Diabetes: ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸಲು ಪಥ್ಯಾಹಾರ


Team Udayavani, Nov 27, 2023, 8:00 AM IST

6-diet

ಮಧುಮೇಹವು ಜೀವನ ಶೈಲಿಗೆ ಸಂಬಂಧಿಸಿದ ಒಂದು ಅನಾರೋಗ್ಯ. ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಇದನ್ನು ತಡೆಗಟ್ಟಬಹುದು ಹಾಗೂ ಪಥ್ಯಾಹಾರ ಮತ್ತು ವ್ಯಾಯಾಮಗಳ ಮೂಲಕ ಇದರ ಮೇಲೆ ಉತ್ತಮ ನಿಯಂತ್ರಣ ಸಾಧಿಸಬಹುದು.

ಮಧುಮೇಹಿಯು ಈ ಅನಾರೋಗ್ಯಕ್ಕಾಗಿ ಮಾತ್ರೆಗಳನ್ನು ಮಾತ್ರ ಸೇವಿಸುತ್ತಿದ್ದಾರೆಯೇ ಅಥವಾ ಇನ್ಸುಲಿನ್‌ ತೆಗೆದುಕೊಳ್ಳುತ್ತಿದ್ದಾರೆಯೇ ಅಥವಾ ಆಕೆ ಗರ್ಭಿಣಿ ಅವಧಿಯಲ್ಲಿ ಮಧುಮೇಹಕ್ಕೆ ತುತ್ತಾಗಿದ್ದಾರೆಯೇ ಎಂಬ ವಿಚಾರಗಳನ್ನು ಗಮನದಲ್ಲಿ ಇರಿಸಿಕೊಂಡು ಕಾಯಿಲೆಯ ವೈದ್ಯಕೀಯ ನಿರ್ವಹಣೆಯ ವಿಧ, ವ್ಯಕ್ತಿಯ ಆಹಾರ ಶೈಲಿ, ಆಹಾರ ಸೇವಿಸುವ ವಿಧಾನ ಇತ್ಯಾದಿಗಳನ್ನು ಆಧರಿಸಿ ಆಯಾ ರೋಗಿಗೆ ವೈಯಕ್ತಿಕ ಊಟ -ಉಪಾಹಾರ ಯೋಜನೆಯನ್ನು ವಿನ್ಯಾಸಗೊಳಿಸಲಾಗುತ್ತದೆ.

ಕಡಿಮೆ ಕೊಬ್ಬು, ಕಡಿಮೆ ಗ್ಲೈ ಸೇಮಿಕ್‌ ಇಂಡೆಕ್ಸ್‌ ಹೊಂದಿರುವ ಆಹಾರಗಳು ಮತ್ತು ಹಣ್ಣುಗಳು, ಸಂಕೀರ್ಣ ಕಾರ್ಬೊಹೈಡ್ರೇಟ್‌ ಇರುವ ಆಹಾರಗಳು ಹಾಗೂ ಹೈಪರ್‌ಇನ್ಸುಲಿನೇಮಿಯಾ ತಡೆಗಟ್ಟಲು ಆಗಾಗ ಕಿರು ಆಹಾರ ಸೇವನೆಗೆ ಆದ್ಯತೆ ನೀಡಲಾಗುತ್ತದೆ. ದಿನವೊಂದಕ್ಕೆ ಎರಡು ಬಾರಿ ಭರ್ಜರಿ ಊಟ ಮಾಡುವ ಬದಲು ಊಟ-ಉಪಾಹಾರಗಳ ನಡುವೆ 3-4 ತಾಸು ಸಮಯಾವಕಾಶ ಇರಿಸಿಕೊಂಡು 3 ಬಾರಿ ಊಟ ಮತ್ತು 2 ಬಾರಿ ಉಪಾಹಾರ ಸೇವನೆಯ ಯೋಜನೆ ಉತ್ತಮವಾಗಿರುತ್ತದೆ.

