ಅಯೋಧ್ಯಾಕಾಂಡ: ಸರಯೂ ತೀರದ ಸಾಮರಸ್ಯದ ಚಿತ್ರಗಳು


Team Udayavani, Nov 23, 2019, 5:13 AM IST

ayodhyakanda

ಫೋಟೊಗ್ರಫಿ ಮಾಡಲೆಂದೇ ಸಾಕಷ್ಟು ಸಲ ಅಯೋಧ್ಯೆಯಲ್ಲಿ ಓಡಾಡಿದ್ದೆ. ಮೊದಲ ಬಾರಿಗೆ ಹೋದಾಗ, ಅಲ್ಲೊಬ್ಬ ಪುಟ್ಟ ಹುಡುಗ ಬರಿಮೈಯಲ್ಲಿ ನಿಂತಿದ್ದ. “ಇಕ್ಬಾಲ್‌ ಅನ್ಸಾರಿ ಅಂತ ಇದ್ದಾರಲ್ಲ, ಅವರು ಇಲ್ಲಿ ಎಲ್ಲಿರ್ತಾರೆ?’ ಅಂತ ಕೇಳಿದೆ. ನಿಮಿಷದಲ್ಲಿ ಸಾಗಬಹುದಾದ, ಕಣ್ಣಳತೆಯ ದೂರಕ್ಕೆ ಬೆರಳು ತೋರಿಸಿದ: “ಅವರೇ ಇಕ್ಬಾಲ್‌’. ಅವರು, ರಾಮಮಂದಿರದ ಕಟ್ಟೆಯ ಮೇಲೆ, ಕೆಲ ಪುರೋಹಿತರ ಜತೆ ಹರಟುತ್ತಾ ಕುಳಿತಿದ್ದರು.

“ನಿಮ್ಮನ್ನು ಸಂದರ್ಶಿಸಲು ಬೆಂಗಳೂರಿನಿಂದ ಬಂದಿದ್ದೇನೆ’ ಎಂದೆ. ಇಕ್ಬಾಲ್‌ ಆತ್ಮೀಯವಾಗಿ, 20-30 ಅಡಿ ವಿಸ್ತಾರವಿದ್ದ ತಮ್ಮ ಪುಟ್ಟ ಮನೆಯೊಳಗೆ ಕೂರಿಸಿಕೊಂಡು, ಮಾತುಕತೆಯಲ್ಲಿ ಮುಳುಗಿದರು. ಬಳಿಕ, ಒಂದು ಚಹಾದ ಪೆಟ್ಟಿಗೆ ಅಂಗಡಿಗೆ ಕರಕೊಂಡು ಬಂದರು. ಅಷ್ಟರಲ್ಲಾಗಲೇ, ರಾಮಮಂದಿರದ ಪುರೋಹಿತರು ಅಲ್ಲಿದ್ದರು. ಅವರೆಲ್ಲ ಸೋದರರಂತೆ ಒಟ್ಟಿಗೆ ಚಹಾ ಕುಡಿಯುವಾಗ, ಶತಮಾನಗಳ ಬಾಂಧವ್ಯದ ಚಿತ್ರ ಮೂಡುತ್ತಿತ್ತು.

“ನೋಡಿ, ಕೋರ್ಟಿನ ಕಣ್ಣಿಗೆ ನಾವೆಲ್ಲ ದಾವೆದಾರರು. ಇಲ್ಲಿ ನಿತ್ಯ ಚಹಾ ಕುಡಿಯುವಾಗ ಒಡನಾಡಿಗಳು. ಬಾಲ್ಯದಿಂದಲೂ ಇದೇ ಸ್ನೇಹದಿಂದಲೇ ನಾವು ಬೆಳೆದವರು. ಆದರೆ, ಇಲ್ಲಿನ ವಿಚಾರ ಎಲ್ಲಿಗೋ ಹೋಗಿ, ಇನ್ನೆಲ್ಲಿಗೋ ಮುಟ್ಟಿದೆ’ ಎಂದು ಅವರೆಲ್ಲ ಹೇಳುವಾಗ, ತಾಜಾ ಚಹಾ ಕೈಸೇರಿತ್ತು. “ಅಯೋಧ್ಯೆ ಎಂದರೆ, ಯಾರೂ ಗೆಲ್ಲಲಾಗದ, ಜಗಳವೇ ಇಲ್ಲದ ಪ್ರದೇಶ’ ಎಂಬುದನ್ನು ಕೇಳಿದ್ದೆ. ಆ ಪುಟ್ಟ ಪಟ್ಟಣ ಹಾಗೆಯೇ ರೂಪುಗೊಂಡಿದೆ ಕೂಡ.

