ಮನೆ ಕಟ್ಟೋರು ಇವನ್ನೆಲ್ಲಾ ನೆನಪಿಟ್ಟುಕೊಳ್ರೀ


Team Udayavani, Apr 10, 2017, 11:50 AM IST

home.jpg

ಮನೆಯ ಮುಂಬಾಗಿಲ ವಿಷಯದಲ್ಲಿ ಎಚ್ಚರವಿರಲಿ. ನೇರ ಮುಂಬಾಗಿಲು ಎದುರಿನಲ್ಲಿ ಒಂದು ಕಟ್ಟೆಯನ್ನೋ, ಗೋಡೆಯನ್ನೋ ನಿರ್ಮಿಸಕೂಡದು. ಇದರಿಂದ ಮನೆಯ ಒಳಗೆ ಆಗಮಿಸುವ ಉತ್ತಮ ಸ್ಪಂದನಗಳು, ಸೌಭಾಗ್ಯದ ಅಂಶಗಳು ಬರುವ ಅದೃಷ್ಟಕ್ಕೆ ತಡೆ ನಿರ್ಮಿಸಿದಂತಾಗಿ ಬಿಡುತ್ತದೆ. 

ಮನೆಯನ್ನು ಕಟ್ಟುವಾಗ ಅನೇಕ ಸಂಗತಿಗಳನ್ನು ನೆನಪಿನಲ್ಲಿಡಬೇಕಾದದ್ದು ಅವಶ್ಯವಾಗಿದೆ. ಮನೆಯ ಈಶಾನ್ಯ ಮೂಲೆ, ಅಗ್ನಿಮೂಲೆ, ವಾಯುವ್ಯಮೂಲೆ, ನೈಋತ್ಯ ಮೂಲೆಗಳಲ್ಲಿ ಮನೆಯ ಯಾವೆಲ್ಲ ಜಾಗಗಳು ಅಡುಗೆ ಮನೆ, ಮಲಗುವ ಕೋಣೆ, ಬಚ್ಚಲ ಮನೆ, ಪಡಸಾಲೆ ದೇವರ ಮಂಟಪ ಇತ್ಯಾದಿಗಳೆಲ್ಲ ಮೀಸಲಿಡಬೇಕೆಂಬ ಸಂಗತಿ ಬೇರೆ. ಆದರೆ ಈ ಎಲ್ಲಾ ವಿಚಾರಗಳ ಹೊರತಾಗಿ ಕೆಲವು ಅನುಸರಿಸಬೇಕಾದ ವಿಚಾರಗಳು ಕೂಡಾ ಮುಖ್ಯವಾಗಿದೆ. ಇದರಿಂದಾಗಿ ಮನೆಯೊಳಗಿನ ಶಾಂತಿ, ಸಮಾಧಾನ, ಸಮೃದ್ಧಿ, ಆರೋಗ್ಯ, ನಗು, ಕೇಕೆ, ಸುಖ, ಸಂತೋಷಗಳೆಲ್ಲ ವೃದ್ಧಿಗೊಳ್ಳುವ ಅವಕಾಶ ಒದಗಿಬರುತ್ತದೆ. ಇಲ್ಲದಿದ್ದರೆ ಅನೇಕ ಕಿರಿಕಿರಿಗಳು ಎಲ್ಲಾ ವಿಚಾರಗಳಲ್ಲು ಒಡಮೂಡಿಕೊಂಡು, ಅಶಾಂತಿ, ಅಸಮಧಾನಗಳು ಹೊಗೆಯಾಡಬಹುದು.

