ವಿಶ್ವ ಅತೀ ವಿರಳ ಕಾಯಿಲೆಗಳ ದಿನಾಚರಣೆ


Team Udayavani, Feb 28, 2021, 6:44 PM IST

ವಿಶ್ವ ಅತೀ ವಿರಳ ಕಾಯಿಲೆಗಳ ದಿನಾಚರಣೆ

ಪ್ರತೀ ಫೆಬ್ರವರಿ 28ರಂದು ವಿಶ್ವದಾದ್ಯಂತ ಅತೀ ವಿರಳ ಕಾಯಿಲೆಗಳ ದಿನ (Raredisease day) ವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ದಿನದ ಮತ್ತು ಕಾಯಿಲೆಗಳ ಮಹತ್ವದ ಬಗ್ಗೆ ಈ ಲೇಖನ.

“ಅತಿ ವಿರಳ ಕಾಯಿಲೆ’ ಎಂದರೇನು ? :

ಸುಮಾರು ಎರಡು ಸಾವಿರ ಮಂದಿಯಲ್ಲಿ ಒಬ್ಬರಲ್ಲಿ ಕಾಣಬರುವ ಕಾಯಿಲೆಗಳನ್ನು “ಅತೀ ವಿರಳ ಕಾಯಿಲೆ’ಗಳು ಎಂದು ಪರಿಗಣಿಸಲಾಗುತ್ತಿದೆ. ಸುಮಾರು 7,000-10,000 ಇಂತಹ ಕಾಯಿಲೆಗಳಿವೆಯೆಂದು ಒಂದು ಅಂದಾಜು. ಅಂದರೆ ನೀವೇ ಊಹಿಸಿ; ಒಟ್ಟಾಗಿ ಎಷ್ಟು ಜನರಲ್ಲಿ ಇಂತಹ ವಿರಳ ಕಾಯಿಲೆಗಳು ಇರಬಹುದು? ಒಂದು ಲೆಕ್ಕಾಚಾರದ ಪ್ರಕಾರ ಭಾರತದಲ್ಲಿ ಸುಮಾರು 7ರಿಂದ 9 ಕೋಟಿ ಜನರು ವಿರಳ ಕಾಯಿಲೆಗಳಿಂದ ಬಳಲುತ್ತಿರಬಹುದು.

ವಿರಳ ಕಾಯಿಲೆಗಳ ಮಹತ್ವವೇನು? :

ವಿರಳ ಕಾಯಿಲೆಗಳು ಬಹು ಅಪರೂಪ ಎಂದು ಪರಿಗಣಿಸಲ್ಪಡುವುದರಿಂದ ಇವುಗಳ ಬಗ್ಗೆ ಅಧ್ಯಯನ, ಸಂಶೋಧನೆ, ಪತ್ತೆ, ಚಿಕಿತ್ಸೆ , ಶಿಕ್ಷಣ, ಆರೈಕೆ ಹಾಗೂ ಔಷಧಗಳ ಉತ್ಪಾದನೆ ಬಹಳ ಅಲಕ್ಷ್ಯಕ್ಕೆ ಒಳಗಾಗಿರುತ್ತವೆ. ಇದರಿಂದ ಇವು ಸರಕಾರದ ಅಥವಾ ಸಾರ್ವಜನಿಕರ ಗಮನಕ್ಕೆ ಬಾರದೆ, ತೊಂದರೆಗೊಳಗಾದ ಕುಟುಂಬಗಳು ಸೂಕ್ತ ಆರೈಕೆಗಾಗಿ ಆಸರೆಯನ್ನು ಹುಡುಕುತ್ತಾ ಇರಬೇಕಾಗುತ್ತದೆ. ಅಲ್ಲದೇ ಈ ಕಾಯಿಲೆಗಳ ಪತ್ತೆ, ಚಿಕಿತ್ಸೆಯ ವೆಚ್ಚವು ಜನಸಾಮಾನ್ಯರ ಕೈಗೆಟಕದೇ ರೋಗಿಗಳು ಬಹಳಷ್ಟು ಕಷ್ಟವನ್ನು ಎದುರಿಸಬೇಕಾಗುತ್ತದೆ.  ಈ ನಿಟ್ಟಿನಲ್ಲಿ ಜನಜಾಗೃತಿಯ ಸಲುವಾಗಿ ವಿಶ್ವ ವಿರಳ ಕಾಯಿಲೆಗಳ ದಿನವನ್ನು ಆಚರಿಸಲಾಗುತ್ತಿದೆ.

