ಬಸವನಗುಡಿಯಲ್ಲಿ ಇಂದಿನಿಂದ ಪುಸ್ತಕ ಪರಿಷೆ


Team Udayavani, Mar 4, 2017, 4:56 PM IST

654.jpg

ಬೆಂಗಳೂರಿನ ಬಸವನಗುಡಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳ ಗಣಿ. ಇಲ್ಲಿ ನಡೆಯುವ ಪ್ರಸಿದ್ಧ ಕಡಲೆಕಾಯಿ ಪರಿಷೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ಹಾಗೆಯೇ ಬಸವನಗುಡಿಯಲ್ಲಿ ಇನ್ನೊಂದು ಪರಿಷೆ ನಡೆಯುತ್ತದೆ. ಅದುವೇ ಪುಸ್ತಕ ಪರಿಷೆ. “ತಮಗೊಂದು ಪುಸ್ತಕ ಉಚಿತವಾಗಿ ಹಾಗೂ ತಮ್ಮಿಂದಷ್ಟು ಪುಸ್ತಕ ಪರಿಷೆಗಾಗಿ’ ಎಂಬ ನೂತನ ಪರಿಕಲ್ಪನೆಯೊಂದಿಗೆ ಸೃಷ್ಟಿ ವೆಂಚರ್ ಸಂಸ್ಥೆ ಈ ಪರಿಷೆಯನ್ನು ಎಂಟು ವರ್ಷದ ಹಿಂದೆ ಪ್ರಾರಂಭಿಸಿತು. ಈಗ ಪರಿಷೆಗೆ ಒಂಬತ್ತರ ಹರೆಯ.  

ಮೊದಲ ವರ್ಷ ಐದು ಸಾವಿರ ಪುಸ್ತಕದಿಂದ ಆರಂಭವಾದ ಈ ಪರಿಷೆ ಎರಡನೇ ವರ್ಷದಲ್ಲಿ ಏಳು ಸಾವಿರ, ನಂತರ ಹನ್ನೆರಡು ಸಾವಿರ ಹೀಗೆ ಏರುತ್ತಾ ಇಂದು ಒಂದು ಕೋಟಿ ಪುಸ್ತಕಗಳ ಪರಿಷೆ ನಡೆಸುವ ಯೋಜನೆ ಹಾಕಿಕೊಂಡಿದೆ. 

ಮಾರ್ಚ್‌ ತಿಂಗಳ 4, 5 ಮತ್ತು 6 ನೇ ದಿನಾಂಕದಂದು ಬಸವನಗುಡಿ ನ್ಯಾಷನಲ್‌ ಕಾಲೇಜ್‌ ಆಟದ ಮೈದಾನದಲ್ಲಿ ಕೋಟಿ ಪುಸ್ತಕಗಳ ಅದ್ಭುತ ಪರಿಷೆಗೆ ಪುಸ್ತಕಪ್ರಿಯರು ಸಾಕ್ಷಿಯಾಗಲಿದ್ದಾರೆ. ಕಳೆದ ಎಂಟು ವರ್ಷಗಳಿಂದ ನಿಮ್ಮ ಮನೆಯಲ್ಲಿರುವ ಪುಸ್ತಕಗಳನ್ನು ಕೊಂಡು ಹೋಗಿ ಅಲ್ಲಿ ಕೊಟ್ಟರೆ ಅಲ್ಲಿ ನಿಮಗೊಂದು ಪುಸ್ತಕವನ್ನು ಉಚಿತವಾಗಿ ನೀಡುತ್ತಿದ್ದರು. ಆದರೆ ಈ ವರ್ಷ ಪರಿಷೆಗೆ ಹೋದವರಿಗೆಲ್ಲಾ ಒಂದು ಪುಸ್ತಕ ಉಚಿತವಾಗಿ ನೀಡುವ ಯೋಜನೆಯನ್ನು ಸೃಷ್ಟಿ ವೆಂಚರ್ ಹಮ್ಮಿಕೊಂಡಿದೆ. ಇದೊಂದು ಅರಿವಿನ ಪ್ರದರ್ಶನ. ಪುಸ್ತಕಗಳಿಂದ ಪುಸ್ತಕಗಳಿಗಾಗಿ ಪುಸ್ತಕಗಳಿಗೋಸ್ಕರ ಎಂಬಂತೆ ಈ ಪರಿಷೆ ನಡೆಯುತ್ತದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸಲು ಹಾಗೂ ವಿದ್ಯಾರ್ಥಿಗಳಲ್ಲಿ ಪುಸ್ತಕದ ಬಗ್ಗೆ ಜಾಗೃತಿ ಮೂಡಿಸಲು ಇಂಥ ಪರಿಷೆಗಳ ಅಗತ್ಯದೆ ಎಂದು ಸೃಷ್ಟಿ ವೆಂಚರ್ ಸಂಚಾಲಕ ಲೋಕೇಶ್‌ ಹೇಳುತ್ತಾರೆ. 

