Toy ನಾಡು ದೇಸೀ ಆಟಿಕೆಗಳಿಗೆ ಶುಕ್ರದೆಸೆ


Team Udayavani, Sep 7, 2020, 6:45 PM IST

Toy ನಾಡು ದೇಸೀ ಆಟಿಕೆಗಳಿಗೆ ಶುಕ್ರದೆಸೆ

ಚನ್ನಪಟ್ಟಣದ ಬೊಂಬೆ, ಕೊಪ್ಪಳ ಕಿನ್ನಾಳ ಆಟಿಕೆ ಉದ್ಯಮಕ್ಕೆ ಇದೀಗ ಶುಕ್ರದೆಸೆ. ಚೀನೀ ಆಟಿಕೆಗಳನ್ನು ಮಾರುಕಟ್ಟೆಯಿಂದ ದೂರವಿಡುವ ಪ್ರಧಾನಿ ನರೇಂದ್ರ ಮೋದಿ ಅವರ ಕಾಳಜಿಯಿಂದ ದೇಸೀ ಆಟಿಕೆ ಮಾರುಕಟ್ಟೆಯನ್ನು ಆಳಲು ಈ ಎರಡೂ ಉದ್ಯಮಗಳು ತುದಿಗಾಲಿನಲ್ಲಿ ನಿಂತಿವೆ…

ಅಂದ ಚೆಂದದ ಬೊಂಬೆಗಳು ಮತ್ತು ಆಟಿಕೆಗಳ  ತಯಾರಿಕೆಯಲ್ಲಿ ಚನ್ನಪಟ್ಟಣ ಜಗದ್ವಿಖ್ಯಾತಿ. ಈ ಬೊಂಬೆ, ಆಟಿಕೆ ನಂಬಿಕೊಂಡು ನೂರಾರು ಕುಟುಂಬಗಳು ಇಲ್ಲಿ ಬದುಕು ಕಟ್ಟಿಕೊಂಡಿವೆ. ಸಂಸ್ಕೃತಿಯ ಪ್ರತಿನಿಧಿಗಳಾಗಿ, ಕಲೆಯ ಆಕರ್ಷಣೆಯಾಗಿದ್ದ ಬೊಂಬೆ- ಆಟಿಕೆಗಳೀಗ ಕರಕುಶಲ ಉದ್ಯಮವಾಗಿ ವಿಸ್ಮಯ ಹುಟ್ಟಿಸಿವೆ. ಇಲ್ಲಿನ ಬೊಂಬೆ ಉದ್ಯಮಕ್ಕೆ ಸುಮಾರು 350 ವರ್ಷಗಳ ಇತಿಹಾಸವುಂಟು. ಪರ್ಷಿಯಾದಿಂದ ಕರೆತಂದಿದ್ದ ಕುಶಲಕುರ್ಮಿಗಳಿಂದ, ಚನ್ನಪಟ್ಟಣದ ಜನತೆಗೆ ಬಣ್ಣದ ಕರಕುಶಲ ಕಲೆಯನ್ನು ತಿಳಿಸಿ- ಕಲಿಸಿಕೊಟ್ಟಿದ್ದರಿಂದ ಇಲ್ಲಿ ಬೊಂಬೆಗಳ ಗುಡಿಕೈಗಾರಿಕೆ ಉದ್ಯಮ ಬೆಳೆಯಿತು.

ನಂತರ ಚನ್ನಪಟ್ಟಣದ “ಸ್ಕೂಲ್‌ ಬಾಬಾಸಾಹೇಬ್‌ ಮಿಯಾ’ ಎಂಬ ಕುಶಲಕರ್ಮಿ ಜಪಾನ್‌ಗೆ ಹೋಗಿ, ಆಧುನಿಕ ವಿಧಾನ ಮತ್ತು ಯಂತ್ರೋಪಕರಣಗಳಿಂದ ಗೊಂಬೆ ಕೆತ್ತನೆ ಬಗ್ಗೆ ತರಬೇತಿ ಪಡೆದು, ಆಗಿನ ಮೈಸೂರು ಸಂಸ್ಥಾನದ ದಿವಾನರಿಗೆ ತಮ್ಮ ಕಲೆಯ ಬಗ್ಗೆ ತಿಳಿಸಿದರು. ಇದರಿಂದ ಪ್ರೇರೇಪಿತರಾದ ಮೈಸೂರು ದಿವಾನರು, 1902ರಲ್ಲಿ ಚನ್ನಪಟ್ಟಣದಲ್ಲಿ ಕುಶಲಕರ್ಮಿ ತರಬೇತಿ ಸಂಸ್ಥೆ ಆರಂಭಿಸಿದರು. ಅಂದಿನಿಂದ ಈ ಕೇಂದ್ರದಲ್ಲಿ ತರಬೇತಿ ಪಡೆದು, ಸ್ವಾವಲಂಬನೆಯ ಬದುಕಿನ ದಾರಿ ಕಂಡ ಕುಶಲ ಕಾರ್ಮಿಕರು ಸಹಸ್ರಾರು.

