ಪಪ್ಪಾಯ, ಕಲ್ಲಂಗಡಿ ಕೊಡ್ತು ಲಾಭದ ಸಿಹಿ


Team Udayavani, May 20, 2019, 6:00 AM IST

2

ಬೆಲೆ ಕುಸಿತ, ಬೆಳೆ ಹಾನಿಯಿಂದ ಹೈರಾಣಾಗಿರುವ ರೈತರಿಗೆ ಗದಗ ಜಿಲ್ಲೆಯ ಕೃಷಿಕ ಬಸವರಾಜ ಮಾದರಿ. ಏಕೆಂದರೆ, ಈತ ಪಪ್ಪಾಯಿ, ಕಲ್ಲಂಗಡಿಯಲ್ಲೇ ದೊಡ್ಡ ಲಾಭ ಮಾಡುತ್ತಿದ್ದಾರೆ.

ಗದಗ ಜಿಲ್ಲೆಯಲ್ಲಿ ಯಾವುದೇ ನದಿ, ಜಲಾಶಯಗಳಿಲ್ಲ. ಹಾಗಾಗಿ, ಕೇವಲ ಅಂತರ್ಜಲ ಬಳಸಿಕೊಂಡು ನರೇಗಲ್ಲ ಹೋಬಳಿ ಸುತ್ತಮುತ್ತ ರೈತರು ತೋಟಗಾರಿಕಾ ಬೆಳೆಗಳ ಮೊರೆ ಹೋಗಿದ್ದಾರೆ. ಇವರೆಲ್ಲರಿಗಿಂತ ಭಿನ್ನವಾಗಿ ಅಬ್ಬಿಗೇರಿಯ ಗ್ರಾ.ಪಂ ಸದಸ್ಯ ಕಂ ಕೃಷಿಕನಾಗಿರುವ ಬಸವರಾಜ ತಳವಾರ ಕಲ್ಲಂಗಡಿ, ಪಪ್ಪಾಯಿಂದಲೇ ಲಾಭ ಮಾಡುತ್ತಿದ್ದಾರೆ. ಹೀಗಾಗಿ, ಸುತ್ತಮುತ್ತಲಿನ ರೈತರು ಇವರ ಕಡೆ ತಿರುಗುವಂತಾಗಿದೆ.

ಪಪ್ಪಾಯ ಕೃಷಿ ಹೇಗೆ ?
ಬಸವರಾಜರದ್ದು ಮೂರು ಎಕರೆ ಜಮೀನಿದೆ. ಇದಕ್ಕೆ ಕೊಟ್ಟಿಗೆ ಗೊಬ್ಬರ ಹಾಕಿ ಹೊಲ ಹದ ಮಾಡಿಕೊಂಡರು. ಒಂದು ತೈವಾನ್‌ ಜಾತಿಯ ಸಸಿಗೆ 14 ರೂ. ನಂತೆ ಖರೀದಿಸಿ ಎಕರೆಗೆ 1,300 ಸಸಿಗಳನ್ನು ಆರು ಅಡಿಗಳ ಅಂತರದಲ್ಲಿ, ತಲಾ ಒಂದರಂತೆ ನೆಟ್ಟಿದ್ದಾರೆ. ಮೂರು ಎಕರೆಯಲ್ಲಿ 3900 ಪಪ್ಪಾಯ ಗಿಡಗಳನ್ನು ನೆಟ್ಟು ಹನಿ ನೀರಾವರಿ ಮೂಲಕ ನೀರುಣಿಸುತ್ತಿದ್ದಾರೆ. ಇದೀಗ ಸಮೃದ್ಧವಾಗಿ ಬೆಳೆ ಬಂದಿದೆ. ನಾಟಿ ಮಾಡಿದ 11 ತಿಂಗಳಿಗೆ ಕೊಯ್ಲಿಗೆ ಬರುವ ಈ ತಳಿಯ ಪಪ್ಪಾಯ ಒಂದು ವರ್ಷದ ಕಾಲ ಫ‌ಸಲು ನೀಡುತ್ತದೆ. 9 ತಿಂಗಳಿಗೆ ಕಟಾವಿಗೆ ಬರುವ ರೆಡ್‌ಲೇಡಿ ಹೆಚ್ಚು ಎತ್ತರ ಬೆಳೆಯುವುದಿಲ್ಲ, ಅಕ್ಕಪಕ್ಕ ರಂಬೆ ಕೊಂಬೆ ಹರಡುವುದಿಲ್ಲ, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಸಮೃದ್ಧ ಹಣ್ಣುಗಳಿಂದ ತುಂಬಿರುತ್ತದೆ. ಹೀಗಾಗಿ, ಕಟಾವಿಗೂ ಅನುಕೂಲವಾಗುತ್ತದೆ. ಕಡಿಮೆ ಪ್ರದೇಶದಲ್ಲಿ ಹೆಚ್ಚು ಗಿಡಗಳನ್ನು ನಾಟಿ ಮಾಡಬಹುದಾಗಿದೆ.

ಸರ್ಕಾರ ಸಮಗ್ರ ತೋಟಗಾರಿಕಾ ಯೋಜನೆ (ಸಿಎಚ್‌ಡಿ) 1 ಹೆಕ್ಟೇರ್‌ ಪಪ್ಪಾಯಿ ಬೆಳೆಗೆ ರೂ. 86 ಸಾವಿರ ಸಹಾಯಧನ ನೀಡುತ್ತಿದೆ. ಪ್ರಾರಂಭದಲ್ಲಿ ರೋಗಮುಕ್ತ ಗಿಡಗಳನ್ನು ನಾಟಿ ಮಾಡುವ ಬಗ್ಗೆ ಜಾಗ್ರತೆ ವಹಿಸಬೇಕು. ಮಧ್ಯೆ ಉಂಗುರಚುಕ್ಕೆ ನಂಜುರೋಗ ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಇದೆಲ್ಲವನ್ನು ಬಸವರಾಜ್‌ ಬಹಳ ಮುತುವರ್ಜಿಯಿಂದ ಮಾಡಿದ್ದರಿಂದಲೇ ಈಗ ಲಾಭದ ಮುಖ ನೋಡುತ್ತಿರುವುದು.

ಬಿಟಿ ಹತ್ತಿ, ಗೋವಿನ ಜೋಳ, ಈರುಳ್ಳಿ, ಗೋಧಿ ಉತ್ಪನ್ನಗಳ ಬೆಲೆ ಪಾತಾಳಕ್ಕೆ ಕುಸಿದಿದೆ. ಈ ಬಾರಿ ಆರ್ಥಿಕ ಪರಿಸ್ಥಿತಿಯನ್ನು ಸುಧಾರಣೆ ಮಾಡುವ ನೀಟ್ಟಿನಲ್ಲಿ ಪಪ್ಪಾಯ, ಕಲ್ಲಗಂಡಿ ಬೆಳೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಕಲ್ಲಗಂಡಿ ಬೆಳೆಗೆ ಒಟ್ಟು 10 ರಿಂದ 15 ಸಾವಿರ ರೂ.ಗಳನ್ನು ಖರ್ಚು ಮಾಡಿದ್ದು, 50ರಿಂದ 60ಸಾವಿರ ಲಾಭ ಬಂದಿದೆ ಎನ್ನುತ್ತಾರೆ ಬಸವರಾಜ.

ಸಿಕಂದರ್‌ ಎಂ. ಆರಿ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.