ಭತ್ತದ ಸೆಲೆ; 20ಕ್ಕೂ ಹೆಚ್ಚು ದೇಶೀ ತಳಿ


Team Udayavani, Feb 24, 2020, 4:50 AM IST

20-bhattha-shivakumar-(1)-copy-copy

ಬೇಸಾಯ ಲಾಭದಾಯಕ ಅಲ್ಲ ಎನ್ನುವ ತೀರ್ಮಾನಕ್ಕೆ ಬಂದಿರುವ ರೈತರು ಪರ್ಯಾಯ ಉದ್ಯೋಗಗಳ ಹುಡುಕಾಟದಲ್ಲಿದ್ದಾರೆ. ಆದರೆ ಕೆಲವರು ಬೇಸಾಯದಲ್ಲೇ ಬದುಕು ರೂಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಂಥವರಲ್ಲಿ ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಕಾಮನಹಳ್ಳಿಯ ಯುವ ರೈತ ಮುತ್ತಣ್ಣ ಅವರೂ ಒಬ್ಬರು. ತಾಲೂಕು ಕೇಂದ್ರದಿಂದ 3 ಕಿ.ಮೀ ದೂರವನ್ನು ಮಂಥಗಿ ರಸ್ತೆಯಲ್ಲಿ ಕ್ರಮಿಸಿದರೆ, ರಸ್ತೆಯ ಎರಡು ಕಡೆಗಳಲ್ಲಿ ಸುಂದರ ತೋಟಗಳು ಗೋಚರಿಸುತ್ತವೆ. ಅಲ್ಲೇ “ಭೂಮಿ ಪುತ್ರ ಎಸ್ಟೇಟ್‌’ ಎಂಬ ನಾಮಫ‌ಲಕ ಕಣ್ಣಿಗೆ ಬೀಳುತ್ತದೆ.

ಪ್ರತಿ ವರ್ಷ ಯಾವುದಾದರೊಂದು ವಿಶೇಷ ಬೆಳೆಗಳನ್ನು ಬೆಳೆಯುವುದು ಮುತ್ತಣ್ಣರ ವೈಶಿಷ್ಟé. ಸುಮಾರು 20 ದೇಶಿ ತಳಿಯ ಭತ್ತವನ್ನು ಬೆಳೆದು ಕಟಾವಿನ ಖುಷಿಯಲ್ಲಿದ್ದಾರೆ. ಶಿವಮೊಗ್ಗದ ಸಾವಯವ ಕೃಷಿ ಸಂಶೋಧನಾ ಕೇಂದ್ರದಿಂದ ದೇಶಿ ತಳಿಯ ಭತ್ತದ ಬೀಜವನ್ನು ತಂದು ಪ್ರಾಯೋಗಿಕವಾಗಿ ತಮ್ಮ 20 ಗುಂಟೆ ಜಮೀನಿನಲ್ಲಿ ಶ್ರೀಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.

ಇಪ್ಪತ್ತು ತಳಿಗಳು
ಸಾಮಾನ್ಯವಾಗಿ ಭತ್ತದ ಪೈರು ಎಂದರೆ ಹಸಿರಿನಿಂದ ಕೂಡಿರುತ್ತದೆ. ಆದರೆ ಮುತ್ತಣ್ಣನ ಹೊಲದಲ್ಲಿ ಕಪ್ಪು ಭತ್ತದ ತಳಿ ನಳನಳಿಸುತ್ತಿದೆ. ಕಾಳಜೀರ, ಎಚ್‌ಎಂಟಿ, ಎಕ್ಸ್‌ಜ್ಯೋತಿ, ಸೇಲಂಸಣ್ಣ, ಮ್ಯಾಜಿಕ್‌ 100, ಜೆಜಿಕೆ- 2, ಸಹ್ಯಾದ್ರಿ ಮೇಘ, ಕೆಪಿಆರ್‌- 2ಎಕ್ಸ್‌, ಮೈಸೂರು ಮಲ್ಲಿಗೆ, ಸಿದ್ದಸಣ್ಣ, ರತ್ನಚೂಡಿ, ಚಿನ್ನಪೊನ್ನಿ, ವೆಲೈಪೊನ್ನಿ, ಡಾಂಬರ ಸಾಲೆ, ಮಂಜುಗುಣಿ ಸಣ್ಣಕ್ಕಿ, ನಜರ್‌ಬಾದ್‌, ಹೀಗೆ ಅನೇಕ ಭತ್ತದ ತಳಿಗಳು ಮುತ್ತಣ್ಣನ ಹೊಲದಲ್ಲಿವೆ.

ಹೈಬ್ರಿಡ್‌ ಭತ್ತದ ತಳಿಗೆ ಹೋಲಿಸಿದರೆ ದೇಶಿ ತಳಿಯ ಭತ್ತದ ಪೈರಿಗೆ ರೋಗ ಹಾಗೂ ಕೀಟಬಾಧೆ ಕಡಿಮೆ. ಅಷ್ಟೇ ಅಲ್ಲದೆ ನೀರಿನ ಪ್ರಮಾಣವೂ ಕಡಿಮೆ. ದೇಶಿ ಭತ್ತಕ್ಕೆ ಬೇಡಿಕೆ ಇದ್ದರೂ ಮಾರುಕಟ್ಟೆಯ ಕೊರತೆ ಇದೆ. ಇದರಿಂದ ದೇಶಿ ಭತ್ತವನ್ನು ಬೆಳೆಯುವ ರೈತರ ಸಂಖ್ಯೆ ಕಡಿಮೆ.

ಬ್ಲ್ಯಾಕ್‌ ಬ್ಯೂಟಿ ಭತ್ತ
ಕಪ್ಪು ಭತ್ತದ ತಳಿಗಳಿಂದ ಗದ್ದೆಯಲ್ಲಿ ಚಿತ್ರ ಬಿಡಿಸುವ ಕಲೆ ಜಪಾನ್‌ನಲ್ಲಿ ತುಂಬಾ ಪ್ರಸಿದ್ಧಿ. ಕಪ್ಪು ಭತ್ತದ ತಳಿಗಳು ಔಷಧೀಯ ಗುಣಗಳಿಂದ ಕೂಡಿವೆ. ಮುತ್ತಣ್ಣ ಅಡಕೆ ಸಸಿಗಳ ನರ್ಸರಿಯನ್ನೂ ನಡೆಸುತ್ತಿದ್ದಾರೆ. ಈಗ, ವರ್ಷಕ್ಕೆ ನರ್ಸರಿಯೊಂದರಿಂದಲೇ ಮುತ್ತಣ್ಣನಿಗೆ 1- 2 ಲಕ್ಷ ರೂ. ಆದಾಯ ಬರುತ್ತಿದೆ. ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ, ಮುಂಡಗೋಡು, ದಾವಣಗೆರೆಗಳಿಂದಲೂ ಮುತ್ತಣ್ಣನ ಅಡಕೆ ಸಸಿಗಳಿಗೆ ಬೇಡಿಕೆಯಿದೆ.

ಇವರ ತೋಟದಲ್ಲಿ ಗೆಣಸು, ಅಡಕೆ, ಬಾಳೆ, ಚಿಕ್ಕು, ಜೇನುಸಾಕಣಿಕೆ, ನಾಟಿಕೋಳಿ, ಮಾವು ಇನ್ನು ಅನೇಕ ತಳಿಯ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಎಲ್ಲವಕ್ಕೂ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಮುತ್ತಣ್ಣ, ಸರ್ಕಾರದಿಂದ ಕೃಷಿ ಪಂಡಿತ, ರಾಜ್ಯೋತ್ಸವ ಪ್ರಶಸ್ತಿಗಳಿಗೂ ಪಾತ್ರರಾಗಿದ್ದಾರೆ.

ಚಿತ್ರ-ಲೇಖನ: ಟಿ. ಶಿವಕುಮಾರ್‌

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.