ಸಣ್ಣಪ್ಪನ ದೊಡ್ಡ ಆದಾಯ


Team Udayavani, Jan 29, 2018, 11:42 AM IST

29-18.jpg

ಓದಿದ್ದು ಬಿ.ಎ.ಬಿ.ಇಡಿ.  ಪ್ರೌಢಶಾಲೆಯಲ್ಲಿ ಸಹಶಿಕ್ಷಕರಾಗಿ ಸೇರಿ ಸತತ 5 ವರ್ಷ ಕೆಲಸ ಮಾಡಿದರು.  ಆ ನಂತರ ಕೃಷಿಗೆ ಇಳಿದು ಈಗ ಕೈತುಂಬ ಲಾಭ ಮಾಡುತ್ತಿದ್ದಾರೆ. 

ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದರೆ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಮಂಗಳೂರು ಗ್ರಾಮದ ಪ್ರಗತಿಪರ ರೈತ ಮಲ್ಲಪ್ಪ ರಾಮಪ್ಪ ಸಣ್ಣಪ್ಪನ್ನವರ, ಈ ದೇವರ ಕೆಲಸವನ್ನೇ ಬಿಟ್ಟು ಕೃಷಿ ಕಾಯಕದಲ್ಲಿ ನಿರತರಾಗಿದ್ದಾರೆ. 

ಶಿವಯೋಗಮಂದಿರದ ಹತ್ತಿರ ಮಲಪ್ರಭಾ ನದಿಯ ದಂಡೆಯ ಮೇಲೆ ಇವರದು 8 ಎಕರೆ ಜಮೀನಿದೆ. ಇದರಲ್ಲಿ  ಸಾವಯವ ಪದ್ಧತಿ ಮೂಲಕ ಗೋವಿನ ಜೋಳ, ಈರುಳ್ಳಿ, ಸಜ್ಜೆ, ಕಡಲೆ, ಶೇಂಗಾ, ತೊಗರಿ, ಮೆಣಸಿನಕಾಯಿ, ಕಬ್ಬು, ಗೋದಿ, ಅಲಸಂದಿ ಬೆಳೆಯುತ್ತಾ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.  

 ಇವರ ಮೂಲ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಯರಿಗೋನಾಳ ಗ್ರಾಮ.  ಓದಿದ್ದು ಬಿ.ಎ.ಬಿ.ಇಡಿ.  1988 ರಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ವಿಷಯ ಬೋಧಿಸಲು ಸಹಶಿಕ್ಷಕರಾಗಿ ಸೇರಿ ಸತತ 5 ವರ್ಷ ಕೆಲಸ ಮಾಡಿದರು. ನಂತರ ತಂದೆ ಮತ್ತು ತಾಯಿ ನಿಧನದ ನಂತರ ತಮಗೆ ಇದ್ದ 8 ಎಕರೆ ನೀರಾವರಿ ಭೂಮಿಯ ಕೃಷಿ ಮಾಡಲು ಬಂದರು.   ಇದು ತಂದೆಯ ಆಸೆಯೂ ಆಗಿತ್ತು. 

   ಎಲ್ಲ ರೀತಿಯ ಬೆಳೆ ಬೆಳೆಯುವುದರಿಂದ ಭೂಮಿ ಫ‌ಲವತ್ತಾಗುತ್ತದೆ. ಒಂದು ಬೆಳೆ ನಷ್ಟವಾದರೆ ಇನ್ನೊಂದು ಬೆಳೆಯಲ್ಲಿ ಲಾಭವಾಗುತ್ತದೆ. ವಿಷಮುಕ್ತ ಆಹಾರ ಬೆಳೆದಂತಾಗುತ್ತದೆ. ಉತ್ಪಾದನೆ ಹೆಚ್ಚಾಗುತ್ತದೆ. ರೋಗಗಳು ಬರುವುದಿಲ್ಲ. ಮಳೆ ಕಡಿಮೆಯಾದರೂ ಬೆಳೆ ಬರುತ್ತದೆ. ಬೆಲೆ ಹೆಚ್ಚು ಬರುತ್ತದೆ, ಸಾವಯವ ಕೃಷಿಯಲ್ಲಿ ಖರ್ಚು ಕಡಿಮೆ, ಲಾಭ ಹೆಚ್ಚು ಬರುತ್ತದೆ.  ಹೀಗೆ ಸಾವಯವ ಕೃಷಿ ಅಳವಡಿಸಿಕೊಳ್ಳುವುದರಿಂದ ಅನೇಕ ಪ್ರಯೋಜನಗಳಿವೆ ಎಂದೆಲ್ಲ ಕಳೆದು, ಲಾಭ ನಷ್ಟಗಳನ್ನು   ಲೆಕ್ಕ ಹಾಕಿಯೇ ಕೃಷಿಯನ್ನು  ಶುರುಮಾಡಿದ್ದು ಅಂತಾರೆ ರಾಮಪ್ಪ. 

     ಎರೆಹುಳು ಗೊಬ್ಬರ, ತಿಪ್ಪೆ ಗೊಬ್ಬರ, ಕಾಂಪೋಸ್ಟ್‌ ಗೊಬ್ಬರ, ಹಸಿರು ಎಲೆ ಗೊಬ್ಬರ, ಬಯೋ ಡೈಜಿಸ್ಟ್‌, ಕುರಿ ಗೊಬ್ಬರ ಬಳಸಿ ಸಾವಯವ ಕೃಷಿ ಮಾಡುವುದರಿಂದ ಉತ್ತಮ ಇಳುವರಿ ಬಂದಿದೆ.  ಗೊಬ್ಬರ ಕಡಿಮೆ ಬಿದ್ದಾಗ ಕೃಷಿ ಇಲಾಖೆಯಿಂದ ಕಾಂಪೋಸ್ಟ್‌, ಜಿಪ್ಸಂ, ಜಿಂಕ್‌,ಬೋರಾನ್‌ ತಂದು ಹಾಕುತ್ತೇನೆ. ಜಿಂಕ್‌ ಬೋರಾನ್‌ ಹಾಕುವುದರಿಂದ ಭೂಮಿ ಅರಳಿ ಫ‌ಲವತ್ತತೆ ಆಗುತ್ತದೆ ಎಂಬುದು ಅವರ ಅನುಭವದ ಮಾತು. 

     ಕಳೆದ 10 ವರ್ಷಗಳಿಂದ ಸಾವಯವ ಕೃಷಿ ಪದ್ಧತಿ ಬೇಸಾಯದಲ್ಲಿ ತೊಡಗಿರುವ ಇವರು ಹೀಗೆ ಪ್ರಾರಂಭದಲ್ಲಿ ಕೇವಲ 8 ಎಕರೆ ಜಮೀನು ಇತ್ತು. ಈಗ 25 ಎಕರೆ ಜಮೀನಿನಲ್ಲಿ ಸಾವಯವ ಕೃಷಿ ಮಾಡುತ್ತಿದ್ದಾರೆ. ಸುಮಾರು 8 ವರೆ ಎಕರೆಯಲ್ಲಿ ಕಬ್ಬು ನಾಟಿ ಮಾಡಿದ್ದಾರೆ. ಉಳಿದಂತೆ ಕಡಲೆ, ಗೋದಿ, ಜೋಳ, ತೊಗರಿ, ಅಲಸಂದಿ, ಶೇಂಗಾ ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆಯುತ್ತಾರೆ. ಪ್ರತಿ ವರ್ಷ ಸರಾಸರಿ 350 ರಿಂದ 400 ಕ್ವಿಂಟಾಲ್‌ ಗೋವಿನಜೋಳ ಇಳುವರಿ ದೊರೆಯುತ್ತಿದೆ. ಇದರಿಂದ ಪ್ರತಿ ವರ್ಷ ಸರಾಸರಿ 8 ರಿಂದ 10 ಲಕ್ಷ ಆದಾಯ ಬರುತ್ತದೆ. 1 ಎಕರೆ ಭೂಮಿಯಲ್ಲಿ 65 ಟನ್‌ ಕಬ್ಬು ಬೆಳೆ ಬೆಳೆಯುತ್ತಾರೆ. ಇವರ ತೋಟದಲ್ಲಿ 180 ಕ್ಕೂ ಹೆಚ್ಚು ಅರಸೀಕೆರೆ ಜವಾರಿ ತೆಂಗಿನ ಗಿಡಗಳಿವೆ. ವರ್ಷವಿಡಿ  ಇವರ ತೋಟದಲ್ಲಿ 10 ಜನ ಕೂಲಿಕಾರ್ಮಿಕರು ಕೆಲಸ ಮಾಡುತ್ತಾರೆ. ಒಂದು ವರ್ಷದಲ್ಲಿ ಕನಿಷ್ಠ 35 ರಿಂದ 40 ಟ್ರ್ಯಾಕ್ಟರ್‌ ಗೊಬ್ಬರ ಉತ್ಪಾದನೆಯಾಗುತ್ತಿರುವುದರಿಂದ, ಗೊಬ್ಬರದ ಖರ್ಚು ಉಳಿತಾಯವಾಗುತ್ತಿದೆ. ವೈಜಾnನಿಕ ರೀತಿಯಲ್ಲಿ ಸತತ ಪರಿಶ್ರಮದಿಂದ ಕೃಷಿ ಮಾಡುವುದರಿಂದ ನಷ್ಟ ಆಗುವುದಿಲ್ಲ ಎನ್ನುತ್ತಾರೆ ರಾಮಪ್ಪ ಸಣ್ಣಪ್ಪ. 

ಎಚ್‌.ಆರ್‌.ಕಡಿವಾಲ, ಬಾದಾಮಿ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.