ಭ್ರೂಣ ಶಾಸ್ತ್ರ ಮತ್ತು ಭ್ರೂಣ ಚಿಕಿತ್ಸೆ 


Team Udayavani, Aug 5, 2018, 6:00 AM IST

fetal-therapy.jpg

ಹಿಂದಿನ ವಾರದಿಂದ- 18-20 ವಾರಗಳಲ್ಲಿ ಒಂದು ವಿವರ ವಾದ ಸ್ಕಾ éನಿಂಗ್‌ ಮಾಡುವುದರಿಂದ ಶೇ. 80ರ ವರೆಗಿನ ವಿಕಲತೆಗಳನ್ನು ಪತ್ತೆ ಹಚ್ಚಬಹುದು. ಇದು ವೈದ್ಯರು ಸೂಚಿ ಸುವ ಒಂದು ಪ್ರಮುಖ ಸ್ಕಾ éನ್‌ ಆಗಿರುತ್ತದೆ. ಆದರೂ 7-8ನೇ ತಿಂಗಳಲ್ಲಿ ಕೆಲವು ಅಪರೂಪದ ಸಮಸ್ಯೆಗಳು ಮೊದಲ ಬಾರಿಗೆ ತಲೆದೋರ ಬಹುದು. ಹಾಗಾಗಿ 7-8ನೇ ತಿಂಗಳಿನ ಅಲ್ಟ್ರಾಸೌಂಡ್‌ ಸಹ ಬಹಳ ಮುಖ್ಯ. ಇದರೊಂದಿಗೆ ಭ್ರೂಣದ ಬೆಳವಣಿಗೆಯಲ್ಲಿ ಬರುವ ತೊಂದರೆ ಗಳು ಸಾಮಾನ್ಯವಾಗಿದ್ದು, ಇದನ್ನು 7-8ನೇ ತಿಂಗಳಿನ ಸ್ಕ್ಯಾನಿಂಗ್‌ನಲ್ಲಿ ಪತ್ತೆಹಚ್ಚಬಹುದು. ಈ ರೀತಿಯಲ್ಲಿ ಸರಿಯಾದ ನಿರ್ವಹಣೆ ಮಾಡುವು ದರಿಂದ ಜನಿಸುವ ಮಗುವಿನ ಬೆಳವಣಿಗೆಯಲ್ಲಿ ಉತ್ತಮ ಫ‌ಲಿತಾಂಶ ನಿರೀಕ್ಷಿಸಬಹುದು.

ಸಬ್‌ಸ್ಪೆಷಾಲಿಟಿ ಕೇಂದ್ರವಾಗಿ 
ಭ್ರೂಣ ಕ್ಲಿನಿಕ್‌ನ ಪಾತ್ರವೇನು?

ಮಾಮೂಲಿ ಸ್ಕ್ಯಾನಿಂಗ್‌ ಸಂದರ್ಭದಲ್ಲಿ ಭ್ರೂಣಶಿಶುವಿನಲ್ಲಿ ವಿಕಲತೆ ಕಂಡುಬಂದಲ್ಲಿ ಗರ್ಭಧಾರಣೆಯ ನಿರ್ವಹಣೆಯನ್ನು ಸಬ್‌ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಭ್ರೂಣ ಸಂಬಂಧಿ ಎಲ್ಲ ಸಮಸ್ಯೆಗಳ ಬಗ್ಗೆ ಉತ್ತಮ ಆರೈಕೆ ಒದಗಿಸುವ ಮೂಲಕ ನಿಭಾಯಿಸಲಾಗುವುದು. ಭ್ರೂಣ ಚಿಕಿತ್ಸಾ ಕೇಂದ್ರವು ಒಂದು ವಿಶಿಷ್ಟ ಮಲ್ಟಿಸ್ಪೆಷಾಲಿಟಿ ಕೇಂದ್ರವಾಗಿದ್ದು ಸಾಧ್ಯವಿರುವ ಉತ್ತಮ ಫ‌ಲಿತಾಂಶ ನೀಡಲು ನೆರವಾಗುವ ತಜ್ಞರನ್ನು ಒಳಗೊಂಡಿದೆ. ಈ ಸಬ್‌ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಈ ವಿಷಯದ ಬಗ್ಗೆ ವಿಶೇಷ ಪರಿಣತಿ ಪಡೆದ ಪ್ರಸೂತಿ ಶಾಸ್ತ್ರಜ್ಞರು ಇದ್ದು, ಉಳಿದ ತಜ್ಞರ ಅಭಿಪ್ರಾಯ ಪಡೆದು ಸಮಸ್ಯೆಗೆ ಸಮಗ್ರ ವಿಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಗುರುತರ ಜವಾಬ್ದಾರಿ ಅವರ ಮೇಲಿರುತ್ತದೆ. ಉತ್ತಮ ಆರೈಕೆ ಒದಗಿಸಲು ಜೆನೆಟಿಕ್ಸ್‌ ತಜ್ಞರು, ಜೆನೆಟಿಕ್‌ ಪ್ರಯೋಗ ಶಾಲೆ ಮತ್ತು ಜೆನೆಟಿಕ್‌ ಕೌನ್ಸಲರ್‌ಗಳ ಆವಶ್ಯಕತೆ ಇರುತ್ತದೆ. ಇದರೊಂದಿಗೆ, ಭ್ರೂಣ ಚಿಕಿತ್ಸಾ ಕೇಂದ್ರವು ರೇಡಿಯಾಲಜಿ ತಜ್ಞರು, ನವಜಾತ ಶಿಶು ತಜ್ಞರು, ಮಕ್ಕಳ ಶಸ್ತ್ರಚಿಕಿತ್ಸಕರು, ಪೆರಿನೇಟಲ್‌ ಪ್ಯಾಥಲಾಜಿಸ್ಟರು ಮತ್ತು ಇನ್ನೂ ಹಲವರನ್ನೊಳಗೊಂಡಿರುತ್ತದೆ.

