ಸಾಂಪ್ರದಾಯಿಕ ಆಹಾರ ಪದ್ಧತಿ ಪಾಲಿಸಿ


Team Udayavani, Apr 25, 2021, 5:29 PM IST

ಸಾಂಪ್ರದಾಯಿಕ ಆಹಾರ ಪದ್ಧತಿ ಪಾಲಿಸಿ

ಭಾರತೀಯ ಸಾಂಪ್ರದಾಯಿಕ ಆಹಾರ ಪದಾರ್ಥಗಳು, ಅವುಗಳ ಚಿಕಿತ್ಸಾ ಗುಣಗಳು, ತಯಾರಿಸುವ ವಿಧಾನ, ಆಹಾರ ಸಂಸ್ಕರಣೆ ಮತ್ತು ಶೇಖರಿಸುವ ವಿಧಾನ ತಲೆಮಾರುಗಳಿಂದ ಬಂದ ಬಳುವಳಿಯಾಗಿದೆ. ಈ ಕ್ರಿಯಾತ್ಮಕ ಆಹಾರ ವ್ಯವಸ್ಥೆಯು ಅನೇಕ ರೀತಿಯ ವ್ಯಾಧಿಗಳನ್ನು ಗುಣಪಡಿಸುವ ರಾಸಾಯನಿಕಗಳು, ಆಂಟಿಓಕ್ಸಿಡೆಂಟ್‌ಗಳು, ನಾರು ಪದಾರ್ಥಗಳು ಹಾಗೂ ಕೆಲವು ಉಪಯುಕ್ತ ಸೂಕ್ಷ್ಮಾಣುಜೀವಿಗಳಂತಹ (ಪ್ರೊಬಯೋಟಿಕ್‌) ಆಹಾರ ಘಟಕಗಳನ್ನು ಒಳಗೊಂಡಿರುತ್ತದೆ. ಇಂತಹ ಆಹಾರ ಮಾನವನ ದೇಹದಲ್ಲಿ ಹಲವಾರು ಜೈವಿಕ ಕಾರ್ಯಗಳನ್ನು ನಿರ್ವಹಿಸಬಲ್ಲುದು.

ಜೀವನದ ವಿವಿಧ ಹಂತಗಳಲ್ಲಿ ಆಗುವ ಬೆಳವಣಿಗೆ ಮತ್ತು ಬದಲಾವಣೆಗಳಿಗೆ ಈ ಆಹಾರ ಪದ್ಧತಿ ತುಂಬಾ ಅಗತ್ಯವಾಗಿದೆ. ಪ್ರಮುಖವಾಗಿ ಆಹಾರದ ಔಷಧೀಯ ಗುಣಗಳು ದೇಹದ ಶಾರೀರಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಬಹಳ ಉಪಯುಕ್ತವಾಗಿವೆ. ಇದಕ್ಕಾಗಿಯೇ ನಮ್ಮ ಪೂರ್ವಜರು ಬೆಳವಣಿಗೆಯ ವಿವಿಧ ಹಂತಗಳಿಗುಣವಾಗಿ ಆರೋಗ್ಯಕರ ಮತ್ತು ಪೌಷ್ಠಿಕಾಂಶಗಳನ್ನು ಒನ್ನೊಳಗೊಂಡ ವಿಭಿನ್ನ ಆಹಾರ ಪದಾರ್ಥಗಳನ್ನು ತಯಾರಿಸಿ ಸೇವಿಸುತ್ತಿದ್ದರು. ಉದಾಹರಣೆಗೆ, ಔಷಧೀಯ ಗುಣಗಳಿರುವ ಸಸ್ಯಗಳಿಂದ ಸಾಂಪ್ರದಾಯಿಕ ಶೈಲಿಯಲ್ಲಿ ಮಾಡುವ ತಿಂಡಿ ತಿನಿಸುಗಳು, ಖಾದ್ಯ, ರಸಾಯನ, ಪಲ್ಯ, ಅಂಬಲಿ, ಕಷಾಯ, ಪಾನೀಯಗಳು ಇತ್ಯಾದಿ. ಪುರಾತನ ಕಾಲದಿಂದಲೂ ಭಾರತದಲ್ಲಿ ವಾಸಿಸುತ್ತಿದ್ದ ಪ್ರತಿಯೊಂದು ಸಮುದಾಯಕ್ಕೂ ಈ ಆಹಾರ ವ್ಯವಸ್ಥೆಯ ಮೇಲೆ ಸ್ಪಷ್ಟ ಮತ್ತು ಪ್ರತ್ಯೇಕ ನಂಬಿಕೆಯಿತ್ತು. ಆದರೆ ಈಗಿನ ಪೀಳಿಗೆ ಆಧುನಿಕತೆ ಮತ್ತು ಪಾಶ್ಚಾತ್ಯ ಜೀವನ ಶೈಲಿಯ ಪ್ರಭಾವದಿಂದಾಗಿ ನಾಲಗೆಯ ರುಚಿಗಷ್ಟೇ ಬೆಲೆಕೊಟ್ಟು, ಸಾಂಪ್ರದಾಯಿಕ ಆಹಾರದ ಉಪಯುಕ್ತತೆಯನ್ನು ಅರಿಯದೆ ಪಾಶ್ಚಾತ್ಯ ಶೈಲಿಯ ಆಹಾರವನ್ನು ತಿಂದು, ಅದೆಷ್ಟೋ ರೀತಿಯ ಕಾಯಿಲೆಗಳನ್ನು ಆಹ್ವಾನಿಸುತ್ತಿದ್ದೇವೆ.

