“ಸಂತೆ’ ಕಾಸು

ಕಲೆಗೆ ಇಲ್ಲಿ ಬೆಲೆ ಇದೆ...

Team Udayavani, Jan 4, 2020, 7:13 AM IST

sante

ಚಿತ್ರಸಂತೆಯು ಹೊಸ ವರುಷದ ಬೆನ್ನೇರಿಕೊಂಡು ಬರುವ ಒಂದು ಸುಗ್ಗಿ. ನಾಳೆ (ಡಿ.5) ಬೆಳಗಾದರೆ, ಕುಮಾರಕೃಪಾ ರಸ್ತೆಯ ಉದ್ದಗಲ ಚಿತ್ರಗಳದ್ದೇ ಕೂಟ ಏರ್ಪಡುತ್ತದೆ. “ನಾವು ನೋಡುವುದು ಕಲೆಯಲ್ಲ, ಇನ್ನೊಬ್ಬರನ್ನು ನೋಡುವಂತೆ ಮಾಡುವುದೇ ಕಲೆ’ ಎನ್ನುವ ಮಾತಿನಂತೆ, ಸಾವಿರಾರು ಕಲಾವಿದರು, ತಮ್ಮ ಕಲಾಕೃತಿಯಿಂದ ಆಕರ್ಷಣೆ ಹುಟ್ಟಿಸಿರುತ್ತಾರೆ. ಇದು ಸಿಕೆಪಿ ಆಯೋಜಿಸುತ್ತಿರುವ 17ನೇ ವರ್ಷದ “ಚಿತ್ರಸಂತೆ’. ಈ ಸಂತೆಯ ಹಿಂದೆ ಅರಳಿದ ಆರ್ಥಿಕ ಬದುಕಿನ ಚಿತ್ರಣವೊಂದು ಇಲ್ಲಿದೆ…

ಬೆಂಗಳೂರಿನಲ್ಲಿ ಸಂತೆಗಳೆಂದರೆ ಏನೋ ಆಕರ್ಷಣೆ. ಜನರು ಹೊಸತನ್ನು ಬಯಸಿ, ಏನಾದರೂ ಮಾಡಿ ಆ ಕಡೆಗೆ ನೋಡಿ ಬರೋಣವೆಂದು ಹೋಗಿಯೇ ಬಿಡುತ್ತಾರೆ. ಅದರಲ್ಲಿಯೂ ನಾವೀನ್ಯತೆ ಹಾಗೂ ಕಲಾಪ್ರೌಢಿಮೆಗೆ ಹೆಸರಾದ ಚಿತ್ರಕಲಾ ಪ್ರದರ್ಶನ ಮತ್ತು ಮಾರಾಟ ಸಂಭ್ರಮದ “ಚಿತ್ರಸಂತೆ’ ಎಂದರೆ ಕೇಳಬೇಕೇ? ವಾರದ ಕೊನೆ ದಿನ ಬೆಂಗಳೂರಿಗರು ತಮ್ಮ ಹಾಜರಿಯನ್ನು ಅಲ್ಲಿ ಹಾಕಿಯೇ ಬಿಡುತ್ತಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ 17ನೇ ಚಿತ್ರ ಸಂತೆಗೆ ಒಂದು ದಿನವಷ್ಟೇ ಬಾಕಿ ಉಳಿದಿದೆ. ಈ ಸಂದರ್ಭಕ್ಕಾಗಿಯೇ ಅದೆಷ್ಟೋ ಕಲಾಸಕ್ತರು ಕಾಯುತ್ತಾ ಇರುವುದು ಸುಳ್ಳಲ್ಲ.

