ಮಿಸ್ಟರಿಯಲ್ಲ ಹಿಸ್ಟರಿ!: ಪೂರ್ವ ಬೆಂಗಳೂರ ಇತಿಹಾಸ ಕಾರ್ಯಗಾರ


Team Udayavani, Jun 8, 2019, 2:55 PM IST

Udayavani Kannada Newspaper

ವೈಟ್‌ಫೀಲ್ಡ್‌ ಎಂದಾಕ್ಷಣ ನಮಗೆ ಮೊದಲು ನೆನಪಾಗುವುದು ಕೆ.ಆರ್‌.ಪುರಂ ಸೇತುವೆ, ಅಲ್ಲಿನ ಟ್ರಾಫಿಕ್‌, ಗಾಜಿನ ಐಟಿ ಕಟ್ಟಡಗಳು. ಆದರೆ ಅದನ್ನು ಹೊರತಾದ ಬೇರೆಯದೇ ಕಥೆಯನ್ನು ಇತಿಹಾಸ ಹೇಳುತ್ತದೆ. ಅದನ್ನು ತಿಳಿದುಕೊಳ್ಳುವ ಕುತೂಹಲವಿದ್ದರೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ವೈಟ್‌ಫೀಲ್ಡ್‌ ಸುತ್ತಮುತ್ತ ಸಿಕ್ಕ ಶಾಸನಗಳನ್ನು ಗಮನಿಸಿದರೆ ಆ ಸ್ಥಳ 1000 ವರ್ಷಗಳಷ್ಟು ಹಳೆಯದೆಂಬುದು ತಿಳಿದುಕೊಳ್ಳಬಹುದು. ಬೆಂಗಳೂರಿನ ಶಾಸನ ಕಲ್ಲುಗಳ ಸಂರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಸಾಫ್ಟ್ವೇರ್‌ ಉದ್ಯೋಗಿ ಉದಯ್‌ಕುಮಾರ್‌ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಬೆಂಗಳೂರೆಂದರೆ ಬರಿ ಐಟಿ ರಾಜಧಾನಿಯಲ್ಲ, ಬರೀ ಕಟ್ಟಡಗಳಲ್ಲ ಎನ್ನುವುದನ್ನು ತೋರಿಸುವುದು ಅವರ ಉದ್ದೇಶ. ಅದರೊಂದಿಗೆ ಆಧುನಿಕತೆಯ ಭರಾಟೆಯಲ್ಲಿ ನಮ್ಮ ಇತಿಹಾಸ ಮರೆತುಹೋಗಬಾರದು ಎನ್ನುವ ಕಾಳಜಿ ಅವರದು.

ಕಲ್ಲು ಕತೆಯ ಹೇಳಿದೆ!
ಬೆಂಗಳೂರು ಪೂರ್ವದಲ್ಲಿರುವ ಹೂಡಿ, ದೇವಸಂದ್ರ, ಪಟ್ಟಂದೂರು, ಕಾಡುಗೋಡಿ, ಇಮ್ಮಡಿಹಳ್ಳಿ, ವರ್ತೂರು, ಗುಂಜೂರು ಪ್ರದೇಶಗಳೂ 1000 ವರ್ಷಗಳಷ್ಟು ಇತಿಹಾಸವನ್ನು ಹೊಂದಿವೆ. ಅಲ್ಲಿ ಸಿಕ್ಕ ಶಾಸನ ಕಲ್ಲುಗಳು ಈ ಮಾಹಿತಿಗೆ ಸಾಕ್ಷ್ಯ ನುಡಿದಿವೆ. ಬೆಂಗಳೂರಿನಲ್ಲಿ ಸಾವಿರಾರು ಕೆರೆಗಳಿದ್ದ ಕಾಲವನ್ನು ಕಲ್ಪಿಸಿಕೊಳ್ಳುವುದು ಇಂದು ಕಷ್ಟಕರವಾದ ಕೆಲಸ. ಆದರೆ ಅಂಥದ್ದೊಂದು ಕಾಲದಲ್ಲಿ ಕೆತ್ತಲ್ಪಟ್ಟ ಶಾಸನಕಲ್ಲುಗಳು ಇಂದಿಗೂ ನಮ್ಮ ನಡುವೆಯೇ ಅಂದಿನ ಕಥೆಯನ್ನು ಸಾರುತ್ತಿದೆ. ಆಗಿನ ಕಾಲದಲ್ಲಿ ಇಲ್ಲಿ ವಾಸವಿದ್ದ ಜನರು ಯಾವ ಧರ್ಮವನ್ನು ಪಾಲಿಸುತ್ತಿದ್ದರು, ಯಾವ ಭಾಷೆಗಳನ್ನು ಮಾತಾಡುತ್ತಿದ್ದರು, ಯಾವೆಲ್ಲಾ ದೇವಸ್ಥಾನಗಳನ್ನು ಅವರು ಕಟ್ಟಿಸಿದರು, ಅಲ್ಲಿ ನಡೆದ ಕದನಗಳು ಮುಂತಾದ ಸ್ವಾರಸ್ಯಕರ ಮಾಹಿತಿ ಈ ಕಾರ್ಯಕ್ರಮದಿಂದ ಸಿಗುತ್ತದೆ. ಈ ಶಾಸನ ಕಲ್ಲುಗಳಿದ್ದಲ್ಲಿಗೆ ಕರೆದೊಯ್ಯಲಾಗುವುದು. ಅದರ ಮಹತ್ವವನ್ನು ಸ್ಥಳದಲ್ಲಿ ತಿಳಿಸಿಕೊಡಲಾಗುವುದು.

ಇದು ಪ್ಲ್ಯಾನ್‌
ಜೂನ್‌ 9ರಂದು ಬೆಳಿಗ್ಗೆ 8.30ಕ್ಕೆ ಕಾಡುಗೋಡಿಯ ಹೋಪ್‌ ಫಾರ್ಮ್(bit.ly/Hopefarm) ಬಳಿ ಸೇರುವುದು. ಅಲ್ಲಿಂದ ಕಾಡುಗೋಡಿ ಕುರಿತಾದ 7 ಶಾಸನಕಲ್ಲುಗಳಿದ್ದಲ್ಲಿಗೆ ಭೇಟಿ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ. ಆದರೆ ಮುಂಚಿತವಾಗಿ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳತಕ್ಕದ್ದು. ಪಾಲ್ಗೊಳ್ಳುವವರು ಸ್ವಂತ ವಾಹನ ವ್ಯವಸ್ಥೆಯನ್ನು ಮಾಡಿಕೊಂಡಿರಬೇಕು.

ಸಂಪರ್ಕ: 9845204268(ಉದಯ್‌)

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.