ರಂಗವಿಮರ್ಶೆ: ಅಲ್ಟಿಮೇಟ್‌ ಕುರುಕ್ಷೇತ್ರ


Team Udayavani, Jan 26, 2019, 2:25 AM IST

8.jpg

ಮಹಾಭಾರತವೆಂಬುದು ಆಕರವಿದ್ದಂತೆ; ಇದರಲ್ಲಿ ಮನುಷ್ಯನ ಪ್ರತಿಯೊಂದು ನಡಾವಳಿ ಅಡಕವಾಗಿದೆ. ಇಲ್ಲಿ ಅಡಕವಾಗಿಲ್ಲದೆ ಇರುವುದು ಮನುಕುಲದಲ್ಲಿ ಇಲ್ಲವಂತೆ ಎಂದು ವ್ಯಾಸರು ಹೇಳಿರುವುದನ್ನು ಅನೇಕರು ಉದಾಹರಿಸುತ್ತ ಬಂದಿದ್ದಾರೆ. ಹಾಗಾಗಿಯೇ ಇದು ಅಭಿಜಾತ ಕಾವ್ಯ. ಅಭಿಜಾತ ಆಗಿರುವುದರಿಂದಲೇ ಇದು ಎಲ್ಲ ಬಗೆಯ ವಿಶ್ಲೇಷಣೆಗಳಿಗೂ ತೆರೆದುಕೊಳ್ಳುತ್ತಿರುತ್ತದೆ. ತಾತ್ವಿಕರು ಇದನ್ನು ತತ್ವಚಿಂತನೆಗೆ ಹಚ್ಚುತ್ತಾರೆ. ಪ್ರತಿ ಪಾತ್ರದ ಒಳತೋಟಿಯನ್ನು ಕೆಲವು ಸೃಜನಶೀಲ ಬರಹಗಾರರು ತಮ್ಮ ನೆಲೆಗಳಲ್ಲಿ ವಿಶ್ಲೇಷಿಸಿದ್ದಾರೆ. ಅದನ್ನು ಕಾವ್ಯವಾಗಿಸಿದ್ದಾರೆ. ಸಾಹಿತ್ಯದ ಬೇರೆ ಬೇರೆ ಪ್ರಕಾರಗಳಲ್ಲಿ ಬಳಕೆ ಮಾಡಿಕೊಂಡಿದ್ದಾರೆ. 

ಒಟ್ಟಿನಲ್ಲಿ ಇದು ನಮ್ಮ ಅಧ್ಯಯನದ ಕ್ರಮ ಹಾಗೂ ನಮ್ಮ ಕಾಣೆRಯನುಸಾರ ತೆರೆದುಕೊಳ್ಳುವ ಕಾವ್ಯ. ಗಂಭೀರವಾದ ನಿಕಷಕ್ಕೆ ಒಡ್ಡಿದರೆ ಅದು ಗಂಭೀರ ಸ್ವರೂಪ ತಾಳುತ್ತದೆ. ಇಲ್ಲ, ಇದನ್ನು ಹಾಸ್ಯದಂತೆ ಪರಿಭಾವಿಸಿ ಒಂದು ನಾಟಕ ಕಟ್ಟಿದರೆ ಅದು ಹಾಸ್ಯಕ್ಕೂ ಒಗ್ಗಿಬರುತ್ತದೆ. ಆದರೆ, ಇದರಲ್ಲೂ ಬಗೆಗಳಿವೆ. ಮಹಾಭಾರತದ ಒಂದು ಪ್ರಸಂಗವನ್ನು ಹಳ್ಳಿಯಲ್ಲಿ ಕಲಿಯುವ ನಾಟಕದ ಪ್ರಸಂಗಕ್ಕೆ ಹಾಸ್ಯದ ಆವರಣ ಕಲ್ಪಿಸಿದರೆ ಅದು ಹಾಸ್ಯವಾಗುತ್ತದೆ. “ಶ್ರೀಕೃಷ್ಣ ಸಂಧಾನ’ ಇದಕ್ಕೊಂದು ಉದಾಹರಣೆ. 