ಸಾಂಪ್ರದಾಯಿಕ ಆಹಾರ: ಕಾರ್ಯನಿರ್ವಹಣೆ ಹೇಗೆ? :

ಈ ಆಹಾರ ವ್ಯವಸ್ಥೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ನೋಡೋಣ.

ಮಾನವನ ದೇಹವು ಹಲವಾರು ರೀತಿಯ ಸೂಕ್ಷ್ಮಾಣುಜೀವಿಗಳಿಂದ ಆವರಿತವಾಗಿದೆ. ಅಲ್ಲದೆ ದೇಹದ ವಿವಿಧ ಭಾಗಗಳಾದ ಚರ್ಮ, ಶ್ವಾಸಕೋಶ, ಜೀರ್ಣಾಂಗವ್ಯೂಹ, ಮೂತ್ರಕೋಶ, ಯೋನಿ ಹಾಗೂ ಹಾಲುಣಿಸುವ ಮೊಲೆಯ ಗ್ರಂಥಿಗಳಲ್ಲಿ ಈ ಸೂಕ್ಷ್ಮಾಣುಜೀವಿಗಳು ಇರುತ್ತವೆ. ಮಗುವು ತಾಯಿಯ ಗರ್ಭದಿಂದ ಜನಿಸಿದ ಕೂಡಲೇ ಬೇರೆ ಬೇರೆ ರೀತಿಯ ಸೂಕ್ಷ್ಮಾಣುಜೀವಿಗಳೊಂದಿಗೆ ಸಹಜೀವನ ಪ್ರಾರಂಭಿಸುವುದು ಸಾಮಾನ್ಯ. ದೇಹದಲ್ಲಿರುವ ಈ ಸೂಕ್ಷ್ಮಾಣುಜೀವಿಗಳ ಸಮೂಹವು ಮನುಷ್ಯನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಬಹುಮುಖ್ಯವಾಗಿ ಅನೇಕ ವಿಧದ ಸೂಕ್ಷ್ಮಾಣುಜೀವಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಕರುಳಿನಲ್ಲಿ ಕಾಣಸಿಗುತ್ತವೆ. ಇವುಗಳ ಸಂಖ್ಯೆಯು ಸಾಮಾನ್ಯವಾಗಿ ಸುಮಾರು 1013ರಿಂದ 1014ರಷ್ಟು ಇರುತ್ತದೆ. ಸೂಕ್ಷ್ಮಾಣುಜೀವಿಗಳ ವಿಧಗಳು ಮತ್ತು ಸಂಖ್ಯೆಯು ಮನುಷ್ಯನ ಪ್ರಾಯ, ಪೋಷಣೆ, ಆಹಾರ ಪದ್ಧತಿ, ಜೀವನಶೈಲಿ, ಹಾರ್ಮೋನುಗಳ ಬದಲಾವಣೆ, ಆನುವಂಶಿಕ ವಂಶವಾಹಿಗಳು, ಜನ್ಮಜಾತ ಕಾಯಿಲೆಗಳು ಇತ್ಯಾದಿ ಅಂಶಗಳ ಮೇಲೆ ಅವಲಂಬಿತವಾಗಿರುತ್ತವೆ. ಈ ಸೂಕ್ಷ್ಮಾಣುಜೀವಿಗಳ ವಿಧಗಳಲ್ಲಿ ಅಥವಾ ಸಂಖ್ಯೆಗಳಲ್ಲಿ ಏನೇ ವ್ಯತ್ಯಾಸ ಕಂಡುಬಂದರೂ ಅದು ಮುಂಬರುವ ರೋಗಗಳಿಗೆ ಕಾರಣವಾಗಬಹುದು.

