ಹೆಗ್ಗಣ್ಣನ ಹೆಗ್ಗಳಿಕೆ, ಬೀಜ ಬಿತ್ತದೆ ಭರ್ಜರಿ ಫ‌ಸಲು


Team Udayavani, Feb 26, 2018, 11:20 AM IST

heggana.jpg

ಮಳೆ ಬಿದ್ದು ಬೆಳೆದು ನಿಂತ ಫ‌ಸಲೆಲ್ಲಾ ಭೂಮಿ ಪಾಲಾದರೆ ರೈತರಿಗಾಗುವ ಸಂಕಷ್ಟ ಅಷ್ಟಿಷ್ಟಲ್ಲ. ಶ್ರಮವಹಿಸಿ ದುಡಿದು ಕಾಲಕಾಲಕ್ಕೆ ಗೊಬ್ಬರ, ಔಷಧಿಗಳನ್ನು ಸಿಂಪಡಿಸಿ ಫ‌ಸಲು ಕೊಯ್ಲಿಗೆ ಬಂದಾಗ ಹಾನಿಯಾದರೆ ದುಃಖ ಸಹಜವೇ. ಆದರೆ ಸಿರಿಧಾನ್ಯ ಬೆಳೆದರೆ ಹೀಗೆಲ್ಲಾ ದುಃಖ ಪಡುವ ಅಗತ್ಯವೇ ಇರುವುದಿಲ್ಲ ಎನ್ನುತ್ತಾರೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಮಂಜುನಾಥ ಹೆಗ್ಗಣ್ಣನವರ್‌.

ತಾಳೆ ನಡುವೆ ಕೊರಲೆ
    ಇವರದು ಒಂದೂ ಕಾಲು ಎಕರೆ ಜಮೀನು. ಮೂವತ್ತು ಅಡಿಗೊಂದರಂತೆ ತಾಳೆ ಮರಗಳಿವೆ. ಎಲ್ಲವೂ ಎರಡು ವರ್ಷದ ಮರಗಳು. ಅಲ್ಲಲ್ಲಿ ನಿಂಬೆ ಗಿಡಗಳು, ದಾಲಿcನ್ನಿ ಗಿಡಗಳು. ಕಳೆದ‌  ಮುಂಗಾರಿನಲ್ಲಿ ಕೊರಲೆ ಕೃಷಿ ಮಾಡಿದ್ದ ಅವರಿಗೆ ಆಘಾತವೊಂದು ಎದುರಾಗಿತ್ತು. ತಾಳೆ ತೋಟದ ಮಧ್ಯೆ ಒಂದು ಎಕರೆಯಲ್ಲಿ ಕೊರಲೆ ಬಿತ್ತಿದ್ದರು.  ಉತ್ತಮ ಇಳುವರಿಯನ್ನೇ ಹೊತ್ತು ನಿಂತಿತ್ತು. ಆದರೆ ಕಟಾವಿನ ವೇಳೆ ಎಡಬಿಡದೇ ಸುರಿದ  ಮಳೆ ಇವರಿಗೆ ನಷ್ಟ ತಂದೊಡ್ಡಿತ್ತು. ಮೂರು ಅಡಿಗಳಿಗೂ ಎತ್ತರವಾಗಿ ಬೆಳೆದಿದ್ದ ಗಿಡಗಳು ನೆಲ ಕಚ್ಚಿದ್ದವು. ಕಾಳುಗಳು ಭೂಮಿ ಪಾಲಾಗಿದ್ದವು. ಕೊಯ್ಲು ಮಾಡುವಂತಿಲ್ಲ. ಮಳೆ ದಿನ ಬಿಟ್ಟು ದಿನ ಸುರಿಯುತ್ತಿದೆ. ಎಲ್ಲವೂ ಕೆಟ್ಟು ಹೋಯಿತು ಎಂದು ನಿರಾಶರಾಗಿದ್ದರು. ಮಳೆ ನಿಂತ  ಮೇಲೆ ಸಿಕ್ಕಷ್ಟು ಸಿಗಲಿ ಎಂದು ಕೊಯ್ಲಿಗೆ ಆಳುಗಳನ್ನು ಹಚ್ಚಿದರು. ಕೆಸರಿನ ಮಧ್ಯೆ ಜಾಗ್ರತೆಯಿಂದ ಕೊಯ್ಲು ಮುಗಿಸಿದಾಗ ಎಂಟು ಕ್ವಿಂಟಾಲ್‌ ಇಳುವರಿ ಸಿಕ್ಕಿತು. ಒಂದು ವೇಳೆ ಮಳೆಯಾಗದೇ ಇದ್ದರೆ ಹನ್ನೆರಡು ಕ್ವಿಂಟಾಲ್‌ ಇಳುವರಿ ಸಿಗುತ್ತಿತ್ತು. ಆಸರೆಯಾಗಬೇಕಾದ ಮಳೆ ಅಕಾಲದಲ್ಲಿ ಸುರಿದು ಬೆಳೆ ನಷ್ಟವಾಯಿತಲ್ಲ ಎಂದು ಕೊರಗಿ ಹಲವರಲ್ಲಿ ತಮ್ಮ ನೋವು ಹಂಚಿಕೊಂಡಿದ್ದರು. ಆದರೂ ಎಂಟು ಕ್ವಿಂಟಾಲ್‌ಗ‌ಳಷ್ಟು ಇಳುವರಿ ಸಿಕ್ಕಿದ್ದು ಅದೃಷ್ಟವೆಂದೇ ಭಾವಿಸಿದ್ದರು.

ಅದರಷ್ಟಕ್ಕೆ ಬೆಳೆದು ನಿಂತ ಕೊರಲೆ
ಬೆಳೆ ಕೊಯ್ಲು ಮುಗಿದ ನಂತರ ಸಪ್ಟೆಂಬರ್‌ ಮೊದಲ ವಾರದಲ್ಲಿ ಮುಂದಿನ ಬೆಳೆಗೆ ಅನುಕೂಲವಾಗಲೆಂದು ಭೂಮಿಯನ್ನು ರೋಟೋವೇಟರ್‌ ಸಹಾಯದಿಂದ ಉಳುಮೆ ಮಾಡಿಸಿದ್ದರು. ಹುಲ್ಲುಗಳನ್ನೆಲ್ಲ ಆರಿಸಿ ತೆಗೆದು ಭೂಮಿಯನ್ನು ಸ್ವತ್ಛಗೊಳಿಸಿದರು. ಉಳುಮೆ ಕೆಲಸ ಮುಗಿಸಿ ವಾರದ ನಂತರ ಪುನಃ ಆ ಹೊಲಕ್ಕೆ ತೆರಳಿದ ಮಂಜಪ್ಪ ಅವರಿಗೆ ಅಚ್ಚರಿ! ಮಳೆಯ ಕಾರಣದಿಂದ ಗದ್ದೆ ಪಾಲಾಗಿದ್ದ ಕೊರಲೆ ಬೀಜಗಳು ಮಣ್ಣಿನ ತೇವದಿಂದಲೇ ಮೊಳಕೆಯೊಡೆದು ನಿಂತಿದ್ದವು. ಒಂದು ಇಂಚಿನಷ್ಟು ಎತ್ತರ ಬೆಳೆಸಿದ್ದವು. ತಡಮಾಡದೇ ಗದ್ದೆಗೆ ನೀರು ಹಾಯಿಸಿದರು. ಕೆಲವೇ ದಿನಗಳಲ್ಲಿ ಗಿಡಗಳು ಒತ್ತೂತ್ತಾಗಿ ಬೆಳೆದು ನಿಂತವು. ಅತೀ ಸಮೀಪದಲ್ಲಿ ಒಂದಕ್ಕೊಂದು ತಾಗಿಕೊಂಡಂತೆ ಬೆಳೆದು ನಿಂತ ಕೊರಲೆ ಗಿಡಗಳ ಮಧ್ಯೆ ಕಳೆಗಳು ಬೆಳೆದು ನಿಲ್ಲಲು ಸೋತಿದ್ದವು. ಕಳೆ ರಹಿತವಾಗಿ ಕೊರಲೆ ಕೃಷಿ ಕಂಗೊಳಿಸುತ್ತಿತ್ತು. ಅಲ್ಲಲ್ಲಿ ತೆಳ್ಳಗೆ ಕಂಡುಬಂದ ಕಳೆಯನ್ನು ಕೈ ಯಲ್ಲಿಯೇ ಕಿತ್ತೂಗೆದರು. ಸಾಲಿನಲ್ಲಿ ನಾಟಿ ಮಾಡಿದಾಗ ಹೊಡೆಯುತ್ತಿದ್ದ ಕುಂಟೆಯನ್ನು ಈ ಬಾರಿ ಹೊಡೆದಿರಲಿಲ್ಲ. ಬೀಜ ಬಿತ್ತದಿದ್ದರೂ,  ಗೊಬ್ಬರ ಬಳಸದಿದ್ದರೂ, ಅಶಿಸ್ತಿನಿಂದ ಬೆಳೆದ ಕೊರಲೆ ಕೃಷಿಯಿಂದ ಮಂಜಪ್ಪ  ಹತ್ತು ಕ್ವಿಂಟಾಲ್‌ ಇಳುವರಿ ಪಡೆದಿದ್ದಾರೆ. ಹಿಂಗಾರಿನಲ್ಲಿ ಭೂಮಿಯನ್ನು ಖಾಲಿ ಬಿಡಬೇಕೆಂದು ನಿರ್ಧರಿಸಿದ್ದ ಇವರಿಗೆ ಅಕಾಲಿಕವಾಗಿ ಭೂಮಿಯಲ್ಲಿ ಬಿದ್ದ ಕೊರಲೆ ಬೀಜವೇ ವರದಾನವಾಗಿ ಪರಿಣಮಿಸಿತ್ತು. ‘ಸಿರಿಧಾನ್ಯದ ತಾಕತ್ತು ಅಂದ್ರೆ ಇದೇ ನೋಡ್ರೀ’ ಎನ್ನುತ್ತಾ ಬಿಗುಮಾನದಿಂದ ನುಡಿದರು ಮಂಜಪ್ಪ.

ಸಂಪರ್ಕಿಸಲು: 9731326558

– ಕೋಡಕಣಿ ಜೈವಂತ ಪಟಗಾರ

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.