ನುಗ್ಗೆ ಬೆಳೆದು ಹಿಗ್ಗಿರಿ…


Team Udayavani, May 13, 2019, 6:25 AM IST

Isiri–Nugge-726

ಆರು ಎಕರೆ ಜಮೀನಿನಲ್ಲಿ ಎಂಟು ಸಾವಿರ ನುಗ್ಗೆ ಸಸಿ ಹಾಕಿರುವ ಗವಿಸಿದ್ದಪ್ಪ ಹಾಗೂ ಶಂಕ್ರಪ್ಪ ಸಹೋದರರು ಅದರಿಂದ ಎಲ್ಲರ ನಿರೀಕ್ಷೆ ಮೀರಿ ಲಾಭ ಪಡೆಯುತ್ತಿದ್ದಾರೆ.

ತಾವರಗೇರಾದ ಗವಿಸಿದ್ದಪ್ಪ ಹಾಗೂ ಶಂಕ್ರಪ್ಪ ಕುಂಬಾರ ಸಹೋದರರು ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡಿದ್ದರು. ಆನಂತರ ಕೃಷಿ ಕಡೆ ತಿರುಗಿದಾಗ ಎಲ್ಲರೂ ಇವರತ್ತ ಕುತೂಹಲದಿಂದ ನೋಡುತ್ತಿದ್ದರು. ಈಗ ಆ ಸೋದರರು, ನುಗ್ಗೆ ಬೆಳೆದು ಹಿಗ್ಗುತ್ತಿದ್ದಾರೆ. ಕುಷ್ಟಗಿ ರಸ್ತೆಯಲ್ಲಿ ಇವರದು ಒಟ್ಟು 6 ಎಕರೆ ಜಮೀನು ಇದೆ. ಕಳೆದ ವರ್ಷ ಇದರಲ್ಲಿ ಎಂಟು ಸಾವಿರ ನುಗ್ಗೆ ಸಸಿ ನೆಟ್ಟಿದ್ದರು. ಈಗ ಸಮೃದ್ಧ ಫ‌ಸಲು ಬಂದಿದೆ.

ಕಳೆದ ಒಂದು ತಿಂಗಳಿಂದ ಹೆಚ್ಚು ಕಮ್ಮಿ 20 ಟನ್‌ ಫಸಲು ಬಂದಿದ್ದು, ಸುತ್ತಲಿನ ಕುಷ್ಟಗಿ, ಸಿಂಧನೂರು, ಗಂಗಾವತಿ ಮಾರುಕಟ್ಟೆಗೆ ಮಾರಾಟ ಮಾಡುತ್ತಿದ್ದಾರೆ. ಮೊದಲ ಫಸಲಲ್ಲಿ ಕಾಯಿಗಳು ಚೆನ್ನಾಗಿವೆ. ಉದ್ದ ಮತ್ತು ದಪ್ಪದಾಗಿದ್ದು, ಗ್ರಾಹಕರ ಮೆಚ್ಚುಗೆ ಗಳಿಸಿವೆ. ಪ್ರತಿ ಕೆ.ಜಿ ನುಗ್ಗೆಕಾಯಿ 20 ರೂ. ದರದಲ್ಲಿ ಮಾರಾಟವಾಗುತ್ತಿದ್ದು ಸುಮಾರು 1 ಲಕ್ಷ ರೂ. ಆದಾಯ ಗಳಿಸಿದ್ದಾರೆ.

ಈ ಹಿಂದೆ ಗವಿಸಿದ್ದಪ್ಪ ಮಳೆಯಾಶ್ರಿತ ಕೃಷಿ ಕೈಗೊಂಡಿದ್ದರು. ಮಳೆ ಅಭಾವ, ಕೂಲಿಕಾರರ ಸಮಸ್ಯೆಯಿಂದ ಬೇಸತ್ತು, ಕೃಷಿಯಿಂದ ದೂರ ಉಳಿದರು. ಮತ್ತೆ ಕೃಷಿ ಬದುಕಿಗೆ ಹೆಜ್ಜೆ ಹಾಕುವ ಬಗ್ಗೆ ಮನಸ್ಸು ಮಾಡಿ ಸುತ್ತಮುತ್ತಲಿನ ಸಾವಯವ ರೈತರು, ಪ್ರಗತಿಪರ ಚಿಂತಕರನ್ನು ಭೇಟಿ ಮಾಡಿದರು. ಕೃಷಿಯಲ್ಲಿ ಆಸಕ್ತಿ ಹೊಂದಿರುವ ಗೆಳೆಯ ಕಿರಣ ರಾಯ್ಕರ್‌ ಜೊತೆಯಾಗಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳನ್ನು ಸಂಪರ್ಕಿಸಿದರು.

