ಸುಗಂಧ ಕೃಷಿ; ಆದಾಯ ಹೆಚ್ಚಳಕ್ಕೆ ಆರೋಮ್ಯಾಟಿಕ್‌ ಗಿಡಗಳು


Team Udayavani, Nov 25, 2019, 5:00 AM IST

shutterstock_594446954

ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಹಿಮಾಚಲಪ್ರದೇಶದ ರೈತರು ಈಗ ಅದನ್ನು ತ್ಯಜಿಸಿ ಚೆಂಡುಮಲ್ಲಿಗೆ, ನಿಂಬೆಹುಲ್ಲು ಇತ್ಯಾದಿ… ಆರೋಮ್ಯಾಟಿಕ್‌ ಗಿಡಗಳನ್ನು ಬೆಳೆಯುತ್ತಿದ್ದಾರೆ. ಅವಕ್ಕೆ ಪ್ರಾಣಿಗಳ ಹಾವಳಿ ಕಡಿಮೆ. ಅದಕ್ಕಿಂತ ಹೆಚ್ಚಾಗಿ, ಎಸೆನ್ಷಿಯಲ್‌ ಆಯಿಲ್‌ ಉದ್ಯಮಕ್ಕೆ ಅದರ ಜರೂರತ್ತು ಬಹಳವಿದೆ. ಹೀಗಾಗಿ ಆದಾಯವೂ ಖಾತರಿ.

“2017ರಲ್ಲಿ ಜೋಳದ ಕೃಷಿಗೆ ಬದಲಾಗಿ ಕಾಡು ಚೆಂಡುಮಲ್ಲಿಗೆ ಬೆಳೆಯಲು ನಿರ್ಧರಿಸಿದಾಗ, ಹಳ್ಳಿಯ ಜನರು ನನಗೆ ಹುಚ್ಚು ಹಿಡಿದಿದೆ ಎಂದು ತಿಳಿದರು.’ ಎನ್ನುತ್ತಾರೆ, ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ತಲ್ಲಾ ಗ್ರಾಮದ 45 ವರುಷ ವಯಸ್ಸಿನ ರೈತ ಪವನ್‌ ಕುಮಾರ್‌. ಮೊದಲ ಹಂಗಾಮಿನಲ್ಲಿ ಅವರು ಬೆಳೆಸಿದ ಗಿಡಗಳಲ್ಲಿ ಹೂಗಳು ಅರಳಲೇ ಇಲ್ಲ. ಆಗಂತೂ ಅವರು ಕುಗ್ರಾಮದ ಜನರ ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಯಾರು ಅವರನ್ನು ದೂಷಿಸಿದ್ದರೋ ಅವರೇ ಅನುಯಾಯಿಗಳಾಗಿದ್ದಾರೆ. ಗ್ರಾಮದ ಬಹುಪಾಲು ರೈತರಿಗೆ ಇವರೇ ಮಾದರಿ. ಯಾಕೆಂದರೆ, ಇವರು ಗಳಿಸುವ ಆದಾಯ ವರ್ಷಕ್ಕೆ ಹೆಕ್ಟೇರಿಗೆ 1.20 ಲಕ್ಷ ರೂ.! ಇದು, ಇವರು ಜೋಳ ಬೆಳೆಸಿದ್ದರೆ ಸಿಗಬಹುದಾಗಿದ್ದ ಆದಾಯದ ಐದು ಪಟ್ಟು!

ನಿಂಬೆಹುಲ್ಲಿನ ಬನದ ಮ್ಯಾಗ….
ಬೆಳೆ ಬದಲಾವಣೆಯಿಂದ ಲಾಭ ಗಳಿಸುತ್ತಿರುವ ಇನ್ನೊಬ್ಬ ರೈತ, ಕಂಗ್ರಾ ಜಿಲ್ಲೆಯ ಗ್ರಾಮದ ಗಣೇಶ್‌ ಪ್ರಶಾರ್‌. ಅವರು ಕಳೆದ ನಾಲ್ಕು ವರ್ಷಗಳಿಂದ ನಿಂಬೆಹುಲ್ಲು ಬೆಳೆಯುತ್ತಿದ್ದಾರೆ. ಅವರು ನಿಂಬೆಹುಲ್ಲು ಕೃಷಿ ಶುರು ಮಾಡಿದ್ದು ಒಂದು ಭಿಗಾ (0.17 ಹೆಕ್ಟೇರ್‌) ಜಮೀನಿನಲ್ಲಿ. ಈಗ 46 ಭಿಗಾ ಜಮೀನಿನಲ್ಲಿ ಅದನ್ನು ಬೆಳೆಯುತ್ತಿದ್ದಾರೆ. 26 ಮಂದಿ ರೈತರು ಸದಸ್ಯರಾಗಿರುವ ಒಂದು ಸೊಸೈಟಿಯನ್ನೂ ಶುರು ಮಾಡಿರುವುದು ಅವರ ಹೆಗ್ಗಳಿಕೆ. ಅವರಲ್ಲಿ 16 ಮಂದಿ ಈಗಾಗಲೇ ಸಾಂಪ್ರದಾಯಿಕ ಬೆಳೆಗೆ ಬದಲಾಗಿ ನಿಂಬೆ ಹುಲ್ಲು ಬೆಳೆಯುತ್ತಿದ್ದಾರೆ.

