ರೈತರು ಬಂದರು ದಾರಿ ಬಿಡಿ…


Team Udayavani, Dec 10, 2018, 6:00 AM IST

adduru-1-copy-copy.jpg

ಹಸಿರು ಕ್ರಾಂತಿಯ ಹೆಸರಿನಲ್ಲಿ ಭಾರತದ ಕೃಷಿರಂಗಕ್ಕೆ 1960ರ ದಶಕದಲ್ಲಿ ಅಧಿಕ ಇಳುವರಿ ತಳಿಗಳ, ರಾಸಾಯನಿಕ ಗೊಬ್ಬರಗಳ ಮತ್ತು ಪೀಡೆನಾಶಕಗಳ ಪ್ರವೇಶವಾಯಿತು. ಇದರಿಂದಾಗಿ ಕೃಷಿ ಜಮೀನಿನ ಉತ್ಪಾದಕತೆ ಹೆಚ್ಚಿತು. ಅದೇನಿದ್ದರೂ, ಇತ್ತೀಚೆಗಿನ ವರ್ಷಗಳಲ್ಲಿ ಎಕರೆವಾರು ಇಳುವರಿ ಹೆಚ್ಚಾಗುತ್ತಿಲ್ಲ; ಆದರೆ ಕೃಷಿಯ ವೆಚ್ಚ ಏರಿಕೆಯಾಗುತ್ತಿದ್ದು, ರೈತರ ಆದಾಯ ಕುಸಿಯುತ್ತಿದೆ.

ನವೆಂಬರ್‌ 29 ಮತ್ತು 30ರಂದು 50,000 ರೈತರು, ಕೃಷಿ ಕೆಲಸಗಾರರು ದೇಶದ ರಾಜಧಾನಿಯ ರಾಮಲೀಲಾ ಮೈದಾನದಿಂದ ಸಂಸತ್‌ ರಸ್ತೆಗೆ ನಡೆದು ಬಂದರು.  ಇದರಲ್ಲಿ ಆಂಧ್ರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರಪ್ರದೇಶ ರಾಜ್ಯಗಳ ರೈತರೂ ಇದ್ದರು. 

ನವೆಂಬರ್‌ 24, 2016ರಂದು ಕೂಡ, ದೇಶದ ನಾಲ್ಕು ದಿಕ್ಕುಗಳಿಂದ ಜಾಥಾ ಹೊರಟ ರೈತರು ದೆಹಲಿಯಲ್ಲಿ ಒಟ್ಟಾಗಿ ಸೇರಿದ್ದರು.  ಆ ದಿನ 20,000 ರೈತರು ಸಂಸತ್‌ ರಸ್ತೆಯಲ್ಲಿ ಜಮಾಯಿಸಿ ಸರಕಾರದ ಧೋರಣೆಗಳನ್ನು ಪ್ರತಿಭಟಿಸಿ, ತಮ್ಮ ಫ‌ಸಲಿಗೆ ಉತ್ತಮ ಬೆಲೆ ಸಿಗಬೇಕೆಂದು ಆಗ್ರಹಿಸಿದ್ದರು.

ಮಾರ್ಚ್‌ 12, 2018ರಂದು ಮುಂಬೈಯ ಅಜಾದ್‌ ಮೈದಾನಿನಲ್ಲಿಯೂ ಸುಮಾರು 40,000 ರೈತರ ಮತ್ತು ಬುಡಕಟ್ಟು ಜನರ ಮಹಾಜನಸಾಗರ. ಅವರು ಮಾರ್ಚ್‌ 6ರಂದು ನಾಸಿಕದಿಂದ ಪ್ರತಿಭಟನಾ ಜಾಥಾ ಹೊರಟು, 180 ಕಿ.ಮೀ. ನಡೆದು ಮುಂಬೈಗೆ ಬಂದವರು  ಉರಿ ಬಿಸಿಲನ್ನು, ಬೆಂಕಿ ಹಸಿವನ್ನು ನುಂಗಿಕೊಂಡು ಬಂದವರು.

