ನನ್ನನ್ನು ಕಾ(ಪಾ)ಡುವ ಬೆಂಗಳೂರು


Team Udayavani, Apr 15, 2017, 3:59 PM IST

16.jpg

ಒಂದು ಸಲ ಒಬ್ಬ ಪಾಳೆಯಗಾರ ಎಲ್ಲಿಗೋ ಹೋಗುವಾಗ ಹಾದಿ ತಪ್ಪಿಹೋಗುತ್ತದೆ. ಹಸಿದು, ಬಾಯಾರಿ, ಬಳಲಿ ಅಲೆದಾಡುತ್ತಿ ದ್ದಾಗ ಒಂದು ಗುಡಿಸಲು ಕಾಣಿಸುತ್ತದೆ. ಅಲ್ಲಿ ಒಬ್ಬಳು ಮುಪ್ಪಾನು ಮುದುಕಿ ಒಲೆಯ ಮುಂದೆ ಕೂತಿರುತ್ತಾಳೆ. ದಣಿದು ಬಂದ ಪಾಳೆಯಗಾರನನ್ನು ಕೂರಿಸಿ ನೀರು ಕೊಡುತ್ತಾಳೆ. ಹಸಿದವನಿಗೆ ಕೊಡಲು ಮನೆಯಲ್ಲಿ ಏನೂ ಇರುವುದಿಲ್ಲ. ಕಡೆಗೆ, ಮನೆಯಲ್ಲಿದ್ದ ಬೇಯಿಸಿದ ಕಾಳುಗಳನ್ನು ಕೊಡುತ್ತಾಳೆ. ಪಾಳೆಯಗಾರನ ಹಸಿವು ಇಂಗುತ್ತದೆ. ದಣಿವಾರಿಸಿಕೊಂಡವನು ಸುಮ್ಮನೆ ಹಿಂದಿರುಗುವುದಿಲ್ಲ. ತನ್ನ ಹಸಿದ ಹೊಟ್ಟೆಗೆ ಆಹಾರ ಕೊಟ್ಟು ಕಾಪಾಡಿದ ಆ ನೆಲದಲ್ಲಿ ಒಂದು ಊರು ಕಟ್ಟಬೇಕೆಂದು ನಿಶ್ಚಯಿಸಿಕೊಳ್ಳುತ್ತಾನೆ. ಆ ಪಾಳೆಯಗಾರನ ಹೆಸರು ಕೆಂಪೇಗೌಡ! ಆ ಊರು ಬೆಂಗಳೂರು!! ಇದು ಎಲ್ಲರಿಗೂ ಗೊತ್ತು. ಹಾಗಾದರೆ ಆ ಅಜ್ಜಿಯ ಹೆಸರು? ಉಹೂಂ… ಯಾರಿಗೂ ಗೊತ್ತಿಲ್ಲ. ಅದಿರಲಿ, ಕೆಂಪೇಗೌಡ ಮತ್ತೆ ಆ ಅಜ್ಜಿಯ ಮನೆಗೆ ಹೋದನೆ? ಗೊತ್ತಿಲ್ಲ. ಆದರೆ ನನಗೆ ಯಾವಾಗಲೂ ಆ ಅಜ್ಜಿ ಬೆಂಗಳೂರಿನ ರೂಪಕವಾಗಿ ಕಾಣುತ್ತಾಳೆ. ನಾವೆಲ್ಲರೂ ಕೆಂಪೇಗೌಡನ ತುಣುಕುಗಳು. 

ನನಗೆ ನೆನಪು ಬಂದ ಮೇಲೆ ಮೊದಲ ಸಲ ನಾನು ಈ ಬೆಂಗಳೂರಿಗೆ ಕಾಲಿಟ್ಟಾಗ ಅಪ್ಪನ ಮೊಣಕಾಲುಗಳೆತ್ತರ ಇದ್ದೆ. ಆಗೆಲ್ಲಾ ನಮಗೆ ಬೆಂಗಳೂರು ಕನಸಿನ ಊರು. ಆಮೇಲೆ ಬೆಂಗಳೂರಿಗೆ ನೆಲೆಸಲು ಬಂದಾಗ ಇದು ನನ್ನ ಕರ್ಮಭೂಮಿಯೂ ಆಯಿತು. ಇಲ್ಲೇ  ಇರಲು ಬಂದ ಮೊದಲ ಕ್ಷಣದಿಂದಲೂ ಇದು ನನ್ನೂರೇ ಅನ್ನಿಸಿದೆ. ಈ ಊರಲ್ಲಿ ನಾನು ಪಡೆದ ಮೊದಲ ತಿಂಗಳ ಸಂಬಳ 900 ರೂ. ಅಷ್ಟರಲ್ಲೂ ನನ್ನನ್ನು ಪೊರೆದಿದೆ, ಈಗಲೂ ಪೊರೆಯುತ್ತಿದೆ. ಅಲ್ಲಿರುವುದು ನಮ್ಮನೆ, ಇಲ್ಲಿ ಬಂದೆ ಸುಮ್ಮನೆ ಎಂದು ನನಗೆ ಎಂದಿಗೂ ಅನ್ನಿಸಿಲ್ಲ. ಬೆಂಗಳೂರನ್ನು ನಾನೂ ಸಂಪೂರ್ಣವಾಗಿ ಒಳಗೆ ಬಿಟ್ಟುಕೊಂಡಿದ್ದೇನೆ ಹಾಗೆಯೇ ಬೆಂಗಳೂರು ಸಹ ನನ್ನನ್ನು ಒಪ್ಪಿಕೊಂಡಿದೆ. 

