ಎಲ್ಲರಿಗೂ ಮಾನಸಿಕ ಆರೋಗ್ಯ: ನಾವದನ್ನು ಸಾಕಾರಗೊಳಿಸೋಣ

ಅಕ್ಟೋಬರ್‌ 10 ವಿಶ್ವ ಮಾನಸಿಕ ಆರೋಗ್ಯ ದಿನ - 2021

Team Udayavani, Oct 10, 2021, 6:32 AM IST

ಎಲ್ಲರಿಗೂ ಮಾನಸಿಕ ಆರೋಗ್ಯ: ನಾವದನ್ನು ಸಾಕಾರಗೊಳಿಸೋಣ

ಕೋವಿಡ್‌ ಪೆಡಂಭೂತ ಪ್ರಪಂಚದಾದ್ಯಂತ ಕಾಡುತ್ತಿರುವ ದೊಡ್ಡ ಸಮಸ್ಯೆ. ಇದು ಈಗಾಗಲೇ ತಿಳಿದಿರುವಂತೆ ಮಾರಕ ಸೋಂಕಾ ಗಿದೆ. ಮನುಷ್ಯ ಕುಲಕ್ಕೆ ಈ ಪಿಡುಗು ಬರೀ ದೈಹಿಕ ಸಮಸ್ಯೆಗಳನ್ನಷ್ಟೇ ಅಲ್ಲದೆ ಬಹಳಷ್ಟು ಮಾನಸಿಕ ಸಂಬಂಧಿತ ಸಮಸ್ಯೆಗಳನ್ನು ಹುಟ್ಟು ಹಾಕಿದೆ. ಈ ಪಿಡುಗಿನ ಸೇನಾನಿಗಳು, ಅಂದರೆ ವೈದ್ಯರು, ನರ್ಸ್‌, ಅರೆ ವೈದ್ಯಕೀಯ ಸಿಬಂದಿ, ವೈದ್ಯಕೀಯ ವಿದ್ಯಾರ್ಥಿಗಳು, ಒಂಟಿಯಾಗಿ ಬದುಕುತ್ತಿರುವವರು, ಅಲ್ಲದೇ ಈಗಾಗಲೇ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಮತ್ತಷ್ಟು ನಲುಗಿ ಹೋಗಿದ್ದಾರೆ. ಇದು ಸತ್ಯ.

ಈ ವೈರಾಣುವಿನ ಬಲ ಕಡಿಮೆ ಮಾಡಲು ಈಗಾಗಲೇ ಬಹಳಷ್ಟು ಲಾಕ್‌ಡೌನ್‌ಗಳನ್ನು ನಾವೆಲ್ಲ ಅನುಭವಿಸಿದ್ದೇವೆ. ಈ ಲಾಕ್‌ಡೌನ್‌ಗಳು ಕೆಲವು ಸಂದರ್ಭಗಳಲ್ಲಿ ಮಾನಸಿಕ ಒತ್ತಡ ಹೆಚ್ಚಿಸಿರುವುದನ್ನು ಕಂಡಿದ್ದೇವೆ. ಈ ನಿಟ್ಟಿನಲ್ಲಿ ಕೆಲವು ಸೇವೆಗಳು ಅದರಲ್ಲಿಯೂ ಮಾನಸಿಕ, ನರಗಳ ಹಾಗೂ ಮಾದಕ ವ್ಯಸನಿಗಳ ವಿಚಾರವಾಗಿ ಸೂಕ್ತ ಸಮಯಕ್ಕೆ ಜನರಿಗೆ ಚಿಕಿತ್ಸೆ ಸಿಗದೆ ಮತ್ತಷ್ಟು ಸಮಸ್ಯೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಆಯೋಜಿಸಿದ್ದ “ವಿಶ್ವ ಆರೋಗ್ಯ ಸಮೂಹ 2021′ ಸಭೆಯಲ್ಲಿ ಪ್ರಪಂಚದಾದ್ಯಂತ ಎಲ್ಲ ಸರಕಾರಗಳು ಇದರ ಮಹತ್ವವನ್ನು ತಿಳಿಸಿ, ಮಾನಸಿಕ ಆರೋಗ್ಯಕ್ಕೆ ಎಲ್ಲ ರೀತಿಯಲ್ಲೂ ಇನ್ನೂ ಹೆಚ್ಚು ಒತ್ತುಕೊಟ್ಟು, ಪ್ರತೀ ವರ್ಷದಂತೆ ಈ ವರ್ಷವೂ “ವಿಶ್ವ ಮಾನಸಿಕ ಆರೋಗ ದಿನಾಚರಣೆ’ ಆಚರಿಸಲು ಡಬ್ಲ್ಯುಎಚ್‌ಓ ನಿರ್ಧರಿಸಿದೆ. ಈ ವರ್ಷದ ಘೋಷವಾಕ್ಯ ಮೂಲ ವಿಷಯವೆಂದರೆ “Mental Health in an unequal world.’

