ಅಧಿಕ ರಕ್ತದೊತ್ತಡ; ನಿಯಂತ್ರಣಕ್ಕೆ ತರುವ ನೈಸರ್ಗಿಕ ವಿಧಾನಗಳು


Team Udayavani, Feb 20, 2022, 7:30 AM IST

ಅಧಿಕ ಅಧಿಕ ರಕ್ತದೊತ್ತಡ; ನಿಯಂತ್ರಣಕ್ಕೆ ತರುವ ನೈಸರ್ಗಿಕ ವಿಧಾನಗಳು; ನಿಯಂತ್ರಣಕ್ಕೆ ತರುವ ನೈಸರ್ಗಿಕ ವಿಧಾನಗಳುr

ಅಧಿಕ ರಕ್ತದೊತ್ತಡವು ಇಂದು ಅತೀ ಸಾಮಾನ್ಯವಾದ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಯುವ ವಯಸ್ಸಿನ
ವರಲ್ಲಿಯೂ ಹೆಚ್ಚಾಗಿ ಕಂಡುಬರುತ್ತಿದೆ. ಅವರಲ್ಲಿಅನೇಕರು ಔಷಧ ಚಿಕಿತ್ಸೆ ಆರಂಭಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಔಷಧಶಾಸ್ತ್ರೀಯ ಚಿಕಿತ್ಸೆಯ ಹೊರತಾಗಿ ಅಧಿಕ ರಕ್ತದೊತ್ತಡವನ್ನು ಹೇಗೆ ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಎಂಬುದನ್ನು ನೋಡೋಣ.

ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಲು ನೈಸರ್ಗಿಕವಾಗಿ ಅನುಸರಿಸಬಹುದಾದ ವಿಧಾನಗಳು ಯಾವುವು ಎಂದರೆ;
– ಸೋಡಿಯಂ ಸೇವನೆಯನ್ನು ಕಡಿಮೆ ಮಾಡುವುದು: ಅಧಿಕ ರಕ್ತದೊತ್ತಡವುಳ್ಳ ಜನರಲ್ಲಿ ಸುಮಾರು ಅರ್ಧಾಂಶದಷ್ಟು ಮತ್ತು ಸಹಜ ರಕ್ತದೊತ್ತಡ ಹೊಂದಿರುವವರಲ್ಲಿ ಕಾಲು ಭಾಗದಷ್ಟು ಮಂದಿ ಉಪ್ಪಿಗೆ ಸಂವೇದನಶೀಲತೆ ಹೊಂದಿರುತ್ತಾರೆ. ಹೀಗಾಗಿ ಉಪ್ಪಿನಂಶ ಸೇವನೆಯನ್ನು ದಿನಕ್ಕೆ 4ರಿಂದ 5 ಗ್ರಾಂ
ಗಳಿಗೆ ಮಿತಗೊಳಿಸಬೇಕು. ಇದು ಅಧಿಕ ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಣಕ್ಕೆ ತರುತ್ತದೆ.

– ನಿಯಮಿತವಾಗಿ ವ್ಯಾಯಾಮ ಮಾಡುವುದು: ರಕ್ತದೊತ್ತಡವನ್ನು ಕಡಿಮೆ ಮಾಡಲು ಅಥವಾ ನಿಯಂತ್ರಣಕ್ಕೆ ತರಲು ನಿಯಮಿತವಾಗಿ ವ್ಯಾಯಾಮ ಮಾಡುವುದು ಒಂದು ಉತ್ತಮ ವಿಧಾನ. ನಿಯಮಿತವಾದ ವ್ಯಾಯಾಮದಿಂದ ನಿಮ್ಮ ಹೃದಯ ಸದೃಢವಾಗುತ್ತದೆ ಮತ್ತು ರಕ್ತವನ್ನು ಸಮರ್ಥವಾಗಿ ಪಂಪ್‌ಮಾಡಲು ಶಕ್ತವಾಗುತ್ತದೆ. ಇದರಿಂದ ಅಪಧಮನಿಗಳಲ್ಲಿ ರಕ್ತದೊತ್ತಡ ಕಡಿಮೆಯಾಗುತ್ತದೆ. ನಿಜ ಹೇಳಬೇಕೆಂದರೆ ದಿನಕ್ಕೆ 150 ನಿಮಿಷಗಳಷ್ಟು ಕಾಲ ವೇಗದ ನಡಿಗೆ ಅಥವಾ 75 ನಿಮಿಷಗಳ ಕಾಲ ಕಠಿನವ್ಯಾಯಾಮ ಮಾಡುವುದರಿಂದ ರಕ್ತದೊತ್ತಡ ತಗ್ಗುತ್ತದೆ ಮತ್ತು ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

– ಮದ್ಯಪಾನವನ್ನು ಕಡಿಮೆ ಮಾಡುವುದು: ಮದ್ಯಪಾನದಿಂದ ರಕ್ತದೊತ್ತಡ ಹೆಚ್ಚುತ್ತದೆ. ಜಾಗತಿಕವಾಗಿ ಅಧಿಕ ರಕ್ತದೊತ್ತಡ ಹೊಂದಿರುವ ಪ್ರಕರಣಗಳಲ್ಲಿ ಶೇ. 16ರಷ್ಟು ಮದ್ಯಪಾನದ ಜತೆಗೆ ಸಂಬಂಧ ಹೊಂದಿರುತ್ತವೆ. ಹೀಗಾಗಿ ಮದ್ಯಪಾನವನ್ನು ಕಡಿಮೆ ಮಾಡುವುದು ಅಥವಾ ತ್ಯಜಿಸುವುದು ಹಾಗೂ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಉತ್ತಮ.