ನಮ್ಮ ಸಹಜೀವಿಗಳಾದ ಉಪಯೋಗಿ ಸೂಕ್ಷ್ಮಾಣುಜೀವಿಗಳು ಮತ್ತು ನಮ್ಮ ನಡುವಣ ಪರಸ್ಪರ ಪ್ರಯೋಜನಕಾರಿ ಸಂಬಂಧ ಹೃದಯದ ಸಮಸ್ಯೆ, ಮಾನಸಿಕ ಸಮಸ್ಯೆಗಳು, ಗರ್ಭ ಕೋಶದ ಸಮಸ್ಯೆ, ಕ್ಯಾನ್ಸರ್‌, ಸಾಂಕ್ರಾಮಿಕ ರೋಗಗಳು, ರೋಗನಿರೋಧಕ ಶಕ್ತಿಯ ಕೊರತೆಯಿಂದ ಬರುವ ಅನಾರೋಗ್ಯಗಳು, ಕರುಳು, ಮೂತ್ರಜನಕಾಂಗ ಅಥವಾ ದೇಹದ ಯಾವುದೇ ಭಾಗದಲ್ಲಿ ಉಲ್ಬಣಿಸುವ ಯಾವುದೇ ಕಾಯಿಲೆಗಳು ಇತ್ಯಾದಿ ರೋಗಗಳನ್ನು ಬಾರದಂತೆ ತಡೆಯುವಲ್ಲಿ ತುಂಬಾ ಅನುಕೂಲಕರವಾಗಿವೆ. ಸೂಕ್ಷ್ಮಾಣುಜೀವಿಗಳಲ್ಲಿ ಮುಖ್ಯವಾಗಿ ಬ್ಯಾಕ್ಟೀರಿಯಾಗಳು ಸುಲಭವಾಗಿ ಜೀರ್ಣವಾಗದ ನಾರಿನಂಶ ಇರುವ ಆಹಾರ ಪದಾರ್ಥಗಳ ಚಯಾಪಚಯ ಕ್ರಿಯೆಯಲ್ಲಿ ಭಾಗವಹಿಸಿ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಪೂರೈಸುತ್ತವೆ. ಅಲ್ಲದೆ, ಯಾವುದೇ ರೋಗಕಾರಕ ಬ್ಯಾಕ್ಟೀರಿಯಾಗಳ ವಿರುದ್ಧ ದೇಹವನ್ನು ರಕ್ಷಿಸಲು ಕರುಳಿನ ರಚನೆಯನ್ನು ಭದ್ರಗೊಳಿಸುತ್ತವೆ. ಉದಾಹರಣೆಗೆ, ಬ್ಯಾಕ್ಟೀರಾಯ್ಡ್ಸ್ ಎಂಬ ಜಾತಿಯ ಬ್ಯಾಕ್ಟೀರಿಯಾಗಳು ಜಠರ ಮತ್ತು ಸಣ್ಣ ಕರುಳಿನಲ್ಲಿ ಜೀರ್ಣವಾಗದೇ ಉಳಿಯುವ ಆಹಾರವಾದ ತರಕಾರಿಗಳ ನಾರು ಪದಾರ್ಥ (ಕ್ಸೆ„ಲೋಗುÉಕನ್ಸ್‌)ಗಳನ್ನು ಜೀರ್ಣಿಸಲು ಸಹಾಯ ಮಾಡುವುದಲ್ಲದೆ ದೇಹದಲ್ಲಿ ಶಕ್ತಿಯ ಸಂತುಲತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.  