ಓಸ್ಟಿಯೋಪೊರೋಸಿಸ್‌ ಅಪಾಯವನ್ನು ಹೆಚ್ಚಿಸಬಲ್ಲ ಪಾನ ಹವ್ಯಾಸಗಳು


Team Udayavani, Nov 13, 2022, 3:58 PM IST

18

ಓಸ್ಟಿಯೋಪೊರೋಸಿಸ್‌ ಎಂಬ ಗಂಭೀರ ಕಾಯಿಲೆಯ ಲಕ್ಷಣಗಳು ಆರಂಭಿಕವಾಗಿ ಹೆಚ್ಚು ತೋರಿಬರದಿರುವುದರಿಂದಾಗಿ ಇದನ್ನು ಸಾಮಾನ್ಯವಾಗಿ “ನಿಶ್ಶಬ್ದ ಕೊಲೆಗಾರ’ ಎಂಬುದಾಗಿ ಸಂಬೋಧಿಸಲಾಗುತ್ತದೆ.

ಸಣ್ಣ ಏಟಿನಿಂದ ಕೂಡ ಮೂಳೆ ಮುರಿತಗಳು ಉಂಟಾಗುವಷ್ಟು ಮಟ್ಟಿಗೆ ಓಸ್ಟಿಯೋಪೊರೋಸಿಸ್‌ ವ್ಯಕ್ತಿಯ ಎಲುಬುಗಳನ್ನು ದುರ್ಬಲ ಮತ್ತು ಬಿಧುರಗೊಳಿಸುತ್ತದೆ. ಚಿಕಿತ್ಸೆ ಒದಗಿಸದೆ ಇದ್ದಲ್ಲಿ ಇದು ಸೊಂಟ ಮತ್ತು ಬೆನ್ನೆಲುಬಿನಲ್ಲಿ ಗಂಭೀರ ಮುರಿತಗಳಿಗೆ ಕಾರಣವಾಗಬಹುದಾಗಿದ್ದು, ಇದರಿಂದ ಭಾರೀ ನೋವು, ವೈಕಲ್ಯ ಉಂಟಾಗಬಹುದು ಮತ್ತು ಅದಕ್ಕಾಗಿ ಶಸ್ತ್ರಚಿಕಿತ್ಸೆಯ ಅಗತ್ಯ ಬೀಳಬಹುದು.

ಯುವಜನರಲ್ಲಿ ಆಲಸಿ ಜೀವನಶೈಲಿಯು ಓಸ್ಟಿಯೋಪೊರೋಸಿಸ್‌ ನಂತಹ ದೀರ್ಘ‌ಕಾಲೀನ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು. ವ್ಯಕ್ತಿಯೊಬ್ಬ ಓಸ್ಟಿಯೋಪೊರೋಸಿಸ್‌ಗೆ ತುತ್ತಾಗಲು ಕಾರಣವಾಗಬಹುದಾದಂತಹ ಕೆಲವು ಪಾನ ಹವ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಅತಿಯಾದ ಮದ್ಯಪಾನ ದಿನಂಪ್ರತಿ ಅತಿಯಾಗಿ ಮದ್ಯಪಾನ ಮಾಡುವುದರಿಂದ ಮೆಗ್ನಿಸಿಯಂ ಮತ್ತು ಕ್ಯಾಲ್ಸಿಯಂನಂತಹ ಖನಿಜಾಂಶಗಳು ದೇಹವು ಅವುಗಳನ್ನು ಹೀರಿಕೊಳ್ಳುವುದಕ್ಕೆ ಮುನ್ನವೇ ಮೂತ್ರದ ಮೂಲಕ ಹೊರಹಾಕಲ್ಪಡುತ್ತವೆ. ಇದರಿಂದಾಗಿ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಉಂಟಾಗಿ ವಿಟಮಿನ್‌ ಡಿ ಉತ್ಪಾದನೆ ಕುಂಠಿತವಾಗಬಹುದು. ಇದಲ್ಲದೆ, ಮದ್ಯಪಾನದ ಚಟದಿಂದಾಗಿ ಮಹಿಳೆಯರಲ್ಲಿ ಈಸ್ಟ್ರೋಜೆನ್‌ ಹಾರ್ಮೋನ್‌ ಉತ್ಪಾದನೆಯ ಪ್ರಮಾಣ ಕಡಿಮೆಯಾಗಿ ಋತುಚಕ್ರ ವಿಳಂಬವಾಗಬಹುದು.
  • ಶಕ್ತಿವರ್ಧಕ ಪೇಯಗಳನ್ನು ನಿಯಮಿತವಾಗಿ ಕುಡಿಯುವುದು ಶಕ್ತಿವರ್ಧಕ ಪೇಯಗಳು ಅಥವಾ “ಎನರ್ಜಿ ಡ್ರಿಂಕ್‌’ಗಳು ಹೆಚ್ಚು ಪ್ರಮಾಣದಲ್ಲಿ ಸೋಡಿಯಂ ಅಂಶವನ್ನು ಹೊಂದಿರುತ್ತವೆ. ಇದು ದೇಹಕ್ಕೆ ಆರೋಗ್ಯಕರವಲ್ಲ. ದೇಹದಲ್ಲಿ ಸೋಡಿಯಂ ಅಂಶ ಹೆಚ್ಚಿದ್ದರೆ ಕ್ಯಾಲ್ಸಿಯಂ ಅಂಶ ಕಡಿಮೆಯಾಗುತ್ತದೆ.
  • ದಿನಂಪ್ರತಿ ಸೋಡಾ ಕುಡಿಯುವುದು ಸೋಡಾದಲ್ಲಿ ಸಾಮಾನ್ಯವಾಗಿ ಕಂಡುಬರುವ ಪಾಸ್ಫಾರಿಕ್‌ ಆಮ್ಲವು ದೇಹದಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಅಂಶವು ಹೊರಹೋಗಲು ಕಾರಣವಾಗುವ ಇನ್ನೊಂದು ರಾಸಾಯನಿಕ ಅಂಶ. ಸೋಡಾದಲ್ಲಿರುವ ಕೆಫಿನ್‌ ಕೂಡ ಎಲುಬು ನಷ್ಟಕ್ಕೆ ಕಾರಣವಾಗಬಹುದು.
  • ಸಕ್ಕರೆ ಬೆರೆಸಿದ ಪಾನೀಯಗಳು ಇಂತಹ ಹಣ್ಣಿನ ರಸಗಳು, ಪಾನೀಯಗಳಲ್ಲಿ ಹೆಚ್ಚುವರಿಯಾಗಿ ಸಕ್ಕರೆ/ ಸಂಸ್ಕರಿತ ಸಕ್ಕರೆಯನ್ನು ಬೆರೆಸಲಾಗಿರುತ್ತದೆ. ಇದು ದೇಹದ ಎಲುಬುಗಳ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರಬಲ್ಲುದು. ಇದರಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಮತ್ತು ಮೆಗ್ನಿಶಿಯಂ ಅಂಶ ದೇಹದಿಂದ ಹೊರಹೋಗುವ ಪ್ರಮಾಣ ಹೆಚ್ಚುತ್ತದೆ. ಅಲ್ಲದೆ ಇದು ದೇಹದಲ್ಲಿರುವ ಸಕ್ರಿಯ ವಿಟಮಿನ್‌ ಡಿ ಅಂಶವನ್ನು ಹೀರಿಕೊಳ್ಳುತ್ತದೆ.