ಟ್ಯಾಲೆಂಟ್‌ ಶೋ…: ಚಿತ್ರಕಲಾಪ್ರದರ್ಶನಗಳು ಕಲಾವಿದರಿಗೆ “ಟ್ಯಾಲೆಂಟ್‌ ಶೋ’ ಇದ್ದಂತೆ. ಅಲ್ಲಿ ಕಲಾವಿದರ ಬದುಕು ವಿಕಸನಗೊಳ್ಳುತ್ತದೆ. ನಾನಾ ದೇಶಗಳ, ರಾಜ್ಯಗಳ ಕಲಾವಿದರು ಸಂಪರ್ಕಕ್ಕೆ ಸಿಗುತ್ತಾರೆ. ಕಲಾಸಕ್ತರ, ಪೇಂಟಿಂಗ್‌ ಸಂಗ್ರಹಕಾರರ ಪರಿಚಯವಾಗುತ್ತದೆ. ತಮ್ಮ ಕಲೆಯ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುವುದಕ್ಕೆ ಕಲಾವಿದರಿಗೆ ಚಿತ್ರಕಲಾ ಪ್ರದರ್ಶನಗಳು ನೆರವಾಗುತ್ತವೆ. ಹೀಗಾಗಿ, ಬೆಂಗಳೂರಿನ ಚಿತ್ರಕಲಾ ಪರಿಷತ್ತು ಆಯೋಜಿಸುವ “ಚಿತ್ರಸಂತೆ’ಗೆ ಪ್ರಾಮುಖ್ಯತೆ ಬಹಳವಿದೆ. ಮುಂಬೈನಲ್ಲಿ ಜರುಗುವ ಇಂಡಿಯನ್‌ ಆರ್ಟ್‌ ಫೆಸ್ಟಿವಲ್‌, ದೆಹಲಿಯ ಕಲಾ ಮೇಳ… ಇಲ್ಲೆಲ್ಲಾ ಪೇಂಟಿಂಗ್‌ಗಳನ್ನು ಪ್ರದರ್ಶಿಸಲು ಕಲಾವಿದರು ಲಕ್ಷದವರೆಗೂ ಶುಲ್ಕ ತೆರಬೇಕಾಗುತ್ತದೆ. ಆದರೆ, ಇಲ್ಲಿ ಕನಿಷ್ಠ ಶುಲ್ಕ 500 ರೂ. ಮಾತ್ರವೇ ಪಡೆಯಲಾಗುತ್ತದೆ.

ಒಂದು ದಿನದ ಸಂತೆ: ಕಳೆದ 16 ವರ್ಷಗಳಿಂದ, ಜನವರಿ ತಿಂಗಳ ಮೊದಲ ಭಾನುವಾರದಂದು ಚಿತ್ರಸಂತೆ ನಡೆಸಿಕೊಂಡು ಬರಲಾಗುತ್ತಿದೆ. ಕಲಾವಿದರನ್ನು ಬೆಳೆಸುವ, ಅವರಿಗೆ ಸಂಪಾದನೆಯ ದಾರಿ ತೋರುವ ಕಾರ್ಯದಲ್ಲಿ ಅದು ಮಗ್ನವಾಗಿದೆ. ಈ ಬಾರಿ ಚಿತ್ರಸಂತೆಯಲ್ಲಿ ಪಾಲ್ಗೊಳ್ಳಲು ಸುಮಾರು 2400ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಅರ್ಹ 1300 ಅರ್ಜಿಗಳು ಪುರಸ್ಕೃತಗೊಂಡಿವೆ. ಸುಮಾರು 20 ರಾಜ್ಯಗಳ ಕಲಾವಿದರನ್ನು, ಅವರ ಕಲಾಕೃತಿಗಳನ್ನು ಈ ಚಿತ್ರಕಲಾಪ್ರದರ್ಶನದಲ್ಲಿ ಕಾಣಬಹುದಾಗಿದೆ.

