ಹಸಿದ ಮಕ್ಕಳ ಹಸಿವು ನೀಗಿಸುವ “ಅವಧೂತ’  


Team Udayavani, Jan 21, 2019, 12:30 AM IST

hotel1.jpg

ನಾವಂತೂ ಓದಲು ಆಗಲಿಲ್ಲ. ಈಗಿನ ಮಕ್ಕಳಾದ್ರೂ ಚೆನ್ನಾಗಿ ಓದಿ ಶಾಲೆಗೆ, ಊರಿಗೆ ಕೀರ್ತಿ ತರಲಿ, ಹಳ್ಳಿಯಿಂದ ಬರುವ ಮಕ್ಕಳು ಬೆಳಗ್ಗಿನಿಂದ ಸಂಜೆಯವರಿಗೆ ಹಸಕೊಂಡಿದ್ರೆ ಮೇಸ್ಟ್ರೆ ಮಾಡಿದ ಪಾಠ ತಲೆಗೆ ಹೋಗಬೇಕಲ್ಲ. ಹಿಂದೆಲ್ಲ ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡು ಓದುತ್ತಿದ್ದರು. ಆದರೆ, ಕಾಲ ಬದಲಾಗಿದೆ, ಹಸವುಕೊಂಡಿದ್ರೆ ಗ್ಯಾಸ್ಟ್ರಿಕ್‌ ನಂತಹ ಹಲವು ಸಮಸ್ಯೆಗಳು ಬರುತ್ತವೆ…ಹೀಗೆನ್ನುವ ಮುರಳಿ ಮಂದಾರ್ತಿ, ಈ ವಿದ್ಯಾರ್ಥಿಗಳಿಗೆ 10 ರೂ.ಗೆ ಊಟ, ತಿಂಡಿ ಕೊಡ್ತಾರೆ.

ಮೂಲತಃ ಅರ್ಚಕರಾದ ಇವರು ಅರಸೀಕೆರೆ ನಗರದಲ್ಲಿ “ಅವಧೂತ ಹೋಟೆಲ್‌’ ಅನ್ನೂ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಸಾಮಾನ್ಯ ಗ್ರಾಹಕರಿಗೂ ಕಡಿಮೆ ದರದಲ್ಲಿ ರುಚಿಯಾದ ಊಟ ಕೊಡುತ್ತಾರೆ. ಉಡುಪಿ ಜಿಲ್ಲೆಯ ಮಂದಾರ್ತಿಯವರಾದ ಮುರಳಿ, 1999ರಲ್ಲಿ ಕೆಲಸ ಅರಸಿ ಅರಸೀಕೆರೆಗೆ ಬಂದರು. ಚಕ್ಲಿ, ನಿಪ್ಪಟ್ಟು, ಕೊಡುಬಳೆ, ಪುಳಿಯೋಗರೆ ಪುಡಿ ಹೀಗೆ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ, ನಿರೀಕ್ಷಿತ ಲಾಭ ಸಿಗದೇ ಹೋದಾಗ, ವ್ಯಾಪಾರ ಬಿಟ್ಟು ಅರ್ಚಕ ವೃತ್ತಿಯನ್ನು ಆರಂಭಿಸಿದರು. 2001ರಲ್ಲಿ ಆನೆಘಟ್ಟ ಸುಬ್ರಹ್ಮಣ್ಯ ಸ್ವಾಮಿ, 2003ರಿಂದ ಕಂಟೇನಹಳ್ಳಿ ಶನೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿದ್ದಾರೆ. 

ಮಾರುತಿ ಸಚ್ಚಿದಾನಂದ ಆಶ್ರಮದ ಆಡಳಿತಾಧಿಕಾರಿಯೂ ಆದ ಮುರಳಿಯವರು ಬ್ರಹ್ಮಚಾರಿಗಳು. ಹಣಕ್ಕಿಂತ ಆಧ್ಯಾತ್ಮದ  ಕಡೆಗೆ ಹೆಚ್ಚು ಒಲವು ಹೊಂದಿರುವ ಇವರಿಗೆ ಓದುವ ಮಕ್ಕಳನ್ನು ಕಂಡ್ರೆ ಬಲು ಪ್ರೀತಿ. ಮೂವರು ವೃದ್ಧರಿಗೆ ಪ್ರತಿ ದಿನ ಉಚಿತ ಊಟ, ತಿಂಡಿ ಕೊಡ್ತಾರೆ. ಪ್ರತಿ ವರ್ಷ ಸಮೀಪದ ರಾಂಪುರ ಅಂಧರ ಶಾಲೆಗೆ ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿ ಮುಂದಾವುಗಳನ್ನು ಕೊಡುಗೆಯಾಗಿ ಕೊಡುತ್ತಾರೆ. 

