ಗೂಡಲ್ಲಿ ದುಡ್ಡು; ನಾಲ್ಕು ಎಕರೆಯಲ್ಲಿ ಸಮೃದ್ಧ ರೇಷ್ಮೆ ಬೆಳೆ


Team Udayavani, Feb 17, 2020, 5:21 AM IST

balappa-kuppi-reshme-(5)

ರೈತ ಪರಮಣ್ಣ ರೇಷ್ಮೆ ಕೃಷಿಯಲ್ಲಿ ವಾರ್ಷಿಕವಾಗಿ ಎರಡೂವರೆ ಲಕ್ಷ ರೂ. ಆದಾಯ ಗಳಿಸುತ್ತಿರುವುದರ ಹಿಂದಿನ ರಹಸ್ಯವೇನು? ರೇಷ್ಮೆ ಕೃಷಿ,

ಕಾಲಕಾಲಕ್ಕೆ ಪಗಾರ ಎಣಿಸಲು ರೇಷ್ಮೆ ಕೃಷಿ ಸೂಕ್ತವಾದ ಮಾರ್ಗ. ರೇಷ್ಮೆ ಕೃಷಿ ನೆಚ್ಚಿಕೊಂಡು ಲಾಭ ಕಾಣುತ್ತಿರುವವರಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಿಂಗಾಪುರ ಪುಟ್ಟ ಗ್ರಾಮದ ರೈತ ಪರಮಣ್ಣ ಬಾಕ್ಲಿಯವರೂ ಒಬ್ಬರು. ಅವರು ತಮ್ಮ 4 ಎಕರೆ ಜಮೀನಿನಲ್ಲಿ ಸಮೃದ್ಧ ರೇಷ್ಮೆ ಬೆಳೆದು ತಿಂಗಳಿಗೆ 25 ಸಾವಿರಕ್ಕೂ ಅಧಿಕ ಲಾಭ ಗಳಿಸುತ್ತಿದ್ದಾರೆ. ಕಳೆದ 7 ವರ್ಷಗಳಿಂದಲೂ ರೇಷ್ಮೆ ಕೃಷಿಯಲ್ಲಿ ತೊಡಗಿ ಅದರಲ್ಲಿ ಪರಿಣತರಾಗಿದ್ದಾರೆ. ಪರಮಣ್ಣ, ಮೊದಲಿಗೆ ಗೂಡು ಕಟ್ಟಲು ಹುಳುಗಳಿಗಾಗಿ 4.50 ಲಕ್ಷ ರೂ. ವೆಚ್ಚದಲ್ಲಿ ಗೋದಾಮು ನಿರ್ಮಿಸಿಕೊಂಡರು. ಶುರುವಿನಲ್ಲಿ ಬರುತ್ತಿದ್ದ ಆದಾಯ 5ರಿಂದ 8 ಸಾವಿರ ರೂ. ಪ್ರಸ್ತುತ, 150 ಕೆ.ಜಿ. ರೇಷ್ಮೆಗೂಡು ಮಾರಾಟ ಮಾಡಿ ಸುಮಾರು 75,000 ಸಾವಿರ ರೂ. ಲಾಭ ಪಡೆಯುತ್ತಿದ್ದಾರೆ. ಮೂರು ತಿಂಗಳಿಗೊಮ್ಮೆ ರೇಷ್ಮೆ ಗೂಡು ಕಟ್ಟುವುದರಿಂದ ವರ್ಷದಲ್ಲಿ ಮೂರು ಹಂತದಲ್ಲಿ ರೇಷ್ಮೆ ಗೂಡು ಮಾರಾಟ ಮಾಡಲಾಗುತ್ತದೆ. ವರ್ಷಕ್ಕೆ 2.5 ಲಕ್ಷ ರೂ.ಗೂ ಅಧಿಕ ಆದಾಯ ತಮ್ಮದಾಗಿಸಿಕೊಂಡಿದ್ದಾರೆ.

ತಗುಲಿದ ಖರ್ಚು ಎಷ್ಟು?
ನಾಲ್ಕು ಎಕರೆಗೆ ರೇಷ್ಮೆ ಗೂಡು ಕಟ್ಟಲು 1500 ರೂ. ಖರ್ಚು ಮಾಡಿದರೆ 100 ರೇಷ್ಮೆ ಹುಳು ಸಾಕಾಗಬಹುದು. ರೇಷ್ಮೆ ಬೆಳೆಗೆ 28,000 ಸಾವಿರ ಖರ್ಚು ಮಾಡಲಾಗಿದೆ. ಸಮಗ್ರ ಬೆಳೆ ಬಂದಾಗ ಹಸಿ ಹಿಪ್ಪು ನೇರಳೆ ಸೊಪ್ಪನ್ನು ಕಟಾವು ಮಾಡಿ ಮೇಯಿಸಿದರೆ, ಐದಾರು ದಿನಗಳಲ್ಲಿ 80 ಕೆಜಿಗಿಂತ ಹೆಚ್ಚು ಇಳುವರಿ ಬರುವಂತೆ ಗೂಡು ಕಟ್ಟುತ್ತವೆ. ಮಾರುಕಟ್ಟೆಯಲ್ಲಿ ರೇಷ್ಮೆಗೂಡಿಗೆ 500ರಿಂದ 600 ರೂ.ಬೆಲೆ ದೊರೆಯುತ್ತದೆೆ. ವರ್ಷದಲ್ಲಿ ಮೂರು ಅಥವಾ ನಾಲ್ಕು ಹಂತದಲ್ಲಿ ಬೆಳೆ ಕಟಾವು ನಡೆಸಿ ರೇಷ್ಮೆ ಗೂಡು ಮಾರಾಟ ಮಾಡಲಾಗುತ್ತದೆ ಎಂದು ರೈತ ಹೇಳುತ್ತಾನೆ.

ರಕ್ಷಣೆಗೆ ಕ್ರಿಮಿನಾಶಕ
ರೋಗ ಹತೋಟಿ ಹಾಗೂ ರೇಷ್ಮೆ ಹುಳುಗಳ ಸಂರಕ್ಷಣೆಗೆ 500 ರೂ.ಬೆಲೆಯ ವಿಜೇತ ಪುಡಿ, ಕಲ್ಲುಸುಣ್ಣ ಸಿಂಪಡಿಸಬೇಕು. ಅಲ್ಲದೇ ರೇಷ್ಮೆ ಬೆಳೆಗೆ ಮುಚ್ಚುರೋಗ ಮಾತ್ರ ಬರುತ್ತದೆ. ನವನ್‌ ಔಷಧಿ ಸಿಂಪಡಿಸಿ ಈ ರೋಗವನ್ನು ಹತೋಟಿಗೆ ತರಬಹುದು.

ಸಾಗುವಾನಿ ಮರ
ರೇಷ್ಮೆ ಬೆಳೆಯೊಂದಿಗೆ, ಜಮೀನಿನಲ್ಲಿ ಸುಮಾರು 10 ವರ್ಷಗಳ ಹಿಂದೇ 100 ಸಾಗುವಾನಿ ಸಸಿಗಳನ್ನೂ ಉಮೇಶ್‌ ಹಾಕಿದ್ದರು. ಈಗ ಅವು ಹೆಮ್ಮರವಾಗಿ ಬೆಳೆದು ನಿಂತಿವೆ. ಅವುಗಳ ಆದಾಯವೂ ದುಪ್ಪಟ್ಟು. ಹೀಗಾಗಿ, ಸಮಗ್ರ ಕೃಷಿ ಕೂಡ ಅವರದಾಗಿದೆ.

ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.