ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನ ಬ್ರಶ್‌ ಮೊರೆ ಹೋಗಿ


Team Udayavani, Dec 26, 2021, 11:00 AM IST

ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನ ಬ್ರಶ್‌ ಮೊರೆ ಹೋಗಿ

ಹಲ್ಲುಜ್ಜುವ ಬಿದಿರಿನ ಬ್ರಶ್‌ಗಳು ಜೈವಿಕವಾಗಿ ವಿಘಟನೆ ಹೊಂದುತ್ತವೆ, ಇದರಿಂದಾಗಿ ಜನಸಮೂಹದಲ್ಲಿ ಸ್ವೀಕೃತಗೊಂಡಿವೆ. ಇವುಗಳ ಉಪಯೋಗಗಳನ್ನು ತಿಳಿದುಕೊಳ್ಳಲು ಈ ಲೇಖನ ಸಹಕಾರಿಯಾಗಿದೆ. ಹಲ್ಲುಜ್ಜುವ ಬ್ರಶ್‌ಗಳು ಮತ್ತು ಟೂತ್‌ಪೇಸ್ಟ್‌ ಗಳನ್ನು ಆವಿಷ್ಕರಿಸುವುದಕ್ಕೆ ಮುನ್ನ ಜನರು ಒರಟು ಬಟ್ಟೆಗಳು, ಉಪ್ಪು, ಗಿಡಗಂಟಿಗಳ ಕಡ್ಡಿಗಳು ಅಥವಾ ಇದ್ದಿಲನ್ನು ಹಲ್ಲುಜ್ಜಲು ಉಪಯೋಗಿಸುತ್ತಿದ್ದರು. ಹಲ್ಲುಜ್ಜುವ ವ್ಯವಸ್ಥೆಗಳು, ಸಾಧನಗಳು ಮತ್ತು ಪೇಸ್ಟ್‌ಗಳು ಆವಿಷ್ಕಾರಗೊಂಡಿದ್ದು, ದಂತಗಳ ನೈರ್ಮಲ್ಯಕ್ಕೆ ಅನೇಕ ಬಗೆಯ ಪರ್ಯಾಯಗಳು ಲಭ್ಯವಿವೆ. ಜೈವಿಕವಾಗಿ ವಿಘಟನೆಗೊಳ್ಳುವ ಗುಣದಿಂದಾಗಿ ಹಲ್ಲುಜ್ಜುವ ಬಿದಿರಿನ ಬ್ರಶ್‌ಗಳು ಜಾಗತಿಕವಾಗಿ ತುಂಬಾ ಜನಪ್ರಿಯವಾಗಿವೆ. ಹಲ್ಲುಜ್ಜುವ ಬಿದಿರಿನ ಬ್ರಶ್‌ ಬಿದಿರಿನ ಹಿಡಿಕೆ ಮತ್ತು ನೈಲಾನ್‌ ಫೈಬರ್‌ ಅಥವಾ ಕೆಲವು ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಷ್ಟೇ ಬಾಳಿಕೆ ಬರಬಲ್ಲ ಇತರ ನೈಸರ್ಗಿಕ ನಾರುಗಳನ್ನು ಒಳಗೊಂಡಿರುತ್ತವೆ.

ಹಲ್ಲುಜ್ಜುವ ಬಿದಿರಿನ ಬ್ರಶ್‌ಗಳ ಅತ್ಯಂತ ಪ್ರಮುಖವಾದ ಒಂದು ಉಪಯೋಗ ಎಂದರೆ ಅವು ಪ್ಲಾಸ್ಟಿಕ್‌ನ ಬ್ರಶ್‌ಗಳಷ್ಟೇ ಮಟ್ಟದಲ್ಲಿ ಹಲ್ಲುಗಳನ್ನು ಶುಚಿಗೊಳಿಸುತ್ತವೆ; ಆದರೆ ಅಪಾರ ಪ್ರಮಾಣದ ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪತ್ತಿಯಾಗುವುದನ್ನು ಕಡಿಮೆ ಮಾಡುತ್ತವೆ. ಬಳಸಿ ಹಳೆಯದಾದ ಪ್ಲಾಸ್ಟಿಕ್‌ ಬ್ರಶ್‌ಗಳು ಮತ್ತು ಅವುಗಳ ಪ್ಯಾಕೆಟ್‌ಗಳನ್ನು ಪುನರ್ಬಳಸುವುದು, ರಿಸೈಕ್ಲಿಂಗ್‌ ಅಥವಾ ಕಾಂಪೋಸ್ಟ್‌ ಮಾಡುವುದು ನಿಜಕ್ಕೂ ಒಂದು ಬೃಹತ್‌ ಸಮಸ್ಯೆ.

ಉತ್ತಮ ನಿರ್ವಹಣೆ ಮತ್ತು ಶುಚಿತ್ವಕ್ಕಾಗಿ ನಿಮ್ಮ ಹಲ್ಲುಜ್ಜುವ ಬ್ರಶ್ಶನ್ನು ಪ್ರತೀ ಎರಡು ಅಥವಾ ಮೂರು ತಿಂಗಳುಗಳಿಗೆ ಒಮ್ಮೆ ಬದಲಾಯಿಸಿಕೊಳ್ಳಬೇಕು. ಪರಿಸರಸಹ್ಯವಾದ ವಸ್ತುವಿನಿಂದ ಮಾಡಿರುವ ಹೊಸ ಹಲ್ಲುಜ್ಜುವ ಬ್ರಶ್‌ ಹಿಡಿದು ಹಲ್ಲುಜ್ಜುವುದು ನಿಮಗೆ ಒಂದು ಆಹ್ಲಾದಕರ ಅನುಭವವೇ ಆಗಬಹುದು.