ಪರಿಷೆಯ ಮೂರು ದಿನವೂ ಬೆಳಗ್ಗೆ 9 ರಿಂದ ರಾತ್ರಿ 9 ರವೆರಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯುತ್ತವೆ. ಪುಸ್ತಕಪ್ರಿಯರು ಕಣ್ಣು ಕಿವಿಗಳಿಗೆ ಹಬ್ಬ ಮಾಡಿಕೊಂಡು ಮನಸ್ಸಿನ ತುಂಬಾ ಸಂಭ್ರಮವನ್ನು ತುಂಬಿಕೊಂಡು ವಾಪಸಾಗಬಹುದು. ಈ ಬಾರಿಯ ಪರಿಷೆಯಲ್ಲಿ ಮತ್ತೂ ಒಂದು ವಿಶೇಷವಿದೆ. ಪರಿಷೆಯ ಮೂರು ದಿನವೂ ಭಾಗವಹಿಸುವ ವಿದ್ಯಾರ್ಥಿಗಳಿಗೆ “ಪುಸ್ತಕ ಬಂಧು ಉತ್ತೇಜನ’ ಎಂಬ ಹೆಸರಿನಲ್ಲಿ ಬಹುಮಾನವೂ ಉಂಟು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಶಾಲಾ ಕಾಲೇಜಿನ ಹೆಸರನ್ನು ಅಲ್ಲಿನ ರಿಜಿಸ್ಟರ್‌ನಲ್ಲಿ ನಮೂದಿಸಬೇಕು. ಸ್ಪರ್ಧೆಯ ಕೊನೆಯ ದಿನದ ಸಂಜೆ ಆ ಹೆಸರುಗಳನ್ನು ಚೀಟಿಗಳಲ್ಲಿ ಬರೆದು ಲಕ್ಕಿ ಡ್ರಾ ನಡೆಸಲಾಗುತ್ತದೆ. ಲಕ್ಕಿ ಡ್ರಾನಲ್ಲಿ ಹತ್ತು ಜನರನ್ನು ಅಂದರೆ ಐದು ಜನ ಶಾಲಾ ವಿದ್ಯಾರ್ಥಿಗಳು ಮತ್ತು ಐದು ಜನ ಕಾಲೇಜು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತಲಾ ಐದು ಸಾವಿರ ನಗದು ಬಹುಮಾನ ಮತ್ತು ಸರ್ಟಿಫಿಕೆಟ್‌ ನೀಡಲಾಗುತ್ತದೆ. ಇನ್ನೇಕೆ ತಡ? ಬನ್ನಿ ಪುಸ್ತಕ ಪರಿಷೆಗೆ ಹೋಗೋಣ…
– ವೀಣಾ ಚಿಂತಾಮಣಿ

ಸಂಪ್ರದಾಯದ ಕುರುಹು
ಸಾಮಾಜಿಕ ಜಾಲತಾಣಗಳು ಮತ್ತು ಟಿವಿ ಚಾನೆಲ್‌ಗ‌ಳ ಭರಾಟೆಯ ನಡುವೆ ಪುಸ್ತಕ ಓದುವ ಅಭಿರುಚಿಯೇ ಕಡಿಮೆಯಾಗುತ್ತಿದೆ ಎನ್ನುವ ಅಭಿಪ್ರಾಯವಿದೆ. ಅದೇನೇ ಇರಲಿ, ಈ ಸಂದರ್ಭದಲ್ಲಿ ಸೃಷ್ಟಿ ವೆಂಚರ್ ಸಂಸ್ಥೆ ಜನರಲ್ಲಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸಲು ಮುಂದಾಗಿದೆ. ಪುಸ್ತಕ ಓದುವುದರಿಂದ ಬುದ್ಧಿ ವಿಶಾಲವಾಗುವುದರ ಜೊತೆಗೆ ಈ ಹವ್ಯಾಸ ನಮ್ಮ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ. ಪುಸ್ತಕಗಳು ನಮ್ಮ ಸಂಸ್ಕೃತಿ ಸಂಪ್ರದಾಯದ ಕುರುಹು. ಪುಸ್ತಕಗಳನ್ನು ಉಳಿಸಿ ಬೆಳೆಸಿ ಓದುವ ಅಭಿರುಚಿಯನ್ನು ಹೆಚ್ಚಿಸಿಕೊಳುÉವುದು ನಮ್ಮ ಕರ್ತವ್ಯ ಕೂಡಾ. ಈ ನಿಟ್ಟಿನಲ್ಲಿ ಪುಸ್ತಕ ಪರಿಷೆ ಪುಸ್ತಕಪ್ರಿಯರಿಗೆ ನಿಜವಾದ ಪರಿಷೆಯೇ ಆಗಬಹುದು. 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.