ಬಯಲು ಸೀಬೆ


Team Udayavani, Sep 30, 2019, 3:01 AM IST

bayalu-seebe

ಆ ಊರಿನ ಎಲ್ಲೆಡೆ ಕಾಣಸಿಗುವುದು ಕುಂಕುಮ ಬಣ್ಣದ ಮಣ್ಣು. ಕೈಯಲ್ಲಿ ಹಿಡಿದಾಗ ಕೆಂಪು ಕಲ್ಲಿನ ಹುಡಿಯಂತೆ ಭಾಸವಾಗುತ್ತದೆ. ಅದರಲ್ಲಿ ಯಾವ ಬೆಳೆಯನ್ನು ಬೆಳೆಯಲು ಸಾಧ್ಯ? ಎಂಬ ನನ್ನ ಕುತೂಹಲವನ್ನು ತಣಿಸಿದ್ದು ಶಿವಾನಂದ ಫ‌ಕೀರಪ್ಪ ತಾಳವಾರ್‌ರವರ ತೋಟ.

ಶಿವಾನಂದರವರಿಗೆ ಬಾದಾಮಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಾಲ್ಕು ಎಕರೆ ಜಮೀನಿದೆ. ಎರಡು ಎಕರೆಯಲ್ಲಿ ಸಜ್ಜೆ, ಒಂದು ಎಕರೆಯಲ್ಲಿ ಮೆಕ್ಕೆ ಜೋಳವನ್ನು ಬೆಳೆಯುತ್ತಾರೆ. ಇವು ಕೆಂಪು ಮಣ್ಣಿನಲ್ಲಿ ಉತ್ತಮ ಇಳುವರಿಯನ್ನು ನೀಡುತ್ತಿವೆ. ಎರಡು ವರ್ಷಗಳ ಹಿಂದೆ, ಉಳಿದ ಒಂದು ಎಕರೆಯಲ್ಲಿ ನಿತ್ಯ ಆದಾಯ ನೀಡುವ ಯಾವುದಾದರೂ ಬೆಳೆಗಳನ್ನು ಬೆಳೆಯಬೇಕೆಂದುಕೊಂಡಿದ್ದರು.

ಆ ಸಮಯದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರಿಣತರು ಸೀಬೆ ಬೆಳೆಯುವಂತೆ ಸಲಹೆ ನೀಡಿದ್ದರು. ಅಲ್ಲದೆ ಸೀಬೆ ಬೆಳೆಯುವ ಬಗ್ಗೆ ಅದೇ ಊರಿನ 150 ಮಂದಿಗೆ ತರಬೇತಿಯನ್ನೂ ನೀಡಿ ಉಚಿತವಾಗಿ ಸೀಬೆ ಗಿಡಗಳನ್ನು ವಿತರಿಸಿದ್ದರು. ಇದರಿಂದ ಉತ್ತೇಜಿತರಾದ ಸುಮಾರು 110 ಮಂದಿ ರೈತರು ಈಗ ಸೀಬೆ ಬೆಳೆಯುತ್ತಿದ್ದಾರೆ.

ನಾಟಿ ಹೇಗೆ ಮಾಡ್ತಾರೆ?: ಶಿವಾನಂದರವರು ಸೀಬೆ ಬೆಳೆಯಲು ಹೆಚ್ಚೇನೂ ಬಂಡವಾಳ ತೊಡಗಿಸಲಿಲ್ಲ. ಗಿಡದಿಂದ ಗಿಡಕ್ಕೆ ಹದಿನೈದು ಅಡಿ ಅಂತರ ಬಿಟ್ಟು 2 ಅಡಿ ಅಗಲ, ಒಂದೂವರೆ ಅಡಿ ಆಳದ ಗುಂಡಿ ತೆಗೆದು, ಪ್ರತಿ ಬುಡಕ್ಕೆ ಕೊಟ್ಟಿಗೆ ಗೊಬ್ಬರ ಹಾಕಿ ಅದರಲ್ಲಿ ಗಿಡಗಳನ್ನು ನೆಟ್ಟರು. ಪ್ರತಿದಿನ ಗಿಡಗಳಿಗೆ ನೀರು, ಮೂರು ತಿಂಗಳಿಗೊಂದು ಬಾರಿಯಂತೆ ಕೊಟ್ಟಿಗೆ ಗೊಬ್ಬರ ನೀಡಿದ್ದಾರೆ. ವರ್ಷದಲ್ಲಿ ಮೂರು ಬಾರಿ ಸಾವಯವ ಗೊಬ್ಬರ ನೀಡುತ್ತಿದ್ದಾರೆ.

ಗೋಮೂತ್ರ ನೀಡಿದರೆ ಇಳುವರಿ ಜಾಸ್ತಿ ಸಿಗುತ್ತದೆ. ಮೊದಲ ವರ್ಷ ಗಿಡ ಹೂವು ನೀಡಿದೆ. ಆ ಹೂವುಗಳನ್ನು ಕಟಾವು ಮಾಡಿದರೆ ಗಿಡ ಚೆನ್ನಾಗಿ ಬೆಳೆಯುತ್ತದೆ. ನೆಟ್ಟ ಎರಡನೇ ವರ್ಷ ಅಂದರೆ, ಈ ವರ್ಷ ಕಾಯಿ ಕಟಾವಿಗೆ ದೊರೆಯಲು ಆರಂಭವಾಗಿದೆ. ಬೇಸಗೆ ಕಾಲದಲ್ಲಿ ಅಧಿಕ ಪ್ರಮಾಣದಲ್ಲಿ ಕಾಯಿ ಲಭ್ಯವಾ­ಗುತ್ತದೆ. ಕಾಯಿ­ಬಿಟ್ಟ ಎರಡೂ­ವರೆ ತಿಂಗಳ ನಂತರ ಕಟಾವಿಗೆ ಲಭ್ಯ. ಒಮ್ಮೆ ಕಟಾವು ಮಾಡು­ವಾಗ 1,500 ಕಾಯಿ ಸಿಗುತ್ತದೆ.

ಗೋಮೂತ್ರದಿಂದ ಇಳುವರಿ ಹೆಚ್ಚಳ: ಗೊಬ್ಬರ ನೀಡುವ ಮುಂಚೆ ಗುಂಡಿಯನ್ನು ಸ್ವಚ್ಚಗೊಳಿಸಬೇಕು. ಸಾವಯವ ಗೊಬ್ಬರ ನೀಡಿದರೆ ಸಾಮಾನ್ಯವಾಗಿ ಗಿಡ ಐವತ್ತು ವರ್ಷಗಳವರೆಗೆ ಬದುಕಬಲ್ಲದು. ಗೋಮೂತ್ರ ನೀಡಿದಷ್ಟು ಇಳುವರಿ ಅಧಿಕಗೊಳ್ಳುತ್ತದೆ. ಶಿವಾನಂದರವರು ಹನಿ ನೀರಾವರಿ ವಿಧಾನವನ್ನು ಮೆಚ್ಚಿಕೊಂಡಿದ್ದಾರೆ. ಸ್ಪಿಂಕ್ಲರ್‌ ಹಾಕಿದರೆ ಹೂವು ಉದುರುವ ಸಾಧ್ಯತೆಗಳಿರುತ್ತದೆ. ಗಿಡಗಳಿಗೆ ಬಿಸಿಲು ಅಗತ್ಯ. ಕೆಲವೊಮ್ಮೆ ಕಾಯಿಯಲ್ಲಿ ಕಪ್ಪು ಚುಕ್ಕೆ ಬೀಳುವ ರೋಗ ಕಾಣಿಸಿಕೊಳ್ಳುತ್ತದೆ. ಆಗ ಸೂಕ್ತ ಕ್ರಮ ಕೈಗೊಳ್ಳಬೇಕು.

ರೈತ: ಶಿವಾನಂದ ಫ‌ಕೀರಪ್ಪ ತಾಳವಾರ್‌
ಸ್ಥಳ: ಕರಡಿಗುಡ್ಡ, ಬಾದಾಮಿ
ಝೀರೋ ಬಜೆಟ್‌ ಪಾರ್ಮಿಂಗ್‌
since 2017

* ಚಂದ್ರಹಾಸ ಚಾರ್ಮಾಡಿ

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.