ಮೆಜೆಸ್ಟಿಕ್ಕು, ಅಲಂಕಾರ್‌ ಪ್ಲಾಜಾ, ಸ್ಟೇಟ್ಸು, ತ್ರಿವೇಣಿ… ಟ್ರೇನು ಹತ್ತಿ ಬಂದಿಳಿದರೆ ಬೆಂಗಳೂರು ಮಾಯಾಬಜಾರ್‌ ಸಿನಿಮಾದ ಮತ್ತೂಂದು ಮಜಲು. ಯಾರೋ ತೆರೆದಿಟ್ಟ ಪೆಟ್ಟಿಗೆಯಿಂದ ಹೊರಬಿದ್ದ ಕನಸೊಂದು ರಕ್ತಬೀಜಾಸುರನಾಗಿ ಹುಟ್ಟಿ ಭಸ್ಮಾಸುರನಾದಂತೆ ಮೊದಲೆÇÉಾ ಹೆದರಿಕೆ, ಸಂಜೆ ಟ್ರೇನಿನ ಕನವರಿಕೆ. ಟ್ರೇನಿನಿಂದ ಇಳಿದೊಮ್ಮೆ ಇÇÉೇ ನಿಂತೆ. ಅರೆ, ಬೆಂಗಳೂರಿನ ಬಾನಿನಲ್ಲೂ ಇದೆ ಕಾಮನಬಿಲ್ಲು, ಎಂ.ಜಿ ರೋಡಿನ ಕಡಲೆಬೀಜದ ಗಾಡಿಯವನೂ ವಾರಕ್ಕೊಮ್ಮೆ ಸಿಕ್ಕಾಗ ನಕ್ಕು, ನಾ ಹೇಳುವ ಮೊದಲೇ ಪೊಟ್ಟಣ ಕೈಗಿಡುತ್ತಾನೆ ಗಂಟೆಗಟ್ಟಲೆ ಕೂತು ಚಾ ಹೀರುತ್ತಾ ಸ್ನೇಹದ ಓನಾಮ ಕಲಿಸುವ ಕಾಫೀ ಶಾಪು, ಬ್ಲಾಸಮ್ಮು, ಕೋಶೀಸು ಬೆಂಗಳೂರೆಂದರೆ ಮಾಲ…, ಮೆಟ್ರೋ, ಟ್ರಾಫಿಕ್ಕು ಅಷ್ಟೇ ಅಲ್ಲ ಕಣ್ರೀ, ಇಲ್ಲಿ ಬಂದವರಿಗೆ ಬೆಂಗಳೂರು ತೆರೆದಷ್ಟೂ ಬಾಗಿಲು!  

ಇಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚು ಎನ್ನುವಾಗ, ಬೆಂಗಳೂರಿಗೆ  Incoming call  ಗಳೂ ಹೆಚ್ಚು  Incoming  ಕಾಲುಗಳೂ ಹೆಚ್ಚು ಎನ್ನುವುದನ್ನು ಮರೆಯುತ್ತೇವೆ, ಇಲ್ಲಿ ಯಾರು ಯಾರಿಗೂ ಇಲ್ಲ ಅನ್ನುವಾಗ ನಾವೂ ಸಹ ಪಕ್ಕದ ಮನೆಯವರನ್ನು ಮಾತನಾಡಿಸಿ ದಿನಗಳೇ ಉರುಳಿತು ಎನ್ನುವುದನ್ನು ಮರೆಯುತ್ತೇವೆ. ಇಲ್ಲಿ ಎಲ್ಲೆಲ್ಲೂ ಜನ, ಆದರೆ ನಾವು ಸಹ ಆ ಜನವೇ ಎನ್ನುವುದನ್ನು ಮರೆಯುತ್ತೇವೆ. ನಮ್ಮ ಮನಸ್ಸಿನಲ್ಲಿ ನೋವಿಲ್ಲದ, ಸಾವಿಲ್ಲದ ಶಾಂಗ್ರಿಲಾವಾಗಿ ಉಳಿದ ನಮ್ಮ ಬಾಲ್ಯದ ಊರನ್ನು ಮೊದಲ ಪ್ರೇಮದಂತೆ ಎದೆಯೊಳಗಿಟ್ಟುಕೊಂಡು, ಬೆಂಗಳೂರಿನ ಜೊತೆ ಮನಸ್ಸಿಲ್ಲದ ಮನಸ್ಸಿನಿಂದ ಸಂಸಾರ ಮಾಡುತ್ತಾ ಬೆಂಗಳೂರು ನಮ್ಮದಾಗಲಿಲ್ಲ ಎಂದು ಕೊರಗುತ್ತೇವೆ. ಬೆಂಗಳೂರು ಮಾತ್ರ ಮಾತೇ ಆಡದೆ ನಮ್ಮ ತಟ್ಟೆಗೆ ಬೆಂದ ಕಾಳುಗಳನ್ನು ಬಡಿಸುತ್ತಿರುತ್ತದೆ. ಬೆಂಗಳೂರು ಒಂದು ಘಟನೆಯಾಗಿ, ಒಂದು ವ್ಯಕ್ತಿಯಾಗಿ, ಒಂದು ಸಂದರ್ಭವಾಗಿ ಅಲ್ಲಾ ಇಡಿಯಾಗಿ ನನ್ನನ್ನು ಕಾಡುತ್ತದೆ, ಕಾಪಾಡುತ್ತದೆ. 

– ಸಂಧ್ಯಾರಾಣಿ  

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.