ವಿಜ್ಞಾನ ಕಂಡಂತೆ ಯುಗಾದಿ


Team Udayavani, Mar 21, 2020, 6:03 AM IST

vijanana-ugadi

ಪ್ರಕೃತಿಯಲ್ಲಿ, ಬ್ರಹ್ಮಾಂಡದಲ್ಲಿ ಒಂದು ನಿರ್ದಿಷ್ಟ ಬದಲಾವಣೆ ಉಂಟಾಗುತ್ತದೆ. ಗ್ರಹ, ತಿಥಿ, ಮಾಸ, ರಾಶಿ, ಋತುಗಳಲ್ಲಿ ಒಂದು ಯೋಗ ಉಂಟಾಗುತ್ತದೆ. ಅದನ್ನು ಪ್ರಮಾಣಿಸಿಯೂ ನೋಡಬಹುದು. ಅದೇ ಬದಲಾವಣೆ, ನಮ್ಮ ಪಿಂಡಾಂಡದಲ್ಲಿ (ದೇಹ)ಯೂ ಉಂಟಾಗುತ್ತದೆ. ಇದು ಋಷಿ ಮಹರ್ಷಿಗಳು ತಮ್ಮ ಅನುಭವದಿಂದ ನಮಗೆ ತಿಳಿಸಿಕೊಟ್ಟಿರುವ ವೈಜ್ಞಾನಿಕ ಸತ್ಯ…

ವರ್ಷವಿಡೀ ಸಿಹಿ, ಕಹಿಯನ್ನು ಸಮವಾಗಿ ಕಾಣುತ್ತೇನೆ ಎಂಬ ಮನಸ್ಸಿನಲ್ಲಿ ವರ್ಷವನ್ನು ಆರಂಭಮಾಡುವ ದಿನವೇ ಯುಗಾದಿ. ಇಂದು ಹೊಸ ಸಂಕಲ್ಪಗಳನ್ನು ಪ್ರಾರಂಭಿಸಲು ಯೋಗ್ಯವಾದ ದಿನ. ನಮ್ಮ ಮನೆಯಲ್ಲಿ ಹಿರಿಯರು ಹೇಳುವುದನ್ನು ಕೇಳಿರುತ್ತೇವೆ, “ಇವತ್ತು ಬೇಗನೆ ಏಳು. ತಡವಾಗಿ ಎದ್ದರೆ ವರ್ಷವಿಡೀ ತಡವಾಗಿ ಏಳುತ್ತೀಯ’ ಎಂದು, “ಇವತ್ತು ಕೋಪ, ಹಠ ಮಾಡಬಾರದು, ಅಳಬಾರದು, ನಗುನಗುತ್ತಾ ಸಂತೋಷದಿಂದಿರು. ಆಗ ವರ್ಷವಿಡೀ ಸಂತೋಷದಿಂದ, ಸಮಾಧಾನದಿಂದ ಇರುತ್ತೀಯ’ ಎಂದು. ಈ ವಿಚಾರಗಳು ಮನೆಮನೆಗಳಲ್ಲಿ, ಸಂಸ್ಕಾರ ರೂಪದಲ್ಲಿ ಬಂದಿರುವುದು

ಎಲ್ಲರಿಗೂ ತಿಳಿದಿರುವ ವಿಚಾರಗಳು: ಬೆಂಗಳೂರಿನಂಥ ಮಹಾನಗರದಲ್ಲಿ ನಿಂತು ನೋಡಿದಾಗ, ಇವೆಲ್ಲವೂ ಕಾಲಬಾಹಿರ ವಿಷಯಗಳು ಎನ್ನಿಸಬಹುದು. ವರ್ಷದ ಮೊದಲ ರಜೆಯಂದು ಹೊಸತಿಂಡಿ, ಮನೆಕೆಲಸ ಅಂತ ಮತ್ತೆ ಮತ್ತೆ ಆಯಾಸ ಮಾಡಿಕೊಳ್ಳುವುದಕ್ಕಿಂತ, ಹಾಯಾಗಿ ಸ್ವಿಗ್ಗಿಯಲ್ಲಿ ಸುಗ್ಗಿಯ ಅಡುಗೆ ಆರ್ಡರ್‌ ಮಾಡಬಹುದಲ್ಲ? ಎಂಬ ಯೋಚನೆ ಬರಬಹುದು. ಅಥವಾ ಫ್ಯಾಮಿಲಿ ಔಟಿಂಗ್‌ ಪ್ರವಾಸಕ್ಕೆ ಹೋಗಿ ಶ್ರಮವನ್ನು ಕಳೆದುಕೊಂಡು ಬರಬಹುದಲ್ಲ ಎಂಬ ಚಿಂತನೆಗಳೂ ಈಗ ಸಹಜವಾಗಿವೆ. ಈ ಹಬ್ಬದ ಪರಿಪೂರ್ಣ ಉಪಯೋಗ ಏನು? ಪ್ರಯೋಜನ ಏನು? ಎಂಬ ಶಿಕ್ಷಣ ಇಲ್ಲದಿರುವುದರಿಂದ, ಈ ರೀತಿಯಾದ ಬಗೆ ಬಗೆ ಯೋಚನೆಗಳು ಸಹಜ.

ಬದಲಾವಣೆಗಳ ಕಾಲ: ಪ್ರಕೃತಿಯಲ್ಲಿ, ಬ್ರಹ್ಮಾಂಡದಲ್ಲಿ ಒಂದು ನಿರ್ದಿಷ್ಟ ಬದಲಾವಣೆ ಉಂಟಾಗುತ್ತದೆ. ಗ್ರಹ, ತಿಥಿ, ಮಾಸ, ರಾಶಿ, ಋತುಗಳಲ್ಲಿ ಒಂದು ಯೋಗ ಉಂಟಾಗುತ್ತದೆ. ಅದನ್ನು ಪ್ರಮಾಣಿಸಿಯೂ ನೋಡಬಹುದು. ಅದೇ ಬದಲಾವಣೆ, ನಮ್ಮ ಪಿಂಡಾಂಡದಲ್ಲಿ (ದೇಹ)ಯೂ ಉಂಟಾಗುತ್ತದೆ. ಇದು ಋಷಿ ಮಹರ್ಷಿಗಳು ತಮ್ಮ ಅನುಭವದಿಂದ ನಮಗೆ ತಿಳಿಸಿಕೊಟ್ಟಿರುವ ವೈಜ್ಞಾನಿಕ ಸತ್ಯ. ಯುಗಾದಿ ಹಬ್ಬದಂದು ಪ್ರಕೃತಿಯಲ್ಲಿ ಹೊಸತನ- ಹೊಸ ಚಿಗುರುಗಳು ಮೊಳೆಯುವ ಕಾಲ. ಹೂವು ಬಿರಿಯುವ ಕಾಲ. ಎಲ್ಲಾ ಜೀವ ಜಂತುಗಳಲ್ಲಿಯೂ ನವನವೀನತೆಯು ಮೊಳೆಯುವ ಕಾಲ.

ಅಭ್ಯಂಗದ ಲಾಭ: ಯುಗಾದಿಯ ಆಚರಣೆ- ಪ್ರಾತಃಕಾಲದಲ್ಲಿ ಎಳ್ಳೆಣ್ಣೆಯಿಂದ ಅಭ್ಯಂಗ ಮಾಡಿಕೊಳ್ಳಬೇಕು. “ಅಭ್ಯಂಗವು ಮುಪ್ಪು, ಆಯಾಸ, ವಾತದ ದೋಷಗಳನ್ನು ನಿವಾರಣೆ ಮಾಡುವುದು. ದೃಷ್ಟಿಪಾಟವನ್ನು ಕೂಡುವುದು. ಭೋಗಪ್ರದವಾದ ಆಚರಣೆಯಾದರೂ ಯೋಗಕ್ಕೆ ಅನುಕೂಲಕರ ಈ ಅಭ್ಯಂಗ. ದೇಹ, ಇಂದ್ರಿಯ, ಮನಸ್ಸನ್ನು ಹಗುರಗೊಳಿಸಿ, ಪುಷ್ಟಿ ಆಯುಸ್ಸು, ನಿದ್ರೆಯ ಸೌಖ್ಯವನ್ನುಂಟು­ಮಾಡುವುದು’ ಎಂದು ಆಯುರ್ವೇದವು ಹೇಳುತ್ತದೆ. ಯುಗಾದಿ ದಿನದಂದು ಸಂಕಲ್ಪಪೂರ್ವಕವಾಗಿ ಈ ಆಭ್ಯಂಗವನ್ನು ಕೈಗೊಂಡರೆ, ನಿತ್ಯವೂ ಅಭ್ಯಂಗವನ್ನು ಆಚರಿಸುವಂತಾಗುತ್ತದೆ.

ಯುಗಾದಿ ದಾನ: ಯುಗಾದಿಯ ಪರ್ವದಲ್ಲಿ ಸಾಮಾನ್ಯವಾದ ಅನ್ನದಾನಗಳ ಜೊತೆಗೆ, ವಿಶೇಷವಾಗಿ ಪಂಚಾಂಗ ಮತ್ತು ವಸ್ತ್ರಭೂಷಣಗಳನ್ನು ದಾನಮಾಡುತ್ತಾರೆ. ವಸಂತ ಋತುವಿನಲ್ಲಿ ಉಷ್ಣತೆ ಹೆಚ್ಚು ಇರುವುದರಿಂದ ಅಂದು ನೀರಿನ ಪಾತ್ರೆಗಳನ್ನು, ದೇವಸ್ಥಾನಾದಿ ಜಾಗಗಳಲ್ಲಿ ಸಿಹಿನೀರು, ಮಜ್ಜಿಗೆ, ಪಾನಕ ಮುಂದಾದವುಗಳನ್ನು ದಾನ ಮಾಡುವುದು ಕಾಲೋಚಿತವಾದ ದಾನವೇ ಆಗುತ್ತದೆ.

ಕಫ‌ ಕರಗಿಸುವ ಬೇವು: ಯುಗಾದಿಯಂದು ದೇವರಿಗೆ ಸಮರ್ಪಿಸಿ, ಸೇವಿಸುವ ನೈವೇದ್ಯ- ಬೇವು- ಬೆಲ್ಲ. ಹೂವಿನೊಡನೆ ಕೂಡಿದ ಚಿಗುರಬೇವು, ಕಫ‌ ಮತ್ತು ಪಿತ್ತವನ್ನು ಕಡಿಮೆ ಮಾಡುತ್ತದೆ. ಕಹಿ ಬೇವು ತಿನ್ನುವುದರಿಂದ, ಹೃದಯಕ್ಕೆ ಖನ್ನತೆ ಸಹಜ. ಹಾಗಾಗಿ, ಧಾತುಗಳಲ್ಲಿ ವೈಷಮ್ಯತೆ ಉಂಟುಮಾಡದಿರಲೆಂದು ಬೇವಿನೊಂದಿಗೆ ಬೆಲ್ಲ ಸೇರಿಸಿ ಭಕ್ಷಿಸುವ ಕ್ರಮವಿದೆ.

* ಡಾ. ಯಶಸ್ವಿನಿ, ಆಯುರ್ವೇದ ತಜ್ಞೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.