– ತೂಕ ಇಳಿಸಿಕೊಳ್ಳಿ: ದೇಹತೂಕವನ್ನು ನಿಯಂತ್ರಿಸಿಕೊಳ್ಳುವುದು ಅಥವಾ ಇಳಿಸಿಕೊಳ್ಳುವುದರಿಂದ ಹೃದಯ ಸಂಕುಚನ-ವಿಕಸನಗೊಳ್ಳುವುದು ಉತ್ತಮವಾಗುತ್ತದೆ, ಇದರಿಂದ ರಕ್ತನಾಳಗಳಿಗೆ ಸಹಾಯವಾಗುತ್ತದೆ. ಹೀಗಾಗಿ ಹೃದಯದ ಎಡಭಾಗವು ರಕ್ತವನ್ನು ಪಂಪ್‌ ಮಾಡುವುದಕ್ಕೆ ಹೆಚ್ಚು ಸಮರ್ಥವಾಗುತ್ತದೆ. ಹೀಗಾಗಿ ದೇಹತೂಕ ವನ್ನು ಕಡಿಮೆ ಮಾಡಿಕೊಳ್ಳುವವರಿಗೆ ರಕ್ತದೊತ್ತಡ ನಿಯಂತ್ರಣಕ್ಕೆ ಬರುವುದು ಸುಲಭವಾಗುತ್ತದೆ.

– ಧೂಮಪಾನವನ್ನು ತ್ಯಜಿಸುವುದು: ಧೂಮಪಾನದಿಂದ ಹೃದ್ರೋಗಗಳಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚುತ್ತವೆ. ಇದರಿಂದಾಗಿ ಅಧಿಕ ರಕ್ತದೊತ್ತಡ ಉಂಟಾಗಬಹುದು, ರಕ್ತನಾಳಗಳಿಗೆ ಹಾನಿಯಾಗಬಹುದು. ಆದ್ದರಿಂದ ಭವಿಷ್ಯದ ಆರೋಗ್ಯ ಅಪಾಯಗಳನ್ನು ದೂರ ಮಾಡುವುದಕ್ಕಾಗಿ ಧೂಮಪಾನವನ್ನು ತ್ಯಜಿಸಿ.

– ಪೊಟ್ಯಾಸಿಯಂ ಅಂಶ ಅಧಿಕವಿರುವ ಆಹಾರವಸ್ತುಗಳನ್ನು ಹೆಚ್ಚು ಸೇವಿಸಿ: ಪೊಟ್ಯಾಸಿಯಂ ಅಂಶ ಹೆಚ್ಚಿರುವ ಆಹಾರವಸ್ತುಗಳನ್ನು ಸೇವಿಸುವುದರಿಂದ ದೇಹಕ್ಕೆ ಸೋಡಿಯಂ ಅಂಶವನ್ನು ಹೊರಹಾಕಲು ಸಹಾಯವಾಗುತ್ತದೆ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಆಧುನಿಕ ಆಹಾರ ಕ್ರಮಗಳಲ್ಲಿ ಸೋಡಿಯಂ ಅಂಶವೇ ಹೆಚ್ಚಾಗಿದ್ದು, ಪೊಟ್ಯಾಸಿಯಂ ಅಂಶ ಕಡಿಮೆಯಿರುತ್ತದೆ. ಹೀಗಾಗಿ ಡ್ಯಾಶ್‌ ಡಯಟ್‌ ಎಂದು ಕರೆಯಲ್ಪಡುವ ಆಹಾರಕ್ರಮವನ್ನು ಪಾಲಿಸಿ ಸಮತೋಲನ ಸಾಧಿಸುವುದು ಉತ್ತಮ. ಇದರಲ್ಲಿ ತಾಜಾ ಹಣ್ಣು ತರಕಾರಿ ಇತ್ಯಾದಿಗಳು ಹೆಚ್ಚು ಪ್ರಮಾಣದಲ್ಲಿರುತ್ತವೆ.

– ಜೀವನವಿಧಾನವನ್ನು ಬದಲಾಯಿಸಿಕೊಳ್ಳುವುದು: ಇತ್ತೀಚೆಗಿನ ದಿನಗಳಲ್ಲಿ ಮನೆಯಲ್ಲಿಯೇ ರಕ್ತದೊತ್ತಡದ ಮೇಲೆ ನಿಗಾ ಇರಿಸಬಹುದಾದ ಉಪಕರಣಗಳು ಲಭ್ಯವಿವೆ. ಈ ತಂತ್ರಜ್ಞಾನದ ಸದ್ಬಳಕೆಯನ್ನು ನಾವು ಮಾಡಿಕೊಳ್ಳಬೇಕು ಮತ್ತು ಪ್ರತಿದಿನವೂ ನಿಗಾ ಇರಿಸಿಕೊಳ್ಳುವ ಮೂಲಕ ನಮ್ಮ ಆರೋಗ್ಯ ಸ್ಥಿತಿಗತಿಯ ಅರಿವು ಹೊಂದಿರಬೇಕು.

-ಡಾ| ಬಸವಪ್ರಭು
ಕನ್ಸಲ್ಟಂಟ್‌, ಇಂಟರ್ನಲ್‌ ಮೆಡಿಸಿನ್‌ ವಿಭಾಗ, ಕೆಎಂಸಿ ಆಸ್ಪತ್ರೆ, ಮಂಗಳೂರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.