“ಸುವರ್ಣ’ ಕಾಲ !


Team Udayavani, Oct 23, 2017, 11:13 AM IST

23-30.jpg

ಸುವರ್ಣಗಡ್ಡೆಗೆ ಕೊಳೆ ರೋಗ, ಕೀಟಬಾಧೆ ಮುಂತಾದ ಸಮಸ್ಯೆ ಇರುವುದಿಲ್ಲ. ಹಾಗಾಗಿ, ಮಾರುಕಟ್ಟೆಯಲ್ಲಿ ಬೇಡಿಕೆ ಇದ್ದಾಗಲೇ ಬೆಳೆ ಕೈಗೆ ಬಂದರೆ ಲಾಭ ಗ್ಯಾರಂಟಿ. 

    ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾವರೆಹಳ್ಳಿ ಗ್ರಾಮದ ಮಂಜುನಾಥ ಶೇಟ್‌ ಅವರು ರಬ್ಬರ್‌ ಜೊತೆ ಸುವರ್ಣ ಗಡ್ಡೆ ಬೆಳೆದು ಆದಾಯದ ಮಾರ್ಗ ಕಂಡುಕೊಂಡಿದ್ದಾರೆ. 

 ಆನಂದಪುರಂ-ಬಳ್ಳಿಬೈಲು ರಸ್ತೆಯಲ್ಲಿ ತ್ಯಾವರೆಹಳ್ಳಿಯಲ್ಲಿ ಮುಖ್ಯ ರಸ್ತೆಗೆ ತಾಗಿ ಕೊಂಡಂತೆ ಇವರ ಹೊಲವಿದೆ. ಇವರು 3 ವರ್ಷಗಳ ಹಿಂದೆ ರಬ್ಬರ್‌ ಗಿಡ ನೆಟ್ಟು ಬೆಳೆಸಿದ್ದಾರೆ.ರಬ್ಬರ ಸಸಿ ನೆಟ್ಟ ವರ್ಷ ಅಂತರ್‌ ಬೆಳೆಯಾಗಿ ಶುಂಠಿ ಕೃಷಿ ನಡೆಸಿದ್ದ ಇವರು ಕಳೆದ ವರ್ಷ ಮರಗೆಣಸು ಬೆಳೆಸಿದ್ದರು.ಈ ವರ್ಷ ಸುವರ್ಣ ಗಡ್ಡೆ ಮತ್ತು ಮೆಕ್ಕೆಜೋಳವನ್ನು ಅಂತರ್‌ ಬೆಳೆಯಾಗಿಸಿಕೊಂಡಿದ್ದಾರೆ. 

