ್ಲಿ ಶೃಂಗೇರಿ ತಾಲೂಕಿನ ಮುಂಡಗಾರು ಶ್ರೀ ಮಹಾಕಾಳಿ ಮಾರಿಯಮ್ಮ ದೇವಸ್ಥಾನದ ಪುನಃಪ್ರತಿಷ್ಠಾ ಮಹೋತ್ಸವ, 180 ಕಂಬ ಅಳವಡಿಸುವ ಮೂಲಕ ಗ್ರಾಮದ ನಿವಾಸಿಗಳಿಗೆ ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಸಹಕಾರದಿಂದ ಅಳವಡಿಸಲಾದ ವಿದ್ಯುತ್‌ ಸಂಪರ್ಕ ಉದ್ಘಾಟನೆ, ನಿರ್ಮಾಣಗೊಂಡ ಮನೆಗಳ ಹಸ್ತಾಂತರ,

ಶಿಕ್ಷಣ-ಆರೋಗ್ಯ ನೆರವಿನ ಸಾಂಕೇತಿಕ ವಿತರಣೆಯನ್ನು ಶ್ರೀಪಾದರು ನಡೆಸಿಕೊಟ್ಟದ್ದಕ್ಕೆ ಚಿಕ್ಕಮಗಳೂರು, ಶೃಂಗೇರಿ ಭಾಗದ ಪ್ರಮುಖರು, ಹಿರಿಯ ಅಧಿಕಾರಿಗಳು, ಪರಿಸರ ತಜ್ಞರು, ರಾಜಕೀಯ ನೇತಾರರು ಸಾಕ್ಷಿಯಾದರು. ಆಗ ಮುಂಡಗಾರು ಗಿರಿಜನ ಗ್ರಾಮದಲ್ಲಿ ಸುಮಾರು 45 ಲ. ರೂ. (ಜನರ ಶ್ರಮ ಹೊರತು) ವೆಚ್ಚದಲ್ಲಿ ಅಳವಡಿಸಿದ ವಿವಿಧ ಯೋಜನೆಗಳನ್ನು ಉದ್ಘಾಟನೆಗೊಂಡರೆ ಏಳೆಂಟು ವರ್ಷಗಳಲ್ಲಿ ಸುಮಾರು 2.5 ಕೋ.ರೂ. (ಜನರ ಶ್ರಮ ಹೊರತು) ವೆಚ್ಚದಲ್ಲಿ ವಿವಿಧ ಯೋಜನೆಗಳು ಜಾರಿಗೊಂಡಿವೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.