ಅತಿ ವಿರಳ ಕಾಯಿಲೆಗಳು ಯಾವುವು ? :

ಮಸ್ಕಾಲೆರ್‌ ಡಿಸ್ಟ್ರೋಫಿ (MuscularDystrophy), ಥಲಸೀಮಿಯಾ, (Thalassemia), ಸ್ಪೆನಲ್‌ ಮಸ್ಕಾಲರ್‌ (Spinal), ಹಿಮೋಫಿಲಿಯಾ (Hemophilia), ಅಂಕೊಡ್ರೊ ಪ್ಲೇಸಿಯಾ (Achondroplasia), ಹುಟ್ಟು ಕಿವುಡು ಮುಂತಾದವುಗಳು ಸಾಮಾನ್ಯವಾಗಿ ಕಂಡುಬರುವ ಅತೀ ವಿರಳ ಕಾಯಿಲೆಗಳಾಗಿವೆ.

ಈಗಾಗಲೇ ಬೆರೆಳೆಣಿಕೆಯಷ್ಟೇ ಮಂದಿಯನ್ನು ಪೀಡಿಸುವ ಸಹಸ್ರಾರು ಕಾಯಿಲೆಗಳನ್ನೂ  ಅತೀ ವಿರಳ ಕಾಯಿಲೆಗಳೆಂದು ಪರಿಗಣಿಸಬಹುದು. ಹೋಲಿಕೆಗಾಗಿ, ಮಧುಮೇಹ, ರಕ್ತದೊತ್ತಡ, ಪಾರ್ಶ್ವವಾಯು, ಅಸ್ತಮಾ, ಖನ್ನತೆಗಳನ್ನು ಸಾಮಾನ್ಯವಾಗಿ ಕಂಡುಬರುವ ಕಾಯಿಲೆಗಳೆಂದು ಲೆಕ್ಕಿಸಲಾಗುತ್ತದೆ.

 

ವಿರಳ ಕಾಯಿಲೆಗಳಿಗೆ  ಕಾರಣವೇನು ? :

ಸುಮಾರು ಶೇ.80ರಷ್ಟು ವಿರಳ ಕಾಯಿಲೆಗಳು ಗುಣತಂತುಗಳ ದೋಷದಿಂದ ಉಂಟಾಗುತ್ತವೆ. ಇವುಗಳು ಅನುವಂಶೀಯವಾಗಿರಬಹುದು ಅಥವಾ ಕುಟುಂಬದಲ್ಲಿ ಮೊದಲ ಬಾರಿಗೆ ಕಂಡುಬರಬಹುದು. ಇತರವು ಸೋಂಕು ಅಥವಾ ಬೇರೆ ಕಾರಣಗಳಿಂದ ಉತ್ಪತ್ತಿಯಾಬಹುದು. ಉದಾಹರಣೆ: ಚಿಕನ್‌ಗುನ್ಯ, ಆನೆಕಾಲು, ಸಂಧಿವಾತ ಮತ್ತು ಮಂಗನ ಕಾಯಿಲೆ ಇತ್ಯಾದಿ.