ನಾನು ಹೋದಾಗ ರಂಜಾನ್‌ ಮಾಸ. ಅಲ್ಲಿನ ಪ್ರಧಾನ ಅರ್ಚಕರಾದ ಮಹಾಂತ ಜ್ಞಾನದಾಸ್‌, ಇಫ್ತಾರ್‌ ಕೂಟವನ್ನು ಏರ್ಪಡಿಸಿದ್ದರು. “ಅವರು ನೂರು ಜನ ಮುಸಲ್ಮಾನರನ್ನು ಕರೆದರೆ, ಸಾವಿರಾರು ಬಾಂಧವರು ಅವರ ಸುತ್ತ ನೆರೆಯುತ್ತಾರೆ’ ಎನ್ನುವ ಸ್ಥಳೀಯನೊಬ್ಬನ ಮಾತು, ಅವರ ಅನ್ಯೋನ್ಯತೆಗೆ ಕನ್ನಡಿ ಹಿಡಿದಂತಿತ್ತು. ಮೂರ್ನಾಲ್ಕು ವರುಷದ ಕೆಳಗೆ ಅಯೋಧ್ಯೆಯಲ್ಲಿ ಸರಿಯಾದ ಹೋಟೆಲ್ಲುಗಳೇ ಇದ್ದಿರಲಿಲ್ಲ. ನಾವು ಕುಳಿತ ಆಟೋದ ಮುಸಲ್ಮಾನ ಡ್ರೈವರ್‌ಗೆ, “ಇಲ್ಲಿ ನಾನ್‌ವೆಜ್‌ ಊಟ ಸಿಗುವ ಹೋಟೆಲ್ಲು ಎಲ್ಲಿದೆ?’ ಎಂದು ಕೇಳಿದೆ.

ಅವನ ಮುಖಭಾವವೇ ಬದಲಾಯಿತು. “ರಾಮ ಹುಟ್ಟಿದ ಜಾಗಕ್ಕೆ ಬಂದು ಯಾರಾದರೂ ನಾನ್‌ವೆಜ್‌ ಬಯಸುತ್ತಾರಾ ಸಾರ್‌…? ಇಲ್ಲಿ ನಾವುಗಳೇ ಮಾಂಸಾಹಾರ ಮುಟ್ಟೋದಿಲ್ಲ’ ಎಂದಾಗ, ಪ್ರಶ್ನೆ ಕೇಳಿದ್ದ ನನಗೇ ಮುಜುಗರ ಹುಟ್ಟಿತು. ರಾಮನನ್ನು ನೋಡಲೆಂದೇ ಸಹಸ್ರಾರು ಸಾಧುಗಳು ಅಲ್ಲಿಗೆ ಬರುತ್ತಾರೆ. ಹಾಗೆ ಬಂದವರಲ್ಲಿ ಅನೇಕರು, “ಖಡಾವು’ ಚಪ್ಪಲಿಗಾಗಿ ಒಂದು ಅಂಗಡಿಗೆ ಹೋಗು ತ್ತಾರೆ. ಖಡಾವು ಎಂದರೆ, ವಿವಿಧ ಚಿತ್ತಾರ ಗಳನ್ನು ಮೂಡಿಸಿ, ಮರದಿಂದ ರೂಪಿಸಿದ ಸಾಧುಗಳ ಚಪ್ಪಲಿ.

ಅಯೂಬ್‌ಖಾನ್‌ ಎನ್ನುವವರ ಕುಟುಂಬ ಐದು ತಲೆಮಾರಿ ನಿಂದ, ಸುಂದರ ಖಡಾವುಗಳನ್ನು ಸಿದ್ಧಮಾ ಡುತ್ತಾ ಬಂದಿದೆ. ಅದರ ಆಚೆಗೆ ಸ್ವಲ್ಪವೇ ದೂರದಲ್ಲಿ ಬಾಬು ಖಾನ್‌ನ ಟೈಲರ್‌ ಅಂಗಡಿ ಕಾಣಿಸುತ್ತದೆ. ಅವನು “ಝಗ್‌ ಝಗ್‌’ ಎನ್ನುತ್ತಾ, ಮಶೀನು ತುಳಿಯು ವುದೇ ಶ್ರೀರಾಮ ನಿಗಾಗಿ. ಅಯೋಧ್ಯೆಯ ರಾಮಲಲ್ಲಾ ವಿಗ್ರಹ, ಬಾಬು ಸಾಹೇಬರು ಹೊಲಿದು ಕೊಟ್ಟ ಬಟ್ಟೆಯಿಂದಲೇ ಅಲಂಕೃತ ವಾಗುತ್ತದೆ. ಸಂಜೆಯಾದರೆ, ಆ ಪುಣ್ಯಾತ್ಮನ ಮನೆಯಿಂದಲೇ ಹನುಮಾನ್‌ ಚಾಲೀಸ ಕೇಳಿಸುತ್ತದೆ. ಇದೇ ಅಲ್ಲವೇ, ನಮ್ಮ ಅಯೋಧ್ಯೆ!

* ಸುಧೀರ್‌ ಶೆಟ್ಟಿ

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.