ಲಕ್ಷದವರೆಗೂ ಬೆಲೆ: ಚಿತ್ರಸಂತೆಯಲ್ಲಿ 1 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗಿನ ಕಲಾಕೃತಿಗಳು ಮಾರಾಟವಾಗುತ್ತವೆ. ಸಂತೆಗಳಲ್ಲಿ ನಾವು ಯಾವ ರೀತಿ ಚೌಕಾಸಿ ಮಾಡಿ ಕೊಳ್ಳುತ್ತೇವೆಯೋ ಅದೇ ರೀತಿ “ಚಿತ್ರಸಂತೆ’ಯಲ್ಲಿಯೂ ಬೆಲೆಯ ಕುರಿತು ಖರೀದಿದಾರ ಚರ್ಚಿಸಬಹುದಾಗಿದೆ. ಕಲಾವಿದನಿಗೆ ಸರಿಯೆಂದು ತೋರಿದಲ್ಲಿ, ಆತ ಖರೀದಿದಾರ ಹೇಳಿದ ಬೆಲೆಗೇ ತನ್ನ ಕಲಾಕೃತಿಯನ್ನು ಮಾರುತ್ತಾನೆ. ಕಲಾವಿದರಿಗೆ ಸಂಪಾದನೆಗೆ ಮಾರ್ಗ ಸಿಗಬೇಕು, ಎಲ್ಲರಿಗೂ ಕೈಗೆಟುಕುವ ದರದಲ್ಲಿ ಕಲಾಕೃತಿಗಳು ಸಿಗುವಂತಾಗಬೇಕು, ಕಲಾಸಕ್ತರು ತಮ್ಮ ಮನೆಗಳಿಗೆ ಇಲ್ಲಿಂದ ಕಲಾಕೃತಿಗಳನ್ನು ಒಯ್ಯಬೇಕು ಎಂಬ ಉದ್ದೇಶ ಚಿತ್ರಸಂತೆಯದ್ದು. ಹೀಗಾಗಿ, ಮಾರಾಟಗೊಂಡ ಚಿತ್ರಗಳಿಂದ ಸಿಕೆಪಿಯು ಯಾವುದೇ ಕಮಿಷನ್‌ ಪಡೆಯುವುದಿಲ್ಲ. ಅಲ್ಲದೆ, 1300 ಕಲಾವಿದರಿಗೆ ಸಿಕೆಪಿ ಉಚಿತವಾಗಿ ಊಟ ಮತ್ತು ವಸತಿಯ ವ್ಯವಸ್ಥೆ ಕಲ್ಪಿಸುತ್ತದೆ.

ಕಲಾಸಕ್ತನಿಂದ ಬಿಲ್ಡರ್‌ವರೆಗೆ…: ಬೆಳಿಗ್ಗೆ 6ರಿಂದಲೇ, ಕ್ರೆಸೆಂಟ್‌ ರಸ್ತೆ ಮತ್ತು ಕುಮಾರಕೃಪಾ ರಸ್ತೆಯುದ್ದಕ್ಕೂ ಕಲಾವಿದರು ತಂತಮ್ಮ ಚಿತ್ರಗಳನ್ನು ಪ್ರದರ್ಶಿಸಲು ಶುರುಮಾಡಿರುತ್ತಾರೆ. ಹೀಗಾಗಿ, ಬೆಳಗ್ಗೆಯೇ ವ್ಯಾಪಾರ ಶುರುವಾಗಿರುತ್ತದೆ. ಪೇಂಟಿಂಗ್‌ಗಳನ್ನು ಖರೀದಿಸುವವರಲ್ಲಿ ಕಲಾಸಕ್ತರು ಮಾತ್ರವೇ ಇರುವುದಿಲ್ಲ. ಬಿಲ್ಡರ್‌ಗಳು, ಒಳಾಂಗಣ ವಿನ್ಯಾಸಕಾರರು (ಇಂಟೀರಿಯರ್‌ ಡಿಸೈನರ್‌ಗಳು), ಹೋಟೆಲ್‌ನವರು, ಆರ್ಟ್‌ ಗ್ಯಾಲರಿಗಳವರು ಹೆಚ್ಚಿನ ಸಂಖ್ಯೆಯಲ್ಲಿ ಪೇಂಟಿಂಗ್‌ಗಳನ್ನು ಖರೀದಿಸುತ್ತಾರೆ. ರಿಯಲ್‌ ಎಸ್ಟೇಟ್‌ ಮಂದಿ ಮತ್ತು ಇಂಟೀರಿಯರ್‌ ಡಿಸೈನರ್‌ಗಳೇಕೆ ಖರೀದಿಸುತ್ತಾರೆ ಎಂಬ ಪ್ರಶ್ನೆ ಈ ಸಂದರ್ಭದಲ್ಲಿ ಮೂಡಬಹುದು. ರೆಡಿ ಟು ಮೂವ್‌ ಫ್ಲ್ಯಾಟುಗಳಲ್ಲಿ, ಹೋಟೆಲ್‌ ರೂಮುಗಳಲ್ಲಿ ಚಿತ್ರಗಳನ್ನು ತೂಗು ಹಾಕಿ ಕೋಣೆಯ ಅಂದ ಹೆಚ್ಚಿಸಲು ಇವರು ಸೂಕ್ತ ಪೇಂಟಿಂಗ್‌ಗಳನ್ನು ಅರಸಿ ಚಿತ್ರಸಂತೆಗೆ ಬರುತ್ತಾರೆ.

