ಮೇಡ್‌ ಇನ್‌ ಇಂಡಿಯಾ ಬೆಂಡೆಕಾಯಿ!

ಕೆಂಪಾದವೋ ಎಲ್ಲಾ ಕೆಂಪಾದವೋ

Team Udayavani, Nov 11, 2019, 5:15 AM IST

dd-43

ಈ ಬೆಂಡೆಕಾಯಿಯಲ್ಲಿ ಅಪಾರ ಪ್ರಮಾಣದಲ್ಲಿ ಆ್ಯಂಟಿ ಆಕ್ಸಿಡೆಂಟ್‌(ಕೋಶಗಳ ಪುನರುತ್ಪಾದನಾ ಶಕ್ತಿ), ಕಬ್ಬಿಣ ಮತ್ತು ಕ್ಯಾಲ್ಸಿಯಂ ಸೇರಿದಂತೆ ಎಲ್ಲಾ ಪೋಷಕಾಂಶಗಳು ದೊರಕುತ್ತವೆಯಂತೆ. ಸಾಮಾನ್ಯವಾಗಿ ನಮ್ಮ ಮಾರುಕಟ್ಟೆಯಲ್ಲಿ ಸಿಗುವ ಬೆಂಡೆಕಾಯಿಗಿಂತಲೂ ಹೆಚ್ಚಿನ ಬೆಲೆ ಈ ಕೆಂಪು ಬೆಂಡೆಗೆ ಸಿಗುತ್ತದೆ.

ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ವೆಜಿಟೆಬಲ್‌ ರಿಸರ್ಚ್‌ (ಭಾರತೀಯ ತರಕಾರಿ ಸಂಶೋಧನಾ ಕೇಂದ್ರ- IIVR) 23 ವರ್ಷಗಳ ಕಠಿಣ ಪರಿಶ್ರಮದ ನಂತರ ಅಂತಿಮವಾಗಿ ಹೊಸ ಜಾತಿಯ ಬೆಂಡೆಕಾಯಿ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದೆ. ಇಷ್ಟು ದಿನ ಪಾಶ್ಚಿಮಾತ್ಯ ದೇಶಗಳಲ್ಲಿ ಮಾತ್ರ ಬೆಳೆಯಲಾಗುತ್ತಿದ್ದ ಈ ಕೆಂಪು ಬೆಂಡೆಕಾಯಿಯನ್ನು, ಇನ್ನು ಮುಂದೆ ನಮ್ಮ ದೇಶದಲ್ಲೂ ಬೆಳೆಯಬಹುದು. ಹಾಗೆಯೇ ನಮ್ಮ ರೈತರು ಬೆಳೆಯತೊಡಗಿದರೆಂದರೆ ಈಗ ವಿದೇಶದಿಂದ ಮಾಡಿಕೊಳ್ಳುತ್ತಿರುವ ಆಮದನ್ನು ನಿಲ್ಲಿಸಬಹುದು.

ಸಂಶೋಧನೆ ಮತ್ತು ಅಭಿವೃದ್ಧಿ
ಕೆಂಪು ಬೆಂಡೆಕಾಯಿಯನ್ನು ಈವರೆಗೂ ವಿದೇಶದಲ್ಲಿ ಹಾಗೂ ನಮ್ಮ ದೇಶದ ಶ್ರೀಮಂತರ ಮನೆಗಳಲ್ಲಿ ಮಾತ್ರ ನೋಡಬಹುದಿತ್ತು. 1995-96ರಲ್ಲಿಯೇ ಈ ತರಕಾರಿ ತಳಿಯ ಅಭಿವೃದ್ಧಿಯ ಕೆಲಸ ಪ್ರಾರಂಭವಾಯಿತಾದರೂ ಈಗ ಯಶಸ್ಸು ಸಿಕ್ಕಿದೆ. ಭಾರತೀಯ ಕೃಷಿ ವಿಜ್ಞಾನಿಗಳು ಸುಮಾರು 23 ವರ್ಷಗಳ ಕಾಲ ಶ್ರಮಿಸಿ ಅಭಿವೃದ್ಧಿಪಡಿಸಿದ ಈ ಬೆಂಡೆಕಾಯಿ ತಳಿಗೆ “ಕಾಶಿ ಲಲಿಮಾ’ ಎಂದು ಹೆಸರಿಡಲಾಗಿದೆ. ಇವು ಡಿಸೆಂಬರ್‌ನಿಂದ ನಮ್ಮ ತರಕಾರಿ ಮಾರುಕಟ್ಟೆಗಳಲ್ಲಿ ಲಭ್ಯವಾಗಲಿವೆ.