ಹಲವಾರು ರೈತರು ಬೆಟ್ಟ ಪ್ರದೇಶವಾದ ಹಿಮಾಚಲ ಪ್ರದೇಶದಲ್ಲಿ ಸಾಂಪ್ರದಾಯಿಕ ಬೆಳೆಗಳ ಕೃಷಿ ತೊರೆಯುತ್ತಿದ್ದಾರೆ. ಆ ಬೆಳೆಗಳಿಂದ ಆದಾಯ ನಿಶ್ಚಿತವಾಗಿಲ್ಲದಿರುವುದು ಅದಕ್ಕೆ ಕಾರಣ. ಹವಾಮಾನದಲ್ಲಿನ ಏರುಪೇರು ಮತ್ತು ಕಾಡುಪ್ರಾಣಿಗಳ ದಾಳಿ ಇವೆಲ್ಲವೂ ಸಮಸ್ಯೆಯನ್ನು ಹೆಚ್ಚಿಸಿವೆ. ಇವೆಲ್ಲವನ್ನೂ ನೋಡಿದಾಗ ಬಾಷ್ಪಶೀಲ ತೈಲ(ಎಸೆನ್ಷಿಯಲ್‌ ಆಯಿಲ…) ಉತ್ಪಾದನೆಗೆ ಬಳಕೆಯಾಗುವ ಆರೋಮ್ಯಾಟಿಕ್‌ ಗಿಡಗಳ ಕೃಷಿ ಹೊಸ ಭರವಸೆ ಮೂಡಿಸಿದೆ.

ಆರೋಮ್ಯಾಟಿಕ್‌ ಗಿಡಗಳಿಗೆ (ಚೆಂಡುಮಲ್ಲಿಗೆ, ನಿಂಬೆಹುಲ್ಲು ಇತ್ಯಾದಿ) ಪ್ರಾಣಿಗಳ ಹಾವಳಿ ಕಡಿಮೆ. ಅದಕ್ಕಿಂತ ಮಿಗಿಲಾಗಿ, ಅವುಗಳಿಂದ ಉತ್ಪಾದಿಸುವ ಬಾಷ್ಪಶೀಲ ತೈಲಗಳಿಗೆ ಪರಿಮಳ ದ್ರವ್ಯ, ಮಸಾಲೆ ಮತ್ತು ಸಾಂಬಾರ ಉದ್ಯಮಗಳಲ್ಲಿ ಭಾರೀ ಬೇಡಿಕೆ. ನಮ್ಮ ದೇಶದ ಈ ಉದ್ದಿಮೆಗಳು ಆಸ್ಟ್ರೇಲಿಯಾ, ಫ್ರಾ®Õ…, ಬ್ರೆಜಿಲ್‌ ಮತ್ತು ಕೆನ್ಯಾ ದೇಶಗಳಿಂದ ಅವನ್ನು ಆಮದು ಮಾಡಿಕೊಳ್ಳುತ್ತಿವೆ.

ಗುಲಾಬಿ ತೈಲ ಪ್ರಯೋಗ
ಆರೋಮ್ಯಾಟಿಕ್‌ ಗಿಡಗಳ ಕೃಷಿ, ರೈತರಿಗೆ ಲಾಭದಾಯಕ. ಒಂದು ಭಿಗಾ ಜಮೀನಿನಿಂದ ಸಿಗುವ ಕಾಡು ಚೆಂಡುಮಲ್ಲಿಗೆ ಫ‌ಸಲು 3,000ದಿಂದ 4,000 ಕೆ.ಜಿ. ನನಗೆ ನೂರು ಕಿಲೋ ಹೂವಿನಿಂದ 700- 800 ಗ್ರಾಂ ಬಾಷ್ಪಶೀಲ ತೈಲ ಸಿಗುತ್ತದೆ ಹಾಗೂ ಒಂದು ಕಿಲೋ ಕಾಡು ಚೆಂಡುಮಲ್ಲಿಗೆ ತೈಲ 7,000 ರೂಪಾಯಿಗೆ ಮಾರಾಟವಾಗುತ್ತದೆ ಎಂದು ತಿಳಿಸುತ್ತಾರೆ ಪವನ್‌ ಕುಮಾರ್‌. ನಿಂಬೆಹುಲ್ಲು ಬೆಳೆಸಿದವರಿಗೆ ಒಂದು ಭಿಗಾ ಜಮೀನಿನಿಂದ ಸಿಗುವ ಫ‌ಸಲು 4,500- 5,000 ಕೆ.ಜಿ. ಹಾಗೂ ನೂರು ಕೆ.ಜಿ. ನಿಂಬೆಹುಲ್ಲಿನಿಂದ ಸಿಗುವ ತೈಲದ ತೂಕ 16- 17 ಕೆ.ಜಿ. ಇದರ ಮಾರಾಟ ಬೆಲೆ ಕೆ.ಜಿ.ಗೆ 800ರಿಂದ 850 ರೂ. ಇದೀಗ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 7 ಲಕ್ಷದಿಂದ 8 ಲಕ್ಷ ರೂ. ಬೆಲೆಯಿರುವ ಗುಲಾಬಿ ತೈಲ ಉತ್ಪಾದನೆಗಾಗಿ ದಮ… ಗುಲಾಬಿ ಕೃಷಿಯ ಕ್ಷೇತ್ರಪ್ರಯೋಗ ನಡೆಸುತ್ತಿದೆ ಸಿಎಸ್‌ಐಆರ್‌.

