ಮೂತ್ರಪಿಂಡದ ಹಠಾತ್‌ಗಾಯ (AKI) – ಪೋಷಕಾಂಶಗಳ ನಿರ್ವಹಣೆ


Team Udayavani, Aug 23, 2020, 4:48 PM IST

ಮೂತ್ರಪಿಂಡದ ಹಠಾತ್‌ಗಾಯ  (AKI) – ಪೋಷಕಾಂಶಗಳ ನಿರ್ವಹಣೆ

ಮೂತ್ರಪಿಂಡದ ವಿಸರ್ಜನ ವ್ಯವಸ್ಥೆಯು ಹಠಾತ್ತಾಗಿ (1ರಿಂದ 7 ದಿನಗಳಲ್ಲಿ ) ಮತ್ತು ನಿರಂತರ (24 ಗಂಟೆಗಳಿಗಿಂತಲೂಹೆಚ್ಚು ಸಮಯ) ವಿಫ‌ಲಗೊಳ್ಳುವುದನ್ನು  ಅಥವಾ ಅದರ ಕಾರ್ಯಸಾಮರ್ಥ್ಯದಲ್ಲಿ ವ್ಯತ್ಯಯವಾಗುವುದಕ್ಕೆ ಮೂತ್ರಪಿಂಡದ ಹಠಾತ್‌ ಹಾನಿ ಅಥವಾ ಅಕ್ಯೂಟ್‌ ಕಿಡ್ನಿ ಇಂಜ್ಯೂರಿ  ಎಂದು ಹೆಸರು.  ವಿಸರ್ಜನೆಯಾಗದೆ ಸಂಗ್ರಹವಾಗಿರುವ ಅಂತಿಮ ಉತ್ಪನ್ನ (ಯೂರಿಯಾ ಮತ್ತು ಕ್ರಿಯಾಟಿನೈನ್‌)ಗಳು ಅಥವಾ ಮೂತ್ರವಿಸರ್ಜನೆ ಕಡಿಮೆಯಾಗುವುದು ಅಥವಾ ಈ ಎರಡೂ ಅಂಶಗಳ ಪತ್ತೆ ಹಚ್ಚುವಿಕೆಯ ಮೂಲಕ ಮೂತ್ರಪಿಂಡದ ತೀವ್ರ ಹಾನಿಯನ್ನು ಪತ್ತೆ ಮಾಡಬಹುದು.

ಈ ಕಾಯಿಲೆಯಲ್ಲಿ ಬೇರೆ ಬೇರೆ ರೀತಿಯ ರೋಗಲಕ್ಷಣಗಳು ಕಾಣಿಸಿಕೊಳ್ಳಬಹುದು ಅಂದರೆ ಸಾಮಾನ್ಯಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಮೂತ್ರವಿಸರ್ಜನೆ ಆಗುವುದು, ವಾಕರಿಕೆ, ವಾಂತಿ, ಹಸಿವು ಕಡಿಮೆ ಆಗುವುದು, ಕಾಲು ಅಥವಾ ದೇಹದ ಇತರ ಭಾಗಗಳು ಊದಿಕೊಳ್ಳುವುದು, ಉಸಿರಾಡಲು ಕಷ್ಟವಾಗುವುದು ಇತ್ಯಾದಿ. ಡಯಾಲಿಸಿಸ್‌ ಚಿಕಿತ್ಸೆಯಿಂದ ರೋಗಿಗಳು ಚೇತರಿಸಿಕೊಳ್ಳುವ ಪ್ರಮಾಣ ಹೆಚ್ಚು ಮತ್ತು ಉತ್ತಮ ಪೋಷಣ ಬೆಂಬಲ ದೊರೆತರೂ ಸಹ ಈ ಕಾಯಿಲೆಯ ಕಾರಣದಿಂದ ಮರಣ ಪ್ರಮಾಣ ಹೆಚ್ಚೇ ಇದೆ. ಅಪಾಯ ಪೂರಕ ಅಂಶಗಳಾದ ವಯಸ್ಸು, ನಂಜಾಗುವಿಕೆ, ಮಧುಮೇಹ, ರಕ್ತದೊತ್ತಡ ಕುಸಿಯುವುದು ಇತ್ಯಾದಿ ಅಪಾಯ ಪೂರಕ ಅಂಶಗಳು ಮೂತ್ರಪಿಂಡದ ತೀವ್ರ ಹಾನಿ ಆಗಿರುವ ರೋಗಿಯ ಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುತ್ತವೆ ಮತ್ತು ರೋಗಿಗೆ ಅಓಐ ಸಂಬಂಧಿತ ಕಾಯಿಲೆಯನ್ನು ನಿರ್ವಹಿಸುವುದು ಕಷ್ಟವಾಗುತ್ತದೆ.

