ಚತುರ್ಕನ್ಯೆಯರ ನೃತ್ಯನಮನ


Team Udayavani, Mar 14, 2020, 6:02 AM IST

chatrkanye

ಕರ್ನಾಟಕ ಶಾಸ್ತ್ರೀಯ ಸಂಗೀತಲೋಕಕ್ಕೆ ಮಹಾನ್‌ ಕೊಡುಗೆ ನೀಡಿರುವ ಸಂಗೀತ ತ್ರಿಮೂರ್ತಿಗಳಾದ ಶ್ಯಾಮಾಶಾಸ್ತ್ರಿ, ತ್ಯಾಗರಾಜರು ಮತ್ತು ಮುತ್ತುಸ್ವಾಮಿ ದೀಕ್ಷಿತರ ಹೃದಯಸ್ಪರ್ಶಿ ರಚನೆಗಳಿಗೆ ಮೂರ್ತರೂಪ ನೀಡುವ ಸಾರ್ಥಕ ಪ್ರಯೋಗವೊಂದು ಇತ್ತೀಚೆಗೆ ಎಡಿಎ ರಂಗಮಂದಿರದಲ್ಲಿ ನಡೆಯಿತು. ನಟನಂ ಇನ್‌ಸ್ಟಿಟ್ಯೂಟ್‌ ಆಫ್ ಡಾನ್ಸ್‌ನ ಸಂಸ್ಥೆಯ ನಿರ್ದೇಶಕಿ, ನಾಟ್ಯಗುರು ಡಾ. ರಕ್ಷಾ ಕಾರ್ತಿಕ್‌ “ಸಂಗೀತ ತ್ರಿವಳಿ’ಗಳ ಕೃತಿಗಳನ್ನು ನೃತ್ಯಕ್ಕೆ ಅಳವಡಿಸಿ, ಯಶಸ್ವಿ ಪ್ರದರ್ಶನ ನೀಡಿ ಜನಮೆಚ್ಚುಗೆ ಗಳಿಸಿದರು.

ಡಾ. ರಕ್ಷಾ ಶಿಷ್ಯೆಯರಾದ ಅನಘಾ ಲಕ್ಷ್ಮೀ ಸಂಪತ್‌ಕುಮಾರ್‌, ದಿವ್ಯಾ ವಿಜಯಲಕ್ಷ್ಮೀ ಧರ್ಮರಾಜನ್‌, ಸಂಪದಾ ಹೊಸೂರ್‌ ಮತ್ತು ಸ್ಮತಿ ಶ್ರೀಧರ್‌ ಭಾವಪೂರ್ಣವಾಗಿ ನರ್ತಿಸಿ ಭಕ್ತಿಯ ವಾತಾವರಣ ರೂಪಿಸಿದರು. ಮೊದಲಿಗೆ ಸಂಪದಾ, ದೀಕ್ಷಿತರ ಸುಮೇರುಕೃತಿ “ಶ್ರೀ ಮಹಾಗಣಪತಿ’ ಯನ್ನು ತಮ್ಮ ಅಂಗಶುದ್ಧ ಅಂಗಿಕಾಭಿನಯದಿಂದ ವಿನಾಯಕನ ವಿವಿಧ ಭಂಗಿಗಳನ್ನು ಸುಂದರವಾಗಿ ಚಿತ್ರಿಸಿದರು.

ದಿವ್ಯಾ, ತ್ಯಾಗರಾಜರ ಕೃತಿಯ ಮೂಲಕ “ಮರುಗೇಲರಾ, ಓ ರಾಘವಾ’ ಎಂದು ಧೀಮಂತ ನಿಲುವಿನ ಮರ್ಯಾದಾ ಪುರುಷೋತ್ತಮನ ದಿವ್ಯ ವರ್ಣನೆ- ಮಹಿಮೆಗಳನ್ನು ಅಚ್ಚುಕಟ್ಟಾಗಿ ನಿರೂಪಿಸಿದಳು. ಅನಘಾ ಲಕ್ಷ್ಮೀ, “ನಾದ ತನುಮನಿಷಂ’ ಎಂದು ತನ್ನ ಅನುಪಮ ಕಲಾನೈಪುಣ್ಯದ ಮೂಲಕ ಪರಮೇಶ್ವರನ ಭಕ್ತ ಪರಾಧೀನತೆಯನ್ನು ರಾವಣನ ಭಕ್ತಿಯ ಪರಾಕಾಷ್ಠೆಯನ್ನು ಸಂಚಾರಿ ಕಥಾನಕದಲ್ಲಿ ಎರಕ ಹೊಯ್ದಳು. ಡಾ. ರಕ್ಷಾ ಅವರ ಶಕ್ತಿಶಾಲಿ ನಟುವಾಂಗ, ಕಲಾವಿದೆಯರ ಅನುಪಮ ನರ್ತನಕ್ಕೆ ಸ್ಫೂರ್ತಿ ನೀಡಿತು. ಮುಂದೆ, ಚತುರ್ಕನ್ಯೆಯರ ಸುಮನೋಹರ

“ಶ್ರೀವಿಶ್ವನಾಥಂಭಜೆ’, “ಕಂಜದಳಾಯತಾಕ್ಷಿ’, “ಸಾಮಜವರಗಮನ’ ಮತ್ತು “ಎಂದರೋ ಮಹಾನುಭಾವಲು’ ಹೃದಯ ತುಂಬಿತು. ಬಾಲಸುಬ್ರಮಣ್ಯ ಶರ್ಮರ ಸುಶ್ರಾವ್ಯ ಗಾಯನ, ಜಯರಾಂ ವೇಣುನಾದ, ಶಂಕರರಾಮನ್‌ ವೀಣೆ, ಶ್ರೀಹರಿ ರಂಗಸ್ವಾಮಿ ಮೃದಂಗವಾದನ, ಕಾರ್ತೀಕ್‌ ದಾತಾರ್‌ರ ರಿದಂಪ್ಯಾಡ್‌, ನೃತ್ಯ ಪ್ರಸ್ತುತಿಗೆ ಜೀವ ತುಂಬಿತು.

* ವೈ.ಕೆ.ಸಂಧ್ಯಾ ಶರ್ಮ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.