ಇವಲ್ಲದೆ ಲ್ಯಾಕ್ಟೋಬ್ಯಾಸಿಲಸ್‌ ಮತ್ತು ಬೈಫಿಡೊ ಬ್ಯಾಕ್ಟೀರಿಯಾಗಳು ಕೂಡ ಸುಲಭವಾಗಿ ಜೀರ್ಣವಾಗದ ಆಹಾರವನ್ನು ಜೀರ್ಣವಾಗಿಸಲು ಸಹಾಯ ಮಾಡುತ್ತವೆ. ಚಯಾಪಚಯ ಕ್ರಿಯೆ ಮಾತ್ರವಲ್ಲದೆ, ಈ ಬ್ಯಾಕ್ಟೀರಿಯಾಗಳು ದೇಹದಲ್ಲಿ ಮೇದಸ್ಸು (ಲಿಪಿಡ್‌) ಮತ್ತು ಪ್ರೋಟೀನ್‌ ಇವುಗಳ ಸಮತೋಲನವನ್ನು ಕಾಪಾಡುತ್ತವೆ. ಜತೆಗೆ, ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್‌ ಪೋಷಕಾಂಶಗಳನ್ನು ಮತ್ತು ಕರುಳಿನ ಜೀವಕೋಶಗಳಿಗೆ ಶಕ್ತಿಯನ್ನು ಪೂರೈಸುವ ಶಾರ್ಟ್‌ ಚೈನ್‌ ಫ್ಯಾಟಿ ಆಸಿಡ್‌ಳನ್ನು ಉತ್ಪಾದಿಸುತ್ತವೆ. ಒಟ್ಟಿನಲ್ಲಿ ಸೂಕ್ಷ್ಮಾಣುಜೀವಿಗಳು ಶರೀರದ ರೋಗನಿರೋಧಕ ವ್ಯವಸ್ಥೆಯನ್ನು ಉತ್ತೇಜಿಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಕರುಳಿನಲ್ಲಿರುವ ಎಲ್ಲ ಸೂಕ್ಷ್ಮಾಣು ಜೀವಿಗಳೂ ಮಾನವನ ಆರೋಗ್ಯ ಕಾಪಾಡುವಲ್ಲಿ ಪ್ರಯೋಜನಕಾರಿಯಾಗಿರುವುದಿಲ್ಲ. ಉಪಯೋಗಿ ಸೂಕ್ಷ್ಮಾಣುಜೀವಿಗಳ ಸಂಖ್ಯೆ ಹಾಗೂ ವಿಧಗಳಲ್ಲಿ ಏರುಪೇರಾದರೆ ರೋಗಕಾರಿ ಸೂಕ್ಷ್ಮಾಣುಜೀವಿಗಳು ಕರುಳಿನ ಲೋಳೆಪೊರೆಯ ಮೇಲಿನ ಉಪ ಯೋಗಿ ಸೂಕ್ಷ್ಮಾಣುಜೀವಿಗಳನ್ನು ನಾಶ ಮಾಡಿ ಕರುಳಿನಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ.

 (ಮುಂದಿನ ವಾರಕ್ಕೆ)

 

ಡಾ| ಕುಸುಮಾಕ್ಷಿ   ನಾಯಕ್‌

ಅಸೋಸಿಯೇಟ್‌ ಪ್ರೊಫೆಸರ್‌

ರೇಷ್ಮಾ ಡಿ’ಸೋಜಾ

ಅಸಿಸ್ಟೆಂಟ್‌ ಪ್ರೊಫೆಸರ್‌ (ಸೀನಿಯರ್‌ ಸ್ಕೇಲ್‌)

ವೈದ್ಯಕೀಯ ಪ್ರಯೋಗಾಲಯ ವಿಭಾಗ

ಎಂಸಿಎಚ್‌ಪಿ, ಮಾಹೆ, ಮಣಿಪಾಲ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.