ತೆರಿಗೆ 5 ತಪ್ಪುಗಳು


Team Udayavani, Jun 3, 2019, 6:00 AM IST

z-10

ತೆರಿಗೆ ಪಾವತಿದಾರರು ರಿಟರ್ನ್ ಸಲ್ಲಿಸುವಾಗ ಕೆಲವೊಂದು ಅಂಶಗಳನ್ನು ಬಿಟ್ಟುಬಿಡುತ್ತಾರೆ. ಇದರಿಂದಾಗುವ ಅಡ್ಡ ಪರಿಣಾಮ ಹೀಗೀಗಿವೆ.

1 ಮನೆಯವರ ಹೆಸರಲ್ಲಿ ಹೂಡಿಕೆ
ಮನೆ ಯಜಮಾನನ ವರಮಾನದ ದುಡ್ಡಿನಲ್ಲಿ ಹೆಂಡತಿ ಅಥವಾ ಮಕ್ಕಳ ಹೆಸರಿನಲ್ಲಿ ಠೇವಣಿ/ ಬೇರಾವುದೇ ಹೂಡಿಕೆ ಮಾಡಿ, ಅವುಗಳಿಂದ ಬರುವ ಬಡ್ಡಿ ಅಥವಾ ಇತರೆ ವರಮಾನ ಎಷ್ಟೇ ಇರಲಿ, ಅದನ್ನು ಯಜಮಾನನ ತೆರಿಗೆ ರಿಟರ್ನ್ಸ್ನಲ್ಲಿ ತೋರಿಸಬೇಕು. ಎಷ್ಟೋ ಮಂದಿ, ನನ್ನ ಮಗಳು ಬೇಕಾದಷ್ಟು ವರಮಾನ ಹೊಂದಿಲ್ಲ, ಆದ ಕಾರಣ ಅದನ್ನು ತೋರಿಸಬೇಕಿಲ್ಲ ಅಂದು ಕೊಂಡಿರುತ್ತಾರೆ. ಆದರೆ ಇದು ಸರಿಯಲ್ಲ. ಯಜಮಾನ ತೆರಿಗೆದಾರನಾಗಿದ್ದು, ಆತನ ಪತ್ನಿ ಮತ್ತು ಮಕ್ಕಳ ಹೆಸರಲ್ಲಿ ಆತ ಮಾಡಿರಬಹುದಾದ ಹೂಡಿಕೆಯಿಂದ ಬರುವ ಇಳುವರಿಯನ್ನು ಯಜಮಾನ ತನ್ನ ತೆರಿಗೆ ರಿಟರ್ನಿನಲ್ಲಿ ಘೋಷಿಸಿಸತಕ್ಕದ್ದು ಮತ್ತು ಅದಕ್ಕೆ ತಕ್ಕುದಾದ ತೆರಿಗೆ ಪಾವತಿಸತಕ್ಕದ್ದು. ಇನ್ನೊಂದು ವಿಚಾರ. ಗರಿಷ್ಠ ಎರಡು ಮಕ್ಕಳಿಗೆ ವಾರ್ಷಿಕ ತಲಾ ರೂ:1500-00 ವಿನಾಯಿತಿ ಕ್ಲೈಮು ಮಾಡುವುದಕ್ಕೂ ತೆರಿಗೆದಾರ ಅಪ್ಪನಿಗೆ ಅವಕಾಶವಿರುತ್ತದೆ.

2 ಬಡ್ಡಿ ಘೋಷಿಸಲ್ಲ
ಬ್ಯಾಂಕಿನಲ್ಲಿರುವ ಎಫ್.ಡಿ. ಆರ್‌.ಡಿ ಅಥವಾ ಇನ್ನಾವುದೇ ಬಡ್ಡಿ ದುಡಿಯುವ ಠೇವಣಿಗಳಿದ್ದರೆ ವಾರ್ಷಿಕವಾಗಿ ಅದರಿಂದ ಬರುವ ವರಮಾನವಿದ್ದರೆ ಮತ್ತು ಅದು ಹತ್ತು ಸಾವಿರದ ಒಳಗಡೆ ಇದ್ದರೆ ಅದನ್ನು ತೆರಿಗೆ ರಿಟರ್ನಿನಲ್ಲಿ ಘೋಷಿಸಬೇಕಿಲ್ಲ, ವಿನಾಯಿತಿ ಇದೆ ಎಂದು ಅನೇಕರು ಭಾವಿಸಿದ್ದಾರೆ. ಆದರೆ ಇದು ತಪ್ಪು. ವರಮಾನತೆರಿಗೆ ಕಾಯಿದೆಯ ವಿಧಿ 80 ಟಿ.ಟಿ.ಎ. ಅಡಿಯಲ್ಲಿ ಹೇಳಿರುವಂತೆ ಬ್ಯಾಂಕಿನಲ್ಲಿ ಒಬ್ಬ ವ್ಯಕ್ತಿ ಹೊಂದಿರುವ ಉಳಿತಾಯ ಖಾತೆಯಲ್ಲಿ ಜಮೆಯಾಗಬಹುದಾದ ಬಡ್ಡಿ ಹತ್ತುಸಾವಿರದ ಒಳಗಿದ್ದರೆ ಅದಕ್ಕೆ ಮಾತ್ರ ವಿನಾಯಿತಿ ಇದೆ. ಇದಕ್ಕೆ ಹೊರತಾಗಿ ಮಿಕ್ಕುಳಿದ ಬಡ್ಡಿ ಆದಾಯವನ್ನು ವರಮಾನ ಎಂದು ಘೋಷಿಸಬೇಕು ಮತ್ತು ಅದು ತೆರಿಗೆಯೋಗ್ಯವಾದದ್ದು. ಉಳಿತಾಯ ಖಾತೆಯಲ್ಲಿ ಜಮೆಯಾದ ಬಡ್ಡಿಯನ್ನೂ ವರಮಾನಕ್ಕೆ ಸೇರಿಸಿಕೊಂಡು ನಂತರದಲ್ಲಿ ಅದನ್ನು ಡಿಡಕ್ಷನ್‌ ಅಡಿಯಲ್ಲಿ ಕಳೆಯುವುದು ಉತ್ತಮ ಮತ್ತು ಸೂಕ್ತ ನಿರ್ಧಾರ ಎನ್ನಬಹುದು.

3 ಇದು ಮರೀಬೇಡಿ
ಬ್ಯಾಂಕುಗಳು ನಿಮ್ಮ ಡಿಪಾಜಿಟ್‌ ಗಳ ಮೇಲಿನ ಬಡ್ಡಿಗೆ ಮೂಲದಲ್ಲಿ ಶೇ:10 ಕಡಿತಗೊಳಿಸಿರುವುದನ್ನೇ ಪರಿಪೂರ್ಣ ತೆರಿಗೆಯಲ್ಲ. ಏಕೆಂದರೆ, ವ್ಯಕ್ತಿಗತವಾಗಿ ಒಬ್ಬ ವ್ಯಕ್ತಿಗೆ ಇರುವ ಆದಾಯದ ಗಾತ್ರಕ್ಕೆ ಅನುಗುಣವಾಗಿ ಅನ್ವಯವಾಗುವ ತೆರಿಗೆಯ ಶೇಕಡಾವಾರು ನಿಷ್ಪತ್ತಿಯೂ ವ್ಯತ್ಯಯವಾಗುತ್ತದೆ. ಅದು ಶೇ:10ರಿಂದ 30ರ ತನಕವೂ ಇರುತ್ತದೆ. ಹೀಗಿರುವಾಗ ಬ್ಯಾಂಕಿನವರು ಮೂಲದಲ್ಲಿ ಕಡಿತ ಮಾಡಿದ್ದಷ್ಟೇ ತೆರಿಗೆ, ಅದನ್ನು ರಿಟರ್ನ್ಸ್ನಲ್ಲಿ ಘೋಫಿಸಬೇಕಿಲ್ಲ ಎಂಬುದು ತಪ್ಪು ಕಲ್ಪನೆ. ಅಲ್ಲದೇ ರಿಟರ್ನ್ಸ್ನಲ್ಲಿ ಘೋಷಿಸಿ, ಬ್ಯಾಂಕಿನವರು ಮೂಲದಲ್ಲಿ ಕಡಿತಗೊಳಿಸಿದ ತೆರಿಗೆಯನ್ನು ರೀಫ‌ಂಡ್‌ಗೆ ಅವಕಾಶು ಉಂಟು.

4 ಯೂಟರ್ನ್ ಏಕೆ?
ವಾರ್ಷಿಕ ಎರಡೂವರೆಲಕ್ಷ ರೂಪಾಯಿ ವರಮಾನ ಮೀರುವ ಅರವತ್ತು ವರುಷದ ಒಳಗಿನ ವ್ಯಕ್ತಿ ತೆರಿಗೆ ರಿಟನುì ಸಲ್ಲಿಸಲೇಬೇಕು. ಅದಕ್ಕೆ ಅನ್ವಯವಾಗುವ ತೆರಿಗೆಯನ್ನು ಉದ್ಯೋಗದಾತರು ಕಟಾಯಿಸಿದ್ದಾರೆ, ನಾನು ರಿಟರ್ನಿ ಸಲ್ಲಿಸಬೇಕಿಲ್ಲ ಎಂದು ಭಾವಿಸಿ ಸುಮ್ಮನಿರುವವರ ಸಂಖ್ಯೆ ದೊಡ್ಡದಿದೆ. ಇದು ತಪ್ಪು.

5 ಹೀಗೆಲ್ಲ ಮಾಡಬಾರದು
ಆರ್ಥಿಕ ವರ್ಷದ ನಡುವಿನಲ್ಲಿ ಕೆಲಸವೊಂದನ್ನು ಬಿಟ್ಟು ಬೇರೆ ಕಡೆ ಸೇರಿಕೊಂಡವರಿಗೆ ಇದು ಅನ್ವಯವಾಗುತ್ತದೆ. ಹಳೆಯ ಕಂಪೆನಿ ಪಾವತಿಸಿದ್ದ ಸಂಬಳದ ಮೊತ್ತವನ್ನು ವರ್ಷಾಂತ್ಯದಲ್ಲಿ ತೋರಿಸದೇ, ಕೇವಲ ಹೊಸ ಕಂಪೆನಿಯವರು ಕೊಡುವ ನಮೂನೆ-16 ಬಳಸಿಕೊಂಡು ತೆರಿಗೆ ರಿಟರ್ನ್ ಸಲ್ಲಿಸುವವರೂ ಇದ್ದಾರೆ. ಇದು ಸರಿಯಾದ ಕ್ರಮವಲ್ಲ. ಹಾಗೇನೇ, ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌, ಇನ್ನಾವುದೇ ಟ್ಯಾಕ್ಸ್‌ ಫ್ರೀ ಬಾಂಡ್‌ ಗಳ ಹೂಡಿಕೆಯಿಂದ ಬಂದ ವರಮಾನವನ್ನು ಅನೇಕರು ವರ್ಷಾಂತ್ಯದಲ್ಲಿ ತಮ್ಮ ತೆರಿಗೆ ರಿಟರ್ನಿನಲ್ಲಿ ತೋರಿಸುವುದಿಲ್ಲ. ಹೇಗಿದ್ದರೂ ಅದಕ್ಕೆ ತೆರಿಗೆ ಇಲ್ಲವಲ್ಲ ಅಂದುಕೊಳ್ಳಬೇಡಿ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.