ಮೂತ್ರಪಿಂಡದ ತೀವ್ರ ಹಾನಿ ಆಗಿರುವ ರೋಗಿಗಳಲ್ಲಿ ಪ್ರೊಟೀನ್‌ ನಷ್ಟವಾಗುವುದು ಅಥವಾ ಪೋಷಕಾಂಶದ ಕೊರತೆ ಕಾಣಿಸಿಕೊಳ್ಳುವುದು ಬಹಳ ಸಾಮಾನ್ಯ ಸಂಗತಿ. ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಆಹಾರ ಕ್ರಮವನ್ನು ರೂಪಿಸುವಾಗ ಸರಿಯಾಗಿ ತಪಾಸಣೆ ಮಾಡುವುದು ಮತ್ತು ಪೋಷಕಾಂಶಗಳ ಬೆಂಬಲವನ್ನು ಒದಗಿಸುವುದು ಬಹಳ ಆವಶ್ಯಕ. ಚಯಾಪಚಯ ಹಂತದಲ್ಲಿ ಇಲ್ಲದ ಮೂತ್ರಪಿಂಡದ ತೀವ್ರ ಹಾನಿಗೆ ಸಾಮಾನ್ಯವಾಗಿ ಮೂತ್ರನಾಳದ ಅಡಚಣೆ ಕಾರಣ ಆಗಿರಬಹುದು. ಡಿ-ಹೈಡ್ರೇಶನ್‌ ಮತ್ತು ಇನ್ನಿತರ ಕಾರಣಗಳು ಇಲ್ಲಿ ಹೆಚ್ಚಿನ ಪಾತ್ರವನ್ನು ವಹಿಸುವುದಿಲ್ಲ.

ಚಯಾಪಚಯ ಹಂತದಲ್ಲಿರುವ ಮೂತ್ರಪಿಂಡದ ತೀವ್ರ ಹಾನಿಯು ಇದ್ದಾಗ ರೋಗಿಯು ಹೆಚ್ಚಾಗಿ ಬಹು ಅಂಗಾಂಗಗಳ ವೈಫ‌ಲ್ಯಕ್ಕೆ ಒಳಗಾಗುತ್ತಾನೆ. ಪ್ರೊಟೀನ್‌ ಕೊರತೆಯಿಂದಾಗಿ, ಕಾಯಿಲೆಯು ನಿಧಾನವಾಗಿ ಗುಣವಾಗುವುದರಿಂದ ಮತ್ತು ಕಾಯಿಲೆಯ ತೊಡಕುಗಳಿಂದಾಗಿ ರೋಗಿಯು ಬಹಳ ಸಮಯ ಆಸ್ಪತ್ರೆಯಲ್ಲಿಯೇ ಇರಬೇಕಾಗುವುದು. ಪೋಷಕಾಂಶಗಳ ಸ್ಕ್ರೀನಿಂಗ್‌ ಅನ್ನು ಸಾಮಾನ್ಯವಾಗಿ ಆರಂಭಿಕ ಹಂತದಲ್ಲಿ ಮಾಡುತ್ತಾರೆ, ವಿಶೇಷ ಆರೈಕೆಯ ಶಿಫಾರಸುಗಳು ಮತ್ತು ಮೂತ್ರಪಿಂಡದ ರೋಗಲಕ್ಷಣಗಳಿಗೆ ನೀಡುವ ಆಹಾರ ಕ್ರಮಗಳಿಗೆ ಅನುಸಾರವಾಗಿ ರೋಗಿಗಳಿಗೆ ವಿಶೇಷ ಆಹಾರ ಕ್ರಮಗಳನ್ನು ರೂಪಿಸಬೇಕಾಗುತ್ತದೆ.