 

ವಿರಳ ಕಾಯಿಲೆಗಳು ನಿರ್ಲಕ್ಷ್ಯಕ್ಕೇಕೆ ಒಳಗಾಗುತ್ತವೆ? :

ಈ ಕಾಯಿಲೆಗಳು ಬಹಳಷ್ಟು ವಿರಳವಾಗಿರುವುದರಿಂದ ಪರಿಣತ ವೈದ್ಯರೂ ಅಷ್ಟೇ ವಿರಳವಾಗಿ ಲಭ್ಯರಿರುತ್ತಾರೆ. ವೈದ್ಯರಲ್ಲಿ ವಿರಳ ಕಾಯಿಲೆಗಳ ಅನುಭವವೂ ಕಡಿಮೆಯಾಗಿದ್ದು, ಅವುಗಳ ಪತ್ತೆ  ಹಚ್ಚುವಿಕೆ ಇನ್ನಷ್ಟು ಕ್ಲಿಷ್ಟಕರವಾಗಿರುತ್ತದೆ. ಈ ರೋಗಗಳಿಗೆ ಬೇಕಾಗುವ ಪ್ರಯೋಗಾಲಯದ ಸೌಲಭ್ಯಗಳು ಇನ್ನಷ್ಟು ದುರ್ಲಭವಾಗಿರುತ್ತವೆ. ಅಂದರೆ ಇವುಗಳ ಚಿಕಿತ್ಸೆಯನ್ನು ಅಭಿವೃದ್ಧಿ ಪಡಿಸುವಲ್ಲಿ  ಔಷಧೀಯ ಕಂಪೆನಿಗಳು ಯಾವುದೇ ರೀತಿಯ ಉತ್ಸುಕತೆ ತೋರಿಸುವುದಿಲ್ಲ. ಇದರಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಮುಗಿಲು ಮುಟ್ಟುವಂತಿದ್ದು, ಸಾಮಾನ್ಯರ ಕೈಗೆಟಕುವುದಿಲ್ಲ. ಇತ್ತೀಚೆಗೆ ಪತ್ತೆಯಾಗಿರುವ ಗಾಷೆ (Gaucher) ಕಾಯಿಲೆ, ಹರ್ಲರ್‌ ಸಿಂಡ್ರೋಮ್‌, ಫೇಬ್ರಿ ಕಾಯಿಲೆ ಮತ್ತು ಈಗಷ್ಟೇ ಪ್ರಸ್ತುತಪಡಿಸಲಾದ ಜೀನ್‌ ಥೆರಪಿ (ಸ್ಪೈನಲ್‌ ಮಸ್ಕಾಲರ್‌ ಅಟ್ರೋಫಿ) ಇದಕ್ಕೆ ಉದಾಹರಣೆಗಳು. ಇದಲ್ಲದೇ ಈ ಕಾಯಿಲೆಗಳಿಗೆ ತುತ್ತಾದ ರೋಗಿಗಳು ಹಾಗೂ ಅವರ ಕುಟುಂಬಗಳು ಸಾಮಾಜಿಕವಾಗಿ ಮೂಲೆಗುಂಪಾಗುವ ಸಾಧ್ಯತೆಗಳೂ ಇವೆ.

ವಿರಳ ಕಾಯಿಲೆಗಳ ಪತ್ತೆ  ಏಕೆ ಅವಶ್ಯ ? :