ಆದರೆ, ಈಚೆಗೆ ರಂಗಶಂಕರದಲ್ಲಿ “ಆ್ಯಕ್ಟರ್ ಎನ್‌ಸೆಂಬಲ್‌ ಇಂಡಿಯಾ ಫಾರಂ’ನವರು ಮಹಾಭಾರತದಲ್ಲಿನ ಒಂದು ನಿರ್ದಿಷ್ಟ ಘಟ್ಟವನ್ನು ನಾಟಕವಾಗಿಸಿದರು. ಪ್ರಯೋಗ ಇಂಗ್ಲಿಷ್‌ನಲ್ಲಿತ್ತು. ಇಲ್ಲಿ ಕುರುಕ್ಷೇತ್ರ ಯುದ್ಧ ಏಕಾಏಕಿ ಆರಂಭಗೊಳ್ಳಲಿಲ್ಲ. ಅರ್ಜುನನಲ್ಲಿ ಉಂಟಾದ ವಿಷಾದಯೋಗವನ್ನು ಕೃಷ್ಣ ಕಳೆಯಲು ನಿಂತ ಸಮಯದಲ್ಲಿ ನಡೆದ ಘಟನಾವಳಿಗಳು ಈ ತಂಡದ “ಅಲ್ಟಿಮೇಟ್‌ ಕುರುಕ್ಷೇತ್ರ’ದ ವಸ್ತು. ಇದನ್ನು ಕೊಂಚ ಹಾಸ್ಯಮಿಶ್ರಿತವಾಗಿ ನಿರೂಪಿಸಲಾಗಿತ್ತು. 

ಹಾಸ್ಯ ಎಂದರೆ, ನಮ್ಮ ಹಳ್ಳಿಗಾಡನ್ನು ಪ್ರತಿನಿಧಿಸುವ “ಕೃಷ್ಣಸಂಧಾನ’ದಂತೆ ಅಲ್ಲ. ಇಲ್ಲೊಂದು ಅಧ್ಯಯನ ಇದೆ. ಸಂದರ್ಭ ಮತ್ತು ಪಾತ್ರಗಳನ್ನು ತಮ್ಮ ಅಧ್ಯಯನದ ನೆಲೆಯಲ್ಲಿ ವಿಶ್ಲೇಷಿಸುವ ಬಗೆ ಇದೆ. ಇದರಲ್ಲಿ ಹಾಸ್ಯ ಮಿಳಿತ ಮಾಡಲಾಗಿದೆಯೇ ಹೊರತು ಕೇವಲ ಕಾಮಿಡಿಯಾಗಿಸುವ ಹಠ ತೊಟ್ಟಿಲ್ಲ ಎನ್ನುವುದು ಸಮಾಧಾನದ ಅಂಶ.

ನಾಟಕಾರ ಮತ್ತು ನಿರ್ದೇಶಕ ರಾಮ್‌ರ ಅಧ್ಯಯನಶೀಲತೆ ಇಲ್ಲಿ ಢಾಳಾಗಿ ಕಾಣುತ್ತದೆ. ಮಹಾಭಾರತ ಅವರಿಗೆ ಭಾರತದ ಅನೇಕ ಪ್ರಸ್ತುತದ ಸಮಸ್ಯೆಗಳನ್ನು ಬಿಂಬಿಸುವ ಕನ್ನಡಿಯಾಗಿ ಕಂಡಿದೆ. ಹಾಗಾಗಿ, ಅವರ “ಅಲ್ಟಿಮೇಟ್‌ ಕುರುಕ್ಷೇತ್ರ’ದಲ್ಲಿ ಇಂದಿನ ಸಮಾಜದ ಸೆಳಕುಗಳ ಬಗೆಗೆ ಸೂಚ್ಯವಾದ ಮಾತುಗಳು ಕೇಳಿಬರುತ್ತವೆ. 