ದಿನಕ್ಕೆ ಕನಿಷ್ಠ ಕ್ಯಾಲೊರಿ ಅಗತ್ಯವು ಮಹಿಳೆಯರಿಗೆ ಸರಿಸುಮಾರು 1,200-1,500 ಕೆಸಿಎಲ್‌ ಆಗಿದ್ದರೆ ಪುರುಷರಿಗೆ 1,500-1,800 ಕೆಸಿಎಲ್‌ ಆಗಿರುತ್ತದೆ. ಇಡೀ ಧಾನ್ಯಗಳಾದ ಗೋಧಿ, ಸಿರಿಧಾನ್ಯಗಳು, ಜೋಳ, ಬಾರ್ಲಿ, ಓಟ್ಸ್‌ ಮತ್ತು ಬಾಜ್ರಾ ಮೂಲದ ಸಂಕೀರ್ಣ ಕಾರ್ಬೊಹೈಡ್ರೇಟ್‌ಗಳು ಆಹಾರದಲ್ಲಿ ಇರಬೇಕು. ಜತೆಗೆ ಹೆಚ್ಚು ಕಾರ್ಬೊಹೈಡ್ರೇಟ್‌ ಇರುವ ಪಾನೀಯಗಳು, ಜ್ಯೂಸ್‌ಗಳು, ಕ್ಯಾಂಡಿಗಳು, ಚಾಕೊಲೇಟ್‌ಗಳು, ಸಂಸ್ಕರಿತ ಸಕ್ಕರೆ, ಬೆಲ್ಲ ಮತ್ತು ಜೇನುತುಪ್ಪವನ್ನು ವರ್ಜಿಸಬೇಕು.

ಕಾರ್ಬೊಹೈಡ್ರೇಟ್‌ ಅಧಿಕ ಪ್ರಮಾಣದಲ್ಲಿ ಇರುವ ಮೈದಾದಂತಹ ಸಂಸ್ಕರಿತ ಹಿಟ್ಟುಗಳಿಂತ ತಯಾರಿಸಿದ ಆಹಾರ, ಗೆಡ್ಡೆ ಗೆಣಸುಗಳನ್ನು ಸೇವಿಸಬಾರದು. ಪ್ರತೀ ಬಾರಿ ಊಟ-ಉಪಾಹಾರ ಸೇವಿಸಿದ ಬಳಿಕ ಕಾರ್ಬೊಹೈಡ್ರೇಟ್‌ ಲೆಕ್ಕಾಚಾರ ಹಾಕುವುದರಿಂದ ಊಟ-ಉಪಾಹಾರದ ಬಳಿಕ ರಕ್ತದಲ್ಲಿ ಸಕ್ಕರೆಯಂಶ ಎಷ್ಟು ಹೆಚ್ಚಳವಾಗಬಹುದು ಎಂಬ ಬಗ್ಗೆ ಅಂದಾಜು ಸಿಗುತ್ತದೆ. ಮಧುಮೇಹದ ಮೇಲೆ ಉತ್ತಮ ನಿಯಂತ್ರಣ ಹೊಂದಿರಬೇಕಾದರೆ ಕ್ಯಾಲೊರಿ ಸೇವನೆಯನ್ನು ಇಡೀ ದಿನಕ್ಕೆ ಹಂಚಿಹಾಕಬೇಕಾಗುತ್ತದೆ.

ಮಧುಮೇಹಿಯು ಇನ್ಸುಲಿನ್‌ ಇಂಜೆಕ್ಷನ್‌ ತೆಗೆದುಕೊಳ್ಳುತ್ತಿದ್ದರೆ ಇನ್ಸುಲಿನ್‌ ವಿಧ ಮತ್ತು ಡೊಸೇಜ್‌ ಆಧಾರದಲ್ಲಿ ಕಾರ್ಬೊಹೈಡ್ರೇಟ್‌ ಸೇವನೆಯನ್ನು ಇಡೀ ದಿನಕ್ಕೆ ಹಂಚಿಹಾಕಬೇಕಿರುತ್ತದೆ.