ಭ್ರೂಣ ಚಿಕಿತ್ಸಾ ತಜ್ಞರು ಮಾಡಿದ ವಿವರವಾದ ಅಲ್ಟ್ರಾಸೌಂಡ್‌ ಹಲವು ಉದ್ದೇಶಗಳನ್ನು ಈಡೇರಿಸುತ್ತದೆ. ಮೊದಲಿಗೆ ವಿಕಲತೆಯ ತೀವ್ರತೆ ಮತ್ತು ವಿಧವನ್ನು ನಿರ್ಧರಿಸಲು ಸಾಧ್ಯವಾಗುತ್ತದೆ. ಇದರಿಂದ ಹೆತ್ತವರಿಗೆ ಈ ಮಗುವಿನ ಕಾಯಿಲೆಯ ಬಗ್ಗೆ ಮುನ್ಸೂಚನೆ ದೊರಕುತ್ತದೆ. ವಿಕಲತೆ ಮಾರಕವಾಗಿದ್ದಲ್ಲಿ ಅಥವಾ ಜನನದ ಬಳಿಕ ಪ್ರಮುಖ ಅಂಗನ್ಯೂನತೆಯ ಸಂಭಾವ್ಯತೆ ಇದ್ದಲ್ಲಿ ಹಲವು ತಂದೆತಾಯಿಯರು ಗರ್ಭಪಾತದ ಆಯ್ಕೆ ಮಾಡುತ್ತಾರೆ. ಈ ಆಯ್ಕೆಗೆ ನಮ್ಮ ದೇಶದ ಕಾನೂನಿನ ಮಿತಿಗನುಗುಣವಾಗಿ ಭ್ರೂಣವು 20 ವಾರಗಳಿಗೆ ಮೀರಿರಬಾರದು. ಇದರೊಂದಿಗೆ, ಸಂಬಂಧಪಟ್ಟ ಇತರ ಹಲವು ತೊಂದರೆಗಳನ್ನು ಪತ್ತೆ ಮಾಡಬಹುದು. ಜತೆಗೆ ಇದಕ್ಕೆ ಕಾರಣವಾದ ಅಂಶಗಳನ್ನು ಸಹ ಸಂಪೂರ್ಣವಾಗಿ ಪತ್ತೆ ಹಚ್ಚಬಹುದು. ಪ್ರಸ್ತುತ ಗರ್ಭಧಾರಣೆ ಮಾತ್ರವಲ್ಲದೆ, ಭವಿಷ್ಯದ ಎಲ್ಲ ಗರ್ಭಧಾರಣೆಗಳ ನಿರ್ವಹಣೆಗೆ ಸಹ ಕಾರಣ ತಿಳಿದುಕೊಳ್ಳುವುದು ಬಹಳ ಮುಖ್ಯ. ವಿಕಲತೆಯ ಬಗ್ಗೆ ತಿಳಿದುಕೊಳ್ಳುವುದರಿಂದ ಪೀಡಿಯಾಟ್ರಿಕ್‌ ತಂಡಕ್ಕೆ ಇಂಥ ಮಗುವನ್ನು ವಿಶೇಷ ಆರೈಕೆಯೊಂದಿಗೆ ನೋಡಿಕೊಳ್ಳಲು ಬೇಕಾದ ಸಿದ್ಧತೆಗಳನ್ನು ಮಾಡಲು ಸಹಾಯವಾಗುತ್ತದೆ. ಒಂದು ವೇಳೆ ಈ ಸೌಕರ್ಯವಿಲ್ಲದಿದ್ದಲ್ಲಿ ಮಗುವಿನ ಆಗಮನದ ಸಿದ್ಧತೆ ನಿರಾಶಾದಾಯಕವಾಗಿರುತ್ತಿತ್ತು . ಒಮ್ಮೆ ವಿಕಲತೆಯನ್ನು ಗುರುತಿಸಿದ ಬಳಿಕ, ಭ್ರೂಣ ಚಿಕಿತ್ಸಾ ತಂಡವು ಕೇಂದ್ರದಲ್ಲಿ ಮುಂದಿನ ಸೂಕ್ತ ತಪಾಸಣೆಗಾಗಿ ಸಮಯ ನಿಗದಿ ಮಾಡುತ್ತದೆ. ಈ ನಿಗದಿತ ಭೇಟಿಗಳು ವಿಕಲತೆಯಲ್ಲಿನ ಪ್ರಗತಿಯ ಬಗ್ಗೆ ತಿಳಿದುಕೊಳ್ಳಲು ನೆರವಾಗುತ್ತವೆ ಮತ್ತು ಆ ಮೂಲಕ ಯಾವಾಗ ಹಸ್ತಕ್ಷೇಪ ಮಾಡಬೇಕು ಅಥವಾ ಪ್ರಸವ ಮಾಡಿಸಬೇಕು ಎಂಬುದು ನಮಗೆ ತಿಳಿಯುತ್ತದೆ.

