ಕೊಟ್ಟೆ ಕಡುಬಿಗೆ ಮೀನಾಕ್ಷಿ ಭವನಕ್ಕೆ ಬನ್ನಿ


Team Udayavani, Jun 11, 2018, 11:52 AM IST

meenakshi.jpg

ವಿಶೇಷ ತಿಂಡಿ ಎಂದರೆ ಕೊಟ್ಟೆ ಕಡುಬು, ಬೆಣ್ಣೆ ದೋಸೆ. ಇದರ ಜೊತೆಗೆ ತಟ್ಟೆ ಇಡ್ಲಿ, ವಿವಿಧ ಬಗೆಯ ದೋಸೆ, ರೈಸ್‌ಬಾತ್‌, ಕರಾವಳಿ ಭಾಗದ ತಿಂಡಿ ಜೊತೆಗೆ ದಕ್ಷಿಣ ಭಾರತ ಶೈಲಿಯ ಊಟವೂ ಇಲ್ಲಿ ಸಿಗುತ್ತದೆ. ಇನ್ನು ಇಡ್ಲಿ, ದೋಸೆ ಜೊತೆಗೆ ಕೊಡುವ ತೆಂಗಿನಕಾಯಿ ಚಟ್ನಿ, ತರಕಾರಿ ಪಲ್ಯ ರುಚಿಯಾಗಿರುತ್ತದೆ.

ಮಲೆನಾಡು ಪ್ರಾಕೃತಿಕ ಸೌಂದರ್ಯದಷ್ಟೇ ಅಡುಗೆಗೂ ಹೆಸರುವಾಸಿ. ಮಲೆನಾಡಿನ ಜನರು ಬಗೆ ಬಗೆಯ ಸೊಪ್ಪು, ತರಕಾರಿಯಿಂದ ರುಚಿಕರ ಖಾದ್ಯಗಳನ್ನು ತಯಾರಿಸುತ್ತಾರೆ. ಅದು ಆರೋಗ್ಯ ರಕ್ಷಣೆಯ ಜೊತೆಗೆ ಬಾಯಿಗೂ ರುಚಿ ನೀಡುತ್ತದೆ. ಮಲೆನಾಡಿಗರ ತಿನಿಸುಗಳಿಂದಲೇ ಹೆಸರು ಮಾಡಿರುವ ಹೋಟೆಲೆಂದು ಶಿರಸಿಯಲ್ಲಿದೆ.

ಶಿರಸಿಯ ಬಸ್ತಿಗಲ್ಲಿಯಲ್ಲಿ, ಸುಮಾರು 60 ವರ್ಷಗಳ ಹಿನ್ನೆಲೆ ಹೊಂದಿರುವ ಮೀನಾಕ್ಷಿ ಭವನ ಹೋಟೆಲ್‌ ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುತ್ತಿದೆ. ತೀವ್ರಗತಿಯಲ್ಲಿ ಬೆಳೆಯುತ್ತಿರುವ ಶಿರಸಿ ನಗರದಲ್ಲಿ ಅಂತಹ ದೊಡ್ಡ ಹೋಟೆಲ್‌ಗ‌ಳು ಇಲ್ಲದಂತಹ ಸಮಯದಲ್ಲಿ ಕುಟುಂಬ ಸಮೇತವಾಗಿ ಶಿರಸಿಗೆ ಬಂದ ಉಡುಪಿ ಮೂಲದ ರಾಮಕೃಷ್ಣ ತಂತ್ರಿ ಅವರು 1962ರಲ್ಲೇ ತಮ್ಮ ಮನೆಯಲ್ಲೇ ಪುಟ್ಟದಾದ ಹೋಟೆಲ್‌ ಅನ್ನು ಪ್ರಾರಂಭಿಸಿದ್ದರು.

ಮಲೆನಾಡಿನ ಹಳ್ಳಿಯ ಜನರು ನಿರ್ಮಿಸುವಂತೆ ಕಟ್ಟಿಗೆಯಲ್ಲಿ ಕೊಠಡಿಯೊಂದನ್ನು ಕಟ್ಟಿಕೊಂಡು ಸುಮಾರು 50 ವರ್ಷ ಅಲ್ಲಿಯೇ ಹೋಟೆಲ್‌ ನಡೆಸುತ್ತಿದ್ದ ತಂತ್ರಿ ನಿಧನದ ನಂತರ ಅವರ ಮಕ್ಕಳಾದ ವಿಶ್ವನಾಥ್‌ ಹಾಗೂ ಸತೀಶ್‌ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಇದೀಗ ಹೊಸ ಹೋಟೆಲ್‌ ಅನ್ನು ಬಸ್ತಿಗಲ್ಲಿಯಲ್ಲೇ ನಿರ್ಮಿಸಲಾಗುತ್ತಿದ್ದು, ಇದೀಗ ಬಾಡಿಗೆ ಕಟ್ಟಡದಲ್ಲಿ ಹೋಟೆಲ್‌ ನಡೆಸಿಕೊಂಡು ಬರಲಾಗುತ್ತಿದೆ.

ವಿಶೇಷ ತಿಂಡಿ:
ಮೀನಾಕ್ಷಿ ಭವನದ ವಿಶೇಷ ತಿಂಡಿ ಎಂದರೆ ಕೊಟ್ಟೆ ಕಡುಬು, ಬೆಣ್ಣೆ ದೋಸೆ. ಇದರ ಜೊತೆಗೆ ತಟ್ಟೆ ಇಡ್ಲಿ, ವಿವಿಧ ಬಗೆಯ ದೋಸೆ, ರೈಸ್‌ಬಾತ್‌, ಕರಾವಳಿ ಭಾಗದ ತಿಂಡಿ ಜೊತೆಗೆ ದಕ್ಷಿಣ ಭಾರತ ಶೈಲಿಯ ಊಟವೂ ಇಲ್ಲಿ ಸಿಗುತ್ತದೆ. ಇನ್ನು ಇಡ್ಲಿ, ದೋಸೆ ಜೊತೆಗೆ ಕೊಡುವ ತೆಂಗಿನಕಾಯಿ ಚಟ್ನಿ, ತರಕಾರಿ ಪಲ್ಯ ರುಚಿಯಾಗಿರುತ್ತದೆ. ಹೊಸ ಕಟ್ಟಡ ನಿರ್ಮಾಣದ ನಂತರ ಹಿಂದಿನ ತಿಂಡಿಗಳ ಜೊತೆಗೆ ಚಾಟ್ಸ್‌ ಮುಂತಾದ ಬಗೆಯ ತಿಂಡಿಗಳನ್ನೂ ಉಣಬಡಿಸುತ್ತೇವೆ ಎನ್ನುತ್ತಾರೆ ಹೋಟೆಲ್‌ ಮಾಲಿಕರಲ್ಲಿ ಒಬ್ಬರಾದ ವಿಶ್ವನಾಥ್‌.
ಮೀನಾಕ್ಷಿ ಭವನ ವಾರದ 7 ದಿನವೂ ತೆರೆದಿರುತ್ತದೆ. ಭಾನುವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 3ರವರೆಗೆ ಹಾಗೂ ಉಳಿದ ದಿನಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9.30 ಗಂಟೆಯವರೆಗೂ ಸೇವೆಯನ್ನು ಒದಗಿಸುತ್ತದೆ. ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ವೇಳೆ ಜೋಳದ ರೊಟ್ಟಿ, ಚಪಾತಿ ಊಟದ ವ್ಯವಸ್ಥೆ ಇರುತ್ತದೆ.

– ಭೋಗೇಶ ಎಂ.ಆರ್‌.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.