ಹನುಮಂತ ಮೂಲಂಗಿಯಿಂದ ಹಣಮಂತ


Team Udayavani, Jan 21, 2019, 12:30 AM IST

revanna.jpg

ಬರದ ನಾಡಲ್ಲಿಯೂ ಉತ್ತಮ ಫ‌ಸಲು ಪಡೆದಿರುವುದು ಹನುಮಂತನ ಹೆಗ್ಗಳಿಕೆ. ಅವರು ಬೆಳೆಯುತ್ತಿರುವ ಮೂಲಂಗಿಗೆ ಬಾಗಲಕೋಟೆ ಮತ್ತು ಸುತ್ತಲಿನ ಪ್ರದೇಶದಲ್ಲಿ ಉತ್ತಮ ಬೇಡಿಕೆಯಿದೆ. 

ಬಾಗಲಕೋಟೆಯ ಗುಳೇದ ಗುಡ್ಡ ಅಂದರೆ ಸಾಕು; ಬರಗಾಲದ ಚಿತ್ರ ಕಣ್ಣ ಮುಂದೆ ಬರುತ್ತದೆ. ಆದರೆ ಗುಳೇಗುಡ್ಡಕ್ಕೆ ಸಮೀಪವಿರುವ ಪರ್ವತಿ ಗ್ರಾಮದ ಹನುಮಂತ ತಿಪ್ಪಣ್ಣ ಹುನಗುಂದರಿಗೆ ಬರವೇನೂ ತಟ್ಟಿಲ್ಲ. ಅವರ ಬದುಕಿನ ಬೆಂಗಾವಲಾಗಿ ಮೂಲಂಗಿ ಇದೆ. 7 ವರ್ಷದಿಂದ ಮೂಲಂಗಿ ಬೆಳೆದೇ ಈತ ಬದುಕನ್ನು ಹಸನಾಗಿಸಿಕೊಂಡಿದ್ದಾರೆ.  ಹಾಗಂತ ಹನುಮಂತರೇನು ಹತ್ತಾರು ಎಕರೆ ಜಮೀನನ್ನು ಹೊಂದಿಲ್ಲ. ಇರುವ ಅಲ್ಪ ಜಮೀನಿನಲ್ಲಿಯೇ ಗರಿಷ್ಠ ಪ್ರಮಾಣದಲ್ಲಿ ಆದಾಯ ಗಳಿಸುತ್ತಿದ್ದಾರೆ. ಹಾಗೆ ನೋಡಿದರೆ, ಪರ್ವತಿ ಗ್ರಾಮದ ಸುತ್ತಮುತ್ತ ಮೂಲಂಗಿಯನ್ನು ಬೆಳೆದು ಹೀಗೂ ಬದುಕಬಹುದು ಅಂತ ತೋರಿಸಿದ್ದೇ ಹನುಮಂತರು. ಮೊದಲು ಬಾರಿಗೆ ಅವರು ಈ ಪ್ರಾಂತ್ಯದಲ್ಲಿ ಮೂಲಂಗಿ ಬೀಜ ಬಿತ್ತಿ ಎಲ್ಲರ ಗಮನ ಸೆಳೆದರು. ಈಯಪ್ಪಾ ಏನೋ ಮಾಡ್ತಾ ಇದ್ದಾನೆ ಅಂತ ಪರ್ವತಿ ಹಾಗೂ ಸುತ್ತುಮುತ್ತಲಿನ ಗ್ರಾಮದ ರೈತರು ನೋಡುವ ಹೊತ್ತಿಗೆ ಹನುಮಂತರ ಜೇಬು ತುಂಬಿತ್ತು. 

ಕಡಿಮೆ ಖರ್ಚು ಆದಾಯ ಹೆಚ್ಚು
ರೈತ ಹನುಮಂತ, ಅಂಕೂರ ಹೈಬ್ರಿಡ್‌ ತಳಿಯ ಮೂಲಂಗಿ ಬೆಳೆಯುತ್ತಾರೆ. ಇದು ಎರಡೂವರೆ ತಿಂಗಳಲ್ಲಿ ಫ‌ಸಲು ಬರುವ ಬೆಳೆ. ಒಂದು ಬಾರಿ ಕಳೆ ತೆಗೆಯುತ್ತಾರೆ. ನಾಲ್ಕು ಬಾರಿ ಕೀಟನಾಶಕ ಔಷಧ ಸಿಂಪಡನೆ ಮಾಡುತ್ತಾರೆ. ಒಂದು ಎಕರೆಗೆ 5,000 ವರೆಗೆ ಖರ್ಚು ಮಾಡುತ್ತಾರೆ. ಹಾಗೇ ಒಂದು ವರ್ಷಕ್ಕೆ ಎಲ್ಲ ಖರ್ಚು ವೆಚ್ಚ ತೆಗೆದರೂ 2 ಲಕ್ಷ ರೂ. ಆದಾಯ ಸಿಗುತ್ತಿದೆ.  ಮೂಲಂಗಿ ಬೆಳೆಗೆ ನೀರು ಬಹಳ ಮುಖ್ಯ. ಕನಿಷ್ಠ ನಾಲ್ಕು ದಿನಕ್ಕೊಮ್ಮೆ ನೀರು ಉಣಿಸಬೇಕು. ಮೂಲಂಗಿಗೆ ಬರುವ ರೋಗ ಬಾಧೆಗಳು ಸಹ ಕಡಿಮೆ. ಹನುಮಂತರು ಮೂರು ಬಾರಿ ಫ‌ಸಲನ್ನು ಪಡೆಯುತ್ತಾರೆ. ಉಳಿದ ಅವಧಿಯಲ್ಲಿ ಜಮೀನಿನ ಫ‌ಲವತ್ತತೆ ಹೆಚ್ಚಿಸಲು ಹಸು ಮತ್ತು ಕುರಿಯ ಸಾವಯುವ ಗೊಬ್ಬರ ಬಳಕೆ ಮಾಡುತ್ತಾರೆ. 

ಹನುಮಂತರು ಅವರು ಬೆಳೆದ ಮೂಲಂಗಿಯನ್ನು ಬಾಗಲಕೋಟೆ, ಹುಬ್ಬಳ್ಳಿ, ಆಲಮಟ್ಟಿ, ಗುಳೇದಗುಡ್ಡ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಅಮೀನಗಡದ ಮಾರುಕಟ್ಟೆಗೆ ಕಳುಹಿಸುತ್ತಾರೆ. ಅಲ್ಲಿ ಐವತ್ತು ಮೂಲಂಗಿಯ ಗುಡ್ಡೆಗೆ 60-70 ರೂ. ಸಿಗುತ್ತದೆ. ಇದು ಮೂಲವ್ಯಾಧಿ ರೋಗಕ್ಕೆ ಉತ್ತಮ ಮನೆಮದ್ದು.  ಹೀಗಾಗಿ, ಸುತ್ತ ಮುತ್ತಲಿನ ಗ್ರಾಮಗಳಲ್ಲಿನ ರೋಗಿಗಳು ಈ ಗ್ರಾಮಕ್ಕೆ ಬಂದು ಮೂಲಂಗಿ ತೆಗೆದುಕೊಂಡು ಹೋಗುತ್ತಾರೆ. ಮೂಲಂಗಿ ಬೆಳೆಯ ನಿರ್ವಹಣೆ ಕಷ್ಟವಲ್ಲ. ಕೇವಲ ಒಬ್ಬ ವ್ಯಕ್ತಿಯಿಂದ ಇಡೀ ಬೆಳೆ ಮತ್ತು ಭೂಮಿಯ ನಿರ್ವಹಣೆ ಮಾಡಬಹುದು. ಕಡಿಮೆ ಖರ್ಚಿನಲ್ಲಿ ಆದಾಯ ನೀಡುವ ಮೂಲಂಗಿಯೂ ಜೀವನ ನಿರ್ವಹಣೆಗೆ ಸಹಾಯಕಾರಿಯಾಗಿದೆ ಎನ್ನುತ್ತಾರೆ ಹನುಮಂತ.

ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎಂಬಂತೆ ರೈತ ಮನಸ್ಸು ಮಾಡಿದರೆ ಎಂತಹ ಬರಗಾಲದಲ್ಲೂ ತನ್ನ ಜಮೀನಿನಲ್ಲಿ ಉತ್ತಮ ಫ‌ಸಲು ತೆಗೆಯುತ್ತಾನೆ. ಆಧುನಿಕ ತಂತ್ರಜ್ಞಾನ ಯೂಗದಲ್ಲೂ ಕಾಲಕ್ಕೆ ಅನುಗುಣವಾಗಿ ರೈತ ಮುಂದಾಲೋಚನೆಯ ಕೃಷಿ ಮಾಡಿದರೆ, ಬರದಲ್ಲೂ ಬಂಗಾರದ ಬೆಳೆ ಕಾಣಬಹುದು ಎಂಬುದಕ್ಕೆ ಈ ರೈತ ಉತ್ತಮ ಉದಾಹರಣೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಪರ್ವತಿ ಗ್ರಾಮದ ಹಣಮಂತ ತಿಪ್ಪಣ್ಣ ಹುನಗುಂದ ಎಂಬ ರೈತ ಈ ವಿಧಾನ ಅನುಸರಿಸಿದವರು. ವಾಸ್ತವಿಕವಾಗಿ ಗುಳೇದಗುಡ್ಡ ತಾಲೂಕು ಬರಪೀಡಿತ ಎಂಬ ಪಟ್ಟಿಗೆ ಸೇರಿದ್ದರೂ ಇವರು ನೀರಾವರಿಯ ಮೂಲಕ ಕೇವಲ ಒಂದು ಎಕರೆ ಭೂಮಿಯಲ್ಲಿ ಮೂಲಂಗಿ ಬೆಳೆದು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ತಮ್ಮ ಜಮೀನಿನಲ್ಲಿ ಕೇವಲ ಮೂಲಂಗಿ ಒಂದೇ ಇವರು ಬೆಳೆಯುವ ಬೆಳೆ. ಸತತ ಏಳು ವರ್ಷಗಳಿಂದ ಬೆಳೆಯುತ್ತಿದ್ದರೂ ಒಮ್ಮೆಯೂ ನಷ್ಟ ಅನುಭವಿಸಿಲ್ಲ. ಮಾರುಕಟ್ಟೆಯಲ್ಲಿ ಸಹ ಉತ್ತಮ ದರ ಬರುತ್ತಿದೆ. 

– ರೇವಣ್ಣ ಅರಳಿ

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.