ಸನ್ಮಾನ್‌ದಲ್ಲಿ ಸಂತೃಪ್ತಿ ಭೋಜನ 


Team Udayavani, Aug 6, 2018, 6:00 AM IST

hotel-1-copy.jpg

ಮಲೆನಾಡಿನ ಮಳೆ ಸುರೀತಾ ಇದೆ. ಮಧ್ಯಾಹ್ನದ ಹೊತ್ತು…ಹೋಯ್‌ ಊಟ ಆಯ್ತಾ ಮಾರ್ರೆà…ಇಲ್ವಾ ? ಬನ್ನಿ ಗೋಪಾಲಣ್ಣನ ಸನ್ಮಾನ್‌ ಮೆಸ್‌ಗೆ ಹೋಗಿ ಬಿಸಿಬಿಸಿ ಊಟ ಮಾಡಿ ಬರೋಣ…ಮೊದೆÉà ಹಸಿವು ಬೇರೆ…

ನೀವು ಶಿವಮೊಗ್ಗದ ತೀರ್ಥಹಳ್ಳಿಗೆ ಬಂದರೆ ಅಲ್ಲಿ ಸಿಗುವ ಪರಿಚಯದ ಜನ ನಿಮ್ಮನ್ನು ಹೀಗೆ ಕರೆದಾರು. ಹೌದು, ಪಟ್ಟಣದ ಹೃದಯ ಭಾಗದಲ್ಲಿರುವ ಸನ್ಮಾನ್‌ ಮೆಸ್‌, ಮಧ್ಯಾಹ್ನದ ಊಟಕ್ಕೆ ತನ್ನದೇ ಆದ ಹೆಸರು ಪಡೆದುಕೊಂಡಿದೆ. ಕಳೆದ 20 ವರ್ಷಗಳಿಂದ ಮಲೆನಾಡಿನಲ್ಲಿ  ಮನೆಮಾತಾದ ಭೋಜನದ ಮನೆ ಇದು. 

ಹೊಟ್ಟೆಯಲ್ಲಿ ಹಸಿವು ಎದ್ದರೆ, ಮನಸ್ಸು ಗೋಪಾಲಣ್ಣನ ಮೆಸ್‌ ಕಡೆ ತಿರುಗುತ್ತದೆ. ಪಟ್ಟಣದ ಗಾಂಧೀಚೌಕ, ಮಾರ್ಕೆಟ್‌ ರಸ್ತೆ ಸಮೀಪದ (ಶ್ರೀ ಮಾರಿಕಾಂಬಾ ದೇವಾಲಯದ ಹತ್ತಿರ) ಟಿಎಪಿಸಿಎಂಎಸ್‌ ರಸ್ತೆಯ ಆರಂಭದಲ್ಲಿ ಬಲಗಡೆ ಈ ಮೆಸ್‌ ಇದೆ.  ಪಕ್ಕಾ ಮಲೆನಾಡಿಗರ ಶೈಲಿಯ ಊಟ.  ಮಧ್ಯಾಹ್ನ 12.30 ರಿಂದ 3.00ರ ತನಕ ಸಂತೃಪ್ತ ಭೋಜನ ಸಿಗುತ್ತದೆ. 

ಇದೇನೂ ಅದ್ದೂರಿ ಹೋಟೆಲ್‌ ಅಲ್ಲ. ಮಧ್ಯಮವರ್ಗಕ್ಕೆ ಹೇಳಿ ಮಾಡಿಸಿದ ಮೆಸ್‌. ಮೂರು ಕೋಣೆಗಳುಳ್ಳ ಈ ಪುಟ್ಟ ಹೋಟೆಲ್‌ನಲ್ಲಿ ಏಕಕಾಲಕ್ಕೆ 20 ಜನ ಊಟ ಮಾಡಬಹುದು. ಸೋಮವಾರ ಸ್ವಲ್ಪ ಹೆಚ್ಚಿಗೆ ದಟ್ಟಣೆ ಇರುತ್ತದೆ. ಕಾರಣ, ಆವತ್ತು ಸಂತೆ. ಸಂತೆಗೆ ಬಂದವರು ಸಂತೃಪ್ತಿ ಭೋಜನಕ್ಕೆ ಇಲ್ಲಿಗೇ ಬರುತ್ತಾರೆ. 

ಮೆಸ್‌ ನೆಡೆಸಿಕೊಂಡು ಬರುತ್ತಿರುವ ಗೋಪಾಲ ಭಟ್ಟರು ಎಂದಿಗೂ ಗಲ್ಲಾಪೆಟ್ಟಿಗೆಯಲ್ಲಿ ಕುಳಿತು ಮಾಲೀಕರ ದರ್ಪ ತೋರಿದ್ದಿಲ್ಲ. ‘ಅವರಿಗೆ ಊಟ ಕೊಡಿ…ಇವರಿಗೆ ಸಾಂಬಾರು ಹಾಕಿ’ ಎಂದು ಕೂಗು ಹಾಕುವುದಿಲ್ಲ. ಇವರು ಮಾಲೀಕರೂ ಹೌದು, ಜೊತೆಗೆ ಕ್ಲೀನರ್‌ ಕೂಡ ಹೌದು. 

ಗೋಪಾಲ ಭಟ್ಟರ ನಾಗರತ್ನ ದಂಪತಿ ತಾವೇ ಅಡುಗೆ ಮನೆಯಲ್ಲಿ ಊಟ ತಯಾರಿಸಿ, ಎಲ್ಲಾ ಗ್ರಾಹಕರಿಗೂ ಊಟ ಬಡಿಸುತ್ತಾರೆ. ಗೋಪಾಲ ಭಟ್ಟರು ಹೇಳುವಂತೆ, ‘ತಮ್ಮ ಬದುಕನ್ನು ಕಳೆದ 20 ವರ್ಷಗಳಿಂದ ಈ ಭೋಜನಾಲಯದ ಆದಾಯದಲ್ಲಿಯೇ ಕಟ್ಟಿಕೊಂಡಿದ್ದೇವೆ. ಗುಣಮಟ್ಟದ ಊಟ ಹಾಗೂ ಗ್ರಾಹಕರಿಗೆ ತೃಪ್ತಿ ಕೊಟ್ಟ ನಮಗಿದೆ. ಹೆಮ್ಮೆ ಗ್ರಾಹಕರು ನೀಡಿದ ಬೆಂಬಲವೇ ನಮ್ಮ ನೆಮ್ಮದಿಯ ಜೀವನಕ್ಕೆ ಕಾರಣ’ ಎನ್ನುತ್ತಾರೆ.

‘ಕಳೆದ 17 ವರ್ಷಗಳಿಂದ ಈ ಮೆಸ್‌ನಲ್ಲಿ ಊಟ ಮಾಡುತ್ತಿದ್ದೇನೆ. ಶುದ್ಧತೆ ಮತ್ತು ಗುಣಮಟ್ಟದ ವಿಚಾರದಲ್ಲಿ ನಮ್ಮೂರಿನ ಸನ್ಮಾನ್‌ ಮೆಸ್‌ ಮನೆಮಾತಾಗಿರುವುದು ಹೆಮ್ಮೆಯ ವಿಚಾರ’ ಎಂದು  ಈ ಹೋಟೆಲ್‌ನ ಖಾಯಂ ಗ್ರಾಹಕ ಆಡಿಟರ್‌ ಚಕ್ಕೋಡಬೈಲು ನಾಗರಾಜ್‌ ಹೇಳುತ್ತಾರೆ. ಒಟ್ಟಾರೆ, ಮಲೆನಾಡಿನ ಭೋಜನ ಪ್ರಿಯರ ಪಾಲಿಗೆ ಸನ್ಮಾನ್‌ ಮೆಸ್‌ ಸಂತೃಪ್ತಿಯ ಊಟದೊಂದಿಗೆ ನೆಮ್ಮದಿ ತಂದಿದೆ. ಸನ್ಮಾನ್‌ ಮೆನು ಹೀಗಿದೆ- * ಪ್ಲೇಟ್‌ ಅನ್ನ, ಸಾಂಬಾರು, ತಿಳಿ ಸಾರು, ಒಂದು ಪಲ್ಯ, ಚಟ್ನಿ, ಸಂಡಿಗೆ ಮೆಣಸು, ಮೊಸರು, ಮಜ್ಜಿಗೆ, ಉಪ್ಪಿನಕಾು (ಹೆಚ್ಚುವರಿ ರೈಸ್‌ ಸೌಲಭ್ಯ).
ಊಟದ ಬೆಲೆ 50ರೂ. 

– ರಾಮಚಂದ್ರ ಕೊಪ್ಪಲು 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.