8 ಸಾವಿರ ಮಂದಿಗೆ ಬದುಕು! : ಚನ್ನಪಟ್ಟಣ ತಾಲೂಕಿನಲ್ಲಿ 3 ಸಾವಿರಕ್ಕೂ ಹೆಚ್ಚು ಬೊಂಬೆ ಕರಕುಶಲಕರ್ಮಿಗಳಿದ್ದು, ನಗರದಲ್ಲಿ 300ರಿಂದ 400 ಪರಿಣತರು ಈಗ ಆಟಿಕೆ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಬೊಂಬೆ ತಯಾರಿ ಮತ್ತು ಮಾರಾಟ ಸೇರಿದಂತೆ ಪ್ರಸಕ್ತ ಸಂದರ್ಭದಲ್ಲಿ ನೇರ ಮತ್ತು ಪರೋಕ್ಷವಾಗಿ 8 ಸಾವಿರಕ್ಕೂ ಅಧಿಕ ಮಂದಿ ಉದ್ಯಮವನ್ನೇ ಅವಲಂಬಿಸಿದ್ದಾರೆ.

ಅಬ್ಬಬ್ಟಾ! ಡಿಮ್ಯಾಂಡ್‌ ನೋಡಿ… : 1985ರಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಡಚ್‌ ಸರ್ಕಾರದ ನೆರವಿನಿಂದ ಚನ್ನಪಟ್ಟಣದ ಶೇರ್ವ ಹೋಟೆಲ್‌ ಬಳಿ ಕಲಾನಗರ ಬಡಾವಣೆ ನಿರ್ಮಿಸಿಕೊಟ್ಟಿವೆ. ಸುಮಾರು 200ಕ್ಕೂ ಹೆಚ್ಚು ವಸತಿನಿಲಯಗಳಲ್ಲಿ ಕುಶಲಕರ್ಮಿಗಳು ನೆಲೆ ಕಂಡುಕೊಂಡಿದ್ದಾರೆ. ಮನೆಯಲ್ಲಿಯೇ ಬೊಂಬೆ ತಯಾರಿಸಲು ಅವಕಾಶ ಕಲ್ಪಿಸಲಾಗಿದೆ.ಸಾವಿರಕ್ಕೂ ಹೆಚ್ಚು ಬಗೆಯ ಗೊಂಬೆಗಳು ಇಲ್ಲಿ ಸಿದ್ಧಗೊಂಡು 10 ರೂ.ನಿಂದ ಲಕ್ಷ ರೂ. ಗಳವರೆಗೂ ಮಾರಾಟವಾಗುತ್ತಿವೆ. 450ಕ್ಕೂ ಹೆಚ್ಚು ಬಗೆಯ ಬೊಂಬೆಗಳಿಗೆ ಹೆಚ್ಚು ಬೇಡಿಕೆಯಿದೆ. ಗುಲಗಂಜಿ ಗಾತ್ರದ ಗೊಂಬೆ ಕೆತ್ತನೆಯಲ್ಲಿಯೂ ಇಲ್ಲಿನ ಕುಶಲಕರ್ಮಿಗಳು ನಿಪುಣರು.

ವೆರೈಟಿ ಏನೇನು? : ಬಣ್ಣದ ಬುಗುರಿ, ಆಕರ್ಷಕ ರೈಲು, ಮರದ ಕೀ ಬಂಚ್‌, ಕಿವಿಯೋಲೆ, ಬಳೆ, ನೆಕ್ಲೆಸ್‌, ಚೂಡಿದಾರ್‌ ಮೇಲೆ ಬಳಸುವ ಅಲಂಕಾರದ ಬೊಂಬೆಗಳು ಇಲ್ಲಿ ತಯಾರಾಗುತ್ತವೆ. ಕೀಲುಕುದುರೆ, ಕ್ರಿಸ್ಮಸ್‌ ಗಿಡ, ಎತ್ತಿನ ಬಂಡಿ ವಿಶ್ವಪ್ರಸಿದ್ಧ. ಜಾನಪದ ಮಾದರಿಯಲ್ಲಿ ವಿವಿಧ ಬಗೆಯ ಬೊಂಬೆಗಳನ್ನು ತಯಾರಿಸುವ ಕುಶಲಕರ್ಮಿಗಳು ಕಾಲಕ್ಕೆ ತಕ್ಕಂತೆ ಬದಲಾವಣೆಯನ್ನೂ ಮೈಗೂಡಿಸಿಕೊಂಡಿದ್ದಾರೆ. ಕೆತ್ತನೆಯ ವಿನ್ಯಾಸ, ಶೈಲಿಯಲ್ಲಿ ಸುಧಾರಣೆ ಮಾಡಿಕೊಂಡಿದ್ದಾರೆ. ಆಟಿಕೆಗಳ ಜತೆಗೆ ಬಳಕೆಗೆ ಪೂರಕವಾದ ಪದಾರ್ಥಗಳನ್ನೂ ಇಲ್ಲಿ ತಯಾರಿಸಲಾಗುತ್ತಿದೆ.