ರೈತರು ಯಾಕೆ ಹೀಗೆ ಪ್ರತಿಭಟಿಸುತ್ತಿದ್ದಾರೆ ಅಂದಿರಾ? ಏಕೆಂದರೆ, ಕೃಷಿರಂಗದ ಬಿಕ್ಕಟ್ಟು ಕುದಿಬಿಂದು ತಲುಪಿದೆ. ರೈತರು, ಕೃಷಿಕೆಲಸಗಾರರು ಅಸಹಾಯಕತೆಯಿಂದ, ಹತಾಶೆಯಿಂದ ಬೆಂದು ಹೋಗಿದ್ದಾರೆ. ಭಾರತ ಸರಕಾರದ 2015-16ರ ಆರ್ಥಿಕ ಸಮೀಕ್ಷೆಯು ಭಾರತೀಯ ಕೃಷಿರಂಗ, ಅದರ ಗತಕಾಲದ ಯಶಸ್ಸಿನ  ಮುಖ್ಯವಾಗಿ ಹಸುರು ಕ್ರಾಂತಿಯ  ಬಲಿಪಶುವಾಗಿದೆ ಎಂದು ದಾಖಲಿಸಿರುವುದು ಎಂತಹ ವಿಪರ್ಯಾಸ!

ಹಸಿರು ಕ್ರಾಂತಿಯ ಹೆಸರಿನಲ್ಲಿ ಭಾರತದ ಕೃಷಿರಂಗಕ್ಕೆ 1960ರ ದಶಕದಲ್ಲಿ ಅಧಿಕ ಇಳುವರಿ ತಳಿಗಳ, ರಾಸಾಯನಿಕ ಗೊಬ್ಬರಗಳ ಮತ್ತು ಪೀಡೆನಾಶಕಗಳ ಪ್ರವೇಶವಾಯಿತು. ಇದರಿಂದಾಗಿ ಕೃಷಿಜಮೀನಿನ ಉತ್ಪಾದಕತೆ ಹೆಚ್ಚಿತು. ಅದೇನಿದ್ದರೂ, ಇತ್ತೀಚೆಗಿನ ವರ್ಷಗಳಲ್ಲಿ ಎಕರೆವಾರು ಇಳುವರಿ ಹೆಚ್ಚಾಗುತ್ತಿಲ್ಲ; ಆದರೆ ಕೃಷಿಯ ವೆಚ್ಚ ಏರಿಕೆಯಾಗುತ್ತಿದ್ದು, ರೈತರ ಆದಾಯ ಕುಸಿಯುತ್ತಿದೆ. ಜೊತೆಗೆ, ಅಂತರ್ಜಲ ಮಟ್ಟ ಕುಸಿತ ಮತ್ತು ಮಾಲಿನ್ಯ  ಇಂತಹ ಪರಿಸರ ವಿನಾಶಕಾರಿ ಪರಿಣಾಮಗಳಿಂದಾಗಿ ಒಟ್ಟಾರೆಯಾಗಿ ಕೃಷಿಕರು ಕಂಗಾಲು.

ರೈತರು ಮತ್ತೆಮತ್ತೆ ಆಕ್ರೋಶದಿಂದ ಪ್ರತಿಭಟಿಸುತ್ತಿರುವಾಗ, ಕೇಂದ್ರ ಸರಕಾರ ಏನು ಮಾಡುತ್ತಿದೆ? 2022ರ ಹೊತ್ತಿಗೆ ರೈತರ ಆದಾಯ ಇಮ್ಮಡಿಗೊಳಿಸುವ ಘೋಷಣೆ ಮಾಡುತ್ತಾ, ಅದಕ್ಕಾಗಿ ಕೆಲವು ಯೋಜನೆಗಳನ್ನು ರೂಪಿಸಿದೆ. ಆ ಮಹಾನ್‌ ಗುರಿ ಸಾಧಿಸಬೇಕಾದರೆ, ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ.