ಅಲ್ಟ್ರಾಸೌಂಡ್‌ ಸ್ಕ್ಯಾನ್‌ಗಳ ಜತೆಗೆ ಭ್ರೂಣ ಚಿಕಿತ್ಸಾ ಕ್ಲಿನಿಕ್‌ನಲ್ಲಿ ಬೇರೆ ಪರೀಕ್ಷೆಗಳನ್ನು ಮಾಡುತ್ತಾರೆಯೆ?
ಹೌದು. ಡಯಾಗ್ನೊàಸಿಸ್‌ ಪೂರ್ತಿಗೊಳಿಸಲು ಮತ್ತು ಈ ಸಮಸ್ಯೆಗೆ ಕಾರಣವೇನು ಎಂಬ ನಿರ್ಧಾರಕ್ಕೆ ಬರಲು ಭ್ರೂಣ ಚಿಕಿತ್ಸಾ ಕ್ಲಿನಿಕ್‌ನಲ್ಲಿ ಹಲವಾರು ಬೇರೆ ಪರೀಕ್ಷೆಗಳನ್ನು ಮಾಡುತ್ತಾರೆ. ಒಂದು ಸಾಮಾನ್ಯ ಉದಾಹರಣೆ ಎಂದರೆ ಮ್ನಿಯೋಸೆಂಟೆಸಿಸ್‌ನಂಥ ಇನ್ವೇಸಿವ್‌ ಡಯಾಗ್ನೊàಸ್ಟಿಕ್‌ ಪ್ರಕ್ರಿಯೆಗಳು. ಇದರಲ್ಲಿ ಒಂದು ಸಪೂರ ಸೂಜಿಯನ್ನು ಗರ್ಭಿಣಿಯ ಗರ್ಭಾಶಯದೊಳಗೆ ತೂರಿಸಿ, ಮಗುವಿನ ಸುತ್ತಲಿನ ದ್ರವದ ಸ್ವಲ್ಪ ಪ್ರಮಾಣವನ್ನು ತೆಗೆಯಲಾಗುತ್ತದೆ ಮತ್ತು ಆನುವಂಶೀಯ ವಿಕಲತೆಯನ್ನೊಳಗೊಂಡಂತೆ ಅನೇಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಗರ್ಭಾವಸ್ಥೆಯಲ್ಲಿ ಭ್ರೂಣದ 
ವಿಕಲತೆಗೆ ಏನಾದರೂ 
ಪರಿಹಾರವಿದೆಯೇ?