ರೈತರಿಗೆ ಸಮರ್ಪಣೆ: ಪ್ರತೀ ವರ್ಷ ಚಿತ್ರಸಂತೆಯಲ್ಲಿ ಒಂದೊಂದು ವಿಷಯವನ್ನು ಆಧರಿಸಿ ಆಯೋಜಿಸಲಾಗುತ್ತದೆ. ಹೋದ ವರ್ಷ ಮಹತ್ಮಾ ಗಾಂಧೀಜಿಯವರಿಗೆ ಸಮರ್ಪಿಸಲಾಗಿತ್ತು. ಈ ವರ್ಷ ಚಿತ್ರಸಂತೆಯನ್ನು ನೇಗಿಲಯೋಗಿ ರೈತನಿಗೆ ಸಮರ್ಪಿಸಲಾಗುತ್ತಿದೆ. ರೈತರ ಸಂಕಷ್ಟಗಳು, ಸವಾಲುಗಳು ಮತ್ತವರ ಕಷ್ಟಕರ ಬದುಕು, ಒಟ್ಟಾರೆ ರೈತರ ಬದುಕಿನ ಸಂಪೂರ್ಣ ಚಿತ್ರಣವನ್ನು ಈ ಬಾರಿ ನೋಡಬಹುದು.

ಕಲಾವಿದರಿಗೆ ಭರವಸೆಯ ಕಿರಣ: ಚಿತ್ರಸಂತೆ, ಉದಯೋನ್ಮುಖ ಕಲಾವಿದರಿಗೆ ಯಾವ ರೀತಿ ಉತ್ತಮ ವೇದಿಕೆಯಾಗಬಲ್ಲುದು, ಅವರ ಭವಿಷ್ಯಕ್ಕೆ ಹೇಗೆ ಸಹಕರಿಸುತ್ತದೆ ಎನ್ನುವುದಕ್ಕೆ ಉದಾಹರಣೆ- ವಿಜಾಪುರ ಜಿಲ್ಲೆಯ ಸಿಂಧಗಿಯವರಾದ ಅಶೋಕ್‌ ನೆಲ್ಲಗಿ. ಖಾಸಗಿಶಾಲೆಯೊಂದರಲ್ಲಿ ಕಲಾಶಿಕ್ಷಕರಾಗಿದ್ದರೂ ಕಲೆ ಅವರ ವೃತ್ತಿ ಶಿಕ್ಷಣ, ಅವರ ಪ್ರವೃತ್ತಿ ಎನ್ನಬಹುದು. ಏಕೆಂದರೆ ಅವರು ಶಾಲೆಯಲ್ಲಿ ಕೆಲಸ ಮಾಡುವಷ್ಟೇ ಸಮಯವನ್ನು ಮನೆಯಲ್ಲಿ ಪೇಂಟಿಂಗ್‌ ರಚಿಸಲೂ ವ್ಯಯಿಸುತ್ತಾರೆ.