ಮೊದಲನೆಯದಾಗಿ, ಕುಸಿಯುತ್ತಿರುವ ಉತ್ಪಾದಕತೆಯನ್ನು ಮೇಲೆತ್ತಬೇಕಾಗಿದೆ. 2013ರ ಮಾಹಿತಿ ಪರಿಶೀಲಿಸಿದಾಗ, ಭಾರತದಲ್ಲಿ ಏಕದಳ ಧಾನ್ಯಗಳ ಸರಾಸರಿ ಇಳುವರಿ (ಹೆಕ್ಟೇರಿಗೆ) ಇತರ ಹಲವು ದೇಶಗಳ ಇಳುವರಿಗಿಂತ ಬಹಳ ಕಡಿಮೆ. ಉದಾಹರಣೆಗೆ, ನಮ್ಮ ದೇಶದ ಈ ಸರಾಸರಿ ಇಳುವರಿ, ಚೀನಾದ್ದಕ್ಕಿಂತ ಶೇಕಡಾ 39 ಕಡಿಮೆ. ನಮ್ಮ ದೇಶದ ಭತ್ತದ ಸರಾಸರಿ ಇಳುವರಿಯಂತೂ ಶೇ.46 ಕಡಿಮೆ. ಆದರೆ, ಪಂಜಾಬ್‌ ಮತ್ತು ಹರಿಯಾಣಗಳ ಗೋಧಿ ಮತ್ತು ಭತ್ತದ ಸರಾಸರಿ ಇಳುವರಿ ಇತರ ರಾಜ್ಯಗಳ ಸರಾಸರಿ ಇಳುವರಿಗಿಂತ ಜಾಸ್ತಿ ಎಂಬುದು ಗಮನಾರ್ಹ. 2018-19ರ ಮುಂಗಾರು ಮತ್ತು ಹಿಂಗಾರು (ಖಾರಿಫ್ ಮತ್ತು ರಾಬಿ) ಬೆಳೆಗಳ ಫ‌ಸಲಿಗೆ ಕೇಂದ್ರ ಸರಕಾರ ಬೆಂಬಲ ಬೆಲೆಯನ್ನು ಇತ್ತೀಚೆಗೆ ಹೆಚ್ಚಿಸಿದೆ. ಇದು ಏಕದಳ ಧಾನ್ಯಗಳ ಉತ್ಪಾದಕತೆ ಹೆಚ್ಚಿಸಲು ರೈತರಿಗೆ ಪ್ರೇರಣೆಯಾದೀತೆಂದು ಆಶಿಸಬಹುದಾಗಿದೆ.

ನಮ್ಮ ಕೃಷಿರಂಗದ ಎರಡನೆಯ ಸವಾಲು ಕೃಷಿ ಹಿಡುವಳಿ ಮತ್ತು ನೀರಿಗೆ ಸಂಬಂಧಿಸಿದ್ದು. ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ, ಕುಟುಂಬದ ಕೃಷಿಜಮೀನು ಪಾಲಾದಾಗ, ತಲೆಮಾರಿನಿಂದ ತಲೆಮಾರಿಗೆ, ತಲಾ ಕೃಷಿ ಹಿಡುವಳಿಯ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಇದರಿಂದಾಗಿ ಚಿಕ್ಕಚಿಕ್ಕ ಹಿಡುವಳಿಗಳಿಗೆ ಹೆಚ್ಚಿಗೆ ಹಣ ಹೂಡಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಯಾಂತ್ರೀಕರಣಕ್ಕೆ ತೊಡಕಾಗುತ್ತಿದೆ.

ಕರಾವಳಿ ಪ್ರದೇಶ ಹಾಗೂ ಉತ್ತಮ ಮಳೆಯಾಗುವ ಕೆಲವು ಪ್ರದೇಶಗಳ ಹೊರತಾಗಿ, ನಮ್ಮ ದೇಶದ ಉಳಿದೆಲ್ಲೆಡೆ ನೀರಿನ ಕೊರತೆಯ ಸಮಸ್ಯೆ ವರ್ಷದಿಂದ ವರುಷಕ್ಕೆ ಬಿಗಡಾಯಿಸುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಅಕ್ಕಿ, ಗೋಧಿ ಮತ್ತು ಸಕ್ಕರೆ ರಫ್ತು ಮಾಡುವುದು ಆತಂಕದ ಸಂಗತಿ. ಯಾಕೆಂದರೆ, ಇವನ್ನು ರಫ್ತು ಮಾಡುವುದೆಂದರೆ ನಿಜವಾಗಿ ನೀರನ್ನೇ ರಫ್ತು ಮಾಡಿದಂತೆ; ಆ ನೀರನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ, ಪ್ರಶಾಂತ್‌ ಗೋಸ್ವಾಮಿ ಮತ್ತು ಶಿವ ನಾರಾಯಣ… ನಿಷಾದ್‌ 2010ರÇÉೇ ವರದಿ ನೀಡಿದ್ದರು: ಕೃಷಿ ಉತ್ಪನ್ನಗಳ ರಫ್ತಿನ ಮೂಲಕ ನಮ್ಮ ದೇಶ 25 ಘನ ಕಿ.ಮೀ ನೀರನ್ನು ರಫ್ತು ಮಾಡಿದೆ ಎಂಬುದಾಗಿ. ಇದು ನಮ್ಮ ದೇಶದಲ್ಲಿ ಲಭ್ಯವಿರುವ ಒಟ್ಟು ನೀರಿನ ಶೇಕಡಾ ಒಂದು ಭಾಗ!