 

ಇಲ್ಲಿನ ಮುಖ್ಯ ಉದ್ದೇಶ ಏನಾಗಿರಬೇಕು ಅಂದರೆ :

 

  1. ಪ್ರೊಟೀನ್‌ ನಷ್ಟವಾಗುವಿಕೆಯನ್ನು ತಡೆಯುವುದು.
  2. ಸರಿಯಾದ ದೇಹತೂಕ ಮತ್ತು ಪೋಷಕಾಂಶಗಳ ಮಟ್ಟವನ್ನು ಕಾಪಾಡಿಕೊಳ್ಳುವುದು
  3. ಪೋಷಕಾಂಶಗಳ ಅಸಮತೋಲನದಿಂದ ಉಂಟಾಗುವ ತೊಂದರೆಯನ್ನು ತಪ್ಪಿಸಿಕೊಳ್ಳುವುದು.
  4. ಗಾಯ ಮಾಯುವಿಕೆಯನ್ನು ಉತ್ತಮಪಡಿಸುವುದು.
  5. ದೇಹದ ರೋಗಪ್ರತಿರೋಧಕ ವ್ಯವಸ್ಥೆಯನ್ನು ಉತ್ತಮಪಡಿಸುವುದು.
  6. ಆಂಟಿ ಆಕ್ಸಿಡಾಂಟ್‌ ಚಟುವಟಿಕೆಯನ್ನು ಉತ್ತಮಪಡಿಸುವುದು ಮತ್ತು ಉರಿಯೂತವನ್ನು ತಗ್ಗಿಸುವುದು.

 

ಹೆಚ್ಚಾಗಿ ಬಾಯಿಯ ಮೂಲಕ ಪೋಷಕಾಂಶಗಳನ್ನು ಒದಗಿಸುವುದನ್ನು ಸೂಚಿಸಲಾಗುತ್ತದೆ.

ಶಕ್ತಿಯ ಆವಶ್ಯಕತೆ :  ಮೂತ್ರಪಿಂಡದ ತೀವ್ರ ಹಠಾತ್‌ ಗಾಯ ಅಥವಾ ಹಾನಿಗೆ ಒಳಗಾದ ರೋಗಿಯ ವೈಯಕ್ತಿಕ ಆವಶ್ಯಕತೆ ಮತ್ತು ರೋಗ ಪರಿಸ್ಥಿತಿಗೆ ತಕ್ಕಂತೆ ಆಹಾರ ಕ್ರಮವನ್ನು ರೂಪಿಸಬೇಕಾಗುವುದು. ಇಂತಹ ಸಂದರ್ಭಗಳಲ್ಲಿ ಸಾಮಾನ್ಯವಾದ ಒಂದು ಆಹಾರ ಕ್ರಮವನ್ನು ಅನುಸರಿಸುವುದು ಸಾಧ್ಯವಾಗುವುದಿಲ್ಲ. ಆಯಾ ರೋಗಿಯ ಆವಶ್ಯಕತೆಗಳು, ದೇಹಸ್ಥಿತಿ, ಕಾಯಿಲೆ ಎಷ್ಟು ಮುಂದುವರಿದಿದೆ ಎಂಬಿತ್ಯಾದಿ ಅಂಶಗಳನ್ನು ಗಮನಿಸಿ ವೈದ್ಯರು ಆಯಾ ರೋಗಿಯ ಆಹಾರಕ್ರಮವನ್ನು ಶಿಫಾರಸು ಮಾಡುತ್ತಾರೆ. ಇಂತಹ ಸಂದರ್ಭಗಳಲ್ಲಿ ಕಾಯಿಲೆಗೆ ಚಿಕಿತ್ಸೆ ನೀಡುತ್ತಿರುವ ನೆಫ್ರಾಲಜಿ ವಿಭಾಗದ ತಜ್ಞರು ಪಥ್ಯಾಹಾರ ವಿಭಾಗದ ತಜ್ಞರ ನೆರವನ್ನೂ ಪಡೆಯುವುದಿದೆ. ಇದರಲ್ಲಿ ಸಾಮಾನ್ಯವಾಗಿ ದಿನಕ್ಕೆ 20-35 ಕಿಲೋ ಕ್ಯಾಲರಿ/ ಕೆ.ಜಿ. ಅನ್ನು ಶಿಫಾರಸು ಮಾಡಲಾಗುವುದು. ಉಪ್ಪಿನಂಶ ಮತ್ತು ದ್ರವಾಂಶಗಳಿಗೂ ಮಿತಿ ಹಾಕಿಕೊಳ್ಳಲಾಗುತ್ತದೆ.

