73ರಲ್ಲಿ ಗೆಜ್ಜೆಕಟ್ಟಿದ ಸಾವಿತ್ರಿ 


Team Udayavani, May 25, 2018, 6:00 AM IST

c-9.jpg

ಸಾವಿತ್ರಿ ಎಸ್‌ . ರಾವ್‌ ಇವರು ಸುರತ್ಕಲ್‌ನಲ್ಲಿ ಜನಿಸಿ, ಕೂಡು ಕುಟುಂಬದಲ್ಲಿ ಅಕ್ಕ-ತಂಗಿ, ಅಣ್ಣ-ತಮ್ಮಂದಿರೊಡನಾಡಿ ಬೆಳೆದು, ಮಂಗಳೂರಿನ ಉರ್ವದ ಕಲ್ಲಾವು ಕುಟುಂಬಕ್ಕೆ ಸೊಸೆಯಾಗಿ, ಶ್ರೀನಿವಾಸ ರಾವ್‌ ಅವರ ಮಡದಿಯಾಗಿ ಬಂದು ಮೇ 13ಕ್ಕೆ 50 ವರ್ಷ ತುಂಬಿತು. ಈ ಅವಧಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ದುಡಿದು, ಮಕ್ಕಳ ಅಪಾರ ಪ್ರೀತಿಯನ್ನು ಗಳಿಸಿದ ಅವರು ರಾಜ್ಯ ಪ್ರಶಸ್ತಿಯನ್ನು ಪಡೆದರು. ಮಕ್ಕಳ ಸಾಹಿತಿಯಾಗಿ ಹಲವಾರು ಕಥೆ ಕವನಗಳನ್ನು ಬರೆದರು. ತೋಟದ ಆರೈಕೆ, ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸುವುದು, ಕಥಾ,ಕವನದ ಕಮ್ಮಟಗಳನ್ನು ನಡೆಸುವುದೇ ಮುಂತಾದ ಹಲವಾರು ಚಟುವಟಿಕೆಗಳಲ್ಲಿ ಇವರು ತಮ್ಮನ್ನು ತೊಡಗಿಸಿಕೊಂಡವರು. ಸ್ವಯಂ ನಿವೃತ್ತಿಯನ್ನು ಪಡೆದು ಇಂತಹ ಹಲವಾರು ಪ್ರವೃತ್ತಿಗಳಿಗೆ ಸಮಯವನ್ನು ಮುಡಿಪಾಗಿಟ್ಟರು. ತನ್ನ 66ನೇ ವಯಸ್ಸಿನಲ್ಲಿ ಇವೆಲ್ಲವನ್ನು ಮೀರಿಸಿದ ಹೊಸ ಪ್ರಯೋಗವೊಂದನ್ನು ಮಾಡಿದರು ಹಾಗು ಯಶಸ್ವಿಯೂ ಆದರು. ಅದೇ ಯಕ್ಷಲೋಕಕ್ಕೆ ಪದಾರ್ಪಣೆ. 

ಇಂದು ಅವರಿಗೆ 73ರ ಹರೆಯ. ನವತರುಣ-ತರುಣಿಯರು ನಾಚುವಂತೆ ಅವರು ಯಕ್ಷಗಾನದಲ್ಲಿ ಗೆಜ್ಜೆ ಕಟ್ಟಿ ಕುಣಿದು ಕಲಾಭಿಮಾನಿಗಳನ್ನು ಮಂತ್ರ ಮುಗ್ಧಗೊಳಿಸಬಲ್ಲರು. ಇಳಿ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಮಿಂಚುವ ಕನಸು ಕೂಡಾ ಕಂಡವರಲ್ಲ. ಆದರೆ ಅವರ ಉತ್ಸಾಹ, ಕಲಿಯುವ ಮನಸ್ಸು, ಉತ್ತಮ ಆರೋಗ್ಯ ಸಾಧನೆಯ ಗುಟ್ಟು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರೂ ಆದ ಪತಿಯ ನಿರಂತರ ಸಹಕಾರ ಮತ್ತು ಬೆಂಬಲ, ಯಕ್ಷಗುರು ಸುಮಂಗಲ ರತ್ನಾಕರ ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅವರ ಸಾಧನೆಯ ಹಾದಿಯ ಮೆಟ್ಟಿಲುಗಳಾದವು. 

50ನೇ ವಿವಾಹ ವಾರ್ಷಿಕೋತ್ಸವದಂದು ಯಕ್ಷಗಾನದ 100ನೇ ಪ್ರದರ್ಶನವನ್ನು ನಗರದ ಪುರಭವನದಲ್ಲಿ ಏರ್ಪಡಿಸಿದ್ದರು. ಸುಮಂಗಲ ರತ್ನಾಕರ ಅವರ ನೇತೃತ್ವದಲ್ಲಿ ದಂಪತಿಯನ್ನು ಸಮ್ಮಾನಿಸಲಾಯಿತು.ಅನಂತರ ನಡೆದ “ನರಕಾಸುರ ವಧೆ’ ಪ್ರದರ್ಶನದಲ್ಲಿ ಸಾವಿತ್ರಿಯವರು ದೇವೇಂದ್ರನ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದರು. ಇವರ ಈ ಜೀವನೋತ್ಸಾಹ ಸರ್ವರಿಗೂ ಆದರ್ಶ. ಮಧ್ಯ ವಯಸ್ಸಿನಲ್ಲೇ ಎಲ್ಲ ಮುಗಿಯಿತೆಂದುಕೊಂಡು ನೀರಸ ಬಾಳು ಬಾಳುವವರಿಗೊಂದು ದಾರಿದೀಪ, ಸ್ಫೂರ್ತಿ. 

ಯಕ್ಷಪ್ರಿಯ 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.