ಈ ಹಿನ್ನೆಲೆಯಲ್ಲಿ, ಹನಿ ನೀರಾವರಿಗೆ ಒತ್ತು ನೀಡಲೇ ಬೇಕಾಗಿದೆ. ಸುಸ್ಥಿರ ಕೃಷಿಯ ರಾಷ್ಟ್ರೀಯ ಮಿಷನ್‌ 13 ರಾಜ್ಯಗಳ 64 ಜಿÇÉೆಗಳಲ್ಲಿ ನಡೆಸಿದ ಅಧ್ಯಯನ ಗಮನಾರ್ಹ. ಹನಿ ನೀರಾವರಿ ಬಳಕೆಯಿಂದಾಗಿ, ಅಲ್ಲಿ ನೀರಿನ ಮತ್ತು ರಾಸಾಯನಿಕ ಗೊಬ್ಬರಗಳ ಬಳಕೆ (ಮತ್ತು ಆ ಗೊಬ್ಬರಗಳ ವೆಚ್ಚ) ಕಡಿಮೆಯಾಗಿತು; ಜೊತೆಗೆ ಬೆಳೆಗಳ ಫ‌ಸಲಿನಲ್ಲಿ ಹೆಚ್ಚಳ ದಾಖಲಾಯಿತು: ಗೋಧಿಯಲ್ಲಿ ಶೇ.20 ಮತ್ತು ಸೋಯಾಬೀನ್‌ನಲ್ಲಿ ಶೇ.40 ಹೆಚ್ಚಳ. ಬಹುಪಾಲು ರೈತರು ಹನಿ ನೀರಾವರಿ ಅಳವಡಿಸಲು ಕಷ್ಟಸಾಧ್ಯ  ಅದರ ಅಧಿಕ ವೆಚ್ಚದ ಕಾರಣದಿಂದಾಗಿ. ಆದ್ದರಿಂದ, ಸಣ್ಣ ಮತ್ತು ಅತಿಸಣ್ಣ ರೈತರು ಹನಿ ನೀರಾವರಿ ಅಳವಡಿಸಲು ಸಬ್ಸಿಡಿ ನೀಡುವುದು ಅತ್ಯಗತ್ಯ.

ಮೂರನೆಯದಾಗಿ, ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಬೇಕಾಗಿದೆ. ಯಾಕೆಂದರೆ, ರೈತನಿಗೆ ಸಿಗುವುದು ಗ್ರಾಹಕ ಪಾವತಿಸುವ ಬೆಲೆಯ ಅರ್ಧ ಪಾಲು ಅಥವಾ ಅದಕ್ಕಿಂತ ಕಡಿಮೆ. ಜೊತೆಗೆ, ಲೋಡಿಂಗ್‌, ಅನ್‌-ಲೋಡಿಂಗ್‌, ವೇಸ್ಟೇಜ… ಇತ್ಯಾದಿ ಹೆಸರಿನಲ್ಲಿ ರೈತರ ಶೋಷಣೆ ಮತ್ತು ಸುಲಿಗೆ ಸ್ವಾತಂತ್ರ್ಯ ಬಂದು 70 ವರುಷ ದಾಟಿದ ನಂತರವೂ ಮುಂದುವರಿದಿದೆ. ಕೇಂದ್ರ ಸರಕಾರವು 2003ರÇÉೇ ಮಾದರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯಿದೆ ರೂಪಿಸಿದ್ದರೂ ಹಲವು ರಾಜ್ಯಗಳು ಅದನ್ನು ಇನ್ನೂ ಜ್ಯಾರಿ ಮಾಡಿಲ್ಲ. ರಾಷ್ಟ್ರೀಯ ಕೃಷಿ ಮಾರುಕಟ್ಟೆ ಎಂಬ ಕೇಂದ್ರ ಸರಕಾರದ ಇಲೆಕ್ಟ್ರಾನಿಕ್‌ ಮಾಧ್ಯಮದ ಮಾರುಕಟ್ಟೆ ವ್ಯವಸ್ಥೆಯಿಂದ ರೈತರಿಗೆ ಪ್ರಯೋಜನ ಆದೀತೇ? ಕಾದು ನೋಡಬೇಕಾಗಿದೆ.