ಮನೆಯಲ್ಲಿ ರಸ್ತೆಯಿಂದ ಮನೆಯೊಳಗಿನ ಕಾಂಪೌಂಡ್‌ ಒಳಗೆ ಕಾಲಿಡಲು ಕೂಡಿಸುವ ಗೇಟು ಯಾವಾಗಲೂ ಮನೆಯ ಹೆಬ್ಟಾಗಿಲಿಗಿಂತ ಚಿಕ್ಕದಿರಬೇಕು ಹಾಗೂ ಹೆಬ್ಟಾಗಿಲು ಎತ್ತರದಲ್ಲಿರಬೇಕು. ಇತ್ತೀಚೆಗೆ ಕೇಂದ್ರ ಸರಕಾರಿ ಕೆಲಸದಲ್ಲಿದ್ದು ನಿವೃತ್ತಿ ಹೊಂದಿದವರೊಬ್ಬರು ಇದ್ದ ಮನೆಯನ್ನು ಹಳೆಯ ರೀತಿಯಿಂದ ನವೀಕರಣಗಳನ್ನು ಮಾಡುವ ಸಂದರ್ಭದಲ್ಲಿ ಕಾಂಪೌಂಡ್‌ ಗೇಟನ್ನು ತುಸು ಎತ್ತರಿಸಿ, ಕುಸುರಿಯಲ್ಲಿ ನಿಯೋಜಿಸಿದಾಗ ಗೇಟು ಹೆಬ್ಟಾಗಿಲಿಗಿಂತ ದೊಡ್ಡದಾಯಿತು. ಆದರೆ ಕೆಲವೇ ದಿನಗಳಲ್ಲಿ ಚೆನ್ನಾಗಿದ್ದ ಅವರ ಆರೋಗ್ಯದಲ್ಲಿ ಏರುಪೇರುಗಳುಂಟಾಗಲು ಪ್ರಾರಂಭಗೊಂಡಿತು. ಈ ಅಸಮತೋಲನ ಅಳತೆಗಳು ಸರಿಗೊಂಡ ಮೇಲೆ ನಂತರ ಇವರ ಆರೋಗ್ಯದಲ್ಲಿ ಮತ್ತೆ ಲವಲವಿಕೆ ಕಂಡು ಬಂದಿತು.

ಮನೆಯ ಟೆರೇಸ್‌ ಅಥವಾ ಮಹಡಿ ಮೆಟ್ಟಿಲುಗಳನ್ನು ನಿರ್ಮಿಸುವಾಗ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ಮುಖವಿರಿಸಿ ಏರುವಂತಿದ್ದರೆ ಸೂಕ್ತ. ಉತ್ತರದಿಂದ ದಕ್ಷಿಣ ದಿಕ್ಕಿಗೆ ಮುಖವಾಗುವಂತೆ ಇದ್ದರೂ ಸರಿಯೇ. ಈ ಅಂಶವನ್ನು ಪರಿಪಾಲಿಸಿದಲ್ಲಿ ಉತ್ತಮ ಅದೃಷ್ಟವು ಶೀಘ್ರವಾಗಿ ಒದಗಿ ಬರಲು  ಅವಕಾಶವಾಗುತ್ತದೆ. ಮನೆಯ ಸೈಟಿನಲ್ಲಿ ಗುದ್ದಲಿ ಪೂಜೆ ಕೂಡಾ ಪ್ರಮುಖವಾದದ್ದು. ದಕ್ಷಿಣ ಹಾಗೆಯೇ ಪೂರ್ವ ದಿಕ್ಕುಗಳು ಈ ಸಂದರ್ಭದಲ್ಲಿ ಪ್ರಥಮವಾಗಿ ಅಗೆಯಬಾರದು. ಪೂರ್ವದಿಕ್ಕಿನಲ್ಲಿ ಅಗೆಯಲ್ಪಡುವ ವಿಚಾರ ಕೈಗೊಂಡಾಗ ಉತ್ತರ ದಿಕ್ಕಲ್ಲೂ ಅಗೆತ ಪ್ರಾರಂಬಗೊಳ್ಳುವುದು ಪ್ರಾಥಮಿಕ ಹಂತದಲ್ಲಿ ಸೂಕ್ತ. ಇದರಿಂದಾಗಿ ಮನೆಯ ಎಲ್ಲ ವಿಚಾರಗಳ ತೊಂದರೆ ಕಾಣದೆ ಶೀಘ್ರವಾಗಿ ಸುಸೂತ್ರವಾಗಿ ನಡೆಯಲು ಅನುಕೂಲವಾಗುತ್ತದೆ. 

ದಕ್ಷಿಣದ ದಿಕ್ಕಿಗೆ ಪೂರಕವಾಗಿ ಹೊರಗಿನ ವರಾಂಡ ಕಟ್ಟುವ ನಿರ್ಣಯ ನಡೆಸಿದಲ್ಲಿ ಆಗ್ನೇಯ ದಿಕ್ಕಿನಲ್ಲಿ ಕೋಣೆ ಇದ್ದು, ಉತ್ತರ ದಿಕ್ಕಿಗೆ ಮುಖ ಮಾಡಿ ಬಾಗಿಲನ್ನು ಕೂಡಿಸಬೇಕು. ಮನೆಯ ಯಜಮಾನನ ಆರೋಗ್ಯ ಲವಲವಿಕೆ ಉತ್ಸಾಹಗಳಿಗೆ ಇದು ಉತ್ತಮ ವಿಚಾರವಾಗಿದೆ.

ಮನೆಯ ಮುಂಬಾಗಿಲ ವಿಷಯದಲ್ಲಿ ಎಚ್ಚರವಿರಲಿ. ನೇರ ಮುಂಬಾಗಿಲು ಎದುರಿನಲ್ಲಿ ಒಂದು ಕಟ್ಟೆಯನ್ನೋ, ಗೋಡೆಯನ್ನೋ ನಿರ್ಮಿಸಕೂಡದು. ಇದರಿಂದ ಮನೆಯ ಒಳಗೆ ಆಗಮಿಸುವ ಉತ್ತಮ ಸ್ಪಂದನಗಳು, ಸೌಭಾಗ್ಯದ ಅಂಶಗಳು ಬರುವ ಅದೃಷ್ಟಕ್ಕೆ ತಡೆ ನಿರ್ಮಿಸಿದಂತಾಗಿ ಬಿಡುತ್ತದೆ. ಹೀಗಾಗಿ ತಾನಾಗಿ ಬರುವ ಒಳ್ಳೆಯ ಸೌಭಾಗ್ಯದ ವಿಚಾರಗಳನ್ನು ಗೋಡೆ ಅಥವಾ ಕಟ್ಟೆ ಕಟ್ಟಿ ತಡೆಯಲು ಹೋಗಬೇಡಿ. ಕಟ್ಟೆ ಇರುವುದನ್ನು ಬಯಸಿ ಕಟ್ಟುವುದಾದಲ್ಲಿ ಮುಂಬಾಗಿಲ ಅಕ್ಕಪಕ್ಕದ ಜಾಗೆಯಲ್ಲಿರುವಂತೆ ನೋಡಿ ಮನೆಯ ಸುರಕ್ಷತೆಗಾಗಿನ ಗೋಡೆಯೂ ಕೂಡಾ ಇದ್ದರೂ ಕಟ್ಟಲ್ಪಟ್ಟರೂ, ಮುಂಬಾಗಿಲ ಉದ್ದಗಲಗಳನ್ನು ಯಾವುದೇ ರೀತಿಯಲ್ಲಿ ತಡೆದು ಅಡ್ಡವಾಗದಂತಿರಲಿ. ಈ ಕುರಿತು ಮರೆಯದೆ ಗಮನಿಸಿ. 

ಮುಂದಿನ ವಾರ ಇನ್ನು ಕೆಲವು ಅವಶ್ಯವಾಗಿ ನೆನಪಿಡಲೇ ಬೇಕಾದ ವಿಚಾರಗಳನ್ನು ಈ ಅಂಕಣದಲ್ಲಿ ದಾಖಲಿಸುತ್ತೇನೆ. ಮನೆಯ ಸೊಗಸು ಅಥವಾ ಭದ್ರತೆಯ ವಿಚಾರ ಯಾವಾಗಲೂ ಪ್ರಮುಖವಾದುದು.

– ಅನಂತಶಾಸ್ತ್ರಿ

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.