ಮೊಟ್ಟೆಯ ಬಿಳಿಭಾಗ, ಬಿಳಿ ಮಾಂಸ, ಮೀನು, ಬೇಳೆಕಾಳುಗಳು ಇತ್ಯಾದಿ ಅಧಿಕ ಜೀವಶಾಸ್ತ್ರೀಯ ಪ್ರೊಟೀನ್‌ ಮೌಲ್ಯ ಹೊಂದಿರುವ ಮೂಲಗಳಿಂದ ಪ್ರೊಟೀನ್‌ ಅಗತ್ಯವನ್ನು ಪೂರೈಸಿಕೊಳ್ಳಬೇಕಾಗಿರುತ್ತದೆ. ಇವುಗಳ ಸೇವನೆಯನ್ನು ಕೂಡ ದಿನದ ಎಲ್ಲ ಊಟ-ಉಪಾಹಾರಗಳಿಗೆ ಹಂಚಿ ಹಾಕಬೇಕಾಗಿರುತ್ತದೆ. ರೋಗಿಯ ಸಹ ಅನಾರೋಗ್ಯಗಳನ್ನು ಆಧರಿಸಿ ಇದನ್ನು ಕೂಡ ರೋಗಿ ನಿರ್ದಿಷ್ಟವಾಗಿ ಮಾಡಬೇಕಾಗುತ್ತದೆ.

ಪ್ರೊಟೀನ್‌ ಮತ್ತು ಕೊಬ್ಬನ್ನು ಅನುಮತಿ ನೀಡಲಾದ ಪಥ್ಯಾಹಾರ ಪ್ರಮಾಣದಲ್ಲಿಯೇ ತೆಗೆದುಕೊಳ್ಳಬೇಕು. ಆಹಾರದಲ್ಲಿ ಹೆಚ್ಚು ಪ್ರೊಟೀನ್‌ ಮತ್ತು ಹೆಚ್ಚು ಕೊಬ್ಬಿನಂಶ ಮತ್ತು ಕಾರ್ಬೊಹೈಡ್ರೇಟ್‌ ಇದ್ದಲ್ಲಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ಕ್ರಮೇಣ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಳವಾಗಲು ಕಾರಣವಾಗುತ್ತದೆ.

ಆಹಾರದಲ್ಲಿ ನಾರಿನಂಶವು ಸಲಾಡ್‌ಗಳು, ತರಕಾರಿಗಳು, ಹಸುರು ಸೊಪ್ಪು ತರಕಾರಿಗಳು ಮತ್ತು ಸಂಕೀರ್ಣ ಕಾರ್ಬೊಹೈಡ್ರೇಟ್‌ಗಳು ಹಾಗೂ ಕಡಿಮೆ ಗ್ಲೈಸೇಮಿಕ್‌ ಇಂಡೆಕ್ಸ್‌ ಹೊಂದಿರುವ ಹಣ್ಣುಗಳಿಂದ ದೊರಕುತ್ತದೆ. ನಾರಿನಂಶವು ಹೊಟ್ಟೆ ತುಂಬಿದ ಅನುಭವ ಉಂಟು ಮಾಡುತ್ತದೆಯಲ್ಲದೆ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ದ್ರವಾಹಾರಗಳನ್ನು ನೀರು, ಮಜ್ಜಿಗೆ, ನಿಂಬೂನೀರು, ಜೀರಿಗೆ ನೀರು ಮತ್ತು ಬಾರ್ಲಿ ನೀರಿನ ರೂಪಗಳಲ್ಲಿ ಆಗಾಗ ಸೇವಿಸಬೇಕು. ಆಗಾಗ ಮೂತ್ರ ವಿಸರ್ಜನೆ ಮತ್ತು ಬಾಯಾರಿಕೆ ಮಧುಮೇಹದ ಲಕ್ಷಣಗಳಲ್ಲಿ ಒಂದಾಗಿದ್ದು, ಆಗಾಗ ನೀರಿನಂಶ ಪೂರೈಸಿಕೊಳ್ಳುವುದರಿಂದ ಈ ಲಕ್ಷಣಗಳನ್ನು ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

-ಅರುಣಾ ಮಲ್ಯ,

ಹಿರಿಯ ಪಥ್ಯಾಹಾರ ತಜ್ಞೆ,

ಕೆಎಂಸಿ ಆಸ್ಪತ್ರೆ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಪಥ್ಯಾಹಾರ ವಿಭಾಗ, ಕೆಎಂಸಿ ಆಸ್ಪತ್ರೆ, ಮಾಹೆ, ಮಣಿಪಾಲ)

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

4-health

Rhinoplasty: ರಿನೊಪ್ಲಾಸ್ಟಿ

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.