ಪೀಡೆಗೆ ಕಾರಣವಾಗುವ ದಕ್ಷಿಣ ದಿಕ್ಕು


Team Udayavani, Jan 8, 2018, 3:31 PM IST

08-24.jpg

ನೆನಪಿರಲಿ, ದಕ್ಷಿಣ ದಿಕ್ಕು ಮಾನವನ ಜೀವನದ ಪರಿಸಮಾಪ್ತಿ ಸೂಚಿಸುವ ದಿಕ್ಕು. ಕೇವಲ ಸಾವಿನ ವಿಚಾರದಲ್ಲಿ ಮಾತ್ರ ಈ ದಿಕ್ಕು ಮಾನವನ ಮೇಲೆ ತನ್ನ ಹಿಡಿತ ಸಾಧಿಸುತ್ತದೆ ಎಂದು ಅರ್ಥವಲ್ಲ. ಒಟ್ಟಿನಲ್ಲಿ ಈ ದಿಕ್ಕಿನ ದೋಷ ಶನಿ, ರಾಹು, ಕುಜ, ಕೇತು ಅಥವಾ ಸೂರ್ಯನ ವೈಪರೀತ್ಯಗಳ ಸಂದರ್ಭ ಆಯಾ ವೃತ್ತಿಯ ಮುಖ್ಯ ವೇದಿಕೆಯಲ್ಲಿ ಕೆಟ್ಟ ಹೆಸರನ್ನು, ಆರೋಗ್ಯದ ವೈಪರೀತ್ಯಗಳನ್ನು, ದಿಢೀರನೆ ಸಲ್ಲದ ಕಾರ್ಯತಂತ್ರಗಳನ್ನು ಸಂಯೋಜಿಸುವ, ದುಬುìದ್ಧಿಯಿಂದ ಅನಿಷ್ಟಗಳಿಗೆ ಮುಂದಾಗುವ ನಿರ್ಣಯಗಳನ್ನು, ಪರಿಣಾಮಗಳ ಯೋಚನೆಗಳಿರದೆ ಸರ್ರನೆ ಕಾರ್ಯೋನ್ಮುಖರಾಗುವ ಅವಸರಗಳನ್ನು, ಕೈಗೆ ಎಟುಕಲಾರದ ಕನಸಿನ ಗೋಪುರಕ್ಕೆ ಕೈಚಾಚುವುದನ್ನು, ನಿರಪರಾಧಿಗಳನ್ನು ಶಿಕ್ಷಿಸಿ ಕರ್ಮವನ್ನು ಸುತ್ತಿಕೊಳ್ಳುವ, ಭಯೋತ್ಪಾದಕ ಘಟನೆಗಳಿಗೆ ಬಲಿಯಾಗುವ, ಮಕ್ಕಳಿಂದಲೇ ಗೋಳಿಗೆ ಸಿಲುಕುವ ಮಿಸುಕಾಟಗಳನ್ನು ಒದಗಿಸಬಹುದು. ಕಟ್ಟಡಗಳಿಗೂ ದುಷ್ಟ ಗ್ರಹಗಳ ಬಾಧೆಯೇ ಎಂಬ ವಿಚಾರ ಆಶ್ಚರ್ಯಕರ. ಆದರೆ ಸತ್ಯ. ಕಟ್ಟಡಗಳಿಗೂ ತೊಂದರೆ ಉದ್ಭವಿಸುತ್ತದೆ. 2001ರ ಸೆಪ್ಟೆಂಬರ್‌ನಲ್ಲಿ ಉರುಳಿದ ಅಮೆರಿಕಾದ ವರ್ಲ್ಡ್ ಟ್ರೇಡ್‌ ಸೆಂಟರ್‌ ಅವಳಿ ಕಟ್ಟಡಗಳನ್ನು ನೆನೆಪಿಸಿಕೊಳ್ಳಿ.

ಕಟ್ಟಡದ ದಕ್ಷಿಣ ದಿಕ್ಕಿನ ವಾಸ್ತು ಸಂಯೋಜನೆಗಳು ಅಗ್ನಿ ತತ್ವಕ್ಕೆ ವೈರುಧ್ಯದಿಂದ ಕೂಡಿದ ಪ್ರಮಾಣದೊಂದಿಗೆ ಸಮತೋಲನ ತಪ್ಪಿದ್ದವು. ತಗ್ಗಿನ ಹೊರ ಆವರಣ, ಕಟ್ಟಡಗಳ ದಕ್ಷಿಣ ಭಾಗದಲ್ಲಿ ವಿಸ್ತೃತವಾಗಿ ಹಿಗ್ಗಿಕೊಂಡಿದ್ದರಿಂದ ಉತ್ತರ ದಿಕ್ಕಿನ ಅಮೃತ ಸ್ಪಂದನಗಳನ್ನು ಅದು ಘರ್ಷಿಸುತ್ತಲೇ ಇತ್ತು. ಹೀಗಾಗಿ ಶನೈಶ್ಚರನ ಮೂಲದ ರಾಹುವಿನ ಜಾಗೆಗೆ ಜಾರ್ಜ್‌ ಬುಷ್‌ ಅಧಿಕಾರದ ಪ್ರಥಮ ಸಂದರ್ಭದಲ್ಲಿ ಅಷ್ಟಮ ಶನಿ ಕಾಡಿದಾಗ, ಒಸಾಮ ಬಿನ್‌ ಲಾಡೆನ್‌ ಅಪಾಯಕಾರಿ ಯೋಜನೆ ರೂಪಿಸುವುದರಲ್ಲಿ ಯಶಸ್ವಿಯಾಗಿದ್ದ. ದಕ್ಷಿಣ ದಿಕ್ಕಿನ ದೋಷದ ಅಂಶವನ್ನು ವಾಸ್ತುವಿನಲ್ಲಿ ಹೊಂದಿದ್ದ ವರ್ಲ್ಡ್ ಟ್ರೇಡ್‌ ಅವಳಿ ಕಟ್ಟಡಗಳು ಕುಸಿದು ಬಿದ್ದದ್ದು. ಭಯೋತ್ಪಾದನೆ ಎಷ್ಟು ದೊಡ್ಡ ಪ್ರಮಾಣದಲ್ಲಿ ಹಾನಿ ಮಾಡಬಹುದು ಎಂದು ಜಗತ್ತಿಗೆ ಅರ್ಥವಾದದ್ದೇ ಆಗ. ಭಾರತದಲ್ಲಿ 1983ರ ಮುಂಬೈ ಸ್ಫೋಟಗಳು ಭಯೋತ್ಪಾದಕತೆಯ ಕರಾಳ ಮುಖವನ್ನು ಎತ್ತಿ ಹಿಡಿದಿದ್ದರೂ, ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಯ ವಿರುದ್ಧ ಒಕ್ಕೊರಲಿನ ಕೂಗು ಎದ್ದದ್ದು 2001ರಲ್ಲಿಯೇ. ವಾಸ್ತು ದೋಷದ ಪರಿಣಾಮವು ಒಂದು ಅವಳಿ ಅಟ್ಟಡಗಳ ಕಾರಣದಿಂದಾಗಿ ಜಾಗತಿಕ ವರ್ತಮಾನದ ತಲ್ಲಣಗಳಿಗೆ ಕಾರಣವಾಗುವ ಕ್ರಿಯೆ ಅನೂಹ್ಯ.

ನಾವು ಕಟ್ಟುವ ಕಟ್ಟಡಗಳು, ವಸತಿ ಸಂಕೀರ್ಣ, ಮನೆ ಅಥವಾ ಬೇರಾವುದೇ ಕಟ್ಟಡವಿರಲಿ ಎಡವಟ್ಟಾದ ಸ್ವರೂಪದಲ್ಲಿ ಆಗ್ನೇಯ ದಿಕ್ಕು ವಿಸ್ತರಿಸಿಕೊಳ್ಳಬಾರದು. 70ರ ದಶಕದ ಜನಪ್ರಿಯ ಚಲನಚಿತ್ರ ರಂಗ ಆವರೆಗೆ ಕಂಡರಿಯದ ಸೂಪರ್‌ ಸ್ಟಾರ್‌, ತನ್ನ ಅರಮನೆ ಸದೃಶ್ಯವಾದ ಬಂಗಲೆಯಲ್ಲಿ ಎಷ್ಟು ಎತ್ತರಕ್ಕೆ ಏರಿದ್ದು ಸತ್ಯವೋ, ಹಾಗೇ ಇನ್ನಿಲ್ಲದ ರೀತಿಯಲ್ಲಿ ಕುಸಿದಿದ್ದೂ ಅಷ್ಟೇ ಸತ್ಯ. ಈ ಕಟ್ಟಡದ ವಿಚಾರದಲ್ಲಿನ ವಾಸ್ತು ದೋಷಗಳು ಹೇಗೆ ಅವರ ಅವನತಿಗೆ ಕಾರಣವಾಯಿತು ಎಂಬುದನ್ನು ಆ ಪ್ರಬುದ್ಧ ನಟರೇ ಅವರ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಪತ್ನಿಯೊಂದಿಗೆ ಹೊಂದಿಕೊಂಡು ಹೋಗಲಾರದ ಶನಿ ದಶಾ ಸಂದರ್ಭವೂ ಈ ನಟ ಡೈವರ್ಸ್‌ ಪಡೆದು ಒಂಟಿಯಾಗುವಂತೆ ಮಾಡಿತು. ಅನೇಕ ರೀತಿಯ ತಾಪತ್ರಯಗಳು, ಮಾಡಿದ ಸಾಲ ಕಷ್ಟಗಳಿಗೆ ವೇದಿಕೆ ಒದಗಿಸಿತು. ದಕ್ಷಿಣ ದಿಕ್ಕು ಮೂಲಭೂತವಾಗಿ ಅಗ್ನಿಯನ್ನು ಸಂಕೇತಿಸುವ ವಿಚಾರಗಳನ್ನು ಅಂತರ್ಗತಗೊಳಿಸಿಕೊಂಡಿರುತ್ತದೆ. ಅಗ್ನಿಯು ಶುಭಕರನಾದಾಗ, ಅವನೇ ವೈಶ್ವಾನರ ಸ್ವರ್ಗ ಹಾಗೂ ಭೂಮಿಯನ್ನು ಕೊಂಡಿ ಕೂಡಿಸುವ ಹವ್ಯವಾಹನ. ನಮ್ಮ ಪ್ರಾರ್ಥನೆಗಳು, ನಮ್ಮ ಸಮರ್ಪಣೆಗಳು ದೈವಿಕವಾದ ಅನನ್ಯ ಶಕ್ತಿ ಧಾತುವನ್ನು ಮುಟ್ಟುತ್ತದೆ. ಬೆಂಕಿ ಮುನಿದಾಗ ಅದು ಕಾಳ್ಗಿಚ್ಚು. ಅದು ಚಿತೆಯ ದಾರುಣತೆಗೆ ಕಾರಣವಾಗುವ ಸರಕು. 

ದಕ್ಷಿಣ ದಿಕ್ಕು ವಾಸ್ತು ದೋಷ ಹೊಂದಿದ್ದರೆ ದುರ್ಗಾದೇವಿಯನ್ನು ನೆನೆಯಬೇಕು. ಸ್ತುತಿಸಬೇಕು. ಇದರಿಂದ ಅಗ್ನಿಭೀತಿಯ ದಾರುಣತೆಯ ಶಮನಗಳಿಗೆ ದಾರಿ ಲಭ್ಯ. ಮಲಿನತೆಗಳು ದಕ್ಷಿಣ ದಿಕ್ಕಿನಲ್ಲಿ ಬೇರೂರದಂತೆ ಗಮನ ಹರಿಸಿ. ನಿಮ್ಮ ಪ್ರಯತ್ನ ಈ ದಿಸೆಯಲ್ಲಿ ನಡೆದುದಾದರೆ ಕೊಂಚ ಮಟ್ಟಿಗಿನ ನಿರಾಳತೆ ಸಾಧ್ಯ. 

ಅನಂತಶಾಸ್ತ್ರಿ 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.