ಕೃಷಿ ಋಷಿ ; ಭಕ್ತಾದಿಗಳಿಗೆ ಸಾವಯವ ಕೃಷಿ ಪ್ರವಚನ


Team Udayavani, Jan 20, 2020, 5:00 AM IST

aad

ಬಹುತೇಕ ಮಠಗಳಲ್ಲಿನ ಸ್ವಾಮಿಗಳು ಪುರಾಣ- ಪ್ರವಚನ ಸೇರಿದಂತೆ ಇನ್ನಿತರ ಅಧ್ಯಾತ್ಮಿಕ ಚಟುವಟಿಕೆಗಳಲ್ಲಿ ತಲ್ಲೀನರಾಗಿರುತ್ತಾರೆ. ಇಲ್ಲೊಬ್ಬರು ಗುರುಗಳು ತಮ್ಮ ಪ್ರವಚನಗಳಲ್ಲಿ ಭಕ್ತಾದಿಗಳಿಗೆ ಕೃಷಿಯ ಮಹತ್ವವನ್ನು ಸಾರುತ್ತಿದ್ದಾರೆ. ಅಷ್ಟೇ ಅಲ್ಲ, ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮರೇಗುದ್ದಿ ಗ್ರಾಮದ ಶ್ರೀಅಡವಿಸಿದ್ಧೇಶ್ವರ ಮಠದ ಶ್ರೀ ಮ.ನಿ.ಪ್ರ.ಸ್ವ ಗುರುಪಾದ ಮಹಾಸ್ವಾಮಿಗಳು ಸದಾ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುತ್ತಾರೆ. ಮಠಕ್ಕೆ ಬರುವ ಭಕ್ತರಿಗೆ ಅಧ್ಯಾತ್ಮಿಕ ಮಾರ್ಗದರ್ಶನದೊಂದಿಗೆ ಕೃಷಿ ಜ್ಞಾನವನ್ನು ನೀಡುತ್ತಿದ್ದಾರೆ. ಶ್ರೀಮಠದ 5 ಎಕರೆ ಭೂಮಿಯಲ್ಲಿ ಕಳೆದ 5 ವರ್ಷಗಳಿಂದ ಸಂಪೂರ್ಣ ಸಾವಯವ ಕೃಷಿಯನ್ನು ಕೈಗೊಳ್ಳುವುದರೊಂದಿಗೆ ಹೊಸ- ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ. ಈ ಎಲ್ಲ ಕೃಷಿ ಸಾಧನೆಗಳನ್ನು ಪರಿಶೀಲಿಸಿದ ಕೃಷಿ ಇಲಾಖೆಯು, ಅವರಿಗೆ ಈ ಸಾಲಿನ “ಶ್ರೇಷ್ಠ ಕೃಷಿಕ’ ಪ್ರಶಸ್ತಿ ನೀಡಿ ಗೌರವಿಸಿದೆ.

ಹಸಿರೆಲೆ ಗೊಬ್ಬರ ಅಂತರ್‌ ಬೆಳೆ
ಕಬ್ಬು, ಬಾಳೆ, ಶೇಂಗಾ. ಜೋಳ, ಗೋದಿ, ಕಡಲೆ, ಸದಕ ಹಾಗೂ ಸಿರಿಧಾನ್ಯಗಳನ್ನು ಬೆಳೆಯುತ್ತಿರುವ ಶ್ರೀಗಳು ಆಕಳುಗಳ ಗಂಜಲ ಹಾಗೂ ಸೆಗ‌ಣಿಯನ್ನೇ ಮೂಲಗೊಬ್ಬರವಾಗಿ ಬಳಸಿ ಉತ್ತಮ ಇಳುವರಿ ಪಡೆಯುತ್ತಿದ್ದಾರೆ. ಅಲ್ಲದೆ, ನೀರಿನ ಮಿತಬಳಕೆ ಮತ್ತು ಕೃಷಿತ್ಯಾಜ್ಯಗಳ ಮರುಬಳಕೆಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಲಾಭ ಲೆಕ್ಕಾಚಾರ
ಅರ್ಧ ಎಕರೆ ಜಮೀನಿನಲ್ಲಿ ನಾಟಿ ಮಾಡಿದ ಕಬ್ಬು ಬೆಳೆಯಿಂದ 31 ಟನ್‌ ಇಳುವರಿ ದೊರೆತಿತ್ತು. ಬಂದ ಆದಾಯ 83,700 ರೂ. ಕಬ್ಬು ಬೆಳೆಯೊಂದಿಗೆ ಕಾಯಿಪಲ್ಲೆಗಳನ್ನು ನಾಟಿ ಮಾಡಿದ್ದರಿಂದ 5000 ರೂ. ದೊರೆತಿತ್ತು. 2 ಎಕರೆ ಜಮೀನಿನಲ್ಲಿ ಬೆಳೆದ ಸಾವಯವ ಗೋಧಿ ಮತ್ತು ಜವೆಗೋಧಿ (ಸದಕ)ಯಿಂದ 40,000 ರೂ. ಆದಾಯ ಬರುವ ನಿರೀಕ್ಷೆ ಇದೆ. ಬೆಳೆಗಳಿಗೆ ನಾಟಿ ಮಾಡುವಾಗ ಎರಡು ದಿನ ಮತ್ತು ಕೊಯ್ಲು ಮಾಡುವಾಗ ಎರಡು ದಿನ ಒಟ್ಟಾರೆ ನಾಲ್ಕು ಕೂಲಿಗಳ ಅವಶ್ಯಕತೆ ಬೀಳುತ್ತದೆ. ಅವರ ಸಂಬಳವನ್ನು ಹೊರತುಪಡಿಸಿದರೆ ಇನ್ನಿತರ ಯಾವುದೇ ಖರ್ಚು ಇರುವುದಿಲ್ಲ. ಶ್ರೀಗಳು ಜಮೀನಿನಲ್ಲಿ ಅರಣ್ಯ ಕೃಷಿ ಬೆಳೆಗಳಾದ ಶ್ರೀಗಂಧ, ಸಾಗುವಾನಿ ಮತ್ತು ಹೆಬ್ಬೇವು ಗಿಡಗಳನ್ನು ನಾಟಿ ಮಾಡಿದ್ದಾರೆ. ತೋಟಗಾರಿಕೆ ಬೆಳೆಗಳಾದ ಅಂಜೂರ, ದಾಳಿಂಬೆ ಮತ್ತು ಉಳ್ಳಾಗಡ್ಡಿ ಶ್ರೀಗಳ ತೋಟದಲ್ಲಿ ಹುಲುಸಾಗಿ ಬೆಳೆದಿವೆ.

– ಬಸವರಾಜ ಶಿವಪ್ಪ ಗಿರಗಾಂವಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.