ಹೌದು. ಗರ್ಭಾವಸ್ಥೆಯಲ್ಲಿನ ವಿವಿಧ ಭ್ರೂಣ ಸಂಬಂಧಿ ಸಮಸ್ಯೆಗಳಿಗೆ ಹಲವಾರು ಬಗೆಯ ಚಿಕಿತ್ಸಾ ಕ್ರಮಗಳಿವೆ. ಇದು ಪ್ರಸೂತಿ ಶಾಸ್ತ್ರದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿಭಾಗವಾಗಿದ್ದು, ನಮ್ಮ ದೇಶದಲ್ಲಿ ದಶಕದ ಹಿಂದೆ ಯಾವುದೇ ಪರಿಹಾರವಿಲ್ಲದ ಭ್ರೂಣ ಸಮಸ್ಯೆಗಳಿಗೆ ಇಂದು ಉತ್ತಮ ಪರಿಹಾರದ ನಿರೀಕ್ಷೆಯಿದೆ. ನಮ್ಮ ದೇಶದ ಭ್ರೂಣ ಚಿಕಿತ್ಸಾ ತಜ್ಞರು ಪಾಶ್ಚಾತ್ಯ ದೇಶಗಳ ಹೆಸರುವಾಸಿ ಕೇಂದ್ರಗಳಲ್ಲಿ ತರಬೇತಿ ಪಡೆದು ಬಂದ ಫ‌ಲವಾಗಿ ಈಗ ನಮ್ಮಲ್ಲೂ ಚಿಕಿತ್ಸಾ ಆಯ್ಕೆಗಳ ವ್ಯಾಪ್ತಿ ತ್ವರಿತವಾಗಿ ವಿಸ್ತರಿಸುತ್ತಾ ಹೋಗುತ್ತಿದೆ. ಒಂದು ಸಾಮಾನ್ಯ ಉದಾಹರಣೆಯೆಂದರೆ ರಕ್ತಹೀನತೆಯಿರುವ ಗರ್ಭಸ್ಥ ಶಿಶುವಿಗೆ ಭ್ರೂಣದೊಳಗೆ ರಕ್ತ ಮರುಪೂರಣೆ ಮಾಡುವುದು. ಇದೊಂದು ಯಶಸ್ವೀ ಚಿಕಿತ್ಸಾ ಕ್ರಮವಾಗಿದ್ದು, ಇದು ಲಭ್ಯವಿರದಿದ್ದಲ್ಲಿ ತಂದೆ-ತಾಯಿಯರು ತಮ್ಮ ಮಗುವನ್ನು ಖಂಡಿತವಾಗಿಯೂ ಕಳೆದುಕೊಳ್ಳುತ್ತಿದ್ದರು. ವಿವಿಧ ಬಗೆಯ ಚಿಕಿತ್ಸಾ ಕ್ರಮಗಳನ್ನು ಬಳಸಿ ಅವಳಿ ಮಕ್ಕಳ ಗರ್ಭಧಾರಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಚೆನ್ನಾಗಿ ನಿಭಾಯಿಸಬಹುದು. ವಿಶೇಷವಾಗಿ ಅವಳಿ ಮಕ್ಕಳ ಗರ್ಭಧಾರಣೆಯಲ್ಲಿ ಶಿಶುಗಳು ಒಂದೇ ಕರುಳಬಳ್ಳಿಯನ್ನು ಹಂಚಿಕೊಳ್ಳುವುದರಿಂದ ನಾವು ಫೀಟೋಸ್ಕೋಪಿಕ್‌ ಲೇಸರ್‌ನಂಥ ಚಿಕಿತ್ಸಾ ಕ್ರಮಗಳನ್ನು ಬಳಸಬಹುದು. ಈ ಚಿಕಿತ್ಸೆಯು ಅವಳಿಗಳಲ್ಲಿ ರಕ್ತಪರಿಚಲನೆಯ ಸಂವಹನವನ್ನು ಕಡಿಮೆ ಮಾಡಿ ಗರ್ಭಧಾರಣೆಯ ಫ‌ಲಿತಾಂಶದಲ್ಲಿ ಗಮನಾರ್ಹ ಪ್ರಗತಿಯನ್ನುಂಟು ಮಾಡುತ್ತದೆ. 