ರೈತ ಗಣೇಶ್‌ ಪ್ರಶಾರ್‌ ಬೆಳೆಸುವ ನಿಂಬೆಹುಲ್ಲು ಖರೀದಿಸುವವರು ಗುಜರಾತಿನ ಬಾಷ್ಪಶೀಲ ತೈಲದ ವರ್ತಕ ಶಿವಕುಮಾರ್‌ ವಸಿಷ್ಠ. ಈ ರೈತರ ನಿಂಬೆಹುಲ್ಲಿನ ಕೃಷಿ ಸಾವಯವ ವಿಧಾನದ ಕೃಷಿ ಎಂದು ದೃಢೀಕರಿಸುವ ವ್ಯವಸ್ಥೆಯನ್ನು ಸರಕಾರ ಮಾಡಿದರೆ, ಈ ನಿಂಬೆಹುಲ್ಲು ತೈಲಕ್ಕೆ ಇನ್ನೂ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ತಿಳಿಸುತ್ತಾರೆ ಶಿವಕುಮಾರ್‌.

ಸೌದೆ ಒಲೆ ಬಳಕೆ
ಹಿಮಾಚಲಪ್ರದೇಶ ಕಳೆದ ಎರಡು ವರ್ಷಗಳಲ್ಲಿ ಕಾಡು ಚೆಂಡುಮಲ್ಲಿಗೆಯಿಂದ ಉತ್ಪಾದಿಸಿದ ಬಾಷ್ಪಶೀಲ ತೈಲದ ಪ್ರಮಾಣ 7.6 ಟನ್‌. ಇದರಿಂದಾಗಿ 861 ರೈತರಿಗೆ ಲಾಭವಾಗಿದೆ. ಅವರ ಒಟ್ಟು ಆದಾಯ 5.56 ಕೋಟಿ ರೂಪಾಯಿ ಎನ್ನುತ್ತಾರೆ, ರಾಕೇಶ್‌ ಕುಮಾರ್‌, ಮುಖ್ಯ ವಿಜ್ಞಾನಿ, ಸಿಎಸ್‌ಐಆರ್‌ನ ಹಿಮಾಲಯ ಜೈವಿಕ ಸಂಪನ್ಮೂಲ ತಂತ್ರಜ್ಞಾನ ಸಂಸ್ಥೆ. ಈ ಸಂಸ್ಥೆ ಆರೋಮ್ಯಾಟಿಕ್‌ ಗಿಡಗಳ ಕೃಷಿ ಬಗ್ಗೆ ರೈತರಿಗೆ ತರಬೇತಿ ನೀಡುತ್ತಿದೆ. ಜೊತೆಗೆ, ಬಾಷ್ಪಶೀಲ ತೈಲದ ಬಟ್ಟಿಕರಣ (ಡಿಸ್ಟಿಲೇಷನ್‌)ಕ್ಕಾಗಿ ರಾಜ್ಯದಲ್ಲಿ 16 ಘಟಕಗಳನ್ನು ಸ್ಥಾಪಿಸಿದೆ. ಇವನ್ನು ರೈತರ ಸಹಕಾರಿ ಸಂಘಗಳು ನಿರ್ವಹಿಸುತ್ತಿವೆ. ಈ ಘಟಕಗಳನ್ನು ಸೌದೆಯ ಬೆಂಕಿಯಿಂದ ಹಬೆ ಉತ್ಪಾದಿಸಿ ಚಾಲೂ ಮಾಡಲಾಗುತ್ತಿದೆ.

– ಅಡ್ಡೂರು ಕೃಷ್ಣ ರಾವ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.