ಈ ಪ್ರಯೋಗದ ಹಿಂದೆ ಅಧ್ಯಯನವಿದ್ದಂತೆ, ಅದನ್ನು ಹಾಸ್ಯದ ಲೇಪದಲ್ಲಿ ಕಾಣಿಸುವ ದರ್ಶನಗಳೂ ಇವೆ. ಆದರೆ, ಈ ತಂಡಕ್ಕೆ ತೊಡಕಾಗಿದ್ದು ಭಾಷೆ. ಭಾರತೀಯರು ಇಂಗ್ಲಿಷ್‌ ಉಚ್ಚರಿಸುವ ಬಗೆ ಬೇರೆ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗೆಯೇ, ಬೇರೆಬೇರೆ ಜನಾಂಗದವರ ಉಚ್ಚಾರಣೆಯೂ ಬೇರೆ ರೀತಿಯಲ್ಲಿಯೇ ಇರುತ್ತದೆ. ಆದರೆ, ನಾಟಕಕ್ಕೆ ತಮ್ಮನ್ನು ತಾವು ಅಣಿಗೊಳಿಸಿಕೊಂಡಾಗ ಭಾಷೆಯ ವಿಚಾರದಲ್ಲಿ ಒಂದು ಹಂತದ ಪ್ರಭುತ್ವವನ್ನಾದರೂ ಕಾಣಿಸಬೇಕಾಗುತ್ತದೆ. ನಟರಾದವರು ಕಡೇಪಕ್ಷ ಚೂರೂ ಪ್ರಾವೀಣ್ಯತೆ ಕಾಣಿಸುವ ಗೋಜಿಗೂ ಹೋಗದಿದ್ದರೆ ನಾಟಕದಲ್ಲಿ ಎಷ್ಟು ಅಧ್ಯಯನಶೀಲತೆ ಇದ್ದರೂ ಭಾಷೆಯ ತೊಡಕು ಅದನ್ನು ಪೇಲವಗೊಳಿಸುತ್ತದೆ. “ಅಲ್ಟಿಮೇಟ್‌ ಕುರುಕ್ಷೇತ್ರ’ದಲ್ಲಿ ಆದದ್ದು ಇದೇ. ರಾಮ್‌ ಹಾಗೂ ಮಲ್ಲಿಕಾ ಪ್ರಸಾದ್‌ರ ಇಂಗ್ಲಿಷ್‌ ಕಡೇಪಕ್ಷ ಕೇಳುವ ಹಾಗೆ ಇತ್ತು. ಉಳಿದವರು ನಿರಾಶೆ ಹುಟ್ಟಿಸಿದರು. ಅವರ ಬಳಕೆಯ ಇಂಗ್ಲಿಷ್‌ ಹೈಸ್ಕೂಲ್‌ ಮಕ್ಕಳ ಉಚ್ಚಾರವಿದ್ದಂತೆ ಇತ್ತು. ಇದು ತೊಡಕನ್ನು ಸೃಷ್ಟಿಸುತ್ತಲೇ ಇದ್ದದ್ದರಿಂದ ಆರಂಭದಿಂದಲೇ ನಾಟಕ ನೋಡುವ ಮನಃಸ್ಥಿತಿ ಮಾಯವಾಯಿತು. ಚಿಂತನೆಗೆ ಹಚ್ಚಬಹುದಾದ ನಾಟಕವೊಂದು ಭಾಷೆಯ ತೊಡಕಿನಿಂದ ಉದ್ದಕ್ಕೂ ಕಳೆಗುಂದುತ್ತಾ ಸಾಗಿದ್ದು ಮನಸ್ಸಿನಲ್ಲಿ ಕುರುಕ್ಷೇತ್ರದ ವಾತಾವರಣ ನಿರ್ಮಿಸಿತು.

– ಎನ್‌.ಸಿ. ಮಹೇಶ್‌

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.