ಹಿಂದೂಸ್ತಾನ್‌ ಹೆರಿಟೇಜ್‌ ಸೆಂಟರ್‌


Team Udayavani, Feb 18, 2017, 4:38 PM IST

545455.jpg

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ದೇಶದಲ್ಲಿ ವಿಮಾನದ ಕೊರತೆ ಉಂಟಾಯಿತು. ಆ ದಿನಗಳಲ್ಲಿ ಕೈಗಾರಿಕಾ ಉದ್ಯಮಿಗಳಾದ ವಾಲ್‌ ಚಂದ್‌ ಹೀರಾಚಂದ್‌ರವರು ವಿಮಾನ ಕಾರ್ಖಾನೆ ಸ್ಥಾಪಿಸುವ ಬಗ್ಗೆ ಸರಕಾರದ ಒಪ್ಪಿಗೆ ಪಡೆದು ಮೈಸೂರು ಸಂಸ್ಥಾನದ ಅರಸರಾದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ನೆರವಿನಿಂದ ಭೂಮಿಯನ್ನು ಪಡೆದು 1940ರಲ್ಲಿ “ಹಿಂದೂಸ್ತಾನ್‌ ವಿಮಾನ ಕಾರ್ಖಾನೆ’ಯನ್ನು ಸ್ಥಾಪಿಸಿದರು.

ಹೀಗೆ ಎರಡನೇ ಮಹಾಯುದ್ಧದ ಕಾಲಘಟ್ಟದಲ್ಲಿ ಹುಟ್ಟಿದ ಕೈಗಾರಿಕಾ ಘಟಕವೂ ನಂತರದ ದಿನಗಳಲ್ಲಿ ಸರಕಾರದ ಸಂಯುಕ್ತ ಪಾಲುದಾರಿಕೆಯ ಉದ್ಯಮವಾಗಿ ಲಿಮಿಟೆಡ್‌ ಕಂಪನಿಯಾಗಿ ಇಂದಿನವರೆಗೂ ತನ್ನದೇ ಆದ ಕೊಡುಗೆಗಳನ್ನು ದೇಶಕ್ಕೆ ನೀಡುತ್ತಾ ಬಂದಿದೆ. ಈ ಸಂಸ್ಥೆಯ ಇತಿಹಾಸ, ಆಗು ಹೋಗು ಮತ್ತು ಅಲ್ಲಿನ ಉತ್ಪಾದನಾ ವಿವರಗಳನ್ನು ನೀಡುವ ಸಲುವಾಗಿ ಬೆಂಗಳೂರಿನ ಹೆಚ್‌. ಎ. ಎಲ… ಮಾರತ್‌ಹಳ್ಳಿಯ ಸಮೀಪ ನಾಲ್ಕು ಎಕರೆಯ ಜಾಗದಲ್ಲಿ ನೂತನ ತಂತ್ರಜ್ಞಾನದೊಂದಿಗೆ ಬೆಳೆದು ನಿಂತಿದೆ ಈ ಹಿಂದೂಸ್ತಾನ್‌ ಹೆರಿಟೇಜ್‌ ಸೆಂಟರ್‌ ಎಂದರೆ ತಪ್ಪಿಲ್ಲ. ವೈಮಾನಿಕ ಕ್ಷೇತ್ರದಲ್ಲಿ ಪ್ರಸಿದ್ಧವಾಗಿರುವ ಹಿಂದೂಸ್ತಾನ್‌ ಹೆರಿಟೇಜ್‌ ಮತ್ತು ಏರೋಸ್ಪೇಸ್‌ ಮ್ಯೂಸಿಯಂ 2001 ರಿಂದ ಸಾರ್ವಜನಿಕರಿಗೆ ಮುಕ್ತವಾಗಿದ್ದು ಎಲ್ಲ ವಯೋಮಾನದವರ ಅಚ್ಚುಮೆಚ್ಚಿನ ತಾಣವಾಗಿದೆ.

ಆವರಣದಲ್ಲಿ ಎರಡು ವಿಶಾಲವಾದ ಕೋಣೆಗಳಿವೆ. ಕೋಣೆಯ ಒಂದು ಭಾಗದಲ್ಲಿ ಇಲ್ಲಿಯವರೆಗೆ ತಯಾರಿಸಿದ ಎÇÉಾ ಯುದ್ಧವಿಮಾನಗಳ ವಿವರ, ಅದರ ವಿನ್ಯಾಸ ಮತ್ತು ತಾಂತ್ರಿಕ ವಿವರಣೆಗಳಿವೆ. ಮತ್ತೂಂದು ಕೋಣೆಯಲ್ಲಿ ಸಂಸ್ಥೆಯು ತಯಾರಿಸಿದ ಉತ್ಪನ್ನಗಳ ಮಾದರಿಗಳಿವೆ. ಇದರ ಜೊತೆಯಲ್ಲಿ ದೇಶದ ಪ್ರಸಿದ್ಧ ಯುದ್ಧವಿಮಾನಗಳ ಇಂಜಿನ್‌ಗಳನ್ನೂ ಪ್ರದರ್ಶನ ಮಾಡಲಾಗಿದೆ. ಹಲವಾರು ತಾಂತ್ರಿಕ ವಿದ್ಯಾರ್ಥಿಗಳ ಮಾರ್ಗದರ್ಶನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯದ ವ್ಯವಸ್ಥೆಯನ್ನೂ ಮಾಡಿದೆ. ಚಿಕ್ಕ ಮಕ್ಕಳ ಜೊತೆಗೆ ದೊಡ್ಡವರಿಗೂ ಅಚ್ಚುಮೆಚ್ಚಿನ ತಾಣವಾದ ಹೆರಿಟೇಜ್‌ ಸೆಂಟರ್‌ನಲ್ಲಿ, ವಿಮಾನದಲ್ಲಿ ಕುಳಿತುಕೊಂಡ ಅನುಭವ ನೀಡುವಂತಹ simulatorನ್ನು ಹೊಂದಿದೆ. ವಾರದ ಎಲ್ಲಾ ದಿನಗಳಲ್ಲೂ ಬಾಗಿಲು ತೆರೆದಿರುತ್ತದೆ. 