ಬಿದಿರಿನಿಂದ ಮಾಡಿರುವ ಹಲ್ಲುಜ್ಜುವ ಬ್ರಶ್‌ಗಳ  ಕೆಲವು ಪ್ರಯೋಜನಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ:

  • ಬಿದಿರಿನಲ್ಲಿ ಫ‌ಂಗಸ್‌ನಿರೋಧಕ ಗುಣವೂ ಇದೆ. ಬಿದಿರು ಮತ್ತು ಮರದಿಂದ ಕಟ್ಟಿಂಗ್‌ ಬೋರ್ಡ್‌ ಮತ್ತು ಪಾತ್ರೆಗಳನ್ನು ನಿರ್ಮಿಸುವುದಕ್ಕೆ ಒಂದು ಉದ್ದೇಶವಿರುತ್ತದೆ. ಬಿದಿರಿನ ಅಂತರ್ಗತ ಗುಣಗಳು ಅದರ ಮೇಲ್ಮೈಯನ್ನು ಪ್ರವೇಶಿಸುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುವಂತಿವೆ. ಇದರಿಂದಾಗಿ ಸೂಕ್ಷ್ಮಜೀವಿಗಳಿಂದ ದೀರ್ಘಾವಧಿಯಲ್ಲಿ ರಕ್ಷಣೆ ಸಿಗುತ್ತದೆ.
  • ಬಿದಿರು ಒಂದು ಹುಲ್ಲಿನ ಜಾತಿಯ ಸಸ್ಯವಾದ್ದರಿಂದ ಇದನ್ನು ಎಲ್ಲಿ ಬೇಕಾದರಲ್ಲಿ ಪರಿಸರಕ್ಕೆ ಧಕ್ಕೆ ಉಂಟು ಮಾಡದೆಯೇ ಬೆಳೆಸಬಹುದಾಗಿದೆ. ಇದರ ಕಾಂಡಗಳು ಕ್ಷಿಪ್ರವಾಗಿ ಬೆಳೆಯುತ್ತವೆ ಮತ್ತು ಅವುಗಳಿಗೆ ಯಾವುದೇ ರಸಗೊಬ್ಬರ ಅಥವಾ ಕೀಟನಾಶಕ ಬೇಕಾಗಿಲ್ಲ.
  • ಬಿದಿರು ಸಂಪೂರ್ಣವಾಗಿ ನೈಸರ್ಗಿಕ ವಾತಾವರಣದಲ್ಲಿ ಬೆಳೆಯುತ್ತದದಾದ್ದರಿಂದ ಅದು ಬಳಕೆಗೆ ಸಂಪೂರ್ಣ ಸುರಕ್ಷಿತ. ಬಿದಿರನ ಕಾಂಡಗಳನ್ನು ಕತ್ತರಿಸುವಲ್ಲಿ ಅಥವಾ ಸಂಸ್ಕರಿಸುವಲ್ಲಿ ಯಾವುದೇ ವಿಷಕಾರಿ ಸಂಯುಕ್ತಗಳನ್ನು ಬಳಸುವುದಿಲ್ಲ. ಏಶ್ಯಾ ಮತ್ತು ಆಫ್ರಿಕಾದ ಹಲವು ಪ್ರದೇಶಗಳು ಮತ್ತು ಸಂಸ್ಕೃತಿಗಳಲ್ಲಿ ಬಿದಿರಿನ ಮೊಳಕೆ ಅಥವಾ “ಕಣಿಲೆ’ ಖಾದ್ಯವಾಗಿ ಬಳಕೆಯಾಗುತ್ತದೆ.
  • ಬಿದಿರಿನಿಂದ ಮಾಡಿರುವ ಹಲ್ಲುಜ್ಜುವ ಬ್ರಶ್‌ಗಳು ಪ್ಲಾಸ್ಟಿಕ್‌ ಬ್ರಶ್‌ಗಳಿಗಿಂತ ಸ್ವಲ್ಪ ಹೆಚ್ಚು ಬೆಲೆಯನ್ನು ಹೊಂದಿರಬಹುದು. ಆದರೆ ಅವುಗಳ ಬಳಕೆಯಿಂದ ಅಂತಿಮವಾಗಿ ನಮಗೆ ಮತ್ತು ಈ ಸುಂದರ ಜಗತ್ತಿಗೆ ಉಂಟಾಗುವ ಪ್ರಯೋಜನಗಳು ಬೆಲೆಕಟ್ಟಲಾಗದವುಗಳಾಗಿವೆ.

ಡಾ| ಆನಂದದೀಪ್‌ ಶುಕ್ಲಾ

ಅಸೋಸಿಯೇಟ್‌ ಪ್ರೊಫೆಸರ್‌, ಎಂಸಿಡಿಒಎಸ್‌, ಮಾಹೆ,

 ಮಣಿಪಾಲ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.