ಈ ಕೋವಿಡ್‌-19 ಎಂಬ ವೈರಾಣುವಿನಿಂದ ಬಹಳಷ್ಟು ಬಿಕ್ಕಟ್ಟು ಸೃಷ್ಟಿ ಯಾಗಿ, ಮಾನಸಿಕ ಒತ್ತಡವಾಗಿ ರೂಪಾಂತರ ಗೊಂಡಿದೆ. ಅದೇನೆಂದರೆ ಆರೋಗ್ಯ ಸಮಸ್ಯೆ ಗಳು, ಸಾಮಾಜಿಕ ಸಮಸ್ಯೆಗಳು, ಹಣಕಾಸಿನ ಸಮಸ್ಯೆಗಳು ಹಾಗೂ ಶೈಕ್ಷಣಿಕ ಸಮಸ್ಯೆಗಳು. ಇವು ವಿಶ್ವ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಈ ರೀತಿಯ ಸಮಸ್ಯೆಗಳಿಂದ ಹಣವಂತರು ಮತ್ತಷ್ಟು ಹಣವಂತರಾದರೆ ಬಡವರು ಮತ್ತಷ್ಟು ಬಡತನಕ್ಕೆ ಒಳಗಾಗಿದ್ದಾರೆ. ಇರುವವರ ಮತ್ತು ಇಲ್ಲದಿರುವವರ ನಡುವಿನ ಅಂತರ ಮತ್ತಷ್ಟು ದೊಡ್ಡದಾಗಿದೆ. ಇದರಿಂದಾಗಿ ಆರೋಗ್ಯ ವಿಚಾರದಲ್ಲಿ ಬಡವರು ಸರಿಯಾಗಿ ಚಿಕಿತ್ಸೆ ಪಡೆಯಲು ಆಗದಂತೆ ಆಗಿದೆ. ಚಿಕಿತ್ಸೆ ಕೊಡಲು ತೊಂದರೆ ಎಂದರೆ ತಪ್ಪಾಗಲಾರದು. ಈ ಲಾಕ್‌ ಡೌನ್‌, ಸಾಮಾಜಿಕ ಅಂತರ , ಸಾಂಕ್ರಾಮಿಕದ ಒತ್ತಡ ನಮ್ಮ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ:ಡಗ್ಸ್‌ ಪಾರ್ಟಿ ಪ್ರಕರಣ : ಎನ್‌ಸಿಬಿ ಮೇಲಿನ ಎಲ್ಲಾ ಆರೋಪಗಳು ಆಧಾರ ರಹಿತ

ಕೋವಿಡ್‌ ಸೋಂಕು ದೈಹಿಕ ಸಮಸ್ಯೆಗಳನ್ನು ಹುಟ್ಟು ಹಾಕಿದರೆ, ಅದರ ಜತೆಗೇ ಹುಟ್ಟಿಕೊಳ್ಳುವ ಮಾನಸಿಕ ಸಮಸ್ಯೆಗಳಿಗೆ ವಿಶ್ವದಾದ್ಯಂತ ಜನರು ತತ್ತರಿಸಿದ್ದಾರೆ. ಇನ್ನೂ ಹೊರಗೆ ಬರಲಾರದೇ ತೊಳಲಾಡುತ್ತಿದ್ದಾರೆ. ಶೈಕ್ಷಣಿಕ ಸಂಸ್ಥೆಗಳು ಮುಚ್ಚಿರುವುದರಿಂದ ಮಕ್ಕಳಿಗೂ ಗೆಳೆಯರ ಸಂಪರ್ಕ ಆಟಪಾಠಗಳಿಲ್ಲದೆ, ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗಿದೆ. ಬದಲಾದ ಶಿಕ್ಷಣ ಕ್ರಮ ಒತ್ತಡಗಳನ್ನು ಸೃಷ್ಟಿಸಿದೆ. ಹಿರಿಯ ನಾಗರಿಕರು, ರಕ್ತದೊತ್ತಡ ಇರುವವರು, ಹೃದ್ರೋಗಿಗಳು, ಮಧುಮೇಹಿಗಳು ಹಾಗೂ ವೈದ್ಯಕೀಯ ಸಿಬಂದಿ ಕೋವಿಡ್‌ ನಿಯಂತ್ರಣಕ್ಕಾಗಿ ಬೇರೆಬೇರೆ ಊರುಗಳಿಗೆ ವರ್ಗಾವಣೆ ಹೊಂದಿ ಅವರು ಕೂಡ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ.