ಪ್ರೋತ್ಸಾಹ ಬೇಕಿದೆ… : ಚೀನಾ, ಜಪಾನ್‌, ತೈವಾನ್‌ ದೇಶಗಳಿಂದ ಆಮದಾಗುತ್ತಿದ್ದ ಪ್ಲಾಸ್ಟಿಕ್‌ ಬೊಂಬೆಗಳು, ಪಿಂಗಾಣಿ ವಸ್ತುಗಳು, ಆಟಿಕೆ- ಅಲಂಕಾರಿಕ ಸಾಮಗ್ರಿಗಳ ಆಕರ್ಷಣೆಯಿಂದಾಗಿ ದಶಕದಿಂದೀಚೆಗೆ ಚನ್ನಪಟ್ಟಣದ ಬೊಂಬೆ ಉದ್ಯಮ ತೀವ್ರ ಸಂಕಷ್ಟಕ್ಕೆ ತುತ್ತಾಗಿತ್ತು. 400ಕ್ಕೂ ಹೆಚ್ಚು ಬಗೆಯ ಚೀನಾ ಬೊಂಬೆಗಳು ಪಟ್ಟಣದ ಆಟಿಕೆ ಮಳಿಗೆಗೆ, ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದೂ ಬರ ಸಿಡಿಲಾಯಿತು. ಆದರೂ ಚನ್ನಪಟ್ಟಣದ ಬೊಂಬೆಗಳು ನಲುಗಿಲ್ಲ. ನೈಜತೆಯ ಮೆರುಗಿನಿಂದ ತನ್ನ ತನವನ್ನು ಉಳಿಸಿಕೊಂಡು, ಗ್ರಾಹಕರನ್ನು ಸೆಳೆದಿವೆ. ನಮ್ಮೆಲ್ಲರ ಪ್ರೋತ್ಸಾಹವಿದ್ದರೆ, ಈ ಬೊಂಬೆಗಳು ಮತ್ತೆ ಜಗತ್ತಿನ ತುದಿ ತಲುಪಲು ಸಾಧ್ಯ

ವಿದೇಶಿಗರ ಮನಗೆದ್ದ ಬೊಂಬೆ :

  • 1970ರ ದಶಕದಲ್ಲಿ ಚನ್ನಪಟ್ಟಣಕ್ಕೆ ಬಂದಿದ್ದ ಅಮೆರಿಕದ ಜಾಕಿ ಚಂದಾನಿ ಎಂಬಾಕೆ, ಇಲ್ಲಿನ ಕರಕುಶಲ ಕಲೆಗೆ ಮಾರುಹೋಗಿದ್ದರು. ನಂತರ ಅವರು ಇಲ್ಲಿಯೇ ನೆಲೆಸಿ ಕಲಾವಿದರಿಗೆ ಮಾರ್ಗದರ್ಶನ ನೀಡಿದರು.
  • ಬ್ರಿಟನ್‌ ರಾಣಿ ಡಯಾನಾ ಮತ್ತು ದೊರೆ ಚಾರ್ಲ್ಸ್‌ ವಿವಾಹಕ್ಕೆ ಪೌಡರ್‌ ಬಾಕ್ಸ್‌ಗಳು ಚನ್ನಪಟ್ಟಣ ದಿಂದ ರವಾನೆಯಾಗಿದ್ದವು.
  • ಶ್ರೀಲಂಕಾ ಪ್ರಧಾನಿಯಾಗಿದ್ದ ಭಂಡಾರ ನಾಯಕೆ ಅವರು ಚನ್ನಪಟ್ಟಣಕ್ಕೆ ಭೇಟಿ ನೀಡಿ ಬೊಂಬೆಗಳನ್ನು ಖರೀದಿಸಿದ್ದರು.
  • ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮ ಅವರ ಪತ್ನಿ ಮಿಶೆಲ್‌ ಕೂಡ ಬಣ್ಣದ ಆಟಿಕೆಗಳಿಗೆ ಮಾರು ಹೋಗಿದ್ದರು

 

 

ಡಾ. ಬಿ.ಟಿ. ಮುದ್ದೇಶ

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.