ಮೇಲೆ ಹೇಳಲಾದ, ಎಲುಬುಗಳ ಆರೋಗ್ಯಕ್ಕೆ ಹಾನಿಕರವಾದ ಹವ್ಯಾಸಗಳನ್ನು ತ್ಯಜಿಸಿ ಹೈನು ಉತ್ಪನ್ನಗಳು, ತಾಜಾ ಹಣ್ಣಿನ ರಸಗಳು, ಬೇಳೆಕಾಳುಗಳಿಂದ ಕೂಡಿದ ಆರೋಗ್ಯಕರ ಮತ್ತು ಪೌಷ್ಟಿಕಾಂಶಸಹಿತ ಆಹಾರ ಶೈಲಿಯನ್ನು ರೂಢಿಸಿಕೊಳ್ಳಬೇಕು. ಜತೆಗೆ ವಿಟಮಿನ್‌ ಡಿ ಅಥವಾ ಮಲ್ಟಿವಿಟಮಿನ್‌ ಪೂರಕಗಳನ್ನು ಸೇವಿಸಬೇಕು. ಮದ್ಯಪಾನ ಮತ್ತು ಧೂಮಪಾನದಿಂದ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮಗಳು ಉಂಟಾಗುತ್ತವೆ.

ಅತಿಯಾದ ಮದ್ಯಪಾನದಿಂದ ದೇಹದಲ್ಲಿ ಕ್ಯಾಲ್ಸಿಯಂ ಅಂಶ ಕಡಿಮೆಯಾಗುತ್ತದೆ, ಹೀಗಾಗಿ ಇದರಿಂದ ದೂರವಿರಬೇಕು. ಈಗಾಗಲೇ ಓಸ್ಟಿಯೋಪೊರೋಸಿಸ್‌ ಇದ್ದರೆ ಉಪ್ಪೂರಿದ, ಕರಿದ ಆಹಾರಗಳಿಂದ ದೂರವಿರಿ, ಏಕೆಂದರೆ ಅವು ಎಲುಬುಗಳ ರೋಗಲಕ್ಷಣಗಳನ್ನು ಇನ್ನಷ್ಟು ಉಲ್ಬಣಗೊಳಿಸುತ್ತವೆ. ಯೋಗ, ಬಿರುಸಾದ ನಡಿಗೆಯಂತಹ ವ್ಯಾಯಾಮ ಚಟುವಟಿಕೆಗಳಲ್ಲಿ ನಿಯಮಿತವಾಗಿ ತೊಡಗುವುದು, ಸಕ್ರಿಯ ಜೀವನಶೈಲಿಯನ್ನು ಅಳವಡಿಸಿ ಕೊಳ್ಳುವುದರಿಂದ ಓಸ್ಟಿಯೋಪೊರೋಸಿಸನ್ನು ದೂರ ಇರಿಸಬಹುದು.

-ಡಾ| ಈಶ್ವರಕೀರ್ತಿ, ಕನ್ಸಲ್ಟಂಟ್‌ ಸ್ಪೈನ್‌ ಸರ್ಜನ್‌, ಕೆಎಂಸಿ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಆಥೊìಪೆಡಿಕ್‌ ವಿಭಾಗ, ಕೆಎಂಸಿ, ಮಾಹೆ, ಮಂಗಳೂರು)

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.