ಮುಂಜಾನೆ ದೇವರ ಪೂಜಾ ಕೈಂಕರ್ಯ ಮುಗಿಸಿಕೊಂಡು 7 ಗಂಟೆ ನಂತರ ಹೋಟೆಲ್‌ ವ್ಯಾಪಾರ ಆರಂಭಿಸುತ್ತಾರೆ. ಹೋಟೆಲ್‌ನಲ್ಲಿ 8 ಮಂದಿ ಕೆಲಸಗಾರರಿದ್ದು, ಇವರಿಗೆ ಸಾಥ್‌ ನೀಡುತ್ತಿದ್ದಾರೆ.

ಶಾಲೆ, ಕಾಲೇಜು ಮಕ್ಕಳು ಬರ್ತಾರೆ:
ಅರಸೀಕೆರೆಯಲ್ಲಿನ ಹೊಯ್ಸಳೇಶ್ವರ, ಪ್ರತಿಭಾ ಕಾಲೇಜು, ವಿದ್ಯಾರಣ್ಯ ಐಟಿಐ ಕಾಲೇಜು, ಕನ್ನಿಕಾ, ಸರ್ಕಾರಿ ಶಾಲೆಗೆ ಸೇರಿದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರು ಮಧ್ಯಾಹ್ನದ ಊಟಕ್ಕೆಂದು ಇಲ್ಲಿಗೆ ಬರುತ್ತಾರೆ.

ಫ‌ುಲ್‌ ಊಟಕ್ಕೆ 30 ರೂ.:
ಸಾಮಾನ್ಯ ಗ್ರಾಹಕರಿಗೆ ಫ‌ುಲ್‌ ಊಟಕ್ಕೆ 30 ರೂ. ತೆಗೆದುಕೊಳ್ಳಲಾಗುತ್ತದೆ. ಅನ್ನ, ತಿಳಿ ಸಾರು, ಸಾಂಬಾರು, ಹಪ್ಪಳ, ಉಪ್ಪಿನಕಾಯಿ, ಚಪಾತಿ ಅಥವಾ ರಾಗಿ ಮುದ್ದೆ ಕೊಡುತ್ತಾರೆ. ವಿದ್ಯಾರ್ಥಿಗಳಿಗೆ 10 ರೂ.ಗೆ ಅನ್ನ, ಸಾಂಬಾರು, ಹಪ್ಪಳ, ಉಪ್ಪಿನಕಾಯಿ ಕೊಡ್ತಾರೆ.

20 ರೂ.ಗೆ ತಿಂಡಿ: 
ಚಿತ್ರಾನ್ನ, ರೈಸ್‌ಬಾತ್‌, ತಟ್ಟೆ ಇಡ್ಲಿ (ಎರಡು), ಗುಂಡು ಇಡ್ಲಿ (ಮೂರು) 20 ರೂ.ಗೆ ಸಿಗುತ್ತದೆ. ವಿದ್ಯಾರ್ಥಿಗಳಿಗಾದ್ರೆ 10 ರೂ.
ಇಷ್ಟು ಕಡಿಮೆ ದರಕ್ಕೆ ಊಟ ತಿಂಡಿ ಕೊಡುತ್ತಿರುವ ಬಗ್ಗೆ ವಿವರ ನೀಡುವ ಮುರಳಿಯವರು, ಸಾಂಬಾರ್‌ ಪೌಡರ್‌, ಗೋಧಿ ಹಿಟ್ಟು ಹೀಗೆ ಹೋಟೆಲ್‌ಗೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಮನೆಯಲ್ಲಿ ತಯಾರಿಸುತ್ತೇವೆ. ಹೀಗಾಗಿ ಖರ್ಚು ಸ್ವಲ್ಪ ಕಡಿಮೆಯಾಗುತ್ತದೆ. ಅಲ್ಲದೆ, ಗ್ರಾಹಕರಿಗೂ ಇದರಿಂದ ಶುಚಿಯಾದ ಊಟ ಸಿಗುತ್ತದೆ ಎನ್ನುತ್ತಾರೆ ಹೋಟೆಲ್‌ ಮಾಲಿಕ ಮುರಳಿ ಮಂದಾರ್ತಿ.

ಹೋಟೆಲ್‌ ಸಮಯ:
ಬೆಳಗ್ಗೆ 7 ರಿಂದ ರಾತ್ರಿ 7ರವರೆಗೆ, ಭಾನುವಾರ ರಜೆ.

ಹೋಟೆಲ್‌ ವಿಳಾಸ:
ಬಿ.ಎಚ್‌.ರಸ್ತೆ, ಕೆಇಬಿ ಎದುರು, ಅರಸೀಕೆರೆ ನಗರ.
 
– ಭೋಗೇಶ ಆರ್‌. ಮೇಲುಕುಂಟೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.