ಈಗಾಗಲೇ ನೀವು ಅತಿ ವಿರಳ ಕಾಯಿಲೆಗಳಿಗೊಳಗಾದವರ ಬವಣೆಯನ್ನು ಊಹಿಸಿರಬಹುದು. ತನಗೆ ಅಥವಾ ತನ್ನ ಮಗುವಿಗೆ ಉಂಟಾದ ಅನಾರೋಗ್ಯದ ಬಗ್ಗೆ ಯಾವುದೇ ಮಾಹಿತಿ ಅಥವಾ ಮುಂದಿನ ಚಿಕಿತ್ಸೆಯ ಬಗ್ಗೆ ನಿರ್ದೇಶನವಿಲ್ಲದಾಗ ಇಂತಹ ಕುಟುಂಬಗಳು ದಿಕ್ಕು ತೋಚದಂತಾಗುತ್ತವೆ. ಇಂತಹ ವಿರಳ ಕಾಯಿಲೆಗಳನ್ನು ಕೆಲವೊಮ್ಮೆ ಬಹಳಷ್ಟು ಸುಲಭವಾಗಿ ಗುಣಪಡಿಸಬಹುದು (ಉದಾಹರಣೆಗೆ ಬಯೋಟಿನ್‌ ಕೊರತೆಯನ್ನು ಕೇವಲ ಒಂದು ಗುಳಿಗೆಯನ್ನು ದಿನ ನಿತ್ಯ ಸೇವಿಸುವುದರಿಂದ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗಬಹುದು). ಇನ್ನು ಕೆಲವು ವೇಳೆ ರೋಗ ನಿದಾನದಿಂದ ಚಿಕಿತ್ಸೆ ಇಲ್ಲದೇ ಇರುವ ಬಗ್ಗೆ ನಿಖರ ಮಾಹಿತಿ ದೊರೆತು, ವೈದ್ಯರ ಬಳಿಗೆ ವ್ಯರ್ಥ ಯಾತ್ರೆಗಳು ಕೊನೆಗೊಳ್ಳಬಹುದು ಹಾಗೂ ಅನವಶ್ಯಕ ಚಿಕಿತ್ಸೆಗಳನ್ನು ನಿಲ್ಲಿಸಬಹುದು. ಇಷ್ಟಲ್ಲದೇ ಹಲವಾರು ಜೆನೆಟಿಕ್‌ ಕಾಯಿಲೆಗಳನ್ನು ಮುಂದಿನ ಮಗುವಿನಲ್ಲಿ ಅಥವಾ ಮುಂದಿನ ಪೀಳಿಗೆಯಲ್ಲಿ ಮರುಕಳಿಸುವ ಬಗ್ಗೆ ನಿರ್ದಿಷ್ಟ ಮಾಹಿತಿ ಹಾಗೂ ಅಗತ್ಯ ಉಪಕ್ರಮಗಳ ಬಗ್ಗೆ ಅವಶ್ಯ ಮಾರ್ಗಗಳು ತೋರಬಹುದು. ಹೀಗಾಗಿ ನಿಖರ ರೋಗ ನಿದಾನ ಅತ್ಯಗತ್ಯ.

ತಾರತಮ್ಯ ಸರಿಯಲ್ಲ  :

ವಿರಳ ಕಾಯಿಲೆಗಳಿಂದ ಬಳಲುವುದೇ ಸಮಸ್ಯೆಯಾಗಿರುವಾಗ, ಅದರ ಬಗ್ಗೆ ತಾರತಮ್ಯ ಸಲ್ಲದು. ಇದು ಸರಕಾರದಿಂದ, ಸಮಾಜದಿಂದ, ಔಷಧೀಯ ಸಂಸ್ಥೆ, ವಿಮಾ ಕಂಪೆನಿಗಳು ಹಾಗೂ ಕಡೆಗೆ ವೈದ್ಯಕೀಯ ಕ್ಷೇತ್ರದಿಂದಲೂ ಅಸಮಂಜಸವಾದ ನಡೆ. ಈಗಾಗಲೇ ಮುಂದುವರಿದ ದೇಶಗಳು ಆರೋಗ್ಯ ವಿಮೆಯಲ್ಲಿ ಸಮತೋಲನ ಕಾಯ್ದುಕೊಳ್ಳಲು ಈ ಕಾಯಿಲೆಗಳ ಬಗ್ಗೆ ಭೇದಭಾವ ತೋರದಂತೆ ಸೂಚನೆಗಳನ್ನು ನೀಡಿವೆ. ಆದರೆ ನಮ್ಮ ದೇಶವಿನ್ನೂ ಈ ನಿಟ್ಟಿನಲ್ಲಿ ಹಿಂದಿದೆ. ಔಷಧೀಯ ಕಂಪನಿಗಳಿಗೆ ಸಂಶೋಧನೆಗೆ ತಗಲುವ ಖರ್ಚು ಅತ್ಯಧಿಕವಾಗಿದ್ದು, ಅವುಗಳಿಗೆ ಸರಕಾರದಿಂದ ಸವಲತ್ತುಗಳು ಹಾಗೂ ಉತ್ತೇಜನ ಅತ್ಯಗತ್ಯ. ವೈದ್ಯರಿಗೂ ಅತೀ ವಿರಳ ಕಾಯಿಲೆಗಳ ಬಗ್ಗೆ ಶಿಕ್ಷಣ ಹಾಗೂ ಕ್ಲಪ್ತ ಸಮಯಕ್ಕೆ ಸರಿಯಾದ ವೈದ್ಯರ ಅಭಿಪ್ರಾಯ ಪಡೆದುಕೊಳ್ಳುವುದು ಈ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳು.

