ಬೇಸಿಗೆಯನು ಕೂಲ್‌ ಆಗಿಸುವ ಸಮರ್ಪಣ


Team Udayavani, Apr 15, 2017, 3:38 PM IST

14.jpg

ಬೆಂಗ್ಳೂರಿನ ಮಾಲ್‌ಗ‌ಳಲ್ಲಿ ಯಾವುದೇ ವಸ್ತುವಿಗೆ ಕೈ ಹಾಕಿ, ಅದು ಪ್ಲಾಸ್ಟಿಕ್‌ ಆಗಿರುತ್ತೆ! ದಿನಬಳಕೆಯ ಆ ಪ್ಲಾಸ್ಟಿಕ್‌ ವಸ್ತುಗಳೆಲ್ಲ ಬರೋದು ಚೀನಾದಿಂದ. ಉದ್ಯಾನ ನಗರಿಯ ಪರಿಸರ ಮಾಲಿನ್ಯದಲ್ಲಿ ಇವುಗಳ ಪಾತ್ರ ದೊಡ್ಡದು. ಇದಕ್ಕೀಗ ಬ್ರೇಕ್‌ ಹಾಕಲು ಅಲ್ಲಲ್ಲಿ ದೇಸಿ ಮಾದರಿಗಳು ಸಿದ್ಧಗೊಳ್ಳುತ್ತಿವೆ. ಮಣ್ಣಿನಿಂದ ನಿರ್ಮಿತ ಬಾಟಲಿಯೂ ನಿಮ್ಮ ಕೈಸೇರುತ್ತಿದೆ!

ಬೆಂಗ್ಳೂರು ಅಂದ್ರೆ ಸದಾ ಕೂಲ್‌ ಅನ್ನೋದು ಹೊರಗಿನವರ ವ್ಯಾಖ್ಯಾನ. ಈ ಕೂಲ್‌ನೆಸ್‌ ಕಾಪಾಡುವ ರಾಜಧಾನಿಯ ಪರಿಸರ ಸೈನಿಕರಲ್ಲಿ ಒಬ್ಬರು ಶಿವಕುಮಾರ್‌ ಹೊಸಮನಿ. “ಸಮರ್ಪಣ’ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಹೊಸಮನಿ, ಪ್ರತಿ ಬೇಸಿಗೆಯಲ್ಲಿ ಏನನ್ನಾದರೂ ಹೊಸ ಮಾದರಿಯನ್ನು ಪರಿಚಯಿಸುತ್ತಾರೆ. ಒಮ್ಮೆ ಮುಟ್ಟಿದರೆ, ಮುತ್ತಿಕ್ಕೋಣ ಎನ್ನುವ ಸೌಂದರ್ಯದಲ್ಲಿರುವ ಮಣ್ಣಿನ ಬಾಟಲಿಗಳನ್ನು ಅವರು ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಇದು ದೇಸಿ ಕೈಚಳಕ

500 ಮಿಲಿ ಲೀಟರ್‌, 1 ಲೀಟರ್‌, ಒಂದೂವರೆ ಲೀಟರ್‌ನ ಬಾಟಲಿಗಳು ಸದ್ಯ ಮಾರುಕಟ್ಟೆಯಲ್ಲಿವೆ. ಜನರ ಬೇಡಿಕೆ, ಅಭಿರುಚಿಗೆ ತಕ್ಕಂತೆ ಬಾಟಲಿಗಳನ್ನು ನಿರ್ಮಿಸಲಾಗಿದ್ದು, ಕೆಲವು ಬಿಯರ್‌ ಬಾಟಲಿಯ ಶೈಲಿಯಲ್ಲಿಯೂ ವಿನ್ಯಾಸಗೊಂಡಿವೆ. ಕೆಲವು ಸಾಂಪ್ರದಾಯಿಕ ಲುಕ್ಕಿನಲ್ಲಿ ನಿಮ್ಮನ್ನು ಸೆಳೆಯುತ್ತವೆ. ಇದರ ಮೇಲೆ ಮಾಗಡಿಯ ಕಲಾವಿದನೊಬ್ಬನ ಚಿತ್ತಾರಗಳೂ ಆಕರ್ಷಿಸುತ್ತವೆ. ಈ ಬಾಟಲಿಗಳಲ್ಲಿ ನೀರು ಹಾಕಿ ಕುಡಿದರೆ, ಫ್ರಿಡಿjನಲ್ಲಿನ ತಣ್ಣನೆ ಪಾನೀಯ ಕುಡಿದಷ್ಟು ಕೂಲ್‌ ಆದ ಅನುಭವ ದಕ್ಕುತ್ತದೆ. ಸಾಕಷ್ಟು ಗಟ್ಟಿಮುಟ್ಟಾಗಿಯೇ ಇರುತ್ತವೆ. ಒಂದು ವೇಳೆ ಇವು ಬಿದ್ದು ಒಡೆದು ಹೋದರೂ, ಮಣ್ಣಿನಲ್ಲಿ ಮಣ್ಣಾಗಿ ಹೋಗುತ್ತವೆ. ಪ್ಲಾಸ್ಟಿಕ್‌ನಂತೆ ಮಣ್ಣಿನಲ್ಲಿ ಕರಗದೆ, ಪರಿಸರಕ್ಕೆ ಮಾರಕ ಆಗುವುದಿಲ್ಲ ಎನ್ನುತ್ತಾರೆ ಶಿವಕುಮಾರ್‌.