ಕೃಷಿ ಹೇಗೆ ?
ರಬ್ಬರ್‌ ಗಿಡಗಳ ಸಾಲಿನಲ್ಲಿ ಸುಮಾರು ಒಂದು ಎಕರೆ ವಿಸ್ತೀರ್ಣದಲ್ಲಿ 1,200 ಸುವರ್ಣಗಡ್ಡೆ ಸಸಿ ಬೆಳೆಸಿದ್ದಾರೆ. ನೆಡುವಾಗ ಸಾಲಿನಿಂದ ಸಾಲಿಗೆ ಮತ್ತು ಗಿಡದಿಂದ ಗಿಡಕ್ಕೆ 4 ಅಡಿ ಅಂತರದಲ್ಲಿ ಬೀಜ ನಾಟಿ ಮಾಡಿದ್ದಾರೆ. ಸರಾಸರಿ ಒಂದು ಅಡಿ ಚೌಕ ಮತ್ತು ಒಂದು ಅಡಿ ಆಳದ ಗುಂಡಿ ನಿರ್ಮಿಸಿ ಬೀಜ ಹಾಕಿದ್ದರು. ಕಿ.ಗ್ರಾಂ.ಗೆ ರೂ.30 ರ ದರದಲ್ಲಿ, ಸರಾಸರಿ 250 ಗ್ರಾಂ. ಗಾತ್ರದ ಬೀಜದ ಗಡ್ಡೆ ನಾಟಿ ಮಾಡಿದ್ದರು. ಗಿಡನೆಡುವಾಗ ಗುಂಡಿಗೆ ಸ್ವಲ್ಪ ಸಗಣಿ ಗೊಬ್ಬರ ಹಾಕಿದ್ದರು. ಬೀಜ  ಮೊಳೆತು ಎಲೆಗಳು ಕಾಣಿಸುತ್ತಿದ್ದಂತೆ 20:20 ಕಾಂಪ್ಲೆಕ್ಸ್‌ ಗೊಬ್ಬರ ಹಾಕಿ ಕೃಷಿ ಮುಂದುವರೆಸಿದರು. ಪ್ರತಿ 25 ದಿನಕ್ಕೆ ಒಮ್ಮೆಯಂತೆ ಒಟ್ಟು 4 ಸಲ ಗೊಬ್ಬರ ನೀಡಿದ್ದರು.ಪ್ರತಿ ಸಲ ಗೊಬ್ಬರ ನೀಡಿದಾಗ ಗುದ್ದಲಿ ಬಳಸಿ ಗಿಡಕ್ಕೆ ಮಣ್ಣು ಏರಿಸಿ ಗಡ್ಡೆ ಚೆನ್ನಾಗಿ ಬೆಳೆಯುವಂತೆ ಕೃಷಿ ಕೈಗೊಂಡಿದ್ದರು.

ಲಾಭ ಹೇಗೆ ?
ಗಿಡಗಳು ಚೆನ್ನಾಗಿ ಬೆಳೆದು ಪ್ರತಿ ಗಿಡದಿಂದ ಸರಾಸರಿ 8 ಕಿ.ಗ್ರಾಂ.ನಷ್ಟು ಗಾತ್ರದ ಗಡ್ಡೆ ಬೆಳೆದಿದೆ. ಇವರು ಒಟ್ಟು 1,200 ಗಿಡ ಬೆಳೆಸಿದ್ದಾರೆ.ಇದರಿಂದ ಸುಮಾರು 100 ಕ್ವಿಂಟಾಲ್‌ ಸುವರ್ಣ ಗಡ್ಡೆ ಸಿಕ್ಕಿದೆ. ಕ್ವಿಂಟಲ್‌ ಒಂದಕ್ಕೆ ರೂ.2000 ದರದಿಂದ ಇವರಿಗೆ ರೂ.2 ಲಕ್ಷ ಆದಾಯ ದೊರೆತಿದೆ.  ಬೀಜ ಖರೀದಿ, ಗಿಡ ನೆಡುವ ಕೂಲಿ, ಗೊಬ್ಬರ ಖರೀದಿ, ಕೃಷಿ ಕೂಲಿ ಇತ್ಯಾದಿ ಎಲ್ಲ ಲೆಕ್ಕ ಹಾಕಿದರೂ ಇವರಿಗೆ ಸುಮಾರು ರೂ.50 ಸಾವಿರ ಖರ್ಚು ತಗುಲಿದೆ. ಆದರೂ ಸಹ ರೂ.1.5 ಲಕ್ಷ ಲಾಭ.  ಸುವರ್ಣಗಡ್ಡೆಗೆ ಕೊಳೆ ರೋಗ, ಕೋಟ ಬಾಧೆ ಇತ್ಯಾದಿ ಸಮಸ್ಯೆ ಇಲ್ಲದ ಕಾರಣ ಲಾಭ ಅಧಿಕ ಎನ್ನುತ್ತಾರೆ ಮಂಜುನಾಥ್‌. 

ಮಾಹಿತಿಗೆ- 9449132702

ಎನ್‌.ಡಿ.ಹೆಗಡೆ ಆನಂದಪುರಂ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.