ನಾಲ್ಕನೆಯದಾಗಿ, ನಮ್ಮ ದೇಶದಲ್ಲಿ ಕೃಷಿರಂಗಕ್ಕೆ ಸಂಶೋಧನೆಯ ಬೆಂಬಲ ತೀರಾ ಕಡಿಮೆ. ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು, ಕೃಷಿ ಸಂಶೋಧನಾ ಕೆಂದ್ರಗಳ ಎಷ್ಟು ಸಂಶೋಧನೆಗಳು ರೈತಸ್ನೇಹಿ ಆಗಿವೆಯೆಂದು ಪರಿಶೀಲಿಸಿದರೆ ನಿರಾಸೆಯಾಗುತ್ತದೆ. ಈ ಶೋಚನೀಯ ಪರಿಸ್ಥಿತಿಗೆ ಒಂದು ಕಾರಣ, ಆ ಸಂಸ್ಥೆಗಳಿಗೆ ನೀಡುವ ಅನುದಾನಗಳ ಬಹುಪಾಲು ಸಂಶೋಧನೆಗಲ್ಲ; ಬದಲಾಗಿ ವೇತನ ಮತ್ತು ಭತ್ತೆಗಳಿಗೆ ವಿನಿಯೋಗ ಆಗುತ್ತಿರುವುದು. ಆದ್ದರಿಂದ, ಇನ್ನಾದರೂ ಕೃಷಿಸಂಶೋಧನೆಗಳು ರೈತರ ನೈಜ ಸಮಸ್ಯೆಗಳನ್ನು ಎತ್ತಿಕೊಳ್ಳಬೇಕಾಗಿದೆ. 

ಇವೆಲ್ಲವನ್ನು ಗಮನಿಸಿದಾಗ, ಭಾರತದ ರೈತನ ಆದಾಯ ಕಳೆದ ಒಂದೆರಡು ದಶಕಗಳಲ್ಲಿ ಎಷ್ಟು ಹೆಚ್ಚಾಗಿದೆ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಇಂಡಿಯಾ ಸ್ಪೆಂಡ್‌ ವಿಶ್ಲೇಷಣೆ, ಈ ಪ್ರಶ್ನೆಗೆ ಉತ್ತರ ನೀಡಿದೆ. ಅದರ ಪ್ರಕಾರ: ಹತ್ತು ವರುಷಗಳ (2003ರಿಂದ 2013) ಅಂಕಿಸಂಖ್ಯೆಗಳನ್ನು ಏರುತ್ತಿರುವ ಕೃಷಿವೆಚ್ಚಗಳಿಗೆ ಹೊಂದಾಣಿಕೆ ಮಾಡಿದರೆ, ಭಾರತದ ರೈತನ ಆದಾಯ ಈ ಅವಧಿಯಲ್ಲಿ ವರ್ಷಕ್ಕೆ ಕೇವಲ ಶೇ.5 ಹೆಚ್ಚಾಗಿದೆ!

ಹಾಗಿರುವಾಗ, 2022ರಲ್ಲಿ, ಅಂದರೆ ಇನ್ನು ಮೂರೇ ವರ್ಷಗಳಲ್ಲಿ ರೈತರ ಆದಾಯವನ್ನು ಇಮ್ಮಡಿ ಮಾಡಬೇಕಾದರೆ ಕೇಂದ್ರ ಸರಕಾರ ಫ‌ಲಿತಾಂಶ-ನಿರ್ದೇಶಿತ ಯೋಜನೆಗಳನ್ನು ತುರ್ತಾಗಿ ಜಾರಿ ಮಾಡಲೇ ಬೇಕಾಗಿದೆ. 

– ಅಡ್ಡೂರು ಕೃಷ್ಣ ರಾವ್‌

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.