ಪಕ್ಷಿಗಳಿಗೆ ಗುಟುಕು ನೀರು!
ಇದು “ಸಮರ್ಪಣ’ ಸಂಸ್ಥೆಯ ಇನ್ನೊಂದು ಅಭಿಯಾನ. 5 ವರ್ಷದಿಂದ ಈ ಯೋಜನೆ ಹಮ್ಮಿಕೊಂಡು ಬಂದಿದ್ದು, ಬೇಸಿಗೆಯಲ್ಲಿ ಕುಡಿಯಲು ನೀರಿಲ್ಲದೆ ಪರಿತಪಿಸುವ ಪಕ್ಷಿಗಳಿಗೆ ಈ ಸಂಸ್ಥೆ ನೆರವಾಗುತ್ತದೆ. ಕರಟ, ತ್ರಿಕೋನಾಕೃತಿ, ಹರಿವಾಣ, ಹೂಕುಂಡ, ಬೋಗುಣಿಯ ಶೈಲಿಯಲ್ಲಿ ನೀರಿನ ಆಸರೆಗಳನ್ನು ನಿರ್ಮಿಸಿ ಉಚಿತವಾಗಿಯೇ ಸಾರ್ವಜನಿಕರಿಗೆ ನೀಡುತ್ತಾರೆ ಶಿವಕುಮಾರ್‌. ಈ ವರ್ಷ ಸುಮಾರು 50 ಸಾವಿರ ಮಂದಿಗೆ ಗುಟುಕು ನೀರಿನ ಆಸರೆ ಮಾದರಿಗಳನ್ನು ವಿತರಿಸಲಾಗಿದೆ.

ಇವಲ್ಲದೆ ಗಣಪತಿ ಹಬ್ಬದ ವೇಳೆ ಜೇಡಿಮಣ್ಣಿನ ಗಣೇಶ ಮೂರ್ತಿಗಳ ನಿರ್ಮಾಣದಲ್ಲೂ ಸಂಸ್ಥೆ ಭಾಗಿಯಾಗಿ, ಪರಿಸರ ಜಾಗೃತಿ ಮೂಡಿಸಿತ್ತು. ಗಣಪನನ್ನು ಯಾರೂ ಸಾರ್ವಜನಿಕ ಕೆರೆಗಳಿಗೆ ಬಿಡಬಾರದೆಂದು, ಆ ಮೂರ್ತಿಯೊಳಗೆ ಬೆಳ್ಳಿ ನಾಣ್ಯಗಳನ್ನು ಹಾಕಿ, ಮನೆಯ ನೀರಿನ ಮೂಲಗಳಲ್ಲಿಯೇ ವಿಸರ್ಜಿಸಲು ಪ್ರೇರೇಪಿಸಿದ್ದರು.

ಮಣ್ಣಿನ ಬಾಟಲಿ ಬೇಕಿದ್ದರೆ…
ಬೆಂಗಳೂರಿಗೆ ಈ ಮಣ್ಣಿನ ಬಾಟಲಿಗಳನ್ನು ಪೂರೈಸುವುದು ಬೆಳಗಾವಿ ಜಿಲ್ಲೆಯ ಕುಂಬಾರ ಸಮುದಾಯ. ಗೋಕಾಕ್‌ ಸಮೀಪದ ಸಾವಳಿಗಿಯ ಶಿವಬಸಪ್ಪ ಅವರ ಬಳಿ ಶಿವಕುಮಾರ್‌ ಹೊಸಮನಿ ಈ ಮಣ್ಣಿನ ಮಾದರಿಗಳನ್ನು ಮಾಡಿಸುತ್ತಾರೆ. ಅಲ್ಲಿನ 30-35 ಕುಟುಂಬಗಳಿಗೆ ಇದು ಒಂದು ಉದ್ಯೋಗವೇ ಆಗಿದೆ. ಬೆಂಗಳೂರು ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ಮಾದರಿಗಳನ್ನು ಅಲ್ಲಿ ಸಿದ್ಧಪಡಿಸಲಾಗುತ್ತದೆ. ವಿನ್ಯಾಸಕ್ಕೆ ಅಗತ್ಯ ಸಲಹೆಗಳನ್ನು ಶಿವಕುಮಾರ್‌ ನೀಡುತ್ತಾರೆ. ನಿಮಗೂ ಮಣ್ಣಿನ ಬಾಟಲಿ ಮಾದರಿ ಬೇಕಿದ್ದರೆ ಮೊ. 9980008074, 7795255676 ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.