ದೂರದ ಬೆಳಗಾವಿ, ಹುಬ್ಬಳ್ಳಿ ಭಾಗದ ಪ್ರಗತಿಪರ ರೈತರ ತೋಟಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಕಳೆದ ಒಂದು ವರ್ಷದ ಹಿಂದೆ ಒಣ ಭೂಮಿಯನ್ನು ಸ್ವತ್ಛಗೊಳಿಸಿ, ಎರಡು ಬೋರ್‌ವೆಲ್‌ ಕೊರೆಸಿ ಸಮಗ್ರ ಕೃಷಿ ಕಡೆ ಹೆಜ್ಜೆ ಇಟ್ಟರು. ಹನಿ ನೀರಾವರಿ ಮೂಲಕ ವಿವಿಧ ತಳಿಯ ಸಸಿ, ಸೊಪ್ಪು, ಅರಣ್ಯ ಗಿಡಗಳನ್ನು ಬೆಳೆದಿದ್ದಾರೆ. ಎಲ್ಲದರ ಫ‌ಲಶೃತಿ ಎಂಬಂತೆ ಜೇಬಿನ ತುಂಬ ಲಾಭ ತುಂಬಿದೆ. ನುಗ್ಗೆಕಾಯಿ ಇನ್ನೂ ಕಟಾವು ಮಾಡುವುದಿದೆ.

ಬೆಲೆ ಹೆಚ್ಚಾದರೆ ಲಾಭ ಆಗಬಹುದು. ಸಮಗ್ರ ಕೃಷಿ ಪದ್ಧತಿಯಲ್ಲಿ ದೀಪಾವಳಿ ಸಮಯದಲ್ಲಿ ಚೆಂಡು ಹೂ ಮಾರಾಟದಿಂದ ಕೇವಲ ಎರಡು ತಿಂಗಳಲ್ಲಿ 2 ಲಕ್ಷ ರೂ. ಲಾಭ ಬಂತು. ಆದ್ದರಿಂದ ಸಮಗ್ರ ಕೃಷಿ ನಮಗೆ ಲಾಭ ತಂದಿದೆ ಎನ್ನುತ್ತಾರೆ ರೈತ ಗವಿಸಿದ್ದಪ್ಪ. ನುಗ್ಗೆಯೊಂದಿಗೆ ಪ್ರತಿ ಸಾಲಿನಲ್ಲಿ ಹೆಬ್ಬೇವು, ಶ್ರೀಗಂಧ, ಕೊತ್ತಂಬರಿ, ಬದನೆ ಹೀಗೆ ತರಕಾರಿ ಬೆಳೆಗಳನ್ನು ಬೆಳೆದಿದ್ದಾರೆ. ನುಗ್ಗೆ ಗಿಡಕ್ಕೆ ಕೀಟಬಾಧೆ ಬರದಂತೆ ಕಾಪಾಡಲು ಜೀವಾಮೃತ ಸಿಂಪರಣೆ ಮಾಡಿದ್ದಾರೆ. ಕಳೆ ಕೀಳುವ ಮೂಲಕ ಬೆಳೆ ಪೋಷಣೆ ಮಾಡುತ್ತಿದ್ದಾರೆ. ಜಮೀನಿನಲ್ಲಿ ಎರಡು ಬೋರವೆಲ್‌ ಇದ್ದು, ಅಂತರ್ಜಲ ಕಡಿಮೆ ಇರುವ ಕಾರಣ ಹನಿ ನೀರಾವರಿ ಮತ್ತು ತೊಟ್ಟಿಯಲ್ಲಿ ನೀರು ಸಂಗ್ರಹಿಸಿ ಕೃಷಿ ಚಟುವಟಿಕೆ ಬಳಸುತ್ತಿದ್ದಾರೆ.

— ಎನ್‌. ಶಾಮೀದ್‌ ತಾವರಗೇರಾ

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.