ಹೊರರೋಗಿ ವಿಭಾಗಗಳು (ಮಾನಸಿಕ ಆರೋಗ್ಯ) ಸ್ಥಗಿತಗೊಂಡಿದ್ದರಿಂದ ಈಗಾಗಲೇ ಮಾನಸಿಕ ಕಾಯಿಲೆಗಳಿಗೆ ಒಳಗಾಗಿದ್ದವರಿಗೆ ಸರಿಯಾದ ಸಮಯಕ್ಕೆ ಔಷಧ ದೊರೆ ಯದೆ ಜನರು ಇನ್ನಷ್ಟು ಒತ್ತಡಕ್ಕೆ ಒಳಗಾಗ ಬೇಕಾಯಿತು. ಇದರಿಂದ ಸೂಕ್ಷ್ಮತೆ ಉಳ್ಳ ಜನರಲ್ಲಿ ಒತ್ತಡ, ಆತಂಕಗಳು ಹೆಚ್ಚಾದವು.

ಇಂತಹ ಅಸಮಾನ್ಯ ಸ್ಥಿತಿಯಲ್ಲಿ ಎಲ್ಲರಿಗೂ ಬೇಕಾಗುವಂತಹ ಸಹಾಯಗಳನ್ನು ಒದಗಿಸುವುದು ಬಹಳ ಮುಖ್ಯ. ಆದ್ದರಿಂದ ಕೆಲವು ಸಲಹೆಗಳನ್ನು ಪಾಲಿಸುವ ಮೂಲಕ ಎಲ್ಲರೂ ಈ ಸಮಸ್ಯೆಯ ಪರಿಹಾರಕ್ಕೆ ನಾಂದಿ ಹಾಡಬಹುದು.
– ಸ್ನೇಹಿತರು, ಪ್ರೀತಿ ಪಾತ್ರರ ಒಟ್ಟಿಗೆ ಸಮಯ ಕಳೆಯುವುದು.
– ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿ, ಬೇರೆಯವರ ಭಾವನೆ ಗೌರವಿಸಿ.
– ನಿಮ್ಮನ್ನು ಆರೋಗ್ಯಕರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ.
– ಸರಿಯಾದ ಸಮಯಕ್ಕೆ ವ್ಯಾಯಾಮ, ಆಹಾರ ಸೇವಿಸಿ.
– ಮನೋರಂಜನೆಗೆ ಸಂಗೀತ, ಮನೆ ಒಳಗಿನ ಆಟಗಳು, ಕಥೆ ಹೇಳುವುದು ಹಾಗೂ ಕೇಳುವುದಕ್ಕೆ ಸಮಯ ಕೊಡಿ.
– ವಿಶ್ರಾಂತಿ ಕಡೆ ಗಮನ ಇರಲಿ. ಬೇಗನೆ ಮಲಗುವುದು, ಬೆಳಗ್ಗೆ ಬೇಗನೆ ಏಳುವುದು ನಮ್ಮನ್ನು ಸದೃಢ ಮತ್ತು ಸಮರ್ಥರನ್ನಾಗಿ ಮಾಡುತ್ತದೆ.
– ನೀವು ಸಾಧಿಸಬಹುದಾದ ಗುರಿಗಳನ್ನು ಇಟ್ಟುಕೊಳ್ಳಿ.
ಮೇಲೆ ಹೇಳಿದ ಸಲಹೆಗಳನ್ನು ಪಾಲಿಸುತ್ತಾ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮ ಪಡಿಸಿಕೊಳ್ಳಲು ಯತ್ನಿಸಿ. ಯಾವುದೇ ಮಾನಸಿಕ ಸಮಸ್ಯೆಗಳಿದ್ದರೆ ನೀವು ನಮ್ಮ ಕ್ಲಿನಿಕಲ್‌ ಸೈಕಾಲಜಿ ವಿಭಾಗವನ್ನು ಸಂಪರ್ಕಿ ಸಬಹುದು.

-ಮುಂದಿನ ವಾರಕ್ಕೆ

ಡಾ| ಶ್ವೇತಾ ಟಿ.ಎಸ್‌.
ಸಹಾಯ ಪ್ರಾಧ್ಯಾಪಕರು, ಕ್ಲಿನಿಕಲ್‌ ಸೈಕಾಲಜಿ ವಿಭಾಗ ಕೆ.ಎಂ.ಸಿ. ಮಣಿಪಾಲ

 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.