1995-96ರಲ್ಲಿ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಬಿಜೇಂದ್ರ ಅವರ ನೇತೃತ್ವದಲ್ಲಿ ಸಂಶೋಧನೆ ಪ್ರಾರಂಭಿಸಲಾಯಿತು. ಅವರ ಜೊತೆಗೇ ಡಾ. ಎಸ್‌.ಕೆ. ಸನ್ವಾಲ…, ಡಾ.ಜಿ.ಪಿ ಮಿಶ್ರಾ ಮತ್ತು ತಾಂತ್ರಿಕ ಸಹಾಯಕ ಸುಭಾಷ್‌ಚಂದ್ರ ಕೂಡ ಇದರಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ನೇರಳೆ- ಕೆಂಪು ಬಣ್ಣದಲ್ಲಿರುವ ಈ ಬೆಂಡೆ, 11-14 ಸೆಂ.ಮೀ ಉದ್ದ ಮತ್ತು 1.5-1.6 ಸೆಂ.ಮೀ ವ್ಯಾಸವನ್ನು ಹೊಂದಿರುತ್ತದೆ.

ಆರೋಗ್ಯಕ್ಕೂ ಒಳ್ಳೆಯದು
ವಿಜ್ಞಾನಿಗಳ ಪ್ರಕಾರ, ಈ ಬೆಂಡೆಕಾಯಿಯಲ್ಲಿ ಅಪಾರ ಪ್ರಮಾಣದಲ್ಲಿ ಆ್ಯಂಟಿ ಆಕ್ಸಿಡೆಂಟ್‌(ಕೋಶಗಳ ಪುನರುತ್ಪಾದನಾ ಶಕ್ತಿ), ಕಬ್ಬಿಣ ಮತ್ತು ಕ್ಯಾಲ್ಸಿಯಂ ಸೇರಿದಂತೆ ಎಲ್ಲಾ ಪೋಷಕಾಂಶಗಳು ದೊರಕುತ್ತವೆಯಂತೆ. ಸಾಮಾನ್ಯವಾಗಿ ನಮ್ಮ ಮಾರುಕಟ್ಟೆಯಲ್ಲಿ ಸಿಗುವ ಬೆಂಡೆಕಾಯಿಗಿಂತಲೂ ಹೆಚ್ಚಿನ ಬೆಲೆ ಈ ಕೆಂಪು ಬೆಂಡೆಗೆ ಸಿಗುತ್ತದೆ. ಒಂದು ಕೆ.ಜಿ. ಕಾಶಿ ಲಲಿಮಾ ಬೆಂಡೆಕಾಯಿಗೆ 500 ರೂಪಾಯಿಗಳವರೆಗೆ ಬೆಲೆ ಇದೆ. ಇಷ್ಟು ದಿನ ಈ ಕೆಂಪು ಬೆಂಡೆಕಾಯಿಯನ್ನು ಪಾಶ್ಚಿಮಾತ್ಯ ದೇಶಗಳಿಂದ ಆಮದು ಮಾಡಿಕೊಂಡಾಗ ಗ್ರಾಹಕರು ಇಷ್ಟೊಂದು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಿದ್ದರು. ಈ ತಳಿಯನ್ನು ಅಭಿವೃದ್ಧಿಪಡಿಸಿದ ನಂತರ, ಅದನ್ನು ಆಮದು ಮಾಡುವ ಅಗತ್ಯ ಬರುವುದಿಲ್ಲ. ಆಗ ಅದರ ಬೆಲೆಯೂ ತಗ್ಗಲಿದೆ.

ಇದರಲ್ಲೂ ಹಲವು ಪ್ರಭೇಧಗಳಿವೆ, ಎಲ್ಲದರ ಬೆಲೆಯೂ ಕೆ.ಜಿ.ಗೆ 500- 600ರೂ. ಇರುವುದಿಲ್ಲ. ಕೆ.ಜಿ.ಗೆ 100ರಿಂದ 600 ರೂಪಾಯಿಗಳ ಪ್ರಭೇದಗಳೂ ಇವೆ. ಈಗ ಭಾರತೀಯ ರೈತರು ಕೂಡ ಇವುಗಳನ್ನು ಉತ್ಪಾದಿಸಲು ಸಾಧ್ಯವಾಗಲಿದೆ. ಇದರ ಬೀಜಗಳನ್ನು ಇದೇ ಡಿಸೆಂಬರ್‌ನಿಂದ ಸಂಸ್ಥೆಯೇ ಸಾಮಾನ್ಯ ರೈತರಿಗೆ ಒದಗಿಸಲಿದೆ. ಪೋಷಕಾಂಶಗಳಿಂದ ತುಂಬಿರುವ ಈ ಬೆಂಡೆಯ ಉತ್ಪಾದನೆಯು ಭಾರತೀಯ ರೈತರಿಗೆ ಆದಾಯ ತರುವ ಮತ್ತೂಂದು ಮೂಲವಾಗುವುದಲ್ಲದೆ, ಸಾಮಾನ್ಯ ಜನರಿಗೆ ಪೌಷ್ಠಿಕಾಂಶಭರಿತ ಹೊಸ ತರಕಾರಿಯ ಪರಿಚಯವೂ ಆಗಲಿದೆ.

-ಎಸ್‌.ಕೆ. ಪಾಟೀಲ್‌

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.