ಜೆನೆಟಿಕ್ಸ್‌ ತಜ್ಞರಲ್ಲಿ ಸಮಾಲೋಚನೆ :

ಬಹಳಷ್ಟು ವಿರಳ ಕಾಯಿಲೆಗಳು ಜೆನೆಟಿಕ್‌ ಹಿನ್ನೆಲೆಯಲ್ಲಿ ಸಂಭವಿಸುವುದರಿಂದ ಸಮರ್ಪಕವಾದ ವೈದ್ಯರಲ್ಲಿ ಹಾಗೂ ವೈದ್ಯಕೀಯ ಜೆನೆಟಿಕ್ಸ್‌ ತಜ್ಞರಲ್ಲಿ ಚರ್ಚೆ ಮತ್ತು ಸಮಾಲೋಚನೆ ಬಹಳ ಅಗತ್ಯ. ಅವರು ಕಾಯಿಲೆಗಳ ಬಗ್ಗೆ ಮಾಹಿತಿ, ಚಿಕಿತ್ಸೆಯ ಲಭ್ಯತೆ, ಮುಂದಿನ ಮಕ್ಕಳಲ್ಲಿ ಮರುಕಳಿಸುವ ಸಾಧ್ಯತೆ, ಅದನ್ನು ತಡೆಗಟ್ಟುವತ್ತ ಸಮರ್ಪಕ ಹೆಜ್ಜೆಗಳು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆ ಕಾಯಿಲೆಯ ಬಗ್ಗೆ  ಇತ್ತೀಚಿನ ಸಂಶೋಧನಾ ಅಧ್ಯಯನಗಳು ಮುಂತಾದವುಗಳ ಬಗ್ಗೆ ಖಚಿತ ಮಾರ್ಗದರ್ಶನ ನೀಡಬಲ್ಲರು.

ಇತ್ತೀಚಿನ ಹೆಜ್ಜೆಗಳು :

ಅತೀ ವಿರಳ ಕಾಯಿಲೆಗಳು ಇತ್ತೀಚೆಗಷ್ಟೇ ಜನರ, ಸರಕಾರದ ಗಮನವನ್ನು ಸೆಳೆಯುತ್ತಿವೆ. ಸಂಘ-ಸಂಸ್ಥೆಗಳು, ವೈಜ್ಞಾನಿಕ ಪ್ರಯತ್ನಗಳು, ಸರಕಾರದ ಹೆಜ್ಜೆಗಳನ್ನು ನಾವೀಗ ಗಮನಿಸಬಹುದು. ಸರಕಾರವೂ ಈಚೆಗೆ ರಾಷ್ಟ್ರೀಯ ವಿರಳ ಕಾಯಿಲೆಗಳ ಧೋರಣೆಯನ್ನು ಹೊರತಂದಿದೆ. ನೀವು ಉತ್ಸುಕರಾಗಿದ್ದಲ್ಲಿ  ಈ ಚಟುವಟಿಕೆಗಳಲ್ಲಿ ಭಾಗವಹಿಸಲು ನಮ್ಮ ವಿಭಾಗವನ್ನು ಸಂಪರ್ಕಿಸಬಹುದು ಅಥವಾ ORಈಐ ORDI (www.ordindia.in), Orphanet (www.orpha.net)  ಸಂದರ್ಶಿಸಬಹುದು.

 

ಡಾ|  ಗಿರೀಶ್‌ ಕಟ್ಟ

ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು

ಮೆಡಿಕಲ್‌ ಜೆನೆಟಿಕ್ಸ್‌ ವಿಭಾಗ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.