ಭ್ರೂಣ ಚಿಕಿತ್ಸೆಗೆ ಸಂಬಂಧಿಸಿದಂತೆ ಫ‌ಲಿತಾಂಶದಲ್ಲಿ ಅಚ್ಚರಿಯ ಪ್ರಗತಿ ಸಾಧಿಸಿದಂತಹ ಅನೇಕ ಯಶಸ್ವೀ ಕತೆಗಳಿವೆ. ಆದರೆ ಸದ್ಯಕ್ಕೆ ಆಯ್ದ ಕೆಲವು ಭ್ರೂಣ ಸಂಬಂಧಿ ಸಮಸ್ಯೆಗಳಿಗೆ ಮಾತ್ರ ಚಿಕಿತ್ಸಾ ಕ್ರಮಗಳು ಲಭ್ಯವಿವೆ. ಇದೊಂದು ವಿಸ್ತರಿಸುತ್ತಲೇ ಹೋಗುವ ಕ್ಷೇತ್ರವಾಗಿದ್ದು ಸದ್ಯದಲ್ಲೇ ಭ್ರೂಣ ಸಂಬಂಧಿತ ಹೆಚ್ಚು ಹೆಚ್ಚು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು.

ಆದರೂ ಭ್ರೂಣದಲ್ಲಿ ಆನುವಂಶೀಯ ವಿಕಲತೆಗಳನ್ನು “ವಾಸಿ’ ಮಾಡಲು ಸಾಧ್ಯವಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಭ್ರೂಣದಲ್ಲಿರುವಾಗ ಮಗುವಿನ ಹಲವು ದೇಹರಚನಾ ಸಮಸ್ಯೆಗಳಿಗೆ ಪರಿಹಾರ ಕ್ರಮಗಳು ಲಭ್ಯವಿಲ್ಲ. ಇಂತಹ ವಿಕಲತೆಗಳಿದ್ದಲ್ಲಿ, ಪ್ರಸವಕ್ಕಾಗಿ ಉತ್ತಮ ಸಮಯ ಹಾಗೂ ಉತ್ತಮ ಆಸ್ಪತ್ರೆ ಯಾವುದು ಎಂಬುದನ್ನು ನಿರ್ಧರಿಸಲು ಮುಂದಿನ ಭೇಟಿಗಳನ್ನು ನಿಗದಿಪಡಿಸಲಾಗುತ್ತದೆ. ಈ ಕ್ರಮದಿಂದ ಜನನದ ಬಳಿಕ ಶಿಶುವಿಗೆ ಸಾಧ್ಯವಿರುವಷ್ಟು ಉತ್ತಮ ಆರೈಕೆ ನೀಡಲು ಸಾಧ್ಯವಾಗುತ್ತದೆ.

ಮುಗಿಸುವ ಮುನ್ನ… ಪ್ರತಿಯೊಂದು ಭ್ರೂಣವನ್ನು ಈಗ ಪ್ರತ್ಯೇಕ ವ್ಯಕ್ತಿಯನ್ನಾಗಿ ಪರಿಗಣಿಸಲಾಗುತ್ತದೆ. ಮೇಲೆ ವಿಚಾರಿಸಿದಂತೆ, ಭ್ರೂಣ ಚಿಕಿತ್ಸೆಯನ್ನು ಒಂದು ಸ್ಪೆಷಾಲಿಟಿ ಆಗಿ ಪರಿಗಣಿಸುವುದು ಎಲ್ಲ ಟಿರ್ಷಿಯರಿ ಸಂಸ್ಥೆಗಳ ಅಗತ್ಯವಾಗಿದೆ. ಭ್ರೂಣ ಚಿಕಿತ್ಸೆಯ ಉದ್ದೇಶವೇನೆಂದರೆ ಭ್ರೂಣ ಶಿಶುವಿಗೆ ಉತ್ತಮ ಆರೈಕೆ ಕಲ್ಪಿಸುವುದು. ಆರೋಗ್ಯಯುತ ಮಗು ಎಲ್ಲ ತಂದೆ-ತಾಯಿಯರ ಕನಸು ಮತ್ತು ಭ್ರೂಣ ಚಿಕಿತ್ಸಾತಜ್ಞರು ಈ ಕನಸನ್ನು ಸಾಕಾರಗೊಳಿಸಲು ಶ್ರಮಿಸುತ್ತಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.