ಪ್ರೊಟೀನ್‌ ಆವಶ್ಯಕತೆ :  ಇದು ಮತ್ತೆ ಕಾಯಿಲೆಯು ಚಯಾಪಚಯ ಹಂತದಲ್ಲಿ ಇದೆಯೋ ಅಥವಾ ಚಯಾಪಚಯ ಹಂತದಲ್ಲಿ ಇಲ್ಲದ ಮೂತ್ರಪಿಂಡದ ತೀವ್ರ ಹಾನಿಯೋ ಎಂಬುದನ್ನು ಅವಲಂಬಿಸುತ್ತದೆ. ಮೂತ್ರಪಿಂಡದ ತೀವ್ರ ಹಾನಿಯು ಚಯಾಪಚಯ ಹಂತದಲ್ಲಿ ಇಲ್ಲದಿದ್ದರೆ, ದಿನಕ್ಕೆ 0.8 -1.0 ಗಳ ಪ್ರೊಟೀನ್‌/ಕೆ.ಜಿ. ಶಿಫಾರಸು ಮಾಡಲಾಗುವುದು. ರೋಗಿಯು ಡಯಾಲಿಸಿಸ್‌ನಲ್ಲಿ ಇದ್ದರೆ, ಆಗ ಡಯಾಲಿಸಿಸ್‌ ಕಾರಣದಿಂದ ಆಗುವ ಅಮಿನೋ ಆಸಿಡ್‌ ಮತ್ತು ಪ್ರೊಟೀನ್‌ ನಷ್ಟವನ್ನು ಸರಿದೂಗಿಸಲು ದಿನಕ್ಕೆ ಗರಿಷ್ಠ 1.7 ಗ್ರಾಂ ಪ್ರೊಟೀನ್‌/ಕೆ.ಜಿ. ಅನ್ನು ಪೂರೈಸಬೇಕಾಗುವುದು.

ಖನಿಜಾಂಶಗಳ ಆವಶ್ಯಕತೆ :  ಪಾಸ್ಫೇಟ್‌ (mg/d)  - 800   1000 ) ಪೊಟ್ಯಾಶಿಯಂ ((mg/g -  2000   2500) ಸೋಡಿಯಂ ( g/d) –   1.8  2.5 )

ದ್ರವಾಹಾರ :  ರೋಗಿಯ ದೇಹತೂಕ ಮತ್ತು ಮೂತ್ರವಿಸರ್ಜನೆಯ ಪ್ರಮಾಣವನ್ನು ಹೊಂದಿಕೊಂಡು ವೈದ್ಯಕೀಯ ತಂಡದವರು ಸೇವಿಸಬೇಕಾದ ದ್ರವಾಹಾರದ ಪ್ರಮಾಣವನ್ನು ಸೂಚಿಸುತ್ತಾರೆ. ಇಲ್ಲಿ ದೇಹದಲ್ಲಿ ಉಳಿಕೆಯಾಗುವ ದ್ರವಾಂಶ ಮತ್ತು ಮೂತ್ರದ ಮೂಲಕ ಹೊರಹಾಕಲ್ಪಡುವ ದ್ರವಾಂಶಗಳ ನಡುವೆ ಸಮತೋಲನ ಇರಿಸಿಕೊಳ್ಳಬೇಕಾಗುತ್ತದೆ.

ಇಲೆಕ್ಟ್ರೋಲೈಟ್‌ಗಳು :  ಶರೀರದಲ್ಲಿನ ಇಲೆಕ್ಟ್ರೋಲೈಟ್‌ ಮಟ್ಟವನ್ನು ಗಮನಿಸಬೇಕು ಮತ್ತು ಹೊಂದಾಣಿಕೆ ಮಾಡಿಕೊಳ್ಳಬೇಕು, ಕಾಯಿಲೆಯ ಹಂತವನ್ನು ಹೊಂದಿಕೊಂಡು ಇದೂ ಸಹ ವ್ಯತ್ಯಾಸವಾಗಬಹುದು.

 

 

ಅರುಣಾ ಮಲ್ಯ

 ಡಯಟೀಶಿಯನ್‌, ಕೆ. ಎಂ. ಸಿ. ಆಸ್ಪತ್ರೆ,

ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತ, ಮಂಗಳೂರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.