ಸಮಗ್ರ ಕೃಷಿಯಿಂದ  ಸಮೃದ್ಧ ಆದಾಯ


Team Udayavani, Dec 31, 2018, 12:30 AM IST

4.jpg

ಸಾಲ ಮಾಡಿ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಮಧ್ಯೆ ಕೋಡಿಹಳ್ಳಿಯ ಸತೀಶ್‌ ಹೀಗೂ ಬದುಕಬಹುದು ಅನ್ನೋದನ್ನು ತೋರಿಸಿದ್ದಾರೆ. ಬಾಳೆ, ತರಕಾರಿ, ಹೈನುಗಾರಿಕೆಯಿಂದ ನೆಮ್ಮದಿಯ  ಜೀವನ ಮಾಡಬಹುದು ಅನ್ನೋದಕ್ಕೆ ಇವರೇ ಸಾಕ್ಷಿ ಮತ್ತು ಉದಾಹರಣೆ. 

ಹಿರೇಕೆರೂರ ತಾಲೂಕಿನ ರಟ್ಟಿಹಳ್ಳಿ ತಾಲೂಕಿನ ಕೋಡಿಹಳ್ಳಿ ಗ್ರಾಮದ ಸತೀಶ ಬಣಕಾರ ವೃತ್ತಿಯಿಂದ ಕೃಷಿಕರು. ರೈತರು ಸಾಲ ಮಾಡಿ, ಅದನ್ನು ತೀರಿಸಲಾಗದೆ ನೇಣಿನ ಕುಣಿಕೆಗೆ ತಲೆ ಒಡ್ಡುತ್ತಿರುವ ಸಂದರ್ಭದಲ್ಲಿ, “ಏಕೆ ಆತ್ಮಹತ್ಯೆ ಮಾಡ್ಕೊತೀರಿ. ಹೀಗೂ ಬದುಕಬಹುದು ‘ ಅಂತ ಆದಾಯ ಗಳಿಸಿ ತೋರಿಸುತ್ತಿದ್ದಾರೆ ಈ ಸತೀಶ್‌. 

 ಇವರಿಗೆ ಶಾಲಾ ದಿನಗಳಿಂದೇ ಕೃಷಿ ಮಾಡುವ ಆಸೆ.  ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿ ಎಲ್ಲರಿಗಿಂತಲೂ ವಿಭಿನ್ನವಾಗಿ ಕೃಷಿ ಮಾಡುವ ಚಿಂತನೆ ನಡೆಸಿದ್ದರು. ಸಾವಯವ ಕೃಷಿ ಬಗ್ಗೆ ಮಾಹಿತಿ ಕಲೆಹಾಕಿದರು. ಜಮೀನಿಗೆ ಇಳಿದರು.  ತಂದೆ ಶಿವಪ್ಪ ಬಣಕಾರ, ಪಶುಪಾಲನಾ ಇಲಾಖೆಯಲ್ಲಿ ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗನ  ಕನಸಿಗೆ ಅವರೂ ನೀರೆರೆದರು. ಕೊನೆಗೆ ವಾಲಂಟರಿ ರಿಟೈರ್‌ವೆುಂಟ್‌ ಪಡೆದು ಮಗನ ಬೆನ್ನಿಗೆ ನಿಂತರು. 

ಲಾಭ ತಂದ ಸಮಗ್ರ ಬೆಳೆ
ಒಟ್ಟು 8 ಎಕರೆಯಲ್ಲಿ ಕೃಷಿ, ಹೈನುಗಾರಿಕೆ, ತೋಟಗಾರಿಕೆ ಮೂಲಕ ಸಮಗ್ರ ಕೃಷಿಗೆ ಒತ್ತು ನೀಡಿದ್ದಾರೆ ಸತೀಶ್‌.  ಸಾವಯವ ಕೃಷಿಯಲ್ಲಿ 3 ಎಕರೆ ಬಾಳೆ, ತೋಟದಲ್ಲಿ 30 ಕರಿಬೇವಿನ ಗಿಡಗಳು, 100 ಮಹಾಗನಿ, 200 ಸಾಗವಾನಿಯನ್ನು ಬೆಳೆಸಿದ್ದಾರೆ. ಹೈನುಗಾರಿಕೆ ಇವರ ಇನ್ನೊಂದು ಆದಾಯದ ಮೂಲ. 8 ಮಿಶ್ರತಳಿ ಹಸುಗಳನ್ನು ಸಾಕಿದ್ದಾರೆ. ಕೃಷಿ ಭೂಮಿಯಲ್ಲಿ ನೀರಾವರಿ ಹಾಗೂ ಒಣ ಬೇಸಾಯ ಎರಡನ್ನೂ ಮಾಡುತ್ತಿದ್ದು, ಗೋವಿನ ಜೋಳ ಹಾಗೂ ಹತ್ತಿ ಬೆಳೆ ಬೆಳೆದು ಬೇರೆಯವರಿಗಿಂತ ಉತ್ತಮ ಇಳುವರಿ ಪಡೆಯುತ್ತಿದ್ದಾರೆ.  20 ಗುಂಟೆಯಲ್ಲಿ ಪಾಲಿಹೌಸ್‌ ನಿರ್ಮಿಸಿ,  ಟೊಮೆಟೊ, ಬದನೆಕಾಯಿ, ಮೆಣಸು ಮೊದಲಾದ ತರಕಾರಿಗಳ ಮಡಿಗಳನ್ನು ಮಾರುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಂಡಿದ್ದಾರೆ.

ಇವರಿಗೆ ವರ್ಷಕ್ಕೆ ಹೆಚ್ಚುಕಮ್ಮಿ ನಾಲ್ಕು ಲಕ್ಷ ರೂ. ಆದಾಯವಿದೆ. ಬಾಳೆಯಿಂದ ಮೂರು ಲಕ್ಷ, ಕರಿಬೇವಿನಿಂದ 6 ಸಾವಿರ, ಹೈನುಗಾರಿಕೆಯಿಂದ ವರ್ಷಕ್ಕೆ ಒಂದು ಲಕ್ಷ ಆದಾಯವಿದೆ. ಪಾಲಿಹೌಸ್‌ನಲ್ಲಿ ಬೆಳೆಯುವ ತರಕಾರಿ ಸಸಿಗಳ ಮಾರಾಟದಿಂದ ಆಗಾಗ ಕೈ ಖರ್ಚಿಗೆ ಹಣ ಸಿಗುತ್ತಿದೆಯಂತೆ. 

 ಸತೀಶ ಅವರಿಗೆ ಕೃಷಿ ಕಾರ್ಮಿಕರ ಸಮಸ್ಯೆ ಇಲ್ಲ. ಕಾರಣ, ಮನೆಯವರೆಲ್ಲಾ  ಇವರ ಬೆನ್ನಿಗೆ ನಿಂತಿದ್ದಾರೆ.  ಚಿಕ್ಕವನಿದ್ದಾಗಿನಿಂದಲೂ ಕೃಷಿ ಕೆಲಸದಲ್ಲಿ ಪಾಲ್ಗೊಳ್ಳಲು ನನಗೆ ಬಹಳ ಇಷ್ಟವಿತ್ತು. ತಂದಯೇ ನನ್ನ ನಿಜವಾದ ಗುರು ಎನ್ನುತ್ತಾರೆ ಕೃಷಿಕ – ಸತೀಶ ಬಣಕಾರ.  ಇವರ ಸಾಧನೆಯನ್ನು ಗುರುತಿಸಿದ ಸರ್ಕಾರ, ಈ ಸಾಲಿನ ಕೃಷಿ ಮೇಳದಲ್ಲಿ ಹಿರೇಕೆರೂರ-ರಟ್ಟಿಹಳ್ಳಿ ತಾಲೂಕಿನ ಉತ್ತಮ ಯುವ ಕೃಷಿಕ ಎಂಬ ಪ್ರಶಸ್ತಿ ನೀಡಿದೆ. 

ಸಿದ್ದಲಿಂಗಯ್ಯ ಗೌಡರ್‌

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.