ಇಂದು, ಅವರ ಚಿತ್ರಗಳು ಬೆಂಗಳೂರು, ಮುಂಬೈ, ದೆಹಲಿ, ಚೆನ್ನೈ ಮಾತ್ರವಲ್ಲದೆ ಲಂಡನ್‌, ಅಮೆರಿಕ, ಇಂಗ್ಲೆಂಡ್‌, ದುಬೈ ಮುಂತಾದ ದೇಶಗಳಲ್ಲಿ ಪ್ರದರ್ಶನ ಕಂಡಿವೆ. ಇಂದು ಅವರ ಪೇಂಟಿಂಗ್‌ಗಳು ಲಕ್ಷ ರೂ.ಗಳಿಗೆ ಮಾರಾಟವಾಗುತ್ತಿರಬಹುದು. ಆದರೆ, ಅವರಿಗೆ ಅಂಥದ್ದೊಂದು ಸ್ಫೂರ್ತಿ ತುಂಬಿದ್ದು ಚಿತ್ರಸಂತೆ. ಚಿತ್ರಸಂತೆಯಲ್ಲಿ ಇವರ ರಚನೆಯ ಕಲಾಕೃತಿ 85,000 ರೂ.ಗಳಿಗೆ ಮಾರಾಟವಾಗಿತ್ತಂತೆ. “ಗ್ರಾಮೀಣ ಪ್ರದೇಶದ ಕಲಾವಿದರಿಗೆ, ಕಲೆಯನ್ನು ನೆಚ್ಚಿಕೊಂಡು ತಾವೂ ಬದುಕು ಕಂಡುಕೊಳ್ಳಬಹುದು, ಕಲಾವಲಯದಲ್ಲಿ ತಾವೂ ಗುರುತಿಸಿಕೊಳ್ಳಬಹುದು ಎನ್ನುವ ಭರವಸೆಯನ್ನು ಚಿತ್ರಸಂತೆ ನೀಡುತ್ತದೆ.’ ಎನ್ನುತ್ತಾರೆ ಅಶೋಕ್‌.

ದೇಶ ವಿದೇಶಗಳ ಕಲಾವಿದರು: ಚಿತ್ರ ಸಂತೆಗೆ ಸುಮಾರು 20 ರಾಜ್ಯಗಳಿಂದ ಕಲಾವಿದರು ಬರುತ್ತಾರೆ. ಅಲ್ಲದೆ ವಿದೇಶಗಳಿಂದಲೂ ಕಲಾವಿದರು ಪಾಲ್ಗೊಂಡು ಚಿತ್ರಸಂತೆಯ ಶ್ರೀಮಂತಿಕೆಯನ್ನು ಹೆಚ್ಚಿಸುತ್ತಾರೆ. ಹೊರಗಿನ ಆಚಾರ ವಿಚಾರ, ಸಂಸ್ಕೃತಿಗಳ ಚಿತ್ರದರ್ಶನ ಇಲ್ಲಿ ಆಗಲಿದೆ.

17- ನೇ ವರ್ಷದ ಚಿತ್ರಸಂತೆ
1300 - ಕಲಾವಿದರ ಆಗಮನ
18- ರಾಜ್ಯಗಳ ಕಲಾವಿದರು
3- ಕೋಟಿ ರೂ. ವಹಿವಾಟು (ಅಂದಾಜು)

ಪ್ಯಾರಿಸ್‌, ರೋಮ್‌ ನಗರಿಗಳಲ್ಲಿ ಕಲಾವಿದರು ರಸ್ತೆ ಬದಿ ನಿಂತು ತಮ್ಮ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಮಾಡುವ ಸಂಪ್ರದಾಯವಿದೆ. ಕಲೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಬೇಕೆಂಬುದೇ ಆ ವ್ಯವಸ್ಥೆಯ ಹಿಂದಿನ ಉದ್ದೇಶ. ಅದು ಮತ್ತು ಕಲಾವಿದರಿಗೂ ಒಂದೊಳ್ಳೆಯ ಭವಿಷ್ಯ ರೂಪುಗೊಳ್ಳಬೇಕು ಎಂಬ ಸದುದ್ದೇಶವೇ “ಚಿತ್ರಸಂತೆ’ಗೆ ಪ್ರೇರಣೆ.
-ಬಿ.ಎಲ್‌. ಶಂಕರ್‌, ಅಧ್ಯಕ್ಷರು, ಸಿಕೆಪಿ

* ಹರ್ಷವರ್ಧನ್‌ ಸುಳ್ಯ

ಮಾಹಿತಿ: ವಿ.ಎಸ್‌. ನಾಯಕ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.