ಬಿಡುವಿ¨ªಾಗ ಕುಟುಂಬದ ಸದಸ್ಯರೊಡನೆ ಭೇಟಿ ಕೊಡಬಹುದಾದ ಬೆಂಗಳೂರಿನ ಸ್ಥಳಗಳಲ್ಲಿ ಇದೂ ಒಂದು.

ತಲುಪುವುದು ಹೇಗೆ ?
ಕೆಂಪೇಗೌಡ ಸಿಟಿ ಬಸ್‌ ನಿಲ್ದಾಣದಿಂದ ಹೆರಿಟೇಜ್‌ ಸೆಂಟರ್‌ ತಲುಪಲು ಪ್ಲಾಟ ಫಾರಂ 18 ಮತ್ತು 19ರಿಂದ ಮಾರತ್‌ಹಳ್ಳಿಗೆ ಹೋಗುವ 333 ಮಾರ್ಗದ ಸಿಟಿ ಬಸ್‌ ಹತ್ತಿ ಹೆಚ್‌.ಎ. ಎಲ… ಪೋಲಿಸ್‌ ಸ್ಟೇಷನ್‌ ನಿಲ್ದಾಣದಲ್ಲಿ ಇಳಿದು ಎರಡು ಹೆಜ್ಜೆ ಹಿಂದೆ ಬಂದರೆ ವೈಮಾನಿಕ ಕ್ಷೇತ್ರದ ಸಾಧನಗಳನ್ನು ಸಾರುವ ಈ ಭವ್ಯ ಕಟ್ಟಡ ಸಿಗುತ್ತದೆ.

ಸ್ಥಳ ವಿಶೇಷ
ಹೆರಿಟೇಜ್‌ ಸೆಂಟರ್‌ನ ಆವರಣದಲ್ಲಿ ಮಾರುತ್‌ ಎಚ್‌ ಎಪ್‌ 24 ಟ್ರೈನರ್‌ ಏರ್‌ ಕ್ರಾಫ್ಟ್, ಮಿಗ್‌ 21 ಪೈಟರ್‌, ಎಚ್‌ ಜೆ ಟಿ 36, ಎಲ್ ಸಿ ಎ, ಲಕ್ಷÂ ಪೈಲಟ್‌ ಲೆಸ್‌ ಏರ್‌ ಕ್ರಾಫ್ಟ್‌, ಕ್ಯಾನ್‌ಬೆರಾ, ಸೀ ಕಿಂಗ್‌ ಎಂ ಕೆ 42, ಎ.ಎಲ್‌ ಎಚ್‌ ದ್ರುವ, ಹಂಸಾ, ಹಿಂದೂಸ್ತಾನ್‌ ಟ್ರೈನರ್‌,ಕಿರಣ ಏರ್‌ಕ್ರಾಫ್ಟ್‌ ಇನ್ನೂ ಹಲವಾರು ಯುದ್ಧವಿಮಾನಗಳ ಮಾದರಿಗಳನ್ನು ಪ್ರದರ್ಶನ ಮಾಡಲಾಗಿದೆ.

ಶುಲ್ಕ ವಿವರಣೆ
ಹೆರಿಟೇಜ್‌ ಸೆಂಟರ್‌, ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ತೆರೆದಿರುತ್ತದೆ. ವಯಸ್ಕರಿಗೆ ತಲಾ 50 ರು.ಗಳಂತೆ ವಿದ್ಯಾರ್ಥಿಗಳಿಗೆ 30ರು.ಗಳಂತೆ ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಮೂರು ವರ್ಷದ ಕೆಳಗಿರುವ ಮಕ್ಕಳಿಗೆ ಮತ್ತು ಅಂಗವಿಕಲರಿಗೆ ಶುಲ್ಕ ರಿಯಾಯಿತಿ ಇದೆ. ಆವರಣದೊಳಗೆ ಸ್ಟಿಲ… ಕ್ಯಾಮೆರಾ ಬಳಸಲು 50 ರು., ವಿಡಿಯೋ ಮಾಡಲು 75ರು. ಪಾವತಿಸಬೇಕಾಗುತ್ತದೆ.

-ಕ. ಶೀ ಮೋಹನ್‌ ಕುಮಾರ್‌

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.