ಗೂಗಲ್‌ ಕ್ರೋಮ್‌ ಲೇಬಲ್‌


Team Udayavani, Nov 18, 2019, 5:30 AM IST

smart-chrome

ಅಂತರ್ಜಾಲವನ್ನು ಜಾಲಾಡಲು ಬ್ರೌಸರ್‌ಗಳು ಬೇಕೇ ಬೇಕು. “ಗೂಗಲ್‌ನ ಕ್ರೋಮ್‌’ ಜಗತ್ತಿನಲ್ಲಿ ಅತಿ ಹೆಚ್ಚು ಜನರು ಬಳಸುತ್ತಿರುವ ಬ್ರೌಸರ್‌. ಅತಿ ವೇಗವಾಗಿ ಕಾರ್ಯಾಚರಿಸುತ್ತದೆ ಎನ್ನುವ ಹೆಗ್ಗಳಿಕೆ ಅದರದ್ದು. ಗೂಗಲ್‌ ಈಗ ಕ್ರೋಮ್‌ ಬಳಕೆದಾರರಿಗೆ ಹೊಸದೊಂದು ಫೀಚರ್‌ಅನ್ನು ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಆದಷ್ಟು ಬೇಗನೆ ಈ ಸವಲತ್ತು ಕ್ರೋಮ್‌ನ ಬಳಕೆದಾರರಿಗೆ ಲಭ್ಯವಾಗಲಿದೆ. ಈ ಹೊಸ ಸವಲತ್ತು ಏನೆಂದರೆ- ಅದರ ಸರ್ಚ್‌ ಬಾಕ್ಸ್‌ನಲ್ಲಿ ಯಾವುದೇ ಕೀ ವರ್ಡ್‌ ಟೈಪಿಸಿ ಶೋಧ ನಡೆಸುವಾಗ ಅದಕ್ಕೆ ಸಂಬಂಧಿಸಿದ ಜಾಲತಾಣಗಳ ಪೇಜುಗಟ್ಟಲೆ ಕೊಂಡಿಗಳು ಪರದೆ ಮೇಲೆ ಮೂಡುತ್ತವೆ. ಇನ್ನು ಮುಂದೆ ಈ ಕೊಂಡಿಗಳ ಸನಿಹದಲ್ಲೇ ಆಯಾ ಜಾಲತಾಣಗಳು ಬೇಗನೆ ತೆರೆದುಕೊಳ್ಳುತ್ತವೆಯೋ, ಇಲ್ಲವೇ ತುಂಬಾ ಸಮಯ ತೆಗೆದುಕೊಳ್ಳುವುದೋ ಎಂಬ ಮಾಹಿತಿಯೂ ದೊರೆಯಲಿದೆ. ವೇಗ ಮತ್ತು ನಿಧಾನ ಎನ್ನುವುದನ್ನು ಸೂಚಿಸುವ ಸಲುವಾಗಿ ಎರಡು ರೀತಿಯ ಬ್ಯಾಡ್ಜ್ಗಳನ್ನು ರೂಪಿಸಲಾಗುತ್ತಿದೆ. ಇದೊಂದು ರೀತಿಯಲ್ಲಿ ಪುಸ್ತಕಕ್ಕೆ ಲೇಬಲ್‌ ಹಚ್ಚಿದ ಹಾಗೆ. ಲೇಬಲ್‌ ನೋಡುತ್ತಲೇ ಅದು ಯಾವ ಪುಸ್ತಕ, ಯಾರದು ಮುಂತಾದ ಮಾಹಿತಿ ದೊರೆಯುವ ಹಾಗೆಯೇ, ಬ್ಯಾಡ್ಜ್ ನೋಡುತ್ತಲೇ ಜಾಲತಾಣ ವೇಗವಾಗಿ ತೆರೆದುಕೊಳ್ಳುವುದೋ, ನಿಧಾನವಾಗಿ ತೆರೆದುಕೊಳ್ಳುವುದೋ ಎನ್ನುವುದನ್ನು ತಿಳಿಯಬಹುದು.

ಜಾಲತಾಣಗಳು ಬಳಕೆದಾರನ ಎದುರು ತೆರೆದುಕೊಳ್ಳಲು ಈ ಹಿಂದೆ ಎಷ್ಟು ಸಮಯ ತೆಗೆದುಕೊಳ್ಳುತ್ತಿತ್ತು ಎಂಬುದನ್ನು ಪತ್ತೆ ಹಚ್ಚಿ ಆ ಮಾಹಿತಿಯ ಸಹಾಯದಿಂದ ಬ್ಯಾಡ್ಜ್ಅನ್ನು ದಯಪಾಲಿಸಲಾಗುವುದು. ಅಷ್ಟೇ ಅಲ್ಲ, ಈ ನಿಟ್ಟಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಗೂಗಲ್‌, ಬಳಕೆದಾರ ಯಾವ ಉಪಕರಣದಿಂದ ಅಂತರ್ಜಾಲವನ್ನು ಶೋಧಿಸುತ್ತಿದ್ದಾನೋ ಆ ಉಪಕರಣದ ಹಾರ್ಡ್‌ವೇರ್‌, ಮೆಮೋರಿ ಸಾಮರ್ಥ್ಯ, ಕಾರ್ಯಕ್ಷಮತೆಯನ್ನು ಪತ್ತೆ ಹಚ್ಚಿ, ಆ ವಿವರಗಳನ್ನು ಆಧರಿಸಿಯೂ ಬ್ಯಾಡ್ಜ್ ನೀಡಲಾಗುವುದು. ಇಂಟರ್ನೆಟ್‌ ಬಳಕೆಯ ಅನುಭವವನ್ನು ಸುಸೂತ್ರವಾಗಿಸುವುದು ಈ ಹೊಸ ಸವಲತ್ತಿನ ಉದ್ದೇಶವಾಗಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.