ಜೋಳದ ಸಿರಿ ಬೆಳಕಿನಲ್ಲಿ…


Team Udayavani, Feb 18, 2019, 12:30 AM IST

kanaja-2.jpg

ಉತ್ತರ ಕರ್ನಾಟಕದ ಕೃಷಿಕರಿಗೆ ಜೋಳವೇ ಜೀವ ಬೆಳೆ. ಆದರೆ ನೀರಿನ ಅಭಾವದಿಂದ ಜೋಳ ಎಂದರೆ ಸ್ವಲ್ಪ ದೂರ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಇಂಥ ಸಂದರ್ಭದಲ್ಲೂ ಈ ಮಲ್ಲಯ್ಯ ಛಲ ಬಿಡದೆ ಜೋಳ ಬೆಳೆದು ಲಾಭ ಮಾಡುತ್ತಿದ್ದಾರೆ. ಅದು ಹೀಗೆ…

“ಏನ್‌ ಜೋಳಾ ರೀ. ಎಂಥ ಎತ್ರ ಬೆಳದೈತ್ರೀ ….ನಾವು ಇಷ್ಟ ಎತ್ರ ಬೆಳೆದಿದ್ದ ಜೋಳನಾ ನೋಡ್ಯಾ ಇಲಿÅà. ಮಳಿ ಇಲ್ದಾಗುನ ಇಂತಹ ಬೆಳೆ ಬಂದೈತ್ರಲ್ಲಾ’

ಕೊಪ್ಪಳದ ದೋಟಿಹಾಳ-ಹನುಮಸಾಗರ ರಸ್ತೆಯಲ್ಲಿ ನೀವು ಓಡಾಡಿದರೆ ಇಂಥ ಉದ್ಗಾರ ಬರದೇ ಇದ್ದರೆ ಕೇಳಿ. ಏಕೆಂದರೆ, ಮಲ್ಲಯ್ಯ ನಿಡಗುಂದಿ ಮಠ ಎಂಬ ರೈತ ಆ ರೀತಿಯಲ್ಲಿ ಬಿಳಿ ಜೋಳವನ್ನು ಬೆಳೆದಿದ್ದಾರೆ.  

ಬಿಳಿಜೋಳ, ಉತ್ತರ ಕರ್ನಾಟಕ ಭಾಗದ ಜನರ ಮುಖ್ಯ ಆಹಾರ ಬೆಳೆ. ಜೋಳದ ಬೆಳೆಯೊಂದು ಉತ್ತಮ ಫ‌ಸಲು ತಂದರೆ ವರ್ಷದವರೆಗೆ ಆಹಾರದ ಸಮಸ್ಯೆ ತಪ್ಪಿ, ಎಂತಹ ತಾಪತ್ರಯ ಬಂದರೂ, ರೈತರು ಅದನ್ನು ಎದುರಿಸುವ ಮನೋಬಲ ಪಡೆಯುತ್ತಾರೆ. ಹಾಗಾಗಿ, ಗ್ರಾಮದ ಸುತ್ತಮುತ್ತಲಿನ ರೈತರು ಹೆಚ್ಚಾಗಿ ಬಿಳಿಜೋಳವನ್ನು ಬೆಳೆಯಲು ಬಯಸುತ್ತಾರೆ. ಅದೇನು ಪುಣ್ಯವೋ…ಏನೋ.. ಮಲ್ಲಯ್ಯ ಅವರ ಹೊಲದಲ್ಲಿ ಪ್ರತಿವರ್ಷ ನಾನಾ ನಮೂನೆಯ ರೋಗಗಳಿಗೆ ತುತ್ತಾಗುತ್ತಿದ್ದ ಜೋಳದ ಬೆಳೆ,  ಈ ಬಾರಿ ಆಳೆತ್ತರ ಬೆಳೆದು, ತೆನೆಗಳಲ್ಲಿ ಮುತ್ತು ಪೋಣಿಸಿದ ರೀತಿ ಕಾಳು ಕಟ್ಟಿಕೊಂಡು, ಬಿತ್ತಿದವರು ಬಿಂಕಪಡುವ ಹಾಗೆ ನಿಂತಿದೆ.

ತೋಟದ ಬೆಳೆಯಾಗಿ ಬಿಳಿಜೋಳ ಕೃಷಿ
ಸಾಮಾನ್ಯವಾಗಿ ಮಳೆಯಾಶ್ರಿತ ಭೂಮಿಯಲ್ಲಿ ಹಿಂಗಾರು ಬೆಳೆಯಾಗಿ, ಬಿಳಿಜೋಳ ಬಿತ್ತುವುದು ವಾಡಿಕೆ. ಆದರೆ ಕಳೆದ ವರ್ಷ ಮಳೆ ಇಲ್ಲದ ಬೆಳೆ ಸಂಪೂರ್ಣ ಒಣಗಿ ಹೋಯಿತು. ಈ ಕಾರಣದಿಂದಲೇ ಹೊಟ್ಟೆಗೆ ಹಿಟ್ಟು ಹಾಗೂ ಜಾನುವಾರುಗಳಿಗೆ ಮೇವು ದೊರಕೀತು ಎಂಬ ಆಸೆಯಿಂದ ಬಹುತೇಕ ರೈತರು ಪುನಃ ನೀರಾವರಿಯಾಶ್ರಿತ ಜಮೀನುಗಳಲ್ಲಿ ಬಿಳಿ ಜೋಳದ ಬೀಜಗಳನ್ನು ಬಿತ್ತಿದ್ದರು. ಅದರಂತೆ,  ಕಡೆಕೋಪ್ಪ ಗ್ರಾಮದ ಮಲ್ಲಯ್ಯ ನಿಡಗುಂದಿಮಠ ಅವರು ಮೂರು ಎಕರೆ ಜಮೀನಲ್ಲಿ ಮಿಶ್ರ ಬೆಳೆಯಾಗಿ  ಕಬ್ಬು, ಗೋಧಿ ಮತ್ತು ತರಕಾರಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇದರಲ್ಲಿ ಒಂದು ಎಕರೆ ಭೂಮಿಯಲ್ಲಿ ಬಿಳಿಜೋಳ ಬಿತ್ತನೆ ಮಾಡಿದರು. ಆ ಜೋಳವೇ ಇಂದು ಇವರ ಬದುಕಿಗೆ ಆಸರೆಯಾಗಿದೆ. ಜಾನುವಾರುಗಳಿಗೆ ಮೇವು ದೊರಕಿಸಿಕೊಟ್ಟಿದೆ.

ಬಂಪರ್‌ ಬೆಳೆ
ಕೇವಲ ಮೂರು ಎಕರೆ ಜಮೀನು ಹೊಂದಿರುವ ಮಲ್ಲಯ್ಯ, ಎಂಥ ಸಂದರ್ಭದಲ್ಲೂ ಜೋಳ ಬಿತ್ತುವುದನ್ನು ನಿಲ್ಲಿಸಿಲ್ಲ. ಪ್ರತಿ ವರ್ಷ ಜಮೀನಿಗೆ ಸಾವಯವ ಗೊಬ್ಬರವನ್ನು ಬಳಸುತ್ತಾರೆ. ಎರಡು ಬಾರಿ ನೀರಿನ ಜೊತೆ ಸಗಣಿ ಗೊಬ್ಬರ ಮಿಶ್ರಣ ಮಾಡಿ ಹಾಯಿಸಿದ್ದಾರೆ. ಈ ಬಾರಿ ಬಿತ್ತನೆ ಮಾಡಿದ ಬಿಳಿಜೋಳ ಸುಮಾರು 8 ರಿಂದ 9 ಅಡಿ ಎತ್ತರ ಬೆಳೆದು, ಎಕರೆಗೆ 10-15 ಕ್ವಿಂಟಾಲ್‌ ಫ‌ಸಲು ದೊರೆತಿದೆ. 

ಜೋಳ ಬಿತ್ತನಗೆ  1000-1500 ರೂ.ನ ಬಿತ್ತನೆ ಬೀಜವನ್ನು ಖರೀದಿಸಿ ನಾಟಿ ಮಾಡಿದ್ದಾರೆ. ಇತರ ಎಲ್ಲಾ ಖರ್ಚುಗಳನ್ನು ಸೇರಿಸಿದರೆ ಒಟ್ಟು 7,000-8000 ರೂ ಆಗಬಹುದು.  ಮಾರುಕಟ್ಟೆಯಲ್ಲಿ ಸದ್ಯ ಒಂದು ಕಿಂಟಲ್‌ ಬಿಳಿ ಜೋಳಕ್ಕೆ 3,400 ರಿಂದ 3500 ವರಗೆ ಇದೆ. ಒಂದೂವರಿ ಎಕರೆ ಭೂಮಿಯಲ್ಲಿ ಸುಮಾರು 10-15 ಕ್ವಿಂಟಾಲ್‌ ಜೋಳ ಬಂದರೇ 50-60 ಸಾವಿರ ರೂ. ಆದಾಯ. 

ಹಿಂದೇಟು, ಜೋಳದ ಬೆಳೆಗೆ ಕೋಕ್‌
ಹಿಂದೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಜೋಳದ ಕಣಜವೆನಿಸಿಕೊಂಡಿದ್ದವು. ಆದರೆ, ಈಗ ಕೈ ತುಂಬ ಹಣವಿರುವ ವಾಣಿಜ್ಯ ಬೆಳೆಗಳನ್ನು ಬೆಳೆಯುವಲ್ಲಿ ತೋರುವ ಆಸಕ್ತಿಯನ್ನು ರೈತರು ಜೋಳ ಬೆಳೆಯುವಲ್ಲಿ ತೋರುತ್ತಿಲ್ಲ. ಹೀಗಾಗಿ,  ಜೋಳದ ಬೆಳೆ ಅಷ್ಟೊಂದು ಬಿತ್ತನೆಯಾಗಿಲ್ಲ.  ಆರಕ್ಕೇರದ ಮೂರಕ್ಕಿಳಿಯದ ಬೆಳೆ ಎಂದು ಮೂಗು ಮುರಿಯುತ್ತಿದ್ದ ರೈತರು, ಈ ಬಾರಿ ಬಿತ್ತಿದ ನಿಡಗುಂದಿ ಮಠರ ಜಮೀನಿನಲ್ಲಿ ಬೆಳೆದು ನಿಂತಿರುವ ಭಾರೀ ಪ್ರಮಾಣದ ಜೋಳವನ್ನು ಕಂಡು ಬೆರಗಾಗಿದ್ದಾರೆ. ತಾವೂ ಬೆಳೆಯಬೇಕೆಂಬ ನಿರ್ಧಾರಕ್ಕೂ ಬಂದಿದ್ದಾರೆ. 

– ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.