ದೇವನಹಳ್ಳಿ ಬೋಂಡಾ ಸ್ಟಾಲ್‌!


Team Udayavani, Feb 24, 2020, 5:26 AM IST

hotel-(1)

ಬೋಂಡಾ, ಬಜ್ಜಿ, ಪಕೋಡವನ್ನು ಸಾಮಾನ್ಯವಾಗಿ ಎಲ್ಲಾ ಕಡೆ ಮಾಡ್ತಾರೆ. ಆದ್ರೆ, ಕೆಲವರು ತಿಂಡಿಗೆ ಬಳಸುವ ಪದಾರ್ಥ, ಕೈ ರುಚಿ, ಶುಚಿತ್ವ, ಹೀಗೆ… ಹಲವು ಕಾರಣಗಳಿಂದ ಗ್ರಾಹಕರಿಂದ ವಿಶೇಷವಾಗಿ ಗುರುತಿಸಿಕೊಂಡಿರುತ್ತಾರೆ. ಇಂತಹದ್ದೇ ಬೋಂಡಾ ಅಂಗಡಿಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿದೆ. ಅದಕ್ಕೆ ಯಾವುದೇ ನಾಮಫ‌ಲಕವಿಲ್ಲ. ಬೋಂಡಾದಿಂದಲೇ ಹೆಸರುವಾಸಿಯಾಗಿರುವ ರುದ್ರಪ್ಪ ಈ ಅಂಗಡಿಯ ಮಾಲೀಕರು.

ಆಂಧ್ರ ಪ್ರದೇಶದ ಹಿಂದೂಪುರ ತಾಲೂಕು ಚಿಲಮತ್ತೂರು ಮಂಡಲ್‌ನವರಾದ ರುದ್ರಪ್ಪರ ತಂದೆ, ತಾತ ಕೂಡ ಬೋಂಡಾ ಮಾರಾಟ ಮಾಡುತ್ತಿದ್ದರು. ಮದುವೆ ಆದ ನಂತರ ರುದ್ರಪ್ಪ, 1985ರಲ್ಲಿ ಕೆಲಸ ಹುಡುಕಿಕೊಂಡು ಹೊಸಕೋಟೆಯಲ್ಲಿದ್ದ ತಮ್ಮ ದೊಡ್ಡಪ್ಪನ ಮನೆಗೆ ಬಂದಾಗ, ಆ ದೇವನಹಳ್ಳಿಯಲ್ಲಿನ ಸಿದ್ದೇಶ್ವರ ಹೋಟೆಲ್‌ಗೆ ಇವರನ್ನು ಸೇರಿಸುತ್ತಾರೆ. ನಂತರ ಕೆನರಾ ಹೋಟೆಲ್‌ ಸೇರಿಕೊಂಡು ಅಲ್ಲಿಯೂ ಸ್ವಲ್ಪ ದಿನ ಕೆಲಸ ಮಾಡಿದ ನಂತರ ಆ ಹೋಟೆಲ್‌ ಮುಚ್ಚಿಹೋಗುತ್ತದೆ. ನಿರುದ್ಯೋಗಿ ಆದ ರುದ್ರಪ್ಪಗೆ ಹೋಟೆಲ್‌ನಲ್ಲಿದ್ದಾಗ ರಾಯರು ಕಲಿಸಿದ್ದ ಅಡುಗೆ ಕೆಲಸವನ್ನೇ ಉದ್ಯೋಗ ಮಾಡಿಕೊಂಡು, ಶಾಲಾ ಸಮಾರಂಭ, ಇತರೆ ಶುಭ ಕಾರ್ಯಗಳಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು. ಆದರೆ, ಇದರಿಂದ ಸಂಸಾರ ತೂಗಿಸುವುದು ಕಷ್ಟವಾಗಿ 1988ರಲ್ಲಿ ದೇವನಹಳಿಯಲ್ಲಿನ ಗಾಂಧಿ ಚೌಕದ ಸಮೀಪದಲ್ಲಿ ಬೋಂಡಾ, ಬಜ್ಜಿ, ಪಕೋಡ ಮಾಡಲು ಶುರು ಮಾಡಿದ್ದಾರೆ. ಆಗ ಒಂದು ಬೋಂಡಾದ ಬೆಲೆ 10 ಪೈಸೆ ಇತ್ತು ಎನ್ನುತ್ತಾರೆ ರುದ್ರಪ್ಪ. ಕೆಲ ವರ್ಷಗಳ ನಂತರ ಹೊಸ ಬಸ್‌ ನಿಲ್ದಾಣದ ಸಮೀಪದಲ್ಲಿ ಚಿಕ್ಕದಾಗಿ ಮಳಿಗೆಯೊಂದನ್ನು ಬಾಡಿಗೆಗೆ ಪಡೆದು, 30 ವರ್ಷಗಳಿಂದ ಬೋಂಡ ಮಾರಿಕೊಂಡೇ ಜೀವನ ಸಾಗಿಸುತ್ತಿದ್ದಾರೆ. ಇವರಿಗೆ ಪತ್ನಿ ಸಿದ್ದಗಂಗಮ್ಮ, ಸೊಸೆ ಲತಾ ಸಾಥ್‌ ನೀಡುತ್ತಾರೆ.

ಟೇಸ್ಟ್‌ ಮೇಂಟೆನೆನ್ಸ್‌
ಹೋಟೆಲ್‌ನಲ್ಲಿ ಅಡುಗೆ ಕೆಲಸವನ್ನಷ್ಟೇ ಕಲಿತಿದ್ದ ರುದ್ರಪ್ಪ, ಬೋಂಡಾ, ಬಜ್ಜಿ ಮಾಡೋದನ್ನು ಬೇರೆಯವರಿಂದ ಕಲಿತಿದ್ದಾರೆ. ಬೋಂಡಾ ತಿಂದ ಗ್ರಾಹಕರು ಯಾವಾಗ ರುಚಿಯಾಗಿದೆ ಅಂದ್ರೋ ಅಲ್ಲಿಂದ ಈವರೆಗೂ ಅದೇ ಗುಣಮಟ್ಟದ ಪದಾರ್ಥಗಳನ್ನು, ಬಳಸಲು ಶುರು ಮಾಡಿದ್ರಂತೆ. ಕಡಲೇಹಿಟ್ಟು, ಇತರೆ ಮಸಾಲೆ ಪದಾರ್ಥಗಳನ್ನು, ಅವುಗಳ ದರ ಹೆಚ್ಚಾದ್ರೂ ಮೊದಲಿನಿಂದಲೂ ಒಂದು ಅಂಗಡಿಯಲ್ಲೇ ಖರೀದಿ ಮಾಡ್ತಾ ಇದ್ದೀನಿ ಅನ್ನುತ್ತಾರೆ ರುದ್ರಪ್ಪ.

ಗರಿಗರಿ ರುಚಿರುಚಿ
ಬೇರೆ ಕಡೆ ಬೋಂಡಾ ಸ್ವಲ್ಪ ಮೆದುವಾಗಿರುತ್ತದೆ. ಆದರೆ, ಇವರು ಗರಿಗರಿಯಾಗಿ ಮಾಡುತ್ತಾರೆ. ಇದು ಗ್ರಾಹಕರಿಗೆ ಒಂದು ವಿಶೇಷ ಅನುಭವಕೊಡುತ್ತದೆ. ಸದಾ ಗ್ರಾಹಕರ ಸಂಖ್ಯೆ ನೋಡಿಕೊಂಡು ಬಿಸಿ ಬಿಸಿಯಾದ ಬೋಂಡಾ, ವಡೆ ತಯಾರಿಸಿ ಕೊಡ್ತಾರೆ. ಕೆಲವು ಗ್ರಾಪಕರು 200, 300 ರೂ.ವರೆಗೂ ಬೋಂಡಾ, ವಡೆ ತೆಗೆದುಕೊಂಡು ಹೋಗುತ್ತಾರೆ.

ಕ್ಯಾಪ್ಸಿಕಂ ಬಜ್ಜಿ ವಿಶೇಷ:
ಬೋಂಡಾದ ಜೊತೆಗೆ ಕ್ಯಾಪ್ಸಿಕಂ ಬಜ್ಜಿಯನ್ನು ಗ್ರಾಹಕರು ಹೆಚ್ಚು ಇಷ್ಟ ಪಡುತ್ತಾರೆ. ಕತ್ತರಿಸದ ಒಂದು ಕ್ಯಾಪ್ಸಿಕಂ ಅನ್ನು ಕಲಿಸಿದ ಕಡ್ಲೆ ಹಿಟ್ಟಿನಲ್ಲಿ ಅದ್ದಿ ಎಣ್ಣೆಯಲ್ಲಿ ಕರಿಯಲಾಗುತ್ತೆ. ನಂತರ ಅದನ್ನು ನಾಲ್ಕು ಭಾಗ ಮಾಡಿ, ಅದಕ್ಕೆ ಕ್ಯಾರೆಟ್‌, ಈರುಳ್ಳಿ, ಸೌತೆ ಕಾಯಿ, ಟೊಮೆಟೋ ಚುರು, ಚಟ್ನಿ ಹಾಕಿ ಕೊಡ್ತಾರೆ. (2ಕ್ಕೆ 10 ರೂ.).

ಅಂಗಡಿಯಲ್ಲಿ ಸಿಗುವ ತಿಂಡಿ:
ಮಸಾಲೆ ವಡೆ, ಆಲೂಗಡ್ಡೆ ಬೋಂಡಾ, ಸೊಪ್ಪಿನ ಬೋಂಡಾ, ಮೆಣಸಿನ ಕಾಯಿ ಬಜ್ಜಿ, ರವೆ ವಡೆ, ಮದ್ದೂರು ವಡೆ, ಪಕೋಡ, ಹೀರೇಕಾಯಿ ಬಜ್ಜಿ, ಉದ್ದಿನ ವಡೆ, ಹೆಸರುಕಾಳು ಹುಸ್ಲಿ ಹೀಗೆ 12 ತರಹದ ತಿಂಡಿ ಮಾಡಲಾಗುತ್ತೆ. ಜೊತೆಗೆ ಚಟ್ನಿ ಇರುತ್ತೆ. ದರ 10 ರೂ.(ನಾಲ್ಕಕ್ಕೆ).

ಅಂಗಡಿ ವಿಳಾಸ:
ಹೊಸ ಬಸ್‌ ನಿಲ್ದಾಣ ಹಿಂಭಾಗ, ಅಲಹಬಾದ್‌ ಬ್ಯಾಂಕ್‌ ಎದುರು, ದೇವನಹಳ್ಳಿ ಪಟ್ಟಣ.

ಅಂಗಡಿ ಸಮಯ:
ಮಧ್ಯಾಹ್ನ 12 ರಿಂದ ರಾತ್ರಿ 9 ಗಂಟೆ. ಭಾನುವಾರ ರಜೆ

-ಭೋಗೇಶ್‌ ಆರ್‌.ಮೇಲುಕುಂಟೆ/ ಎಸ್‌.ಮಹೇಶ್‌

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.