ಯಕ್ಷ ಟೀಚರ್‌: ಟೆಕ್ಕಿ ಕಟ್ಟಿದ ಯಕ್ಷ ದೇಗುಲ


Team Udayavani, Nov 24, 2018, 12:18 PM IST

77.jpg

ಯಕ್ಷಗಾನ ಗಂಡುಕಲೆಯೆಂದೇ ಪ್ರತೀತಿ. ಆದರೆ, ಇತ್ತೀಚೆಗೆ ಹೆಂಗಳೆಯರೂ ರಂಗಸ್ಥಳದಲ್ಲಿ ರಾರಾಜಿಸುತ್ತಿದ್ದಾರೆ. ಅಂಥ ಕಲಾವಿದೆಯರಲ್ಲಿ ಪ್ರಿಯಾಂಕ ಕೆ. ಮೋಹನ್‌ ಕೂಡ ಒಬ್ಬರು. ಬೆಂಗಳೂರಿನಲ್ಲಿ ಹುಟ್ಟಿ- ಬೆಳೆದು, ಸಾಫ್ಟ್ವೇರ್‌ ಉದ್ಯೋಗಿಯಾಗಿದ್ದುಕೊಂಡು ಅವರು ಕಲೆಯನ್ನು ಆರಾಧಿಸಿದ ರೀತಿ ಅನನ್ಯ. ಹಲವಾರು ವರ್ಷಗಳಿಂದ, ಉದ್ಯೋಗದ ಜೊತೆಜೊತೆಗೆ ಯಕ್ಷ ಶಿಕ್ಷಕಿಯಾಗಿದ್ದ ಪ್ರಿಯಾಂಕ, ಇತ್ತೀಚೆಗೆ ಉದ್ಯೋಗಕ್ಕೆ ಗುಡ್‌ಬೈ ಹೇಳಿ, ಸಂಪೂರ್ಣವಾಗಿ ಯಕ್ಷಗಾನದಲ್ಲಿ ತೊಡಗಿಕೊಂಡಿದ್ದಾರೆ.

ಪ್ರಿಯಾಂಕ, “ಯಕ್ಷದೇಗುಲ’ ಸಂಸ್ಥೆಯ ಸ್ಥಾಪಕ ಕೆ. ಮೋಹನ್‌ ಅವರ ಪುತ್ರಿ. ತಂದೆಯೇ ಆಕೆಯ ಮೊದಲ ಯಕ್ಷ ಗುರು. ನಂತರ, ಗುರು ಬನ್ನಂಜೆ ಸಂಜೀವ ಸುವರ್ಣ, ಕೃಷ್ಣಮೂರ್ತಿ ತುಂಗ, ಪ್ರಾಚಾರ್ಯ ಕೆ.ಪಿ. ಹೆಗಡೆಯವರಿಂದ ಯಕ್ಷಗಾನ ಕಲಿತು, ಹಿಮ್ಮೇಳ, ಮುಮ್ಮೇಳ, ಪ್ರಸಾಧನ, ಸಂಯೋಜನೆ ಮುಂತಾದ ಎಲ್ಲ ವಿಭಾಗಗಳಲ್ಲಿ ಪರಿಣತಿ ಪಡೆದರು. ಹಲವಾರು ವರ್ಷಗಳಿಂದ “ಯಕ್ಷದೇಗುಲ’ದಲ್ಲಿ ಶಿಕ್ಷಕಿಯಾಗಿರುವ ಈಕೆ, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಪ್ರದರ್ಶನ ನೀಡಿದ್ದಾರೆ. ಸುಭದ್ರೆಯಾಗಿ, ದ್ರೋಣ, ಧರ್ಮರಾಯ, ದುರ್ಯೋಧನನಾಗಿ ತೆರೆಯ ಮೇಲೆ ಅಬ್ಬರಿಸಿದ್ದಾರೆ. ಪ್ರಸಿದ್ಧ ರಂಗ ನಿರ್ದೇಶಕರಿಂದ ರಂಗ ತರಬೇತಿ ಪಡೆದು, ನಾಟಕಗಳಲ್ಲಿಯೂ ನಟಿಸಿದ್ದಾರೆ.

ಆನ್‌ಲೈನ್‌ ಯಕ್ಷ ತರಬೇತಿ ಯಕ್ಷಗಾನ ಕಲಿಯುವ ಆಸಕ್ತಿಯುಳ್ಳವರಿಗಾಗಿ, ಯೂಟ್ಯೂಬ್‌ ಚಾನೆಲ್‌ ತೆರೆದಿದ್ದು, ಸಣ್ಣ ವಿಡಿಯೊಗಳ ಮೂಲಕ ಯಕ್ಷಗಾನದ ಪ್ರಾಥಮಿಕ ತರಬೇತಿಯನ್ನೂ ನೀಡುತ್ತಿದ್ದಾರೆ ಪ್ರಿಯಾಂಕ. ತೆಂಕುತಿಟ್ಟು, ಬಡಗುತಿಟ್ಟು, ಮುಮ್ಮೇಳ, ಹಿಮ್ಮೇಳ, ಯಕ್ಷಗಾನ ಬೆಳೆದು ಬಂದ ರೀತಿ, ಇತಿಹಾಸದ ಕುರಿತು ವಿಡಿಯೊ ಮಾಡುವ ಆಲೋಚನೆ ಅವರಿಗಿದೆ. yakshadegula ಯೂಟ್ಯೂಬ್‌ ಚಾನೆಲ್‌ನಲ್ಲಿ ಅವರ ವಿಡಿಯೊಗಳನ್ನು ನೋಡಬಹುದು.

ಇಂದು ಕೃಷ್ಣಾರ್ಜನ ಕಾಳಗ
ಈಗಾಗಲೇ 50ಕ್ಕೂ ಹೆಚ್ಚು ಯಕ್ಷ ಪ್ರಸಂಗಗಳನ್ನು ಸಂಯೋಜಿಸಿರುವ ಪ್ರಿಯಾಂಕ, ಈಗ “ಕೃಷ್ಣಾರ್ಜುನ ಕಾಳಗ’ ಪ್ರಸಂಗವನ್ನು ಯಕ್ಷಪ್ರಿಯರ ಮುಂದಿಡುತ್ತಿದ್ದಾರೆ. ಇಂದು ಸಂಜೆಯ ಪ್ರದರ್ಶನದಲ್ಲಿ, ಸುಜಯೀಂದ್ರ ಹಂದೆ, ಶಿವಕುಮಾರ್‌ ಬೇಗಾರ್‌ ಮುಂತಾದ ಹಿರಿಯ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ. ಖ್ಯಾತ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯಿರಿ, ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಉಪಮೇಯರ್‌ ಎಲ್‌. ಶ್ರೀನಿವಾಸ್‌ ಭಾಗವಹಿಸಲಿದ್ದಾರೆ.

ಎಷ್ಟೊಂದು ಕಲೆ- ಸಂಪ್ರದಾಯಗಳನ್ನು ನಾವು ಈಗಾಗಲೇ ಕಳೆದುಕೊಂಡು ಬಿಟ್ಟಿದ್ದೇವೆ. ಆಧುನಿಕತೆಯ ಎಲ್ಲ ಸವಾಲುಗಳನ್ನು ಮೀರಿ ಯಕ್ಷಗಾನ ಇನ್ನೂ ತನ್ನ ಛಾಪನ್ನು ಉಳಿಸಿಕೊಂಡಿದೆ. ಯಕ್ಷಗಾನ ಕೇವಲ ಕರಾವಳಿಯ ಕಲೆಯಲ್ಲ, ಇಡೀ ಕರ್ನಾಟಕದ ಸಂಸ್ಕೃತಿಯ ಒಂದು ಭಾಗ. ಈ ಕಲೆ ಮತ್ತಷ್ಟು ಜನರಿಗೆ ತಲುಪುವಂತಾಗಬೇಕು ಎಂಬುದು ನನ್ನ ಆಶಯ.
∙ಪ್ರಿಯಾಂಕ ಮೋಹನ್‌

ಯಾವಾಗ?: ನ. 24,
ಶನಿವಾರ, ಸಂಜೆ 6
ಎಲ್ಲಿ?: ಪರಂಪರಾ ಸಭಾಂಗಣ, #1259,
3ನೇ ಮುಖ್ಯರಸ್ತೆ, ಚೆನ್ನಮ್ಮನಕೆರೆ
ಹೆಚ್ಚಿನ ಮಾಹಿತಿಗೆ: 9448547237

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.