ಉಳಿತಾಯ ಅನ್ನೋ ಬಾವಿಯ ನೀರು!


Team Udayavani, Sep 16, 2019, 5:19 AM IST

filler

ಬೊಂಬಾಯಿಯಲ್ಲೋ, ದುಬೈನಲ್ಲೋ ದಶಕಗಳ ಕಾಲ ಇದ್ದು ಸಿಕ್ಕಾಪಟ್ಟೆ ಉಳಿತಾಯ ಮಾಡಿ ಬಂದಿರುತ್ತಾರಲ್ಲ, ಕೆಲವರು ಹುಟ್ಟೂರಿಗೆ ಬಂದ ನಂತರ ಬದಲಾಗುತ್ತಾರೆ. ಪರಸ್ಥಳದಲ್ಲಿ ಪೈಸೆಗೆ ಪೈಸೆ ಜೋಡಿಸಿ ಉಳಿತಾಯ ಮಾಡಿದವರು, ಹುಟ್ಟೂರಿನಲ್ಲಿ ಮನಸ್ಸಿಗೆ ಬಂದಂತೆ ಖರ್ಚು ಮಾಡುತ್ತಾರೆ. ಈ ಕಾಲದ ಜನ ಆದರೆ, ಕ್ರೆಡಿಟ್‌ ಕಾರ್ಡ್‌ ಖರೀದಿಸಿ ಶಾಪಿಂಗ್‌ ನೆಪದಲ್ಲಿ ಅದನ್ನು ಉಜ್ಜಿ ಚಿಂದಿ ಉಡಾಯಿಸಿಬಿಡ್ತಾರೆ. ಉಳಿತಾಯ ಮಾಡೋ ಬಗ್ಗೆ ಯೋಚನೆಯನ್ನೇ ಮಾಡಲ್ಲ. ಅಂಥವರು ಕಷ್ಟ ಕಾಲದಲ್ಲಿ ಅಥವಾ ಆಕಸ್ಮಿಕ ದುರ್ಘ‌ಟನೆಗಳ ಸಂದರ್ಭದಲ್ಲಿ ಕಂಗಾಲಾಗಿ ಬಿಡುತ್ತಾರೆ. ಏನೂ ಮಾಡಬೇಕು ಅನ್ನೋದು ತೋಚದೆ, ನನಗೆ ಗೊತ್ತಾಗಲಿಲ್ಲ. ದುಡುಕಿಬಿಟ್ಟೆ, ಹಾಗೆ, ಖರ್ಚು ಮಾಡಬಾರದಿತ್ತು ಎಂದೆಲ್ಲಾ ಹಳಹಳಿಸುತ್ತಾರೆ.

ಇಂಥಾ ಪರಿಸ್ಥಿತಿ ಜೊತೆಯಾಗಬಾರದು ಅನ್ನುವವರು ಪ್ರತಿ ತಿಂಗಳ ಬಜೆಟ್‌ ಪ್ಲಾನ್‌ ಮಾಡಬೇಕು. ಅದಕ್ಕೆ ಅನುಗುಣವಾಗಿ ಖರ್ಚುವೆಚ್ಚ ಮಾಡುತ್ತಾ ಹೋಗಬೇಕು. ಈಗಾಗಲೇ ಭವಿಷ್ಯಕ್ಕೆಂದು ಹಣ ಕೂಡಿಸಿ ಇಟ್ಟಿದ್ದರೂ, ಮರೆಯದೆ ಆದಷ್ಟೂ ದುಡಿದೇ ತಿನ್ನುವ, ಸ್ವಲ್ಪವಾದರೂ ಉಳಿತಾಯ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ಕೆಲಸ, ಪ್ರಾರಂಭದಲ್ಲಿ ಕಷ್ಟವೆನಿಸಿದರೂ ನಿಧಾನವಾಗಿ ಸಮತೋಲನ ಸಾಧ್ಯವಾಗುತ್ತದೆ. ಅನಗತ್ಯ ವಸ್ತುಗಳ ಖರೀದಿ, ಪಾರ್ಟಿ, ಮೋಜು ಮಸ್ತಿಗಳನ್ನು ವರ್ಜಿಸಬೇಕು.

ನೆಮ್ಮದಿಯ, ಶಿಸ್ತುಬದ್ಧ ಜೀವನ ನಮ್ಮದಾಗಬೇಕೆಂದರೆ ಲೆಕ್ಕಾಚಾರದ ಬದುಕು ಬಹಳ ಮುಖ್ಯ. ಪ್ರತಿಯೊಂದು ವ್ಯವಹಾರಗಳಲ್ಲಿ ನಿಮ್ಮದೇ ಆದ ಲೆಕ್ಕಾಚಾರ ಇರಲಿ. ಅವರೇನು ಅಂತಾರೆ, ಇವರೇನು ಅಂತಾರೆ ಅನ್ನೊದರ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಪ್ರಸ್ಟೀಜ್‌ಗೊಸ್ಕರ ಏನೇನೋ ಮಾಡಲು ಹೋಗಿ ಇನ್ನೇನೋ ಮಾಡ್ಕೊಂಡು ಕೈ ಸುಟ್ಕೊಬಾರದು. ಯಾವುದಕ್ಕೆ ಖರ್ಚು ಮಾಡಬೇಕು ಅಥವಾ ಖರ್ಚು ಮಾಡಬಾರದು ಎಂಬುದರ ತಿಳಿವಳಿಕೆ ಇರಬೇಕು.

ಸಂಪಾದನೆ ಅನ್ನೋದು ಸದಾ ಹರಿಯುವ ನದಿಯಾಗಿರಬೇಕು. ಸಂಪಾದನೆಗಾಗಿ ಅನೇಕ ಮೂಲಗಳನ್ನು ಹುಡುಕಿಕೊಳ್ಳಬೇಕು. ಬರೀ ಉಳಿತಾಯ ಮಾಡಿರುವ ಹಣವೇ ನನ್ನನ್ನು ಎಲ್ಲಾ ಸಂದರ್ಭದಲ್ಲೂ ಕಾಪಾಡುತ್ತದೆ ಎಂದು ಭಾವಿಸುವುದು ಮೂರ್ಖತನ. ಉಳಿತಾಯದ ಹಣ ಎಂಬುದು ಬಾವಿಯ ನೀರಿದ್ದ ಹಾಗೆ. ಅದು ಆಕಸ್ಮಿಕವಾಗಿ ಖಾಲಿಯಾಗಿಬಿಡಬಹುದು. ಹಾಗಾಗಿ, ಬಾವಿ ಹತ್ತಿರದಲ್ಲಿ ಇದ್ದರೂ, ಭವಿಷ್ಯದ ದೃಷ್ಟಿಯಿಂದ ಅಂಥದೇ ಇನ್ನೊಂದು ಸಂಪನ್ಮೂಲದ ಸ್ಥಳವನ್ನೂ ನೋಡಿಕೊಳ್ಳುವುದು ಜಾಣತನ. ಕೂತು ತಿಂದರೆ ಕುಡಿಕೆ ಹೊನ್ನು ಸಾಲದು ಎಂಬ ಮಾತನ್ನು ನಮ್ಮ ಹಿರಿಯರು ಸುಮ್ಮನೆ ಹೇಳಿದರು